Breaking News

ರಾಜ್ಯ

ನಜ್ಜುಗುಜ್ಜಾದ ಕಾರಿನಲ್ಲಿ ಆಟವಾಡುತ್ತಿದ್ದ ಬಾಲಕಿಯರಿಬ್ಬರು ಉಸಿರುಗಟ್ಟಿ ಸಾವು

ಚೆನ್ನೈ: ಮಕ್ಕಳನ್ನು ಕಾರಿನೊಳಗೆ ಬಿಟ್ಟು ತಂದೆ-ತಾಯಿ ಶಾಪಿಂಗ್ ಹೋಗಿ ಬರುವಾಗ ಉಸಿರುಗಟ್ಟಿ ಸಾವನ್ನಪ್ಪಿದ್ದನ್ನು ಕೇಳಿದ್ದೇವೆ. ಆದರೆ ಇಲ್ಲಿ ಮಕ್ಕಳೇ ನಜ್ಜುಗುಜ್ಜಾದ ಕಾರಿನ ಒಳಗಡೆ ಹೋಗಿ ಆಟವಾಡುತ್ತಿರುವಾಗ ಉಸಿರುಗಟ್ಟಿ ಮೃತಪಟ್ಟ ದುರಂತ ಘಟನೆಯೊಂದು ನಡೆದಿದೆ. ಹೌದು. ಈ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ದುರ್ದೈವಿ ಮಕ್ಕಳನ್ನು ರಾಜೇಶ್ವರಿ(4) ಹಾಗೂ ವನಿತಾ (7) ಎಂದು ಗುರುತಿಸಲಾಗಿದ್ದು, ಇಬ್ಬರೂ ಕಲದೀಪಮಂಗಲಂ ನಿವಾಸಿಗಳಾಗಿದ್ದಾರೆ. ಮೃತ ಮಕ್ಕಳಿಬ್ಬರು ಸ್ನೇಹಿತರಾಗಿದ್ದು, ಇವರ ತಂದೆ …

Read More »

ರಾಮಮಂದಿರ ಶಿಲಾನ್ಯಾಸಕ್ಕೆ ಭರ್ಜರಿ ಸಿದ್ಧತೆ………

ಲಕ್ನೋ: ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದಿನಾಂಕ ನಿಗದಿಯಾಗಿದ್ದು, ಭರ್ಜರಿ ಸಿದ್ಧತೆಗಳು ಆರಂಭವಾಗಿದೆ. ಲಾಕ್‍ಡೌನ್ ನಡುವೆ ಐತಿಹಾಸಿಕ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಸಲಹೆಗಳನ್ನು ನೀಡಿದರು. ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದ ಸಿದ್ಧತೆಯ ನೇತೃತ್ವ ವಹಿಸಿಕೊಂಡಿದೆ. ಅಗಸ್ಟ್ ಐದರಂದು ಬೆಳಗ್ಗೆ 10:30 ರಿಂದ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ …

Read More »

ಜಗಜ್ಯೋತಿ ಬಸವಣ್ಣನವರು ಐಕ್ಯರಾದ ದಿನವನ್ನು ನಾಗರಪಂಚಮಿ ಆಚರಿಸುವ ಬದಲು ಬಸವ ಪಂಚಮಿ ಯನ್ನಾಗಿ ಆಚರಿಸಬೇಕು ಎಂದು ಕರೆಕೊಟ್ಟರು ಸತೀಶ್ ಶುಗರ್ಸ್ ಫೌಂಡೇಶನ್

