ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …
Read More »ಪ್ರೀತಿಸಿ ಮದುವೆಯಾಗಿ ಹಣ, ಚಿನ್ನಾಭರಣ ಪಡೆದು ಪರಾರಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಗರ್ಭಿಣಿ
ಬೆಂಗಳೂರು: ಪ್ರೀತಿಸಿ ಮದುವೆಯಾದವನು ಸಂಸಾರಕ್ಕೆ ಹೊಸ ಮನೆ ಮಾಡುವುದಾಗಿ ಹಣ ಚಿನ್ನ ಪಡೆದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹೇಮಂತ್ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದ್ದು, ಮೂರೇ ತಿಂಗಳಿಗೆ ತನ್ನನ್ನು ತೊರೆದು ಪರಾರಿಯಾದ ಪತಿಗಾಗಿ ಸಂತ್ರಸ್ತ ಮಹಿಳೆ ಬೆಂಗಳೂರು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕುಣಿಗಲ್ ಮೂಲದ ಸಂತ್ರಸ್ತೆ, ಬೆಂಗಳೂರಿನಲ್ಲಿ ಮಾಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಹೇಮಂತ್ನ ಪರಿಚಯವಾಗುತ್ತದೆ. ಇಬ್ಬರು ಪರಸ್ಪರ ಪ್ರೀತಿಸಿ ಕಳೆದ ಫೆಬ್ರವರಿಯಲ್ಲಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. …
Read More »ಮಂಗಳೂರಿನಲ್ಲಿ ಭಾರಿ ಮಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಂಗಳೂರು ನಗರ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಮಂಗಳೂರಿನ ಪಂಪ್ವೆಲ್ ಸೇರಿ ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕೆಲವೆಡೆ ಮರಗಳು ಧರಾಶಾಹಿಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮೀನುಗಾರರಿಗೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮೇ 26ರವರೆಗೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು-ಮಿಂಚು ಸಹಿತ …
Read More »ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…
ಬೆಳಗಾವಿ :ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ….. ಮೂರು ಜನ ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು…… ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದ ನೀಚರು ಕರ್ನಾಟಕ ಮೂಲದ ಎಂಬಿಬಿಎಸ್ 3ನೇ ವರ್ಷದ ವಿದ್ಯಾರ್ಥಿನಿ ಮೂವರು ಆರೋಪಿಗಳನ್ನು ಬಂಧಿಸಿದ ಸಾಂಗ್ಲಿ ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಕರ್ನಾಟಕ ಮೂಲದ ಎಂಬಿಬಿಎಸ್ ಮೂರನೇ ವರ್ಷದ ವಿದ್ಯಾರ್ಥಿನಿ ಮೇ 18ರಂದು …
Read More »ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ರೌಡಿಶೀಟರ್ ಅರೆಸ್ಟ್
ಬೆಂಗಳೂರು, ಮೇ 24: ಬೆಂಗಳೂರಿನಲ್ಲಿ (Bengaluru) ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ರೌಡಿಶೀಟರ್ ಸಮೀರ್ ಬಂಧಿತ. ಬಂಧಿತ ಸಮೀರ್ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸುತ್ತಿದ್ದನು. ನಂತರ, ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಸಿಬಿ ಪೊಲೀಸರು ರೌಡಿಶೀಟರ್ ಸಮೀರ್ನನ್ನು ಬಂಧಿಸಿ, ಎರಡು ನಾಡಪಿಸ್ತೂಲ್ಗಳನ್ನು ವಶಕ್ಕೆ …
Read More »ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ
