Breaking News

ರಾಜ್ಯ

ಸಂಬಳ ನೀಡದೆ ಕೊರೊನಾ ವಾರಿಯರ್ಸ್‍ಗೆ ಸರ್ಕಾರ ಅವಮಾನಿಸಿದೆ: ಯು.ಟಿ.ಖಾದರ್

ಮಂಗಳೂರು: ವೈದ್ಯರು ಹಾಗೂ ನರ್ಸ್ ಗಳಿಗೆ ಎರಡು ತಿಂಗಳಿನಿಂದ ಸಂಬಳ ಆಗಿಲ್ಲ. ಕೊರೊನಾ ಸಂದರ್ಭದಲ್ಲೇ ವೇತನ ನೀಡದೆ ಸತಾಯಿಸಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್‍ಗೆ ಸಂಬಳ ನೀಡದೆ ಸರ್ಕಾರ ನಿರ್ಲಕ್ಷಿಸಿದೆ. ವಾರಿಯರ್‍ಗಳಿಗೇ ಸಂಬಳ ನೀಡಿಲ್ಲ ಎಂದಮೇಲೆ ರಾಜ್ಯದಲ್ಲಿ ಕೊರೋನಾ ರೋಗಿಗಳ ಸ್ಥಿತಿ ಹೇಗಿರಬೇಡ ಎಂದು ಪ್ರಶ್ನಿಸಿದ ಅವರು, ತಕ್ಷಣ ಸಂಬಳ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ನ್ಯಾಷನಲ್ ಹೆಲ್ತ್ …

Read More »

ನವದೆಹಲಿ: ಜೂನ್ 30ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಅದೇಶ ಹೊರಡಿಸಿದೆ.

ನವದೆಹಲಿ :ಲಾಕ್‍ಡೌನ್ 4.0 ಪೂರ್ಣಗೊಳ್ಳುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಲಾಕ್‍ಡೌನ್ 5.0ನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ ಜೂನ್ 2ರಿಂದ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಅಲ್ಲದೆ ರಾತ್ರಿ 9ರಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕಫ್ರ್ಯೂ ವಿಧಿಸಿದೆ. ಚಿತ್ರಪ್ರದರ್ಶನ ನಿಷೇಧವನ್ನು ಮುಂದುವರಿಸಿದೆ. ಆಯಾ ನಗರಗಳ ಪರಿಸ್ಥಿತಿ ಆಧರಿಸಿ ಮೆಟ್ರೋ ರೈಲುಗಳ ಸಂಚಾರ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡಿದೆ. ಏನಿರುತ್ತೆ? > …

Read More »

177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್

ಹೈದರಾಬಾದ್: ಇತ್ತೀಚೆಗಷ್ಟೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ಇದೀಗ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಸುಮಾರು ಒಡಿಶಾದ 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ …

Read More »

ಸರಕಾರ ಜೂನ್ 1ರಿಂದ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ್ದು, ದೇವರ ದರ್ಶನ ಭಾಗ್ಯ ಮತ್ತೆ ಸಿಗಲಿದೆ.

ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ದೇವಾಲಯಗಳನ್ನು ಬಂದ್ ಮಾಡಿ ಭಕ್ತರ ಪ್ರವೇಶವನ್ನು ನಿಷೇಧ ಮಾಡಲಾಗಿತ್ತು. ಆದರೆ ಈಗ ಲಾಕ್‍ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಸರಕಾರ ಜೂನ್ 1ರಿಂದ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ್ದು, ದೇವರ ದರ್ಶನ ಭಾಗ್ಯ ಮತ್ತೆ ಸಿಗಲಿದೆ. ದೇವಾಲಯ ತೆರೆದರೂ ದೇವರ ದರ್ಶನ ಹಿಂದಿನಂತೆ ಇರದೇ ಮುಜರಾಯಿ ಇಲಾಖೆಯಿಂದ ದೇವಸ್ಥಾನಗಳಿಗೆ ನೀಡಿದ ಮಾರ್ಗದರ್ಶನಗಳನ್ನು ಪಾಲಿಸಬೇಕಾಗುತ್ತದೆ. ಜೂನ್ 1ರಂದು ದೇವಾಲಯಗಳಿಗೆ ಭಕ್ತರಿಗೆ ಪ್ರವೇಶ ನೀಡಿದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಎಲ್ಲಾ …

