ಮತದಾರರ ಋಣ ತೀರಿಸಲು ಇದೊಂದು ಅಳಿಲು ಸೇವೆ. ಮೇ 3ರ ತನಕ ಲಾಕ್ ಡೌನ್ ನಿಯಮ ಪಾಲಿಸಿ: ಮೂಡಲಗಿಯಲ್ಲಿಂದು ಎಲ್ಲ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ಟ್ ವಿತರಿಸಿದ ಗಣ್ಯರು ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ …
Read More »ಬಡವರಿಗೆ 3 ಸಾವಿರ ದಿನಸಿ, ತರಕಾರಿ ಕಿಟ್ ವಿತರಿಸಿದ ಗ್ರಾ.ಪಂ.ಸದಸ್ಯ…….
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿವರಿಗೆ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಸುಮಾರು 3000 ದಿನಸಿ ಹಾಗೂ ತರಕಾರಿ ಇರುವ ಕಿಟ್ಗಳನ್ನ ಪ್ರತಿ ಮನೆ ಮನೆಗೂ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ವಾಜರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ವಿ.ಕೆ.ಎಸ್.ಕೆಂಪರಾಜು ಬಡವರಿಗೆ ಕಿಟ್ಗಳನ್ನ ವಿತರಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತಾಂಡವವಾಡುತ್ತಿದೆ. ಈ ಅಪಾಯಕಾರಿ ವೈರಸ್ ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತೆಯನ್ನ ವಹಿಸಿ ಲಾಕ್ಡೌನ್ ಜಾರಿಗೆ …
Read More »ಅನಾವಶ್ಯಕವಾಗಿ ಹೊರಬಂದ್ರೆ ಅಂಬುಲೆನ್ಸ್ನಲ್ಲಿ ಶಿಕ್ಷೆ: ಪೊಲೀಸರ ಹೊಸ ಪ್ರಯೋಗ
ರಾಯಚೂರು: ಕೊರೊನಾ ಸೋಂಕಿತ ರೋಗಿಯನ್ನು ಅಂಬುಲೆನ್ಸ್ ನಲ್ಲಿ ಇರಿಸಿ ಅದೇ ವ್ಯಾನಿನಲ್ಲಿ ಅನಗತ್ಯವಾಗಿ ತಿರುಗಾಡುವವರನ್ನು ಹಾಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೇ ಮಾದರಿಯಲ್ಲಿ ಇಂದು ರಾಯಚೂರು ಜಿಲ್ಲಾ ಪೊಲೀಸರು ಸಹ ಅನಗತ್ಯವಾಗಿ ತಿರುಗಾಡುವವರಿಗೆ ಶಿಕ್ಷೆ ನೀಡಿದ್ದಾರೆ. ಗ್ರೀನ್ ಜೋನಿನಲ್ಲಿರುವ ರಾಯಚೂರಿನಲ್ಲಿ ಲಾಕ್ಡೌನ್ನ್ನು ಒಂದಿಷ್ಟು ಸಡಿಲಿಕೆ ಮಾಡಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ತ್ರಿಬ್ಬಲ್ ರೈಡ್ ಹೋಗುತ್ತಿದ್ದಾರೆ. ಕೆಲವರು ಅನಾವಶ್ಯಕವಾಗಿ ಹೊರಗಡೆ ತಿರುಗಾಡುತ್ತಿದ್ದರು. ಇಂಥವರನ್ನು ನಗರದ ಚಂದ್ರಮೌಳೇಶ್ವರ ವೃತ್ತ ಹಾಗೂ …
Read More »ಕೊರೋನಾ ವಿರುದ್ಧ ಸರಕಾರ ಮತ್ತು ಸಮಾಜದ ಜಂಟೀ ಹೋರಾಟದ ಅಗತ್ಯವಿದೆ” :ಅಶೋಕ ಚಂದರಗಿ
