Breaking News

ರಾಜ್ಯ

ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ………..

ಕಾರವಾರ(): ಸರ್ಕಾರದ ಆದೇಶದಂತೆ ನಾಳೆಯಿಂದ ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಬಂದರಿನಲ್ಲಿ ಲಂಗರು ಹಾಕಿವೆ. ಕರಾವಳಿಯಲ್ಲಿ ನಾಳೆಯಿಂದ ಮೀನುಗಾರಿಕೆ ನಿಷೇಧ ಅವಧಿ ಪ್ರಾರಂಭವಾಗಲಿದ್ದು ಯಾವುದೇ ಮೀನುಗಾರಿಕಾ ಬೋಟುಗಳೂ ಸಮುದ್ರಕ್ಕೆ ಇಳಿಯುವುದಿಲ್ಲ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೊನಾ ಅಟ್ಟಹಾಸ …

Read More »

ಸಿಗರೇಟ್ ಜೊತೆ ಮೊಬೈಲ್ ಎಗರಿಸಿದ ಕಳ್ಳ……………

ಚಿಕ್ಕಮಗಳೂರು: 10 ರೂ.ಯ ಸಿಗರೇಟ್ ಜೊತೆ ಅಂಗಡಿಯಲ್ಲಿದ್ದ ಮೊಬೈಲ್ ಕದ್ದು ಕಳ್ಳನೊಬ್ಬ ಎಸ್ಪೇಕ್ ಅಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ಸಮೀಪದ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ಅಂಗಡಿಗೆ ಬಂದ ವ್ಯಕ್ತಿ 20 ರೂಪಾಯಿ ನೀಡಿ ಸಿಗರೇಟ್ ಕೇಳಿದ್ದಾನೆ. ಅಂಗಡಿಯಲ್ಲಿದ್ದ ವ್ಯಕ್ತಿ ಸಿಗರೇಟ್ ನೀಡಿ ಚಿಲ್ಲರೆ 10 ರೂಪಾಯಿ ವಾಪಸ್ ನೀಡಿ ತನ್ನ ಕೆಲಸದಲ್ಲಿ ತೊಡಗಿಕೊಂಡಿದ್ದಾನೆ. ಸಿಗರೇಟ್ ಪಡೆದ ವ್ಯಕ್ತಿ ಅಲ್ಲಿಯೇ ಅದಕ್ಕೆ ಬೆಂಕಿ ಹಚ್ಚಿ ಒಂದು ಧಮ್ ಎಳೆದಿದ್ದಾನೆ. ಅಂಗಡಿಯಾತ …

Read More »

ವೀಕ್ ಎಂಡ್ ನಲ್ಲೂ ಮಂಜಿನನಗರಿಯಲ್ಲಿ ಎಲ್ಲವೂ ಖಾಲಿ ಖಾಲಿ……..

ಮಡಿಕೇರಿ: ಜೂನ್, ಜುಲೈ ತಿಂಗಳು ಅಂದರೆ ಕರ್ನಾಟಕದ ಕಾಶ್ಮೀರ ತುಂಬಿ ತುಳುಕುತಿತ್ತು. ಆದರೆ ಕೊರೊನಾ ಮಹಾಮಾರಿಯ ಭಯ ವೀಕ್ ಎಂಡ್ ನಲ್ಲೂ ಮಂಜಿನನಗರಿಯಲ್ಲಿ ಎಲ್ಲವೂ ಖಾಲಿ ಖಾಲಿ ಎನ್ನುವಂತೆ ಮಾಡಿದೆ. ಲಾಕ್‍ಡೌನ್ ಸಡಿಲಿಕೆ ಮಾಡಿದ್ರೆ ಸಾಕು ಎನ್ನುತ್ತಿದ್ದ ವ್ಯಾಪಾರಿಗಳು ಗ್ರಾಹಕರಿಲ್ಲದೆ ಪರದಾಡುತ್ತಿದ್ದಾರೆ. ಅಪಾರ ಸಂಪತ್ತಿನಿಂದಲೇ ದೇಶ, ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ಕೊಡಗು ಪ್ರವಾಸಿ ತಾಣಗಳ ಜಿಲ್ಲೆಯೆಂದೇ ಖ್ಯಾತಿ. ಇಲ್ಲಿನ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡಿರುವುದೇ ಪ್ರವಾಸೋದ್ಯಮ. ಇದನ್ನು ನಂಬಿಕೊಂಡೇ ಸಾವಿರಾರು …

Read More »

ಮಹಾರಾಷ್ಟ್ರ ಕಂಟಕದ ಬಳಿಕ ಇದೀಗ ರಾಜ್ಯಕ್ಕೆ ಆಂಧ್ರದ ಕಂಟಕ ಪ್ರಾರಂಭ……….