Read More »

ರಾಜ್ಯದಲ್ಲಿ ಇಂದು ಅತಿ ಹೆಚ್ಚು 248 ಮಂದಿಗೆ ಕೊರೊನಾ ಸೋಂಕು ದೃಢ…….

ಬೆಂಗಳೂರು: ರಾಜ್ಯದಲ್ಲಿ ಇಂದು ಅತಿ ಹೆಚ್ಚು 248 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆಯಾಗಿದೆ. ಈ ಮೂಲಕ ಕೋವಿಡ್-19 ಮತ್ತೊಮ್ಮೆ ರಾಜ್ಯದಲ್ಲಿ ದ್ವಿಶತಕ ಸಿಡಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಯಲ್ಲಿ ರಾಯಚೂರು 62, ಕಲಬುರಗಿ 61, ಯಾದಗಿರಿ 60, ಉಡುಪಿ 15, ಬೆಂಗಳೂರು 12, ಬಳ್ಳಾರಿ 9, ಚಿಕ್ಕಬಳ್ಳಾಪುರ 5, ದಾವಣಗೆರೆ, ವಿಜಯಪುರ, ಹಾಸನ ಜಿಲ್ಲೆಯಲ್ಲಿ …

Read More »

ರಾಜ್ಯದಲ್ಲಿ  ಸಂಜೆ ವೇಳೆ ಮತ್ತೆ 70 ಮಂದಿಗೆ ಕೊರೊನಾ

ಬೆಂಗಳೂರು:  ರಾಜ್ಯದಲ್ಲಿ  ಸಂಜೆ ವೇಳೆ ಮತ್ತೆ 70 ಮಂದಿಗೆ ಕೊರೊನಾ ಸೋಂಕು ತಗುಲಿರುವುದು  ದೃಢವಾಗಿದ್ದು, ಸೋಂಕಿತರ  2781 ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ  248 ದಾಖಲೆ ಪ್ರಮಾಣದ ಕೇಸ್ ಗಳು ದಾಖಲಾಗಿವೆ.  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು,  ಇಂದು ಚಿಕ್ಕಬಳ್ಳಾಪುರದಲ್ಲಿ ಅಡ್ಮಿಟ್​ ಆಗಿದ್ದ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಹೀಗಾಗಿ ಈವರೆಗೂ ಸೋಂಕಿನಿಂದಾಗಿ ಒಟ್ಟು …

Read More »

ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ- ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ನೋಡಿ ಅಧಿಕಾರಿಗಳು ಸುಸ್ತು

ಪಾಟ್ನಾ: ಕ್ವಾರಂಟೈನ್ ಕೇಂದ್ರದಲ್ಲಿರುವ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನವನ್ನು ತಿನ್ನುವುದನ್ನು ನೋಡಿ ಅಧಿಕಾರಿಗಳು ಸುಸ್ತುಗಿದ್ದಾರೆ. ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ …

Read More »

