Breaking News

ರಾಜ್ಯ

ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್​​​ಗೆ ಡಿಕ್ಕಿ, ಬೈಕ್​ನಲ್ಲಿದ್ದ ಇಬ್ಬರು ಸಾವು

ಬಳ್ಳಾರಿ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್​​​ಗೆ ಬೈಕ್​ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್​ನಲ್ಲಿದ್ದ ಗುಗ್ಗರಹಟ್ಟಿಯ ಅಬ್ದುಲ್‌ ಅರ್ಮಾನ್‌ (21) ಮತ್ತು ಸೋದರನ ಪುತ್ರಿ ಹಸೀನಾ ನಯಾಜ್‌ (5) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು – ಲಾರಿ ನಡುವೆ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು: ಕಾರು ಮತ್ತು ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, …

Read More »

ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ

ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್​ ಎಸ್​ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು …

Read More »

ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳ ಬಗ್ಗೆ ಕೋರ್ಟ್​ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದ ಕಾರು ಚಾಲಕ

ಬೆಂಗಳೂರು, (ಮೇ 26): ಅಶ್ಲೀಲ ವಿಡಿಯೋ (obscene video) ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್​ ಕೋರ್ಟ್​ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್​ ನಲ್ಲಿ 2000 ಅಶ್ಲೀಲ ಫೋಟೋ, 40 ರಿಂದ 50 ವಿಡಿಯೋಗಳಿದ್ದವು ಎಂದು ಕಾರ್ತಿಕ್​, ಇಂದು (ಮೇ 26) ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಅಲ್ಲದೇ ಮೊಬೈಲ್​ ನಲ್ಲಿದ್ದ ಅಶ್ಲೀಲ …

Read More »

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ, ಮೇ 26: ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ (Rain). ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ …

Read More »

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ ಹಿರೆಬಾಗೇವಾಡಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು. ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read More »

ಡಿಜಿ-ಐಜಿಪಿ ಎಂ ಎ ಸಲೀಂ ಆಯ್ಕೆ ಪ್ರಶ್ನಿಸಿ ಪತ್ರ: ಕೋರ್ಟ್​ಗೆ ಹೋಗುವ ಎಚ್ಚರಿಕೆ ನೀಡಿದ ವಕೀಲೆ

ಬೆಂಗಳೂರು, ಮೇ 26: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ (MA Salim) ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್​ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ (Karnataka Government) ಕಳೆದ ಬುಧವಾರ (ಮೇ.21) ಆದೇಶ ಹೊರಡಿಸಿತ್ತು. ಈ ಆದೇಶ ಹಿಂಪಡೆಯುವಂತೆ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸುಪ್ರೀಂ …

Read More »

ಅತ್ಯಾಚಾರ ಆರೋಪಮನುಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಅತ್ಯಾಚಾರ ಆರೋಪದಡಿ ಬಂಧಿಸಲ್ಪಟ್ಟಿರುವ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಖ್ಯಾತಿಯ ನಟ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 3ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ. ಈ ಹಿಂದೆ ಖಾಸಗಿ ವಾಹಿನಿಯ ರಿಯಾಲಿಟಿ ಶೋವೊಂದರಲ್ಲಿ ಮನು ಭಾಗಿಯಾಗಿದ್ದರು. ಅದೇ ಶೋನಲ್ಲಿ ಭಾಗಿಯಾಗಿದ್ದ ಸಹ ಸ್ಪರ್ಧಿಯೊಬ್ಬರು ನೀಡಿದ್ದ ದೂರಿನನ್ವಯ ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಾಮಿಡಿ ಕಾರ್ಯಕ್ರಮವೊಂದಕ್ಕೆ 2022ರಲ್ಲಿ ಶಿಕಾರಿಪುರಕ್ಕೆ ತೆರಳಿದ್ದಾಗ, ತನ್ನ ಮೇಲೆ …

Read More »