ಅಮರಾವತಿ: ಮಹಾರಾಷ್ಟ್ರ ಕಂಟಕದ ಬಳಿಕ ಇದೀಗ ರಾಜ್ಯಕ್ಕೆ ಆಂಧ್ರದ ಕಂಟಕ ಪ್ರಾರಂಭವಾಗುವ ಭಯ ಎದುರಾಗಿದ್ದು, ಆಂಧ್ರ ಪ್ರದೇಶ ಅಂತರ್ ರಾಜ್ಯ ಬಸ್ ಸಂಚಾರವನ್ನು ಪ್ರಾರಂಬಿಸಲು ನಿರ್ಧರಿಸಿದೆ. ಹಂತ ಹಂತವಾಗಿ ರಾಜ್ಯಕ್ಕೆ 500 ಬಸ್‍ಗಳನ್ನು ಬಿಡಲು ಕ್ರಮ ಕೈಗೊಂಡಿದೆ. ಆಂಧ್ರ ಪ್ರದೇಶದಿಂದ ರಾಜ್ಯಕ್ಕೆ ಬಸ್ ಬಿಡಲು ಆಂಧ್ರ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ 168 ಬಸ್‍ಗಳು ರಾಜ್ಯಕ್ಕೆ ಸಂಚರಿಸಲಿವೆ. ಜೂನ್ 17 ರಿಂದ ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಮಧ್ಯೆ 168 …

Read More »

ಶಾಲೆ ಆರಂಭ ಮುನ್ನವೇ ಆಘಾತಕಾರಿ ಸುದ್ದಿ8 ಮಂದಿ ಶಾಲಾ ಶಿಕ್ಷಕರಿಗೆ ಸೋಂಕು ಪತ್ತೆ…

ಧಾರವಾಡ: ಶಾಲೆ ಆರಂಭ ಮುನ್ನವೇ ಆಘಾತಕಾರಿ ಸುದ್ದಿಯೊಂದು ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. 8 ಮಂದಿ ಶಾಲಾ ಶಿಕ್ಷಕರಲ್ಲಿ ಮಹಾಮಾರಿ ಕೊರೊನಾ ಸೋಂಕು ಪತ್ತೆಯಾಗಿದೆ. ಧಾರವಾಡದ ಪ್ರತಿಷ್ಠಿತ ಶಾಲೆಯ ಶಿಕ್ಷಕರು ಎಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ ಭಾನುವಾರ ಬಂದ 10 ಜನರಲ್ಲಿ 7 ಮಂದಿ ಶಿಕ್ಷಕರಿಗೆ ಸೋಂಕು ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಧಾರವಾಡ ನಗರದ ಯಾಲಕ್ಕಿ ಶೆಟ್ಟರ್ ಕಾಲನಿಯ ಶಿಕ್ಷಕಿಗೆ ಸೋಂಕು …

Read More »

ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಹೊಸ ಆಶಾಕಿರಣ ಡಿ.ಕೆ.ಶಿವಕುಮಾರ ಪ್ರಮಾಣ ಎಂದು?

ಬೆಂಗಳೂರು – ಭರ್ಜರಿಯಾಗಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಉತ್ಸಾಹದಲ್ಲಿರುವ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ ಭಾನುವಾರ ಮೊದಲ ಹಂತದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಭಾನುವಾರ ಬೆಂಗಳೂರಿನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಹೋಮ, ಹವನ ನಡೆಯಲಿದೆ. ತಮ್ಮ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಗೆ ಯಾವುದೇ ರೀತಿಯ ವಿಘ್ನಗಳು ಎದುರಾಗದಿರಲಿ ಎಂದು ಮತ್ತು ಕಾಂಗ್ರೆಸ್ ಮತ್ತೊಮ್ಮೆ ಉಚ್ಛ್ರಾಯ ಸ್ಥಿತಿಗೆ ತಲುಪಲಿ ಎನ್ನುವ ಆಶಯದೊಂದಿಗೆ ಹೋಮ, ಹವನ ನಡೆಯಲಾಗುತ್ತಿದೆ. ಈಗಾಗಲೆ ಹೋಮ ಕುಂಡಗಳು …