  ಗೋಕಾಕ ನಗರದಲ್ಲಿ   ಪ್ರತಿವರ್ಷದಂತೆ ಈ ವರ್ಷವೂ ಸಹ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಗೋಕಾಕ್ ಶಾಖೆ ಹಾಗೂ ಸತೀಶ್ ಶುಗರ್ಸ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 25.07. 2020 ರಂದು ನಾಗರ ಪಂಚಮಿ ಹಬ್ಬದ ನಿಮಿತ್ಯ ಪೌಷ್ಟಿಕ ಆಹಾರ ಹಾಲನ್ನು ಹಾವಿನ ಹುತ್ತಗಳಿಗೆ ಎರೆಯುವ ಬದಲು ಗೋಕಾಕ ನಗರದ ಶಿವಾ ಫೌಂಡೇಶನಲ್ಲಿರುವ ಅನಾಥ ಮಕ್ಕಳಿಗೆ ಹಾಲನ್ನು ಕೊಟ್ಟು ಮಾನವೀಯತೆಯ ಮೆರೆದಿರುವ ಮಾನವ ಬಂಧುತ್ವ ವೇದಿಕೆ ಗೋಕಾಕ್ …

Read More »

ಗೋಕಾಕ ಜೇ ಏಮ್ ಯೆಫ್ ಸಿ ಕೋರ್ಟ್ ನಲ್ಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಸಮನ್ಸ್

ಬೆಳಗಾವಿ- ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಮಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವ್ಹಿಲ್ ಜಡ್ಜ್ JMFC ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು,ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು,ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೋಲೀಸ್ ಠಾಣೆಯಲ್ಲಿ …

Read More »

ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತು ಹಳ್ಳ ದಾಟಿಸಿದ ಘಟನೆ ತೆಲಂಗಾಣದ ಭದ್ರದ್ರಿ ಕೊತಗೊಡೆಂನಲ್ಲಿ ನಡೆದಿದೆ.

ಹೈದರಾಬಾದ್: ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತು ಹಳ್ಳ ದಾಟಿಸಿದ ಘಟನೆ ತೆಲಂಗಾಣದ ಭದ್ರದ್ರಿ ಕೊತಗೊಡೆಂನಲ್ಲಿ ನಡೆದಿದೆ. ಭದ್ರದ್ರಿ ಕೊತಗೊಡೆಂ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಗುಂಡ್ವಾಲ ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ತಾತ್ಕಾಲಿಕ ಸೇತುವೆ ಸಹ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು. ಸೇತುವೆ ಕೊಚ್ಚಿ ಹೋಗಿದ್ದರಿಂದ ಗ್ರಾಮದ ಗರ್ಭಿಣಿಯನ್ನು ಕೆಲ ಯುವಕರು ಹೆಗಲ ಮೇಲೆ ಹೊತ್ತು ಹಳ್ಳವನ್ನು ದಾಟಿಸಿದ್ದಾರೆ. ಗರ್ಭಿಣಿಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ …

Read More »

ಹೇಳಿದ್ದು 10,100 ಬೆಡ್ ಅಂತ,ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್‍ಗಳು ಮಾತ್ರ.

ಬೆಂಗಳೂರು,ಜು25- ಕೊರೋನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್‍ಗಳಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳು ಸಿಗುತ್ತಿಲ್ಲ. ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರು ಹೊರ ವಲಯದ ಮಾದಾವರದ ಬಿಐಇಸಿಯಲ್ಲಿ ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್‍ಗಳು ಮಾತ್ರ. ಇಲ್ಲಿ 10,100 ಬೆಡ್‍ಗಳ ಬೃಹತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಈವರೆಗೆ ಕೇವಲ 5 ಸಾವಿರ ಬೆಡ್‍ಗಳನ್ನು ಮಾತ್ರ ಕಲ್ಪಿಸಲಾಗಿದೆ. ಆದರೆ ಚಿಕಿತ್ಸೆಗೆ ಲಭ್ಯವಿರುವುದು 1 ಸಾವಿರ ಬೆಡ್‍ಗಳು ಮಾತ್ರ ಎಂದು ಸ್ವತಃ ಬಿಬಿಎಂಪಿ ಆಯುಕ್ತರೇ …

Read More »

12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ………….