39 ನಿಮಿಷ 24 ಸೆಕೆಂಡ್‌ಗಳಲ್ಲಿ 11.18 ಕಿ.ಮೀ ಕ್ರಮಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರ್ಪಡೆಯಾದ ಹುಬ್ಬಳ್ಳಿಯ ಬಾಲಕ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಬಾಲಕ ಸುಶ್ವಿನ್ ಅವರು 39 ನಿಮಿಷ 24 ಸೆಕೆಂಡ್‌ಗಳಲ್ಲಿ 11.18 ಕಿ.ಮೀ ಕ್ರಮಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರ್ಪಡೆಯಾಗಿದ್ದಾರೆ. ಇವರಿಗೆ ಈಗ 4 ವರ್ಷ 8 ತಿಂಗಳು ವಯಸ್ಸು. ಸುಶ್ವಿನ್ ಹಳೇಹುಬ್ಬಳ್ಳಿಯ ಇಂದ್ರಪ್ರಸ್ತ ನಗರದ ವಿನಾಯಕ ಮತ್ತು ಸುಷ್ಮಾ ಹಳಪೇಟಿ ದಂಪತಿಯ ಪುತ್ರ ಏ.5ರಂದು ಈ ಬಾಲಕ ಸತ್ತೂರು ಆಶ್ರಯ ಕಾಲೊನಿಯಿಂದ ಬೆಳಗ್ಗೆ 6.40ಕ್ಕೆ ಆರಂಭಿಸಿ 7.19ಕ್ಕೆ ಉಣಕಲ್‌ ಕ್ರಾಸ್‌ವರೆಗೆ ಸೈಕಲ್ ಓಡಿಸಿ ಈ …

Read More »

ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆ….ಕೆಸರು ಗದ್ದೆಯಾದ ಜಕನೂರು ಗ್ರಾಮದ ಮುಖ್ಯ ರಸ್ತೆ….

ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆ….ಕೆಸರು ಗದ್ದೆಯಾದ ಜಕನೂರು ಗ್ರಾಮದ ಮುಖ್ಯ ರಸ್ತೆ…. ನಿರಂತರ ಮಳೆಯಿಂದಾಗಿ ಜಮಖಂಡಿ ತಾಲೂಕಿನ ಜಕನೂರು ಗ್ರಾಮದ ಮುಖ್ಯ ರಸ್ತೆಗಳು ಹಾಳಾಗಿದ್ದು ವಾಹನಸ್ವಾರರು ತೀವ್ರ ತೊಂದರೆ ಅನುಭವಿಹಿಸುವಂತಾಗಿದೆ. ತಗ್ಗು ಗುಂಡಿಗಳಿದ್ದರೂ ರಸ್ತೆಯನ್ನು ಹಲವಾರು ವರ್ಷಗಳಿಂದ ದುರಸ್ತಿಗೊಳಿಸುತ್ತಿಲ್ಲ ವಾಹನ ಸವಾರರು ತಗ್ಗು ಗುಂಡಿಗಳಲ್ಲೇ ಕುಂಟುತ್ತಾ ತೆವಳುತ್ತಾ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಸ್ವಲ್ಪ ಯಾಮಾರಿದ್ರೂ ಬೈಕ್ ಸವಾರರಿಗೆ ಭಾರಿ ಅನಾಹುತಗಳಾಗುತ್ತವೆ. ಕಳೆದ ಕಳೆದ 8 ವರ್ಷಗಳಿಂದ ದುರಸ್ಥಿ ಕಾಣದ ರಸ್ತೆಗಳಿಂದಾಗಿ …

Read More »

ಮೈಸೂರು: ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ಕಾಣಿಕೆ

ಮೈಸೂರು: ಮೈಸೂರಿನ ಅವಧೂತ ದತ್ತಪೀಠದ ವತಿಯಿಂದ ಭಾರತೀಯ ಸೇನೆಗೆ 25 ಲಕ್ಷ ರೂ.ಗಳ ಕಾಣಿಕೆಯನ್ನು ಅರ್ಪಿಸಲಾಯಿತು. ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದ 26ನೇ ಬ್ರಹ್ಮೋತ್ಸವ ಭಾನುವಾರ ಸಂಜೆ ವೇದ ಪಾರಾಯಣಗಳ ಮೂಲಕ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮೈಸೂರು ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಮೂಲಕ …

Read More »