Read More »

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬೆಳಗಾವಿ-ರಾಜ್ಯಸಭಾ ಸದಸ್ಯರಾಗಿ ಏಕಾಏಕಿ ಜಾಕ್ ಫಾಟ್ ಹೊಡೆದ ಬಿಜೆಪಿಯ ಕ್ರಿಯಾಶೀಲ ಮುಖಂಡ ಈರಣ್ಣಾ ಕಡಾಡಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರಥಮವಾಗಿ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಈರಣ್ಣಾ ಕಡಾಡಿ ಅವರನ್ನು ಸುವರ್ಣ ವಿಧಾನಸೌಧದ ಬಳಿ ತಡೆದು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬೆಳಗಾವಿಗೆ ಬರಮಾಡಿಕೊಂಡರು. ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬೆಳಗಾವಿ-ರಾಜ್ಯಸಭಾ …

Read More »

ಪುಂಡಾಟಿಕ್ಕೆ ತೋರಿದ ಹೊಮ್ ಕ್ವಾರಂಟೈನ್ ಜನ

ಯಮಕನಮರಡಿ: ಮಹಾರಾಷ್ಟ್ರದ ಮುಂಬಯಿ ನಿಂದ ಬಂದ ಜನರನ ಪಾಸಿಟಿವ್ ಪ್ರಾಥಮಿಕ ಸಂಪರ್ಕ ಇದ್ದಂತ ಜನ ಹೊಮ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು ಇವರ ಆರೋಗ್ಯ ಬಗ್ಗೆ ಚಿಕಿತ್ಸೆ ನೀಡಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ‌ಪಿಡಿಒ ಗ್ರಾಮ ಲೆಕ್ಕಾಧಿಕಾರಿ ಆರೋಗ್ಯ ಸಿಬ್ಬಂದಿ ಅವರು ಹೊಮ್ ಕ್ವಾರಂಟೈನ್ ನಲ್ಲಿದ್ದ ಜನರ ಗಂಟಲ ದೃವ ಪರೀಕ್ಷೆಗೆ ಒಳಪಡಿಸುವಾಗ …

Read More »

ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ

ತುಮಕೂರು: ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನೀಡಿದಕ್ಕೆ ಬಿಜೆಪಿ ಕಾರ್ಯಕರ್ತ್ರು ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜರುಗಿದೆ. ಹೊನ್ನೇನಹಳ್ಳಿಯ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಸಾಕ್ಷೀದಾರ ರಾಧಾಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ …

Read More »

ಕೆಲವು ದಿನಗಳ ಬಳಿಕ ಸಿಕ್ಕವು ಮೀನುಗಾರರ ಶವಗಳು

ಕೃಷ್ಣಾ ನದಿಯಲ್ಲಿ ಗುರುವಾರ ಮೀನುಗಾರಿಕೆ ಮಾಡಲು ಹೋಗಿ ನಾಪತ್ತೆ ಯಾಗಿದ್ದ ಇಬ್ಬರ ಸಾವು ಸಂಭವಿಸಿದೆ. ಬಇಂದು ಕೃಷ್ಣಾ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು ಪರಶುರಾಮ ಲಮಾಣಿ ಹಾಗೂ ರಮೇಶ ಲಮಾಣಿ ಶವ ಪತ್ತೆಯಾಗಿವೆ. ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ಜನ ಮೀನುಗಾರರು ತೆರಳಿದ್ದರು. ಗುರುವಾರ ಸಂಜೆ ಬೀಸಿದ ಭಾರಿ ಮಳೆಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿತ್ತು ಅದೃಷ್ಟವಶಾತ್ ಮೂವರ ಪೈಕಿ ಓರ್ವ ಅಕ್ಷಯ ಲಮಾಣಿ ಈಜಿ ದಡ ಸೇರಿದ್ದ. ಆ ಸಂದರ್ಬದಲ್ಲಿ …

Read More »