ವಿಶ್ವವನ್ನೇ ನಡುಗಿಸುತ್ತಿರುವ ಕೊರೋನಾ ವೈರಾಣುವಿನ ವಿರುದ್ಧ ಸರಕಾರ ಮತ್ತು ಸಮಾಜದ ಜಂಟೀ ಹೋರಾಟದ ಅಗತ್ಯವಿದ್ದು ಪ್ರತಿಯೊಬ್ಬ ನಾಗರಿಕರಿಗೆ ಅವರದೇ ಆದ ಹೊಣೆಗಾರಿಕೆ ಇದೆ.ಎಲ್ಲವನ್ನೂ ಸರಕಾರವೇ ಮಾಡಬೇಕು ಎಂಬ ಭಾವನೆ ಸರಿಯಲ್ಲ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಇಂದು ಮಧ್ಯಾನ್ಹ ಬೆಳಗಾವಿ ಸಮೀಪದ ಕಣಬರ್ಗಿಯಲ್ಲಿ ಹೇಳಿದರು. ಕಳೆದ ಮಾರ್ಚ 20 ರಿಂದ ಕ್ರಿಯಾ ಸಮಿತಿಯು ಆರಂಭಿಸಿರುವ ” ಹಸಿದವರತ್ತ ನಮ್ಮ ಚಿತ್ತ” ಅಭಿಯಾನದ …
Read More »ಯಮ, ಕಿಂಕರರು ಹಾಗೂ ಕೊರೊನಾ ವೈರಸ್ ವೇಷ ಹಾಕಿಕೊಂಡು ಸ್ಥಳೀಯರು ಕೊರೊನಾ ವೈರಸ್ ಕುರಿತು ಜಾಗೃತಿ
ಹಾವೇರಿ: ಯಮ, ಕಿಂಕರರು ಹಾಗೂ ಕೊರೊನಾ ವೈರಸ್ ವೇಷ ಹಾಕಿಕೊಂಡು ಸ್ಥಳೀಯರು ಕೊರೊನಾ ವೈರಸ್ ಕುರಿತು ಜನರಿಗೆ ಜಾಗೃತಿ ಮೂಡಿಸುತ್ತಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹೊಸಪೇಟೆ ಓಣಿಯ ನಾಲ್ವರಲ್ಲಿ ಓರ್ವ ಯಮನ ವೇಷ, ಇಬ್ಬರು ಕಿಂಕರರ ವೇಷ ಹಾಗೂ ಮತ್ತೊಬ್ಬ ಕೊರೊನಾ ವೈರಸ್ ನ ವೇಷ ಹಾಕಿಕೊಂಡು ಪಟ್ಟಣದಲ್ಲಿ ಜನರಿಗೆ ಕೊರೊನಾ ವೈರಸ್ ಮತ್ತು ಲಾಕ್ಡೌನ್ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಯಮ …
Read More »ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿ
ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎಸ್ಪಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದ್ದ ಪತ್ರಕರ್ತರ …
Read More »ರಸ್ತೆಯಲ್ಲಿ ನೋಟುಗಳು ಬಿದ್ದಿದ್ರೂ ಮುಟ್ಟದ ಜನ – ಪೊಲೀಸರಿಗೆ ಮಾಹಿತಿ
ರಾಯಚೂರು: ಮಹಾಮಾರಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೋಟುಗಳು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. 500 ರೂಪಾಯಿ ಮುಖಬೆಲೆಯ ನೋಟುಗಳು ಬೀದಿಯಲ್ಲಿ ಬಿದ್ದಿದ್ದಕ್ಕೆ ಜನ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಯಚೂರಿನ ನೇತಾಜಿ ನಗರದಲ್ಲಿ 500 ರೂಪಾಯಿ ಮುಖಬೆಲೆಯ 5 ನೋಟುಗಳು ರಸ್ತೆಯಲ್ಲಿ ಬಿದ್ದಿದ್ದವು. ಇದನ್ನು ನೋಡಿದ ಸ್ಥಳೀಯರು ಆತಂಕಗೊಂಡಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಹಣ ಬಿದ್ದಿದ್ದರು ಮುಟ್ಟದ ಸಾರ್ವಜನಿಕರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ …
Read More »ಕೊರೋನಾ ವಿರುದ್ಧವಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ: ಸಿಇಓ
