Breaking News

ರಾಜ್ಯ

ಕೊರೊನಾ ಶಂಕಿತ ವೃದ್ಧ ಆಸ್ಪತ್ರೆಯಿಂದ ಎಸ್ಕೇಪ್ ಆಗಲು ಯತ್ನ……

ಮಡಿಕೇರಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಶಂಕಿತ ವೃದ್ಧ ರೋಗಿಯೊಬ್ಬ ಎಸ್ಕೇಪ್ ಆಗಲು ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೇರಳದ ವಯನಾಡಿನ 70 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ಶಂಕೆಯ ಆಧಾರದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಈ ವೃದ್ಧ ಆಸ್ಪತ್ರೆಯಿಂದ ಹೊರಬಂದು ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ನರ್ಸ್ ಹಾಗೂ ಸ್ವಚ್ಛತಾ ಸಿಬ್ಬಂದಿ …

Read More »

ರಾಜ್ಯದಲ್ಲಿ ಮದ್ಯದಂಗಡಿ ಕಳ್ಳತನದ ಹಿಂದೆ ಮಾಲೀಕರ ಕೈವಾಡವಿದೆ: ಸಚಿವ ರಮೇಶ್ ಜಾರಕಿಹೊಳಿ ಆರೋಪ

ಬೆಳಗಾವಿ: ರಾಜ್ಯದಲ್ಲಿ ಮದ್ಯದಂಗಡಿ ಕಳ್ಳತನದ ಹಿಂದೆ ಮಾಲೀಕರ ಕೈವಾಡವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಲಾಕ್ ಡೌನ್ ಸಂದರ್ಭದಲ್ಲಿ ಮದ್ಯ ಅಂಗಡಿಗಳು ಕಳ್ಳತನವಾಗುತ್ತಿವೆ. ಇಲ್ಲಿ ಹೆಚ್ಚಿನ ಲಾಭಕ್ಕಾಗಿ ಮದ್ಯ ಅಂಗಡಿ ಮಾಲೀಕರೇ ಮದ್ಯವನ್ನ ಕಳ್ಳತನ ಮಾಡಿಸಿ, ಹೆಚ್ಚಿನ ದರಕ್ಕೆ ಅದನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ ಈ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ …

Read More »

ಲಾಕ್‍ಡೌನ್ ಉಲ್ಲಂಘನೆ – 118 ಮಂದಿ ವಿರುದ್ಧ ರೌಡಿಶೀಟ್ ಓಪನ್

ಕಲಬುರಗಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಆರಂಭದಿಂದ ಇಲ್ಲಿಯವರೆಗೆ ಲಾಕ್‍ಡೌನ್ ಉಲ್ಲಂಘಿಸಿದ ಜಿಲ್ಲೆಯ 118 ಮಂದಿ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲೂಕುಗಳ ವ್ಯಾಪ್ತಿಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯ …

Read More »

ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.

ಅಥಣಿ: ಎಲ್ಲೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದ್ರೂ ಗ್ರಾಮಗಳಿಗೆ ಭೇಟಿ ನೀಡದೆ ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಥಣಿ ಪಟ್ಟಣದ ಅತಿಥಿ ಗೃಹದಲ್ಲಿ ಇಂದು ಈ ವಿಚಾರವಾಗಿ‌ ಮಾತನಾಡಿದ ಅವರು, ಕೊರೊನಾ ಜಾಗೃತಿಗಾಗಿ ಗ್ರಾಮಗಳಿಗೆ ಭೇಟಿ ನೀಡಿದರೆ ನನ್ನ ಜತೆ ಹಲವಾರು ಜನರು ಸೇರುವುದರಿಂದ ಕಾನೂನು ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಜನರಿಗೆ ಉಪಯೋಗ ಆಗಬೇಕು ಹೋರತು ನಮ್ಮಿಂದ ತೊಂದರೆ ಆಗಬಾರದು …

Read More »

