Breaking News

ರಾಜ್ಯ

ನನ್ನೊಂದಿಗೆ ಮಲಗಲು ನಿರಾಕರಿಸಿದ್ರೆ ಫೋಟೋ ವೈರಲ್ – ಫ್ಯಾಷನ್ ಡಿಸೈನರ್‌ಗೆ ಕಿರುಕುಳ

ಮುಂಬೈ: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ 42 ವರ್ಷದ ಫ್ಯಾಷನ್ ಡಿಸೈನರ್‌ಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಆರೋಪಿಯನ್ನು ಕೇರಳ ಮೂಲದ ರಾಹುಲ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಆರೋಪಿ ಸಿನಿಮಾಕ್ಕಾಗಿ ಸ್ಕ್ರೀನ್ ಟೆಸ್ಟ್ ಸಮಯದಲ್ಲಿ ನನ್ನ ಫೋಟೋಗಳನ್ನು ತೆಗೆದುಕೊಂಡಿದ್ದು, ಅವುಗಳನ್ನು ಅಶ್ಲೀಲ ಚಿತ್ರಗಳಾಗಿ ಮಾರ್ಫ್ ಮಾಡಿದ್ದಾನೆ. ಬಳಿಕ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಬೇಕು, ಇಲ್ಲವಾದರೆ ಮಾರ್ಫ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ …

Read More »

S.S.L.C. ಪರೀಕ್ಷೆಯ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೆ ಸಿಎಂ ಕೃತಜ್ಞತೆ

ಬೆಂಗಳೂರು, ಆ.11 : ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಕೊರೋನಾ ಸವಾಲುಗಳ ನಡುವೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಬಾರದು ಎಂದು ರಾಜ್ಯ ಸರ್ಕಾರ ಟೊಂಕಕಟ್ಟಿ ನಿಂತು, ಈ ವರ್ಷದ ಜೂನ್ 25 ರಿಂದ ಜುಲೈ 3 ರವರೆಗೆ, ಅತ್ಯಂತ ಯಶಸ್ವಿಯಾಗಿ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಶೇಕಡಾ 71.80 ರಷ್ಟು ಮಕ್ಕಳು …

Read More »

ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ.

ಉಡುಪಿ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆಯುತ್ತಿದೆ. ಕಡೆಗೋಲು ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ. ಉಡುಪಿ ಮಠದಲ್ಲಿ ಸೌರಮಾನ ಪದ್ಧತಿ ಆಚರಣೆ ಮಾಡುವುದರಿಂದ, ಮುಂದಿನ ತಿಂಗಳು ಶ್ರೀಕೃಷ್ಣಜನ್ಮಾಷ್ಟಮಿ ನಡೆಯಲಿದೆ. ದೇಶದಲ್ಲಿ ಆಚರಣೆ ಇರುವುದರಿಂದ ಉಡುಪಿ ಕಡೆಗೋಲು ಕೃಷ್ಣನಿಗೆ, ವಿಶೇಷ ಅಲಂಕಾರ ಮಾಡಲಾಗಿದೆ. ಗೋಪಾಲಕೃಷ್ಣ ನಾಗಿ ಕಡೆಗೋಲು ಕೃಷ್ಣ ದರ್ಶನ ಕೊಟ್ಟಿದ್ದಾನೆ.ಚಾಂದ್ರಮಾನ ಪದ್ಧತಿಯಲ್ಲಿ ಹಬ್ಬಗಳನ್ನು ಆಚರಿಸುವ ಸಮುದಾಯಗಳು ಉಡುಪಿಯಲ್ಲಿದೆ. ಅವರೆಲ್ಲಾ ಅಷ್ಟಮಿ ಆಚರಣೆಯನ್ನು ಮಾಡಿದ್ದಾರೆ. ಈ …

Read More »

