ಚಾಮರಾಜನಗರ: ಕಂಟೈನ್ಮೆಂಟ್ ಝೋನ್ಗೆ ಬಂದರೆ ಮಚ್ಚು, ಲಾಂಗ್ ತರುತ್ತೇವೆ ಎಂದು ಕೊರೊನಾ ವಾರಿಯರ್ಸ್ ಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ. ಕೊಲೆ ಬೆದರಿಕೆ ಹಾಕುಲಾಗುತ್ತಿದೆ ರಕ್ಷಣೆ ಬೇಕು ಎಂದು ನರ್ಸ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗುಂಡ್ಲುಪೇಟೆಯಲ್ಲಿ ನಡೆದ ಪುನಶ್ಚೇತನ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ದುಷ್ಕರ್ಮಿಗಳ …
Read More »ಕೊರೊನಾ ಉಪಕರಣ ಖರೀದಿಯಲ್ಲಿ ಸರ್ಕಾರ 2 ಸಾವಿರ ಕೋಟಿ ರೂ. ಭ್ರಷ್ಟಾಚಾರ………!
ಬೆಂಗಳೂರು: ಕೊರೊನಾ ಉಪಕರಣ ಖರೀದಿಯಲ್ಲಿ ಸರ್ಕಾರ 2 ಸಾವಿರ ಕೋಟಿ ರೂ. ಭ್ರಷ್ಟಾಚಾರ ನಡೆಸಿದೆ ಎಂದು ಆರೋಪ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಲೀಗಲ್ ನೋಟಿಸ್ ಜಾರಿ ಮಾಡಿದೆ. ರಾಜ್ಯ ಸರ್ಕಾರದ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಈ ಹಿಂದೆಯೇ ತಿಳಿಸಿತ್ತು. ಅದರಂತೆ ಸದ್ಯ ನೋಟಿಸ್ ಜಾರಿ ಮಾಡಲಾಗಿದ್ದು, ಮಾಹಿತಿಯೇ …
Read More »ನಾಳೆ ಪ್ರಧಾನಿ ನರೇಂದ್ರ ಮೋದಿ ಭಾಷಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉದ್ದೇಶಿಸಿ ಸಂಜೆ 4.30ಕ್ಕೆ ಮಾತನಾಡಲಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಈ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಮಾತನಾಡಲಿದ್ದಾರೆ ಎಂದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ. ಅಲ್ಲದೇ ಕೊರೊನಾ ಅನ್ಲಾಕ್ 3.0 ನಾಳೆಯಿಂದ ಜಾರಿ ಆಗಲಿದೆ. ಈ ವೇಳೆಯಲ್ಲೇ ಪ್ರಧಾನಿಗಳು ಭಾಷಣ ಮಾಡುತ್ತಿರುವುದು ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.ಮಾತೃಭಾಷೆಯಲ್ಲೇ …
Read More »ಸ್ಮಾರ್ಟ್ ಇಂಡಿಯಾ ಹ್ಯಾಕ್ಥಾನ್ ಫಿನಾಲೆಗೆ ಆಯ್ಕೆ
ಚಿಕ್ಕೋಡಿ: ನಿಪ್ಪಾಣಿ ವಿ.ಎಸ್.ಎಂ. ಸೋಮಶೇಖರ್ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಎರಡು ಯೋಜನೆಗಳು ಸ್ಮಾರ್ಟ್ ಇಂಡಿಯಾ ಹ್ಯಾಕ್ಥಾನ್ 2020ರ ಗ್ರ್ಯಾಂಡ್ ಫಿನಾಲೆಗೆ ಆಯ್ಕೆಯಾಗಿವೆ. ಭಾರತ ಸರಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಹೊಸ ದೆಹಲಿಯ ಎಐಸಿಟಿಇ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸಸ ಸ ಸ ಸಸಾಫ್ಟ್ವೇರ್ನ ವಿಶ್ವದ ಅತಿ ದೊಡ್ಡ ಮುಕ್ತ ನಾವಿನ್ಯತೆ ಮಾದರಿ ಸ್ಪರ್ಧೆಯಲ್ಲಿ ವಿಎಸ್ಎಂಎಸರ್ ಆರ್ಕೆಐಟಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದ್ದಾರೆ. ಪ್ರೊ| ಮಹಾದೇವ ಹರಕುಡೆ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಾದ …
Read More »ಬೆಳಗಾವಿ: ಕೊರೋನಾ ಸೋಂಕಿತರ ಅಂತ್ಯಕ್ರಿಯೆ ವೇಳೆ ಕಣ್ಣೀರು ಹಾಕಿದ ಪಾಲಿಕೆ ಅಧಿಕಾರಿ!
