ಧಾರವಾಡ: ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕು ತಗುಲಿದ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುತ್ತುರಾಜ್ ಶಿವಣ್ಣವರ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮುತ್ತುರಾಜ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ನಿವಾಸಿ. ಪತ್ನಿಗೆ ಸೋಂಕು ತಗುಲಿದ್ದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 9 ಗಂಟೆಗೆ ಪತ್ನಿ ಭೇಟಿಯಾಗಲು ಮುತ್ತುರಾಜ್ ಆಗಮಿಸಿದ್ದರು. ಈ ವೇಳೆ ಮೂರನೇ …
Read More »ಬೆಳೆ ಹಾಳಾಗಬಾರದೆಂದು ಪ್ರಾಣ ಒತ್ತೆಯಿಟ್ಟು ಸಾಗಿಸಿದ ರೈತರು…..
ಕೊಪ್ಪಳ: ರೈತರು ತಾವು ಬೆಳೆದ ಬೆಳೆ ಹಾಳಾಗಬಾರದೆಂದು ಪ್ರಾಣವನ್ನೇ ಒತ್ತೆಯಿಟ್ಟು, ಹರಸಾಹಸ ಪಟ್ಟು ಬೆಳೆ ಸಾಗಿಸುತ್ತಿದ್ದಾರೆ. ಪ್ರವಾಹದ ನೀರಿನ ಮಧ್ಯೆ ಬೆಳೆ ಸಾಗಿಸುತ್ತಿರುವ ದೃಶ್ಯ ಎದೆ ಜೆಲ್ ಎನಿಸುತ್ತದೆ ಕೊಪ್ಪಳ ತಾಲೂಕಿನ ಕಾತರಕಿ-ಗುಡ್ಲಾನೂರ ಗ್ರಾಮದ ಬಳಿ ಹಿನ್ನೀರ ಪ್ರದೇಶದಲ್ಲಿ ನೀರು ಆವರಿಸಿದ್ದು ಬೆಳೆದ ಬೆಳೆಯನ್ನು ಸಾಗಿಸಲು ರೈತರು ಹರಸಾಹಸ ಪಡುವಂತಾಗಿದೆ. ತುಂಗಾಭದ್ರಾ ಜಲಾಶಯ ಹಿನ್ನೀರಿನ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ತುಂಬಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿರುವುದರಿಂದ ನೀರಿನಲ್ಲೆ ಹರಸಾಹಸ ಪಟ್ಟು ಸಾಗಿಸುವಂತ …
Read More »ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ
ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …
Read More »ನೆರೆಪೀಡಿತ ಪ್ರದೇಶಗಳಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ಬೆಳಗಾವಿ: ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡುವಂತೆ ಮನವಿಮಾಡಲು ಮುಂದಿನ ವಾರ ನಾನು ದೆಹಲಿಗೆ ತೆರಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ. ಪರಿಹಾರದ ಕುರಿತು ಶಾಸಕರೊಂದಿಗೆ ಶೀಘ್ರಸಭೆಕರೆದು ಯೋಜನೆ ರೂಪಿಸುವುದಾಗಿ ತಿಳಿಸಿದ್ದಾರೆ, ಹಾಗೂ ಈ ಬಗ್ಗೆ ಸಂಪೂರ್ಣ …
Read More »ಡಿಕೆಶಿಗೆ ಕೊರೊನಾ ಸೋಂಕು
ಹೌದು ಇಡೀ ದೇಶಕ್ಕೆ ಬಂದಿರುವ ಈ ಕೊರೊನ ಎಂಬ ಸಾಂಕ್ರಾಮಿಕ ಕಾಯಿಲೆ ನಮ್ಮ ರಾಜ್ಯಕ್ಕೂ ಬಂದಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಮತ್ತು ಸುಮಾರು ಐದು ತಿಂಗಳಿನಿಂದ ಆರಂಭವಾದ ಕೊರೊನ ಈಗಾಗಲೇ ಸಾಕಷ್ಟು ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದೆ, ಮತ್ತು ಈಗ ಬಂದಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಗೂ ಕೊರೊನ ವೈರಸ್ ಸೋಂಕು ತಗುಲಿದೆ ಎನ್ನಲಾಗಿದೆ. ಅಧ್ಯಕ್ಷ ಡಿ …
Read More »ಸಾಂಬ್ರಾ ವಿಮಾನ ನಿಲ್ದಾಣ ಪ್ರವೇಶ ದ್ವಾರದಲ್ಲಿ ರೈತರ ಪ್ರತಿಭಟನೆ
