Breaking News

ರಾಜ್ಯ

ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ….

ಬೆಳಗಾವಿ: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೆ ಲಾಕ್ ಡೌನ್ ಜಾರಿಗಿದ್ದರು ಸಹ ಸ್ವಲ್ಪ ಮಟ್ಟಿಗೆ ವಾಹನಗಳು ರಸ್ತೆ ಇಳಿದಿದ್ದವು. ಆದ್ರೆ ಭಾನುವಾರ ಬೆಳಗಿನ ಜಾವದಿಂದ ಬೆಳಗಾವಿ ಸ್ಥಬ್ಧವಾಗಿದೆ. ಪ್ರತಿ ದಿನ ಜನದಟ್ಟನೆ ಯಿಂದ ಕೂಡಿರುವ ಸಂಗೋಳಿ ರಾಮಣ್ಣ ವೃತ್ತ, ಬಸ್ ನಿಲ್ದಾಣ ರಸ್ತೆ, ಚನ್ನಮ್ಮ ವೃತ್ತ, ಖಡೇಬಜಾರ …

Read More »

ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ

ನವದೆಹಲಿ: ಭಾನುವಾರ ಮೊದಲ ದೇಶಿ ಆ್ಯಪ್ ಅಲಾಯಿಮೆಂಟ್ಸ್ ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಲಿದ್ದಾರೆ. ಭಾರತದಲ್ಲಿ ಸುಮಾರು 50 ಕೋಟಿಗಿಂತ ಹೆಚ್ಚಿನ ಜನರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಆದ್ರೆ ಬಳಕೆ ಮಾಡುವ ಬಹುತೇಕ ಆ್ಯಪ್ ಗಳು ವಿದೇಶಿಯ ಮೂಲದ್ದು ಆಗಿರುತ್ತವೆ. ವಿದೇಶಿ ಆ್ಯಪ್ ಬಳಕೆಯಿಂದಾಗಿ ಬಳಕೆದಾರರ ಮಾಹಿತಿಯನ್ನು ಕದಿಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ನಾಳೆ ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ದೇಶಿಯ ಆ್ಯಪ್‍ಗೆ …

Read More »

ಕೊರೋನಾ ವಾರಿಯರ್ ತುಂಬು ಗರ್ಭಿಣಿ ಪತ್ನಿ ಬಿಚ್ಚಿಟ್ಟ ಕರಾಳ ಸತ್ಯ!

ಒಂಬತ್ತು ತಿಂಗಳ ಹೆಂಡತಿ ಹಾಗೂ ಆಕೆಯ ಗರ್ಭದಲ್ಲಿರುವ ದಿನ ತುಂಬಿದ ಮಗುವಿನ ಮೇಲೆ ಪ್ರಾಣವನ್ನೇ ಇಟ್ಟುಕೊಂಡ ಡಾಕ್ಟರ್ ಕೋವಿಡ್ ರೋಗಿಗಳನ್ನು ನೋಡುವ ಡ್ಯೂಟಿಯಲ್ಲಿರುವುದರಿಂದ 15 ದಿನಗಳಿಂದ ಮನೆಯತ್ತ ಮುಖ ಮಾಡಿಲ್ಲ. ಲಾಕ್‌ಡೌನ್ ಕಾರಣಕ್ಕೆ ಅತ್ತೆಮಾವರಾಗಲೀ, ಅಪ್ಪಅಮ್ಮರಾಗಲೀ ಗರ್ಭಿಣಿ ಮಿಸಸ್ ಕುಲಕರ್ಣಿಯ ಜೊತೆಗಿರಲು ಬರಲು ಸಾಧ್ಯವಾಗಿಲ್ಲ. ಮನೆಯಲ್ಲೊಬ್ಬಳೇ ಇರುವ ಮಿಸಸ್ ಕುಲಕರ್ಣಿ ತನ್ನ ಹೊಟ್ಟೆಯಲ್ಲಿರುವ ಕಂದನೊಡನೆ ಮಾತಾಡುತ್ತಾ ಪತಿ ಹಾಗೂ ಮಗುವಿನ ಕುರಿತ ತನ್ನ ನೆನಪು ಹಾಗೂ ಕನಸುಗಳನ್ನು ಬಿಚ್ಚಿಡುತ್ತಾ ಹೋಗುತ್ತಾಳೆ. …