ಬೆಳಗಾವಿ: ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹದ ಅಂತ್ಯಕ್ರಿಯೆ ಪ್ರಕ್ರಿಯೆ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಬಸವರಾಜ ದಬಾಡೆ ಕಣ್ಣೀರು ಹಾಕಿದ ಪ್ರಸಂಗ ಇಲ್ಲಿನ ಸದಾಶಿವ ನಗರದ ಸ್ಮಶಾನಭೂಮಿಯಲ್ಲಿ ಗುರುವಾರ ನಡೆದಿದೆ. ಯಾವ ಜನ್ಮದ ಋುಣವೂ ಇಲ್ಲದ ಮೃತರ ಅಂತ್ಯಕ್ರಿಯೆಯನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದು, ಎಲ್ಲರ ಮನಕಲಕುವಂತಿದೆ. ಮೃತರ ಕುಟುಂಬಸ್ಥರು ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಂತ್ಯಕ್ರಿಯೆ ಮಾಡುವಂತೆ ಮನವಿ ಮಾಡಿದ್ದರು. ಬೆಳಗಾವಿ: ಕೊರೋನಾ ವಾರಿಯರ್ಸ್ಗೂ …
Read More »ಕೊರೊನಾ ನಿಯಂತ್ರಣಕ್ಕೆ ಜಿಲ್ಲಾವಾರು ಬಿಡುಗಡೆಯಾದ ಹಣದ ಲೆಕ್ಕ ಕೊಟ್ಟ ಸರ್ಕಾರ
ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕವನ್ನು ಸರ್ಕಾರ ಇಂದು ಬಹಿರಂಗಪಡಿಸಿದೆ. ನ್ಯಾಯವಾದಿ ಸುರೇಂದ್ರ ಉಗಾರೆ ಕೊರೊನಾ ಸಂದರ್ಭದಲ್ಲಿ ಖರ್ಚಾದ ಹಣದ ಕುರಿತು ಮಾಹಿತಿ ಕೇಳಿದ್ದರು. ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆರೋಪ ಮಾಡಿದ್ದವು. ಈ ಹಿನ್ನೆಲೆ ಸರ್ಕಾರ ಇಂದು ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕ ಕೊಟ್ಟಿದೆ. ಇದುವರೆಗೆ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲಾ …
Read More »ಲಕ್ಷಾಂತರ ರೂ. ಅಂದರ್ ಬಾಹರ್ ಆಡ್ತಾರೆ ಶ್ರೀಮಂತರು
ಕೋಲಾರ: ಜಿಲ್ಲೆಯಲ್ಲಿ ಅಂತರ್ ರಾಜ್ಯ ಹೈಟೆಕ್ ಜೂಜು ಅಡ್ಡೆಯೊಂದು ತಲೆ ಎತ್ತಿದ್ದು, ಪ್ರತಿದಿನ ಲಕ್ಷಾಂತರ ರೂಪಾಯಿ ಜೂಜಾಟ ನಡೆಯುವ ಈ ಅಡ್ಡೆಗೆ ಪೊಲೀಸರ ಕುಮ್ಮಕ್ಕು ಸಹ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅಂದರ್ ಬಾಹರ್ ಜೂಜು ನಿರಾಂತಕವಾಗಿ ನಡೆಯುತ್ತಿದೆ. ಪ್ರತಿ ನಿತ್ಯ ನೂರಾರು ಮಂದಿ ಒಂದೆಡೆ ಸೇರಿ ಎರಡು ಪಾಳಿಗಳಲ್ಲಿ ಜೂಜು ಕೇಂದ್ರಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ನಿತ್ಯವೂ ಲಕ್ಷಾಂತರ ರೂಪಾಯಿ ವರೆಗೆ ವಹಿವಾಟು ನಡೆಯುತ್ತಿದೆ. ಶ್ರೀನಿವಾಸಪುರ ತಾಲೂಕಿನ …
Read More »ಕೊರೊನಾ ಮಹಾಮಾರಿಗೆ ಬಲಿಯಾದ ವ್ಯಕ್ತಿಗಳ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ ನೆರೆವೇರಿಸಿದರು.