ಸರ್ಕಾರಿ ಶಾಲೆಗಳನ್ನು ಉಳಿಸೋಣ, ಅಭಿವೃದ್ಧಿಗೊಳಿಸೋಣ ನಿಪ್ಪಾಣಿ ಮತಕ್ಷೇತ್ರದ ಬೇನಾಡಿ ಗ್ರಾಮದಲ್ಲಿ, ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಮಂಜೂರಾದ 15 ಲಕ್ಷ ರೂ. ಮೊತ್ತದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ನೂತನ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಲಾಯಿತು. ಶಿಕ್ಷಣ ಮಾತ್ರದಿಂದಲೇ ಸದೃಢ ಸಮಾಜ ನಿರ್ಮಿಸಲು ಸಾಧ್ಯ. ಆದ್ದರಿಂದ ಎಲ್ಲ ಮಕ್ಕಳಿಗೂ ಶಿಕ್ಷಣ ಪಡೆಯಲು ಯಾವುದೇ ತೊಂದರೆಯಾಗದಂತೆ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದು, ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಈ …
Read More »ಎರಡು ದಿನದಲ್ಲಿ ಮೂರು ಸರಣಿ ಸರಗಳ್ಳತನ
ನೆಲಮಂಗಲ : ಹೊಲದಲ್ಲಿ ಹಸು ಮೇಯಿಸುತ್ತಿದ್ದ ವೃದ್ಧೆಯ ಬಳಿ ಬಂದ ಐನಾತಿಯೋರ್ವ, ಮಗುವಿಗೆ ಹಸುವಿನ ತುಪ್ಪ ಬೇಕೆಂದು ಮಾತನಾಡಿಸುವ ನೆಪದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿ ವೃದ್ಧೆಯ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಹಿಂದಿನ ದಿನ ಇದೇ ಸರಗಳ್ಳ ಮತ್ತೊಬ್ಬ ವೃದ್ಧೆಗೆ ಚಾಕು ತೋರಿಸಿ ಹೆದರಿಸಿ ಚಿನ್ನದ ಸರವ ಕಿತ್ಕೊಂಡ್ ಪರಾರಿಯಾಗಿದ್ದು, ಇಂದು ಪೊಲೀಸರ ಅತಿಥಿಯಾಗಿದ್ದಾನೆ. ತ್ಯಾಮಗೊಂಡ್ಲು ಮತ್ತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಮೂರು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನನ್ನು ತ್ಯಾಮಗೊಂಡ್ಲು ಪೊಲೀಸರು …
Read More »ಮನೆಗೆ ಬಿಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಹಠಯೋಗಿ ಲೋಕೇಶ್ವರ ಸ್ವಾಮೀಜಿ ಬಂಧನ
ಚಿಕ್ಕೋಡಿ: ವಿದ್ಯಾರ್ಥಿನಿಯನ್ನು ಮನೆಗೆ ಬಿಡುವುದಾಗಿ ಹೇಳಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೇಕಳಿ ಗ್ರಾಮದ ಸ್ವಯಂ ಘೋಷಿತ ಮಠಾಧೀಶನಾದ ಹಠಯೋಗಿ ಲೋಕೇಶ್ವರ ಎಂಬ ಸ್ವಾಮೀಜಿಯನ್ನ ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಎಸ್ಪಿ ನೀಡಿದ ವಿವರಣೆ ಹೀಗಿದೆ: ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಯಂಘೋಷಿತ ಸ್ವಾಮೀಜಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಮೂಡಲಗಿ …
Read More »ಅಕ್ರಮವಾಗಿ ಆಸ್ತಿ ಮಾರಾಟ ಮಾಡುವವರಿಗೆ ಬ್ರೇಕ್!: ದಸ್ತಾವೇಜು ನೋಂದಣಿಗೆ ಆಧಾರ್ ಕಡ್ಡಾಯ, ದೃಢೀಕರಣ ಮಾಡುವ ವಿವರ ಹೀಗಿದೆ
ಬೆಂಗಳೂರು : ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾರ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಖಚಿತಪಡಿಸಿಕೊಳ್ಳಿ: ರಿಜಿಸ್ಟ್ರೇಷನ್ಗೆ ಹೋಗುವ ಮುನ್ನ ಆಧಾರ್ಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಅಪ್ಡೇಟ್, ಹೆಸರು ಹೊಂದಾಣಿಕೆ ಆಗಿದೆಯಾ? ಎಂಬುದನ್ನು ಖಚಿತ ಪಡಿಸಿಕೊಳ್ಳುವುದು ಸೂಕ್ತ. ಇಲ್ಲದಿದ್ದರೆ, ಅಪ್ಡೇಟ್ ಮಾಡಿಕೊಂಡು ಸಬ್ರಿಜಿಸ್ಟ್ರಾರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ …
Read More »5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಕೋಡಿಮಠದ ಶ್ರೀ
5 ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿರಲಿದೆ….!! ಹುಷಾರು!!! ಭೂಕಂಪ ಮತೀಯ ಗಲಭೆಗಳು ಹೆಚ್ಚಾಗಿ, ಕೆಲ ದೇಶಗಳು ಅಳಿಸಿ ಹೋಗಲಿವೆ…; ಬೆಳಗಾವಿಯಲ್ಲಿ ಭವಿಷ್ಯ ನೂಡಿದ ಕೋಡಿಮಠದ ಶ್ರೀ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ ಎಂದು ಕೋಡಿಮಠದ ಶ್ರೀಗಳು ಬೆಳಗಾವಿಯಲ್ಲಿ ಭವಿಷ್ಯ ನುಡಿದ್ದಾರೆ. ಇಂದು ಬೆಳಗಾವಿಯಲ್ಲಿ ಕೋಡಿಮಠದ ಶ್ರೀಗಳು ಮತ್ತೇ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಕೋವಿಡ್ ಕುರಿತು ಮತ್ತೆ ಸ್ಪೋಟಕ …
Read More »
Laxmi News 24×7