Read More »

ಲಾಕ್ ಡೌನ್ : ಎಣ್ಣೆಗಾಗಿ ಮಗುಬಿದ್ದ ಮದ್ಯಪ್ರಿಯರು..

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೇ, ಜನರು ಮಾತ್ರ ಯಾವುದೇ ಭಯವಿಲ್ಲದೇ ಓಡಾಡುತ್ತಿದ್ದಾರೆ. ಭಾನುವಾರದ ದಿನವಾದ ನಾಳೆ ಸಂಪೂರ್ಣ ಲಾಕ್ ಡೌನ್ ಇರುವ ಕಾರಣದಿಂದಾಗಿ, ಮದ್ಯಪ್ರಿಯರು ಮಾತ್ರ ನಾಳೆ ಎಲ್ಲಿ ಎಣ್ಣೆ ಸಿಗೋದಿಲ್ಲವೋ ಎನ್ನುವಂತೆ ಬಾರ್, ವೈನ್ ಶಾಪ್ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಸಲು ಮುಗಿ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೆಡೆ ಆದ್ರೇ.. ಸೋಂಕಿನ ಭೀತಿಯಿಂದ ತಮ್ಮ ಊರುಗಳತ್ತ ಗುಳೇ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು…

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು ಪಕ್ಷದ ಪದಾಧಿಕಾರಿಗಳು, ಬೆಂಬಲಿಗರು ಅದ್ದೂರಿಯಾಗಿ ಬರ ಮಾಡಿಕೊಂಡು, ಸತ್ಕರಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಿಂದ ನೇವರಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಶಾಸಕ ರಾಜುಗೌಡ ಕಾಗೆ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ರಾಜು ಸೇಠ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ …

Read More »

ಡಿಕೆಶಿ ಕೆಪಿಸಿಸಿ ಪಟ್ಟ ಏರಿದ ತಕ್ಷಣವೇ ಲಕ್ಷ್ಮಿ ಪುತ್ರನಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿರ್ಯದರ್ಶಿ ಸ್ಥಾನ.

ಬೆಳಗಾವಿ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪಟ್ಟ ಏರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ ಹೆಬ್ಬಾಳಕರ್ ಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಮೃಣಾಲ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಆದ್ರೆ ಈಗ ಕೆಪಿಸಿಸಿ ನಾಯಕರು ಸಂಘಟನೆ ಚತುರತೆ ಕಂಡು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿಸಿದ್ದಾರೆ. ಜತೆಗೆ ಕಾಂಗ್ರೆಸ್ ನಲ್ಲಿ …

Read More »

ತೈಲ ಬೆಲೆ ಏರಿಕೆ ಖಂಡಿಸಿ ಎತ್ತಿನ ಮೂಲಕ ಕೈ ಪ್ರತಿಭಟನೆ…..?

    ಅಥಣಿ: ಕೇಂದ್ರದಲ್ಲಿ ಅಂದು ಕಾಂಗ್ರೆಸ್ ಸರಕಾರದ ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಒಂದೆರಡು ರುಪಾಯಿ ತೈಲ ಬೆಲೆ ಹೆಚ್ಚಳ ಮಾಡಿದಾಗ ಬಿಜೆಪಿಯ ಸ್ಮೃತಿ ಇರಾಣಿ ಅವರು ಬಳೆಗಳನ್ನು ಕಳುಹಿಸಿಕೊಟ್ಟಿದ್ದರು. ಆದರೆ ಸುಮಾರು ೭-೪ ರುಪಾಯಿಗಳಷ್ಟು ತೈಲ ಬೆಲೆ ಏರಿಕೆಯಾಗಿದೆ. ಈಗೆಲ್ಲಿದ್ದಾರೆ ಎಂದು ಸ್ಮೃತಿ ಇರಾಣಿಗೆ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳೆ ಪ್ರಶ್ನೆ ಮಾಡಿದ್ದಾರೆ.. ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ತೈಲ ಬೆಲೆ ಖಂಡಿಸಿ ಚಕ್ಕಡಿ ಗಾಡಿಯಲ್ಲಿ ದ್ವೀಚಕ್ರವಾಹನ ಇಟ್ಟುಕೊಂಡು …