ಶಿವಮೊಗ್ಗ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಶಿವಮೊಗ್ಗ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಹೊಸನಗರದ ಸಾಗರ ರಸ್ತೆಯ ರಮಾನಂದ್ ಎಂಬವರ ಮನೆಯಲ್ಲಿ ಶುಕ್ರವಾರ ಮಧ್ಯಾಹ್ನ ಹಾವು ಪ್ರತ್ಯಕ್ಷವಾಗಿದ್ದು, ಮನೆಯ ಹೊರಗಡೆ ಇದ್ದ ನಾಯಿ ಹಾವನ್ನು ಕಂಡು ಬೊಗಳಲು ಆರಂಭಿಸಿದೆ. ಅಲ್ಲದೇ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳು ಸಹ ಹಾವನ್ನು ಕಂಡು ಹಾವು ಹಾವು ಎಂದು ಕೂಗಿದ್ದಾರೆ. ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ದೂರವಾಣಿ ಮೂಲಕ ವಿಷಯ …

Read More »

ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್

ಮಂಗಳೂರು: ನಾಡಿನೆಲ್ಲೆಡೆ ನಾಗರಪಂಚಮಿ. ಆದರೆ ಈ ಕೊರೊನಾ ನಾಗರಪಂಚಮಿ ಆಚರಣೆಗೂ ಅಡ್ಡಿಯಾಗಿದೆ. ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆಗಿದೆ. ಇಂದು ನಡೆಯುತ್ತಿರುವ ನಾಗರಪಂಚಮಿ ಪೂಜೆಗೆ ಸಾರ್ವಜನಿಕರಿಗೆ ಅವಕಾಶ ನೀಡದಿರಲು ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ. ಸಾಮಾಜಿಕ ಅಂತರ ಕಾಪಾಡಲು ಕಷ್ಟಕರವಾಗುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ವರ್ಷ ನಾಗರಪಂಚಮಿಗೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಆದರೆ ಈ ಬಾರಿ ಅರ್ಚಕರಿಂದ ಮಾತ್ರ …

Read More »

ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್

ಶಿಮ್ಲಾ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ತಾನು ಸಾಕಿದ ಹಸುವನ್ನೇ ಮಾರಿ ಆನ್‍ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸಿದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಸದಾ ಮಾನವೀಯತೆಯ ಮೂಲಕ ರಿಯಲ್ ಲೈಫ್‍ನಲ್ಲಿ ಹೀರೋ ಆಗಿರೋ ಬಾಲಿವುಡ್ ನಟ ಸೋನು ಸೂದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹೌದು. ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ …

Read More »

ಕೊರೊನಾ ಸಂಕಷ್ಟವೇ ಬಂಡವಾಳ- ಮಾಟಕ್ಕೆ ಪರಿಹಾರ ಮಾಡುತ್ತೇನೆಂದು ಪೂಜಾರಿ ವಂಚನೆ

ಹಾಸನ: ಕೊರೊನಾ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡ ಪೂಜಾರಿಗಳ ತಂಡ, ನಿಮಗೆ ಆಗದವರು ನಿಮ್ಮ ಜಮೀನಿನಲ್ಲಿ ಹಂದಿ ತಲೆ ಹೂತಿಟ್ಟು ಮಾಟ ಮಾಡಿಸಿದ್ದಾರೆ. ತಲೆಯನ್ನು ನಾವು ಹೊರ ತೆಗೆದು ಮಾಟದಿಂದ ಮುಕ್ತಿ ಕೊಡಿಸುತ್ತೇವೆ ಎಂದು ವಂಚಿಸುತ್ತಿದೆ. ಜಿಲ್ಲೆಯ ಗಾಣಿಗರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ತಂಡವನ್ನು ಗ್ರಾಮಸ್ಥರು ಪತ್ತೆಹಚ್ಚಿದ್ದಾರೆ. ದೇವರ ವಿಗ್ರಹದೊಂದಿಗೆ ಆಗಮಿಸಿದ ದಿಲೀಪ್, ತಾನೇ ತಂದಿರುವ ಹಂದಿ ತಲೆಯನ್ನು ಮೊದಲೇ ಹೂತಿಟ್ಟು, ನಂತರ ಅದೇ ಜಾಗದಲ್ಲಿ ಗುಂಡಿ ತೆಗೆಸಿ …

Read More »