Breaking News

ರಾಜ್ಯ

ವಿದ್ಯಾರ್ಥಿಗಳ ಆರೋಗ್ಯ ದೃಷ್ಥಿಯಿಂದ ಮಾಸ್ಕ್ ವಿತರಣೆ ಮಾಡುತ್ತಿರುವ ಯುವಕಾಂಗ್ರೆಸ್ ಎನ್.ಎಚ್.ಶಿವಶಂಕರರೆಡ್ಡಿ ವಿತರಿಸಿದರು

ಗೌರಿಬಿದನೂರು: ವಿದ್ಯಾರ್ಥಿಗಳ ಆರೋಗ್ಯ ದೃಷ್ಥಿಯಿಂದ ಹಾಗೂ ಕೋರಾನ ಸೋಂಕು ಹರಡುವಿಕೆ ತಡೆಗಟ್ಟುವಿಕೆಯನ್ನು ನಿಯಂತ್ರಿಸಲು ಸಹಕಾರವಾಗಿರಲೆಂದು ಮಾಸ್ಕ್ ವಿತರಣೆ ಮಾಡುತ್ತಿರುವ ಯುವಕಾಂಗ್ರೆಸ್ ಪದಾಧಿಕಾರಿಗಳ ಸೇವೆ ಅನನ್ಯವಾದುದ್ದು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು. ನಗರದ ಶಾಸಕರ ಅಧಿಕೃತ ಕಚೇರಿಯಲ್ಲಿ ಯುವಕಾಂಗ್ರೆಸ್ ಘಟಕ ಮತ್ತು ಎನ್‍ಎಚ್‍ಎಸ್ ಬಳಗದವತಿಯಿಂದ ನಾಲ್ಕು ಸಾವಿರ ಮಾಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿ ಇದೀಗ ವಿದ್ಯಾರ್ಥಿಗಳಿಗೆ ಪರೀಕ್ಷ ವೇಳೆ ಅಗಿದ್ದು ಪಿಯುಸಿ ಪರೀಕ್ಷೆ ಮುಗಿದಿದ್ದು ಮತ್ತೆ ಈಗ ಎಸ್‍ಎಸ್‍ಎಲ್‍ಸಿ ಪರೀಕ್ಷೆ …

Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಬೆಳಗಾವಿ- ಸರ್ಕಾರ SSLC ಪರೀಕ್ಷೆಯ ದಿನಾಂಕ ನಿಗದಿಪಡಿಸಿ,ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡ ಬೆನ್ನಲ್ಲಿಯೇ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಂಕ ಕಳವಳಕಾರಿ ಸಂಗತಿಯೊಂದು ಇಂದು ಬೆಳಿಗ್ಗೆ ಹೊರಬಿದ್ದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಗ್ರಾವೊಂದರ ಬಾಲಕನನ್ನು ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ …

Read More »

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಗಳೂರು, ( ಕರ್ನಾಟಕ ವಾರ್ತೆ ) :ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ. ಅಂತರ್ಜಾಲ ತಾಣ www.ksp.gov.in ಲಾಗ್‍ಇನ್ ಆಗಿ ಜೂನ್ 22 …

Read More »

ಸತತ 14ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ …………..

ನವದೆಹಲಿ,ಜೂ.20 – ಸತತ 14ನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆಯಾಗಿದ್ದು, ವಾಹನ ಸವಾರರನ್ನು ಕಂಗೆಡಿಸಿದೆ. ಇಂದು ಪೆಟ್ರೋಲ್ ಲೀಟರ್‍ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಹೀಗಾಗಿ ಎರಡು ವಾರಗಳ ಅಂತರದಲ್ಲಿ ಪೆಟ್ರೋಲ್ ರೂ.5.88 ಹಾಗೂ ಡೀಸೆಲ್ ರೂ.6.50 ಏರಿಕೆಯಾದಂತಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶುಕ್ರವಾರ ಲೀಟರ್¿ಗೆ ರೂ. 81.42 ಹಾಗೂ ಡೀಸೆಲ್ ರೂ.73.89 ಆಗಿದೆ.ಅಂತರಾಷ್ಟ್ರೀಯ ಕಚ್ಚಾತೈಲ ದರಕ್ಕೆ ತಕ್ಕಂತೆ ತೈಲ …

Read More »

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ…..? ‘

2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …

Read More »

ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕಲಬುರಗಿ: ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ವೇಳೆ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಅಂಗವಿಕಲತೆ ವಾಸಿಯಾಗುತ್ತೆ ಎಂಬ ನಂಬಿಕೆ ಇದೆ. ಕಳೆದ ವರ್ಷ ಈ ಆಚರಣೆ ನಡೆದಿದ್ದ ಕಾರಣದಿಂದ ಜಿಲ್ಲಾಧಿಕಾರಿಗಳು ಇನ್ನುಮುಂದೆ ಈ ರೀತಿ ಮೂಢನಂಬಿಕೆಯ ಆಚರಣೆ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆಚರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸುವುದಾಗಿ ಡಿಸಿ ಶರತ್,​​ …