ಗೋಕಾಕ: ನಗರದ ಅಂಬಿಗೇರ ಗಲ್ಲಿಯ ನಿವೃತ ಮುಖ್ಯೋಪಾದ್ಯರೊಬ್ಬರು ಕೊರೊನಾ ಮಹಾಮಾರಿಗೆ ಗುರುವಾರ ಬಲಿಯಾಗಿದ್ದು ,ಅವರ ಅಂತ್ಯ ಸಂಸ್ಕಾರವನ್ನು ನಗರಸಭೆ ಸಿಬ್ಬಂದ್ದಿ ಮತ್ತು ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನೆರೆವೇರಿಸಿದರು. ಕೊರೊನಾ ಮಹಾಮಾರಿಗೆ ಬಲಿಯಾದ ಮುಖ್ಯೋಪಾದ್ಯಯರ ಅಂತಿಮ ಸಂಸ್ಕಾರವನ್ನು ಅವರ ಧರ್ಮದ ವಿಧಿ ವಿಧಾನಗಳಂತೆ ನೆರೆವೇರಿಸಿದರು. ಪಿಏಫ್ಐ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮುಖ್ಯೋಪಾದ್ಯಯವರ ಅಂತ್ಯ ಸಂಸ್ಕಾರ ನೆರೆವೇರಿಸಲು ನಗರಸಭೆ ಸಿಬ್ಬಂದ್ದಿಯೊಂದಿಗೆ ಮುಂದೆ ಬಂದು ಅಂತ್ಯ ಸಂಸ್ಕಾರ ಮಾಡಿರುವುದರಿಂದ ಪಿಎಫ್ಐ ಕಾರ್ಯಕರ್ತರು …
Read More »ಕೊವಾಕ್ಸಿನ್ನ ಕ್ಲಿನಿಕಲ್ ಟ್ರಯಲ್ ಬೆಳಗಾವಿ ಆಸ್ಪತ್ರೆಯಲ್ಲಿ ಆರಂಭ
ಬೆಳಗಾವಿ, ಜುಲೈ 30: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆಯ್ಕೆ ಮಾಡಿದ 12 ಕೇಂದ್ರಗಳಲ್ಲಿ ಒಂದಾದ ಬೆಳಗಾವಿ ಮೂಲದ ಜೀವನ್ ರೇಖಾ ಆಸ್ಪತ್ರೆಯಲ್ಲಿ ಬಿಬಿವಿ 152 ಕೋವಿಡ್ -19 ಲಸಿಕೆ ಅಥವಾ ಕೊವಾಕ್ಸಿನ್ನ ಮಾನವ ಕ್ಲಿನಿಕಲ್ ಪ್ರಯೋಗ ಪ್ರಾರಂಭವಾಗಿದೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್ ಲಸಿಕೆಯಾದ ಕೊವಾಕ್ಸಿನ್ನ ಕ್ಲಿನಿಕಲ್ ಪರೀಕ್ಷೆಗಳು ಈಗಾಗಲೇ ಏಮ್ಸ್ ಸೇರಿದಂತೆ 12 ಕೇಂದ್ರಗಳಲ್ಲಿ ಪ್ರಾರಂಭವಾಗಿವೆ. ಜೀವನ್ ರೇಖಾ ನಿರ್ದೇಶಕ ಟಿ.ಎನ್.ಐ.ಇ ಅವರೊಂದಿಗೆ ಮಾತನಾಡಿದ ಡಾ.ಅಮಿತ್ ಭಾಟೆ, …
Read More »ಲೇಖಕಿಯರ ಸಂಘ: ಅಧಿಕಾರ ಹಸ್ತಾಂತರ
ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಹೇಮಾವತಿ ಸೋನೊಳಿ ಅವರಿಗೆ ನಿರ್ಗಮಿತ ಅಧ್ಯಕ್ಷೆ ಜ್ಯೋತಿ ಬದಾಮಿ ಅಧಿಕಾರ ಹಸ್ತಾಂತರಿಸಿದರು. ‘ತಮ್ಮ ಎರಡು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಯಿತು. ಕುಪ್ಪಳ್ಳಿ ಹಾಗೂ ನಿಡಸೋಸಿಯ ಶ್ರೀಮಠದ ಸಾಹಿತ್ಯ ಚಿಂತನ ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ಜನಪ್ರಿಯತೆ ಗಳಿಸಿತು’ ಎಂದು ಜ್ಯೋತಿ ತಿಳಿಸಿದರು. ಉಡುಪಿಯ ಉಪನ್ಯಾಸಕಿ ಸಂಧ್ಯಾ ಶೆಣೈ, ’20 ವರ್ಷಗಳ ಗಟ್ಟಿ ಹೆಜ್ಜೆಗುರುತು ಮೂಡಿಸುತ್ತಾ ಹಿರಿಯ …
Read More »
Laxmi News 24×7