30 ಸಾವಿರ ಲಂಚ ಪಡೆಯುತ್ತಿರುವಾಗACB ಬಲೆಗೆ ಬಿದ್ದ DHO

ಯಾದಗಿರಿ: ಸ್ಟಾಫ್ ನರ್ಸ್ ನೇಮಕಾತಿ ವೇಳೆಯಲ್ಲಿ ಅಭ್ಯರ್ಥಿಯೊಬ್ಬರಿಂದ 30 ಸಾವಿರ ಲಂಚ ಪಡೆಯುತ್ತಿರುವಾಗ ಯಾದಗಿರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.ಸದ್ಯ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಆರೋಗ್ಯ ಇಲಾಖೆಯ ಅಗತ್ಯ ಸಿಬ್ಬಂದಿಯ ಭರ್ತಿ ಕಾರ್ಯ ನಡೆಯುತ್ತಿತ್ತು. ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯಾಧಿಕಾರಿ ಎಸ್.ಎಂ. ಪಾಟೀಲ್ ಭರ್ತಿ ಕಾರ್ಯದ ಮುಖ್ಯಸ್ಥರಾಗಿದ್ದರು. ನೇಮಕಾತಿಗಾಗಿ ಒಬ್ಬೊಬ್ಬ ಅಭ್ಯರ್ಥಿಯಿಂದ 30 ರಿಂದ 50 …

Read More »

S.S.L.C.ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ

ಹಾವೇರಿ: ಎಸ್​​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆಯಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಫಲಿತಾಂಶ ಬಂದ ಬೆನ್ನಲ್ಲೇ ಕಡಿಮೆ ಅಂಕ ಬಂದಿದೆ ಹಾಗೂ ಅನುತ್ತೀರ್ಣನಾಗಿದ್ದೇನೆ ಎಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಿತ ವಿಷಯದಲ್ಲಿ ಫೇಲಾದ ಕಾರಣಕ್ಕೆ ಹಾವೇರಿಯ ದ್ಯಾಮವ್ವನ ಗುಡಿ ಓಣಿಯಲ್ಲಿ ವೈಷ್ಣವಿ ರಿತ್ತಿ (16) ಮನೆಯಲ್ಲಿ ವಿಷ ಸೇವಿಸಿದ್ದಾಳೆ. …

Read More »

ಘಟಪ್ರಭಾ-ಮಣಗುತ್ತಿ ವಿವಾದ ಸೌಹಾರ್ದತೆ ಕಾಪಾಡುವಂತೆ ಪೋಲಿಸ್ ಕಮೀಶನರ್ ಗೆ ಕನ್ನಡ ಸೇನೆ ವತಿಯಿಂದ ಮನವಿ

ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮತ್ತು ಸ್ಥಳಾಂತರ ಪ್ರಕರಣವನ್ನು ಶಿವಸೇನೆ ಮತ್ತು ಹೊರಗಿನಿಂದ ಬಂದ ಇತರೆ ಸಂಘಟನೆಗಳು ವಿವಾದ ಸೃಷ್ಟಿ ಮಾಡಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳನ್ನು ಕೂಡಲೇ ಅವರನ್ನು ಬಂದಿಸಬೇಕು. ಅದರಂತೆ ಅಲ್ಲಿಯ ಜನರಿಗೆ ಸೌಹಾರ್ದತೆಯಿಂದ ಬಾಳಲು ಅನುಮಾಡಿ ಕೊಡಬೇಕು ಎಂದು ಕನ್ನಡ ಸೇನೆ ಮತ್ತು ಕರವೇ ಸಂಘಟನೆ ವತಿಯಿಂದ ಪೋಲಿಸ್ ಕಮೀಶನರ್ ಮನವಿ ಸಲ್ಲಿಸಲಾಯಿತು. ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ …

Read More »

ನನ್ನ ಹೇಳಿಕೆಗೆ ನಾನು ಬದ್ಧ. ನನ್ನ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಲು ಸಿದ್ಧ

