Breaking News

ರಾಜ್ಯ

ಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರ:ಬಾಲಚಂದ್ರ ಜಾರಕಿಹೊಳಿ

ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.   ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ …

Read More »

ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಎದುರಾಗಿದೆ: ಡಿ.ಕೆ. ಶಿ

ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಸಮಸ್ಯೆ ಎದುರಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆರೋಪಿಸಿದರು. ಬುಧವಾರ ನಗರ ಪ್ರದಕ್ಷಿಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ ಎಂದರು. ಮಳೆಯಿಂದ …

Read More »

ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ

ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ರೋಹಿತ್ ಶರ್ಮಾ (Rohit Sharma) ಇನ್ನು ಮುಂದೆ ಏಕದಿನ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಐಪಿಎಲ್‌ನಲ್ಲಿ (IPL 2025) ಮುಂಬೈ ಇಂಡಿಯನ್ಸ್ ಪರ ಕಳೆದ ಕೆಲವು ಪಂದ್ಯಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ …

Read More »

ಸದ್ಯದಲ್ಲೇ ರಾಮ ಮಂದಿರ ನಿರ್ಮಾಣ ಪೂರ್ಣ; ಜೂನ್ 5ರಂದು ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆ

ಅಯೋಧ್ಯೆ, ಮೇ 21: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮ ಮಂದಿರದ (Ram Temple) ನಿರ್ಮಾಣ ಕಾರ್ಯ ಜೂನ್ 5ರೊಳಗೆ ಪೂರ್ಣಗೊಳ್ಳಲಿದ್ದು, ಜೂನ್ 3ರಿಂದ ಪ್ರಾರಂಭವಾಗುವ ಸಮಾರಂಭದಲ್ಲಿ ‘ರಾಮ ದರ್ಬಾರ್’ನ ಪವಿತ್ರೀಕರಣ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ದರ್ಬಾರ್‌ನ ‘ಪ್ರಾಣ ಪ್ರತಿಷ್ಠೆ’ ಜೂನ್ 3ರಿಂದ 5ರವರೆಗೆ ನಡೆಯಲಿದೆ. ಜೂನ್ 5ರಂದು ನಡೆಯಲಿರುವ ಪವಿತ್ರೀಕರಣ ಸಮಾರಂಭಕ್ಕೆ ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಮಿಶ್ರಾ …

Read More »

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ

ಬೆಂಗಳೂರು, ಮೇ 21: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್​ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್​ ಅವರು ನೂತನ …

Read More »

ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ : ಮಾಜಿ ಸಚಿವ ಶ್ರೀರಾಮುಲು

ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ : ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ 2 ವರ್ಷ ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ. ಕುರ್ಚಿ ಅಲ್ಲಾಡು ಸಂದರ್ಭದಲ್ಲಿ ಈ ರೀತಿ ಸಮಾವೇಶ ಮಾಡ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣ ಸುಳ್ಳುಗಳಿಂದ ಕೂಡಿತ್ತು. ಸಾಧನಾ ಸಮಾವೇಶ ಹಳೆ ರೇಡಿಯೋದಂತೆ ಅದೇ ಗಾನಾ ಬಜಾನಾ ಮಾಡಿದ್ದಾರೆ …

Read More »

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಜಿ.ಪಂ-ತಾ.ಪಂ ಗಳಲ್ಲಿ ಹೆಣ್ಣು ಮಕ್ಕಳಿಗೆ ಶೇ.50 ರಷ್ಟು ಸ್ಥಾನ ರಾಜೀವ್ ಗಾಂಧಿ ಚಿಂತನೆ; ಡಿಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯನ್ನು ರಾಜಧಾನಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿತ್ತು. ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ …

Read More »

ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ

ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಗೋಕಾಕ ಪಟ್ಟಣದಲ್ಲಿ ಶಾಸಕ ರಮೇಶ ಜಾರಕಿಹೋಳಿ ನಿರ್ದಶನದಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಶಾಸಕ ಅವರ ನೇತೃತ್ವದಲ್ಲಿ ಸಂಗೋಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭಾರತಾಂಬೆಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.

Read More »

16ನೇ ರಾಷ್ಟ್ರೀಯ ಸಿನಿಯರ್ ದೇಹದಾರ್ಢ್ಯ ಸ್ಪರ್ಧೆ ಯಶಸ್ವಿಗೆ ಸಹಕಾರ….

16ನೇ ರಾಷ್ಟ್ರೀಯ ಸಿನಿಯರ್ ದೇಹದಾರ್ಢ್ಯ ಸ್ಪರ್ಧೆ ಯಶಸ್ವಿಗೆ ಸಹಕಾರ…. ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರನ್ನು ಸತ್ಕರಿಸಿದ ದೇಹದಾರ್ಢ್ಯಪಟುಗಳ ಸಂಘಟನೆ ಮತ್ತು ರೋಟರಿ ಕ್ಲಬ್ ಬೆಳಗಾವಿ ಜಿಲ್ಹಾ ದೇಹದಾರ್ಢ್ಯಪಟುಗಳ ಸಂಘಟನೆ ಮತ್ತು ರೋಟರಿ ಕ್ಲಬ್ ಆಫ್ ಬೆಲಗಾಮ್’ನ ವತಿಯಿಂದ ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರನ್ನು ಸನ್ಮಾನಿಸಲಾಯಿತು. ಬೆಳಗಾವಿಯಲ್ಲಿ ರೋಟರಿ ಅನ್ನೋತ್ಸವದ ವೇಳೆ ಇಂಡಿಯನ್ ಬಾಡಿ ಬಿಲ್ಡಿಂಗ್ ಫೆಡರೇಶನ್ , ಕರ್ನಾಟಕ ಸ್ಫೋರ್ಟ್ಸ್ ಅಥಾರಿಟಿಯಿಂದ ಮಾನ್ಯತೆ ಪಡೆದ ಕರ್ನಾಟಕ ಅಸೋಸಿಯೇಷನ್ …

Read More »

ಐ.ಸಿ.ಯುನಲ್ಲಿದ್ದ ರೋಗಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ… ಬೆಳಗಾವಿ ಬಿಮ್ಸ್’ನಲ್ಲಿ ಮಹಿಳೆ ಸಾವು!!!?

ಐ.ಸಿ.ಯುನಲ್ಲಿದ್ದ ರೋಗಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ… ಬೆಳಗಾವಿ ಬಿಮ್ಸ್’ನಲ್ಲಿ ಮಹಿಳೆ ಸಾವು!!!? ತುರ್ತು ಪರಿಸ್ಥಿತಿಯ ವೇಳೆ ಚಿಕಿತ್ಸೆ ನೀಡಲು ವೈದ್ಯರು ನರ್ಸಗಳಿಲ್ಲದ ಹಿನ್ನೆಲೆ ಮಹಿಳಾ ರೋಗಿಯೊಬ್ಬರು ತಡರಾತ್ರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಾವಿಯ ವಿಶ್ವೇಶ್ವರಯ್ಯಾ ನಗರ, ಸಂಪಿಗೆ ರಸ್ತೆಯ ರಹಿವಾಸಿ ಪ್ರಭಾವತಿ ವಿಷ್ಣು ಮೀರಜ್’ಕರ ಅವರನ್ನು ಮೇ 19 ರಂದು ಆರೋಗ್ಯದಲ್ಲಿ ಏರುಪೇರಾದ ಕಾರಣ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿರಿಸಲಾಗಿತ್ತು. ಆದರೇ, ಮಂಗಳವಾರ …

Read More »