ಸಿನಿಮಾ ಬಿಟ್ಟರೂ ಲಿಪ್‍ಲಾಕ್, ಹಸಿಬಿಸಿ ದೃಶ್ಯಗಳಲ್ಲಿ ನಟಿಸಲ್ಲ ಎಂದ ರೌಡಿ ಬೇಬಿ

ಹೈದರಾಬಾದ್: ಬಹುಭಾಷಾ ನಟಿ ಸಾಯಿ ಪಲ್ಲವಿ ವಿಭಿನ್ನ ನಟನೆ ಮೂಲಕ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವೇ ಸಿನಿಮಾಗಳಲ್ಲಿ ನಟಿಸಿದರೂ ತಮ್ಮದೇಯಾದ ಫ್ಯಾನ್ ಫಾಲೋವರ್ಸ್ ಹೊಂದುವ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ನಟನೆಗೆ ಹೊರತಾಗಿಯೂ ಅವರ ವೈಯಕ್ತಿಕ ಜೀವನದಲ್ಲಿ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಬೋಲ್ಡ್ ಸ್ಟೇಟ್‍ಮೆಂಟ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಸಾಯಿ ಪಲ್ಲವಿ ಎಂದರೆ ಅದೊಂದು ಚಾರ್ಮ್ ಎಂಬುದು ತಿಳಿದಿರುವ ವಿಚಾರ. ಅವರ ಅಭಿಮಾನಿಗಳೂ ಸಹ ಅವರನ್ನು …

Read More »

ಕುರಿ ಮಾಂಸಕ್ಕೆ ದನದ ಮಾಂಸ ಮಿಕ್ಸ್ – ನಾಲ್ವರ ಬಂಧನ

ಚಿಕ್ಕಮಗಳೂರು: ಲಾಕ್‍ಡೌನ್ ವೇಳೆ ಮಾಂಸಕ್ಕೆ ಭಾರೀ ಬೇಡಿಕೆ ಇರುವ ಹಿನ್ನೆಲೆ ಕುರಿ ಮಾಂಸಕ್ಕೆ ದನದ ಮಾಂಸವನ್ನು ಮಿಕ್ಸ್ ಮಾಡಿ ನಾಲ್ವರು ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸಿರಾಜ್, ಅನಿಲ್ ಡಿಮೆಲ್ಲೊ, ಡೆಂನ್ಜಿಲ್, ಡೆಮಿಸ್ ಡಿಸೋಜ ಎಂಬವರನ್ನು ಬಂಧಿಸಲಾಗಿದೆ. ಕೊರೊನಾ ಆತಂಕದಿಂದ ಪ್ರತಿದಿನ ಜನಸಾಮಾನ್ಯರು ಆತಂಕದಿಂದ ಬದುಕುತ್ತಿದ್ದಾರೆ. ಜನರಿಗೆ ಊಟ-ತಿಂಡಿಗೆ ಸಮಸ್ಯೆ ಆಗಬಾರದೆಂದು ಸರ್ಕಾರ ಮಾಂಸವನ್ನು ಅತ್ಯಾವಶ್ಯಕ ಎಂದು ಪರಿಗಣಿಸಿ ಮಾಂಸ ಮಾರಾಟಕ್ಕೆ …

Read More »