ಬೆಳಗಾವಿ: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ಹಸಿರುಸೇನೆಯವರು ಸಾಂಬ್ರಾ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಧರಣಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಮಾನನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಇದೇ ವೇಳೆ ರೈತರು ಹೊರಗಡೆ ಧರಣಿ ನಡೆಸುತ್ತಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಕಿತ್ತುಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ. ಬಂಡವಾಳಶಾಹಿಗಳು, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಹೋದ ವರ್ಷ ನೆರೆ …
Read More »ಜಲಾಶಯಕ್ಕೆ ಸಿಎಂ ಭೇಟಿ : ಬಿಗಿ ಭದ್ರತೆ, ಶೃಂಗಾರಗೊಂಡ ಆಲಮಟ್ಟಿ ಜಲಾಶಯ
ವಿಜಯಪುರ: ಇಂದು ಸಿ ಎಮ್ ಯಡಿಯೂರಪ್ಪನವರು ಆಲಮಟ್ಟಿ ಜಲಾಶಯಕ್ಕೆ ಇಂದು ಮದ್ಯಾಹ್ನ ಆಗಮಿಸುವ ಹಿನ್ನಲೆಯಲ್ಲಿ ಆಲಮಟ್ಟಿ ತಳಿರು ತೋರಣಗಳು, ಪುಷ್ಪಗಳಿಂದ ಶೃಂಗಾರಗೊಂಡಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಕೆ.ಬಿ.ಜಿ ಎನ್.ಎಲ್ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪತ್ರಕರ್ತರಿಗೂ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಒಳ ಬಿಡಲಾಗುತ್ತಿದೆ. ಸಿಎಂ ಸ್ವಾಗತ ಕೋರಿ ಆಲಮಟ್ಟಿ ಜಲಾಶಯ, ಪ್ರವೇಶ ದ್ವಾರ, ವೃತ್ತ ಸೇರಿದಂತೆ ಪಟ್ಟಣದಲ್ಲಿ ಹೂವಿನ ಅಲಂಕಾರ …
Read More »ಹೆಲಿಕಾಪ್ಟರ್ನಲ್ಲಿ ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಹೆಲಿಕಾಪ್ಟರ್ನಲ್ಲಿ ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಸಿಎಂ ಬಿಎಸ್ವೈಗೆ ಕಂದಾಯ ಸಚಿವರಾದ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.
Read More »ಬಿಗ್ ನ್ಯೂಸ್ : ಸೋನಿಯಾ ರಾಜೀನಾಮೆ ಮತ್ತು ರಾಹುಲ್ ಯಡವಟ್ಟಿನಿಂದ ಅಲ್ಲಾಡುತ್ತಿದೆ ಕಾಂಗ್ರೆಸ್ ಬುಡ….!
ಬೆಂಗಳೂರು, ಆ.24- ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪಕ್ಷದ ಸಾರಥ್ಯವನ್ನು ತ್ಯಜಿಸಿದ ಬೆನ್ನಲ್ಲೇ ಪಕ್ಷದಲ್ಲಿ ಹಿರಿಯ ನಾಯಕರ ಬಗ್ಗೆ ರಾಹುಲ್ಗಾಂ ನೀಡಿದ ಹೇಳಿಕೆ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ನಾಯಕತ್ವ ಬದಲಾವಣೆ ಹಾಗೂ ಗಾಂ ಕುಟುಂಬೇತರರಿಗೆ ನಾಯಕತ್ವ ನೀಡಬೇಕೆಂದು ಕಾಂಗ್ರೆಸ್ನ 23 ಹಿರಿಯ ಧುರೀಣರು ಬರೆದಿರುವ ಪತ್ರ ಕುರಿತು ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಹುಲ್ಗಾಂಧಿ ನೀಡಿದ ಹೇಳಿಕೆ ಹಿರಿಯ ಕಾಂಗ್ರೆಸಿಗರಲ್ಲಿ ತೀವ್ರ ಅಸಮಾಧಾನ ಉಂಟು ಮಾಡಿರುವುದರ ಜತೆಗೆ 130 ವರ್ಷಗಳ ಇತಿಹಾಸದ ಕಾಂಗ್ರೆಸ್ನಲ್ಲಿ …
Read More »ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದುಮನವಿ
ಬೆಳಗಾವಿ : ಪೀರನವಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ರಿಟಿಷರ್ ವಿರುದ್ದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಲವು ವರ್ಷಗಳಿಂದ ಪೀರನವಾಡಿ ವೃತ್ತದಲ್ಲಿ ಪ್ರತಿಷ್ಠಾಪಿಸಬೇಕು ಎಂಬುವುದು ಅಭಿಮಾನಿಗಳ ಕನಸಾಗಿದೆ. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವ ಬಗ್ಗೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಮನವಿ ಸಲ್ಲಿಸಿದರು ಸಹ ಇಲ್ಲಿಯವರೆಗೂ …
Read More »
Laxmi News 24×7