ಶಿವಮೊಗ್ಗ: ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳನ್ನು ನಿರ್ಮಿಸಬೇಕು ಎಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಈಶ್ವರಪ್ಪನವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಈ ಈಶ್ವರಪ್ಪ, ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ನನ್ನ ಇಡೀ ಜೀವನವನ್ನು ಬೇಕಾದರೂ ಜೈಲಿನಲ್ಲೇ …

Read More »

ಮದುಮಗಳ ಕೈ ಹಿಡಿಯಲು ಹೋಗಿ ಹೆಣವಾದ ರೌಡಿ ಶೀಟರ್

ಯಾದಗಿರಿ: ಮದುವೆ ಮನೆಗೆ ಹೋಗಿ ಮದುಮಗಳ ಕೈ ಹಿಡಿಯಲು ಮುಂದಾದ ರೌಡಿ ಶೀಟರ್, ಆಕೆಯ ತಂದೆ ಮತ್ತು ಸಹೋದರರಿಂದ ಕೊಲೆಯಾಗಿದ್ದಾನೆ. ಈ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಪರಮೇಶ್ವರಪಲ್ಲಿಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮೊಹಮ್ಮದ್ ಹನೀಪ್ (34) ಕೊಲೆಯಾದವನಾಗಿದ್ದು, ಈತ ಚಿನ್ನಕಾರ ಗ್ರಾಮದ ರೌಡಿ ಶೀಟರ್. ಆರೋಪಿಗಳನ್ನು ಮದುಮಗಳ ತಂದೆ ತಂದೆ ರಸೂಲ್ ಮತ್ತು ಮಕ್ಕಳಾದ ಗುಲಾಮ್, ಇರ್ಫಾನ್, ಹಾರೂನ್ ಎಂದು ಗುರುತಿಸಲಾಗಿದೆ.   ಸೋಮವಾರ ಮಧ್ಯಾಹ್ನ …

Read More »

ಕೊಡಗು ಜಿಲ್ಲೆಯಲ್ಲಿ ಅಧಿಕ ಮಳೆ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಓಡಾಟದ ಮೇಲಿನ ನಿಷೇಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಧಿಕ ಮಳೆ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಓಡಾಟದ ಮೇಲಿನ ನಿಷೇಧವನ್ನು ಮುಂದುವರಿಸಲಾಗಿದೆ.ಆಗಸ್ಟ್ 31 ರವರೆಗೆ ಭಾರೀ ವಾಹನಗಳ ಓಡಾಟವನ್ನು ಮುಂದುವರಿಸಲಾಗಿದೆ. ಮಲ್ಟಿ ಆಕ್ಸಲ್ ಟ್ರಕ್, ಬುಲೆಟ್ ಟ್ಯಾಂಕರ್ಸ್ ಮತ್ತು ಕಂಟೈನರ್ ಲಾರಿ ಓಡಾಟವನ್ನು ನಿಷೇಧ ಮಾಡಲಾಗಿದೆ. ಜೊತೆಗೆ ಮರಳು, ಮರದ ದಿಮ್ಮಿ ಸಾಗಣೆ ವಾಹನಗಳ ಸಂಚಾರವನ್ನು ಕೂಡ ನಿಷೇಧ ಮಾಡಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆಯೇ ಜಿಲ್ಲೆಯಲ್ಲಿ ಭಾರೀ …

Read More »

ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು

ಹೊಸದಿಲ್ಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಕುರಿತು ಖುದ್ದು ಮಾಹಿತಿ ನೀಡಿರುವ ಪ್ರಣಬ್ ಮುಖರ್ಜಿ, ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ತಮಗೆ ಕೊರೊನಾ ಸೋಂಕು ತಗುಲಿದೆ ಎಂಬುದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ. ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವುದನ್ನು ವೈದ್ಯರು ದೃಢಪಡಿಸಿದ್ದು, ನನ್ನ ಸಂಪರ್ಕಕ್ಕೆ ಬಂದ …

Read More »