Read More »

ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರು: ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜೈಶಂಕರ್ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ. ಮುಂಬೈನಿಂದ ಆಗಮಿಸಿದ ಮಹಿಳೆಯನ್ನು ಹೆಚ್.ಎಸ್.ಆರ್. ಲೇಔಟ್ ನಲ್ಲಿರೋ ಸರ್ಕಾರಿ ವಸತಿ ನಿಲಯದಲ್ಲಿ 7 ದಿನ ಕ್ವಾರಂಟೈನ್ ಮಾಡಲಾಗಿತ್ತು. ವಸತಿ ನಿಲಯದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಒಂದೇ ಶೌಚಾಲಯದ ವ್ಯವಸ್ಥೆಯಿದೆ. ಶೌಚಾಲಯಕ್ಕೆ ಹೋದ ಮಹಿಳೆಗೆ ಜೈಶಂಕರ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಶೌಚಾಲಯದಕ್ಕೆ ಹೊಗುತ್ತಿದ್ದಂತೆ ಹಿಂದಿನಿಂದ ಜೈಶಂಕರ ಬಾಗಿಲು …

Read More »

ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು: ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಯನ್ನು ಅರಿತುಕೊಳ್ಳಲು ಸಮ ಗ್ರ ತನಿಖೆಯಾಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ. ದೇವೇಗೌಡರು ತಮ್ಮ ಅಭಿಪ್ರಾಯವನ್ನು ಪ್ರಕಟಣೆ ಮೂಲಕ ಹೊರಹಾಕಿದ್ದಾರೆ. ಲಡಾಖ್ ನಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಘಟನೆಯಿಂದ ದೇಶದ ಜನರು ದಿಗ್ಬ್ರಮೆ ಗೊಂಡಿದ್ದಾರೆ. ಅಲ್ಲಿನ ವಾಸ್ತವ ಸಂಗತಿ ಏನು ಎಂಬುವುದರ ಬಗ್ಗೆ ತಿಳಿಯಲು ಸಮಗ್ರ ತನಿಖೆ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೂ ಮಾಧ್ಯಮದವರಿಂದ …

Read More »

ನಿಮ್ಮ ಮನೆ ಮಹಡಿಗಳಿಂದಲೇ ನೋಡಿ ಸಂಭ್ರಮಿಸುವಂತೆ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಕರೆ ನೀಡಿದೆ.

ಬೆಳಗಾವಿ: ನಾಳೆ ವಿಶ್ವವು 2020 ನೇ ವರ್ಷದ ಮೊದಲ ಸೂರ್ಯಗ್ರಹಣ( Solar Eclipse) ಸಾಕ್ಷಿಯಾಗಲಿದೆ. ಈ ಹಿನ್ನೆಲೆ ಮೌಢ್ಯಕ್ಕೆ ಮೊರೆ ಹೋಗದೆ, ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸುವ ಅದ್ಭುತ ದೃಶ್ಯವನ್ನು ನಿಮ್ಮ ಮನೆ ಮಹಡಿಗಳಿಂದಲೇ ನೋಡಿ ಸಂಭ್ರಮಿಸುವಂತೆ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಕರೆ ನೀಡಿದೆ. ಅಂದು ಗ್ರಹಣವು ಉತ್ತುಂಗದಲ್ಲಿದ್ದಾಗ ಸೂರ್ಯನು ಹೊಳೆಯುವ ಕಂಕಣ ಅಥವಾ ಉಂಗುರದಂತೆ ಕಾಣುತ್ತಾನೆ. ಭಾಗಶಃ ಮತ್ತು ವಾರ್ಷಿಕ ಗ್ರಹಣಗಳಲ್ಲಿ ಸೂರ್ಯನ ಒಂದು ಭಾಗವನ್ನು ಮಾತ್ರ …

Read More »

ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚೀನಾ-ಭಾರತದ ನಡುವೆ ಉಲ್ಬಣಿಸಿರುವ ಬಿಕ್ಕಟ್ಟು ಕುರಿತಂತೆ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಒಂದಿಂಚನ್ನೂ ಶತ್ರು ರಾಷ್ಟ್ರಗಳಿಗೆ ಬಿಟ್ಟುಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದರು.   ಪ್ರಧಾನಿಗಳ ಈ ಹೇಳಿಕೆಯನ್ನೇ ಟ್ಯಾಗ್ ಮಾಡಿ ಟ್ವಿಟ್ ಮಾಡಿರುವ ರಾಹುಲ್‍ಗಾಂಧಿ ಅವರು ಚೀನಿಯರ ಆಕ್ರಮಣದಿಂದ ಕಂಗೆಟ್ಟು …

Read More »