ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.
ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.
Read More »ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ: ಈರಣ್ಣಾ ಕಡಾಡಿ
ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …
Read More »ಕೊರೊನಾದಿಂದ ಕೆಲಸ ಕಳ್ಕೊಂಡ ತಂದೆ- ಬಿರಿಯಾನಿ ಮಾರಲು ನಿಂತ ಮಗ
ಹುಬ್ಬಳ್ಳಿ: ಕೊರೊನಾ ಮಹಾಮಾರಿ ಅದೆಷ್ಟೋ ಜನರ ಉದ್ಯೋಗ ಕಸಿದುಕೊಂಡು ಮೂಲೆ ಸೇರುವಂತೆ ಮಾಡಿದೆ. ಅಲ್ಲದೇ ಅನೇಕರು ಬೇರೆ ಉದ್ಯೋಗ ಮಾಡಲಾಗದೆ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಲೇಜಿಗೆ ಹೋಗಿ ವ್ಯಾಸಂಗ ಮಾಡಬೇಕಿದ್ದ ವಿದ್ಯಾರ್ಥಿಗಳಿಬ್ಬರು ಬಿರಿಯಾನಿ ಮಾರುವ ಮೂಲಕ ಕುಟುಂಬಕ್ಕೆ ಆಸರೆಯಾಗಿ ನಿಂತಿದ್ದಾರೆ. ಚೇತನ ಹಳ್ಳಿಕೇರಿ ತಂದೆ ಗ್ಯಾರೇಜ್ ನಡೆಸುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಗ್ರಾಹಕರು ಕಡಿಮೆಯಾಗಿ ಗ್ಯಾರೇಜ್ ಮುಚ್ಚಿದ್ದಾರೆ. ಹೀಗಾಗಿ ಕುಟುಂಬ ನಿರ್ವಹಣೆಗಾಗಿ ಚೇತನ ತನ್ನ …
Read More »ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,
ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ …
Read More »ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್ ಕಮ್ ಬ್ಯಾರೇಜ್ಗಳು ಈಗಲೂ ಜಲಾವೃತವಾಗಿವೆ.
ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್ ಕಮ್ ಬ್ಯಾರೇಜ್ಗಳು ಈಗಲೂ ಜಲಾವೃತವಾಗಿವೆ. ದೂಧ್ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್ ನೀರು ಸೇರಿ ಒಟ್ಟು 71,452 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. …
Read More »ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ.
ನವದೆಹಲಿ(ಜು.10): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಇಂದು 69ನೇ ಹುಟ್ಟುಹಬ್ಬ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರ ಗಣ್ಯರು ರಾಜನಾಥ್ ಸಿಂಗ್ಗೆ ಶುಭ ಕೋರಿದ್ದಾರೆ. ಆದರೆ ಈ ಎಲ್ಲಾ ಶುಭಾಶಯಗಳ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ. ಹೌದು ಮಾಜಿ ಪ್ರಧಾನಿ ದೇವೇಗೌಡರು ರಕ್ಷಣಾ ಸಚಿವರಿಗೆ ಕನ್ನಡದಲ್ಲೇ ಹುಟ್ಟುಹಬ್ಬದಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ …
Read More »ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ
ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಂತಹ ಪ್ರಕರಣ ನಾನು ನನ್ನ ಸರ್ವಿಸ್ ನಲ್ಲಿ ನೋಡಿಲ್ಲ, ಕೆಜಿಎಫ್ ಹಾಗೂ ಕೋಲಾರ ಎಸ್ಪಿ ಸೇರಿ ಚಾರ್ಚ್ ಶೀಟ್ ರೆಡಿ ಮಾಡಿದ್ದಾರೆ, ಇವತ್ತು ಅಲ್ಲಿ ನಡೆದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ, ಜಿಲ್ಲಾಧಿಕಾರಿ ಹಾಗೂ ಸರ್ವೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಘಟನೆ …
Read More »ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮಾದ್ಯಮಗಳ ಜೊತೆ ಮಾತನಾಡಿ, ಬಾಗಲಕೋಟೆಯಲ್ಲಿ 27, ಜಮಖಂಡಿ 2, ಮುಧೋಳ 5, ಬೇರೆ ಜಿಲ್ಲೆಯಾದ ಹುಬ್ಬಳ್ಳಿಯ 2 ಪ್ರಕರಣಗಳು ದೃಡಪಟ್ಟಿವೆ ಎಂದರು. ಬಳ್ಳಾರಿಯ ಪಿ-10769 ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ಹುಬ್ಬಳ್ಳಿಯ 31 ವರ್ಷದ ಪುರುಷ ಪಿ-28945 (ಬಿಜಿಕೆ-314), 42 ವರ್ಷದ ಪುರುಷ ಪಿ-28946 …
Read More »ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರ
ಬೆಂಗಳೂರು: ಅನ್ಲಾಕ್-2 ಅವಧಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರವನ್ನು ಮಾಡಿದೆ. ಕೋವಿಡ್ ನಿಯಂತ್ರಣ ಮಾಡಲು ಉದ್ದೇಶಕ್ಕಾಗಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿರುವ ಕಾರಣ ಸರ್ಕಾರಿ ಉದ್ಯೋಗಿಗಳ ಬಳಕೆಗೆ ಸರ್ಕಾರ ಮುಂದಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಇಲಾಖೆಯ, ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ 50 ವರ್ಷ ಒಳಗಿನ ಅಧಿಕಾರಿಗಳು, ಸಿಬ್ಬಂದಿಗಳ ಮಾಹಿತಿ ನೀಡಲು ಸೂಚನೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿ ಮುಖ್ಯ …
Read More »
Laxmi News 24×7