ಕೊರೊನಾದಿಂದ ಮೃತ ವೃದ್ಧನಿಗೆ ಕ್ಷೌರ ಮಾಡಿದ್ದ ಕ್ಷೌರಿಕನಿಗೆ ಕ್ವಾರಂಟೈನ್

ಚಿಕ್ಕಬಳ್ಳಾಪುರ: ನಗರದಲ್ಲಿ ಕೊರೊನಾಗೆ ಬಲಿಯಾದ ವೃದ್ಧನಿಗೆ ಕ್ಷೌರ ಮಾಡಿದ್ದ ಕ್ಷೌರಿಕನನ್ನೂ ಇದೀಗ ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಇದರ ಜೊತೆಗೆ ಈ ಕ್ಷೌರಿಕನ ಬಳಿ ಕ್ಷೌರ ಮಾಡಿಸಿಕೊಂಡವರಿಗೆ ಈಗ ಕೊರೊನಾ ಆತಂಕ ಶುರುವಾಗಿದೆ. ಕಳೆದ 4 ದಿನಗಳ ಹಿಂದೆ ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದರು. ಈಗಾಗಲೇ ವೃದ್ಧನ ಮಗ ಹಾಗೂ ಮನೆಯ ಎದುರಗಡೆಯ ಇಬ್ಬರು ಯುವಕರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಹೀಗಾಗಿ ಇವರ ಬಳಿ ಕ್ಷೌರ ಮಾಡಿಸಿಕೊಂಡವರಿಗೂ ಕೊರೊನಾ …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಅಂಗಡಿ ವ್ಯಾಪರಸ್ಥರ ಜೊತೆಗೆ ಸಭೆ,: ಶಾಸಕ ಅಭಯ ಪಾಟೀಲ,ಅನಿಲ ಬೆನಕೆ

ಬೆಳಗಾವಿ:  ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ನಿಷೇಧಿತ ವಲಯದಲ್ಲಿ ಕೆಲ ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಭಾನುವಾರ ಕೊರೋನಾ ವೈರಾಣು ಸೋಂಕಿನ ತಡೆಯುವಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಔಷದಿ ಅಂಗಡಿ ಹಾಗೂ ಕಿರಾಣಿ ಅಂಗಡಿ ವ್ಯಾಪರಸ್ಥರ …

Read More »

ಶೋಭಾ ಕರಂದ್ಲಾಜೆ ವಿರುದ್ಧ ಎಚ್‍ಎಂ ರೇವಣ್ಣ ವಾಗ್ದಾಳಿ

ಚಿಕ್ಕಬಳ್ಳಾಪುರ: ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಸರ್ಕಾರ ವಿರುದ್ಧ ಮಾಜಿ ಸಚಿವ ಎಚ್‍ಎಂ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕೋವಿಡ್-19 ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್‍ಎಂ ರೇವಣ್ಣ, ರಾಜ್ಯ ಸರ್ಕಾರದ ಕೆಲ ಸಚಿವರು ಸುಖಾಸುಮ್ಮನೆ ಬಾಯಿ ಹರಿದುಕೊಳ್ಳುತ್ತಿದ್ದಾರೆ, ಅದರಲ್ಲೂ ಶೋಭಾ ಕರಂದ್ಲಾಜೆ ಕೆಲವರನ್ನು ನೇಣು ಹಾಕಿ ಅಂತಿದ್ದಾರೆ. ಒಬ್ಬ ಜನಪ್ರತಿನಿಧಿಯಾದವರು ಈ ರೀತಿ ಮಾತನಾಡುವುದು ಸರಿಯಾ ಎಂದು ಪ್ರಶ್ನೆ ಮಾಡಿದರು. ಇದೇ …

Read More »

ಓಟಿ ಕ್ವಾಟರ್ ಗೆ 800 ರೂ, ಬಿಯರ್ 1 ಸಾವಿರ ರೂ. ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ

ಕೋಲಾರ: ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಸಾಮಾನ್ಯ ದರಕ್ಕಿಂತ ಹತ್ತು ಪಟ್ಟು ಹೆಚ್ಚಳ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕೋಲಾರ ಹೊರವಲಯದ ಟಮಕದ ಕಾಲೋನಿಯಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಬಾರ್‍ಗಳಲ್ಲಿ ಮದ್ಯ ಖಾಲಿಯಾಗಿದ್ದು, ಕೆಲವೇ ಬಾರ್‍ಗಳಲ್ಲಿ ಸ್ಟಾಕ್ ಇದೆ. ಬಾಗಿಲು ಕ್ಲೋಸ್ ಮಾಡಿ ಹಿಂದೆ ಬಾಗಿಲು ತೆರೆದು ಬಾರ್ ಮಾಲೀಕರು ಮಾರಾಟ ಮಾಡಲಾಗುತ್ತಿದೆ. ಹತ್ತು ಪಟ್ಟು ಹೆಚ್ಚಿನ …

Read More »