ಮಂಡ್ಯ.ಏ.22 (ಕರ್ನಾಟಕ ವಾರ್ತೆ):- ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳು, ದಾನಿಗಳು ಕೊರೋನಾ ವಿರುದ್ಧವಾಗಿ ಉತ್ತಮ ಸಹಕಾರ ನೀಡುತ್ತಿದ್ದಾರೆ. ಎಂದು ಜಿಲ್ಲಾ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಯಾಲಕ್ಕಿಗೌಡ ಅವರು ಹೇಳಿದರು. ನಗರದ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಜಿಲ್ಲಾಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮಪಂಚಾಯಿತಿಯ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದು ಗ್ರಾಮಪಂಚಾಯಿತಿಯ ಅಧ್ಯಕ್ಷತೆಯಲ್ಲಿ ಗ್ರಾಮಪಡೆ ಎನ್ನುವ ಹೆಸರಿನಿಂದ ಮಾಡುತ್ತಿದ್ದಾರೆ. ಪಿಡಿಓ, ಕಾರ್ಯದರ್ಶಿ,ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಪೊಲೀಸರು,ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, …
Read More »ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಖಾಸಗಿ ಸಂಸ್ಥೆಗಳು ತಮ್ಮ ನೌಕರರನ್ನು ಯಾವುದೇ ಕಾರಣ ನೀಡದೆ ಸಾಮೂಹಿಕವಾಗಿ ಕೆಲಸದಿಂದ ವಜಾ ಮಾಡುವ ಆರೋಪ ಕೇಳಿಬಂದಿದೆ. ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಲಾಕ್ಡೌನ್ನಿಂದಾಗಿ ಖಾಸಗಿ ಕಂಪನಿಗಳು ತಮ್ಮ ನೌಕರರಿಗೆ ಜೀವನಾಧಾರವಾಗಿ ಕನಿಷ್ಠ ವೇತನ ನೀಡಬೇಕು. ತಮ್ಮ ವ್ಯವಹಾರವನ್ನು ನಿಲ್ಲಿಸಿದರೆ, ಕೆಲಸ ಕಳೆದುಕೊಂಡ ನೌಕರರಿಗೆ ಹಣಕಾಸಿನ ನೆರವು ನೀಡಬೇಕೆಂದು ಸರ್ಕಾರ …
Read More »SSLC ಪರೀಕ್ಷೆ ಖಂಡಿತಾ ನಡೆಯುತ್ತೆ.ಸುರೇಶ್ ಕುಮಾರ್…
ಬೆಂಗಳೂರು: ಲಾಕ್ ಡೌನ್ ಮುಂದುವರೆದಿದ್ದು, ವೈರಸ್ ವಿಚಾರವಾಗಿ ಜನ ಭಯಗೊಂಡಿದ್ದಾರೆ. ಪರೀಕ್ಷೆಗಳಿಗೂ ವೈರಸ್ ಕಾಟ ತಪ್ಪಿಲ್ಲ. ಇಷ್ಟೊತ್ತಿಗೆ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳು ನಡೆದಿರಬೇಕಿತ್ತು. ಆದ್ರೆ ಲಾಕ್ ಡೌನ್ ಮುಂದುವರಿಕೆಯಿಂದಾಗಿ ಪರೀಕ್ಷೆ ಹೇಗೆ ಮಾಡ್ತಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಮಧ್ಯೆ ಪರೀಕ್ಷೆ ನಡೆಯದೆ 1-9 ಪಾಸ್ ಮಾಡಿದ ಹಾಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳಿಗೆ ಸಚಿವ ಸುರೇಶ್ ಕುಮಾರ್ ಬ್ರೇಕ್ ಹಾಕಿದ್ದಾರೆ. ಬೆಂಗಳೂರಿನಲ್ಲಿ …
Read More »
Laxmi News 24×7