ದೇಶದಲ್ಲಿ ದಾಖಲೆ ಸೋಂಕು ಪತ್ತೆ – ಜಾಗತಿಕ ಮಟ್ಟದಲ್ಲಿ 9ನೇ ಸ್ಥಾನದಲ್ಲಿ ಭಾರತ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಮತ್ತೊಂದು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ 7,466 ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ ಒಂಭತ್ತನೇ ಸ್ಥಾನಕ್ಕೆ ಏರಿದೆ. ಭಾರತದಲ್ಲಿ ಈವರೆಗೂ 1,65,799 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ 1,60,979 ಸೋಂಕಿತರು ಹೊಂದಿ ಒಂಭತ್ತನೇ ಸ್ಥಾನದಲ್ಲಿದ್ದ ಟರ್ಕಿಯನ್ನು ಹಿಂದಿಕ್ಕಿದೆ. ಇತ್ತಿಚೀಗಷ್ಟೇ ಭಾರತ, ಪೆರು, ಇರಾನ್, ಕೆನಡಾವನ್ನು ಹಿಂದಿಕ್ಕಿ ಹತ್ತನೇ ಸ್ಥಾನದಲ್ಲಿತ್ತು. ಇಂದಿನ ವರದಿಯಲ್ಲಿ …

Read More »

ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.

ಭುವನೇಶ್ವರ: ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಒಡಿಶಾದ ಕಟಕ್ ಜಿಲ್ಲೆಯ ನರಸಿಂಗ್‍ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಧಾಹೂಡಾದ ಬಳಿಯ ಬಂಧಾ ಮಾ ಬುಧ ಬ್ರಾಹ್ಮಿಣಿ ದಿ ದೇವಸ್ಥಾನದ ಹಿರಿಯ ಅರ್ಚಕ ಸನ್ಸಾರಿ ಓಝಾ(72) ಈ ಕೃತ್ಯ ಎಸಗಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಕೊರೊನಾ ವೈರಸ್ ತೊಲಗಿಸುವಂತೆ ಮನುಷ್ಯನನ್ನು ಬಲಿ ಕೊಟ್ಟಿದ್ದಾನೆ. ಸ್ಥಳೀಯ ವ್ಯಕ್ತಿಯ ರುಂಡವನ್ನೇ ಕತ್ತರಸಿ, ಪೂಜೆ ಸಲ್ಲಿಸಿದ್ದಾನೆ. ಕೃತ್ಯ ಎಸಗುತ್ತಿದ್ದಂತೆ …

Read More »

ಪ್ರೀತಿಸಿ ಓಡಿಹೋದ ಜೋಡಿಯೊಂದು ಕ್ವಾರಂಟೈನ್ ಕೇಂದ್ರದಲ್ಲಿ ಮದುವೆ

ಭುವನೇಶ್ವರ್: ಮಹಾಮಾರಿ ಕೊರೊನಾ ವೈರಸ್ ಪ್ರಪಂಚದಾದ್ಯಂತ ಭಾರೀ ಕೋಲಾಹಲ ಸೃಷ್ಟಿ ಮಾಡಿದೆ. ಹಾಗೆಯೇ ಪ್ರೀತಿಸಿ ಓಡಿಹೋದ ಜೋಡಿಯೊಂದು ಕ್ವಾರಂಟೈನ್ ಕೇಂದ್ರದಲ್ಲಿ ಮದುವೆಯಾದ ಘಟನೆ ಒಡಿಶಾದಲ್ಲಿ ನಡೆದಿದೆ. ಈ ಜೋಡಿ ಕಳೆದ ಜನವರಿಯಲ್ಲಿ ತಮ್ಮ ತಮ್ಮ ಮನೆಯಿಂದ ಹೊರಬಂದಿದ್ದಾರೆ. ಪುರಿ ಜಿಲ್ಲೆಯ ಸಗದ ಗ್ರಾಮದ ಸೌರಭ್ ದಾಸ್(19) ಭಾನುವಾರ ತನ್ನ ಪ್ರಿಯತಮೆ ಪಿಂಕ್ಯಾರಾಣಿ ದಾಸ್ ಳನ್ನು 14 ದಿನಗಳ ಕ್ವಾರಂಟೈನ್ ಮುಗಿಸಿ ಕೇಂದ್ರದಲ್ಲೇ ಮದುವೆಯಾಗಿದ್ದಾನೆ. ಸೌರಭ್ ತನ್ನ ಪ್ರಿಯತಮೆಯೊಂದಿಗೆ ಜನವರಿ ತಿಂಗಳಲ್ಲಿ …

Read More »