Read More »

ಬಿಟ್ಟು ಬಿಡದೆ ಸುರಿಯುತ್ತಿರೋ ಮಳೆ- ರಸ್ತೆ ತುಂಬೆಲ್ಲಾ ನೀರು

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದೆರಡು ದಿನಗಳಿಂದ ಕರಾವಳಿಯಲ್ಲಿ ಆಗ್ಗಾಗೆ ಬರುತ್ತಿದ್ದ ಮಳೆ ಇಂದು ಬಿಟ್ಟು ಬಿಡದೆ ಸುರಿಯುತ್ತಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲೂ ಮಳೆ ಎಡೆಬಿಡದೆ ಸುರಿಯುತ್ತಿದೆ. ಪರಿಣಾಮ ನದಿ, ಹೊಳೆಗಳೆಲ್ಲಾ ಮೈತುಂಬಿ ಹರಿಯುತ್ತಿದೆ. ಮುಂಗಾರು ಆರಂಭವಾಗಿ ತಿಂಗಳುಗಳೇ ಕಳೆದರೂ ಈ ಬಾರಿ ಮಳೆ ಮಾತ್ರ ಬಿರುಸಾಗಿರಲಿಲ್ಲ. ಆದರೆ ಇಂದಿನಿಂದ ಮುಂಗಾರು ಅಬ್ಬರಿಸುತ್ತಿದೆ. ಮಂಗಳೂರು ನಗರದಲ್ಲೂ …

Read More »

1.03 ಕೋಟಿ ಮೌಲ್ಯದ ವಿದೇಶಿ ಸಿಗರೇಟ್ ವಶ

ಹೈದರಾಬಾದ್: ಅಕ್ರಮವಾಗಿ ಸಂಗ್ರಹಿಸಿ ಸಾಗಿಸಲಾಗುತ್ತಿದ್ದ ವಿದೇಶಿ ಸಿಗರೇಟನ್ನು ಟಾಸ್ಕ್ ಫೋರ್ಸ್ ಪೊಲೀಸರು ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಳಿಯಿಂದ ಸುಮಾರು 1.03 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಸಿದ್ದಿಯಂಬಾರ್ ಬಜಾರ್‌ನ ಸಮೀಪದಲ್ಲಿ ಆಟೋವೊಂದನ್ನು ಪೊಲೀಸರು ತಡೆದು ತಪಾಸಣೆ ಮಾಡಿದ್ದಾರೆ. ಆಗ ಆಟೋದಲ್ಲಿ ವಿವಿಧ ಬ್ರಾಂಡ್‍ಗಳ ಅಕ್ರಮವಾಗಿ ಆಮದು ಮಾಡಿಕೊಂಡ ವಿದೇಶಿ ಸಿಗರೇಟ್‍ಗಳ 503 ಪೆಟ್ಟಿಗೆ ಪತ್ತೆಯಾಗಿವೆ. ತಕ್ಷಣ ಆಟೋ …

Read More »

ರಾಜ್ಯಾದ್ಯಂತ ಜುಲೈ 4 ರಿಂದ 7 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಹವಾಮಾನ ಇಲಾಖೆ ರಾಜ್ಯದ ಜನತೆಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಇನ್ನೂ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, …

Read More »