ಚಿಕ್ಕಮಗಳೂರು : ಕರ್ಫ್ಯೂ ನಕಲಿ ಪಾಸ್ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊರೊನಾ ಆತಂಕದಲ್ಲಿ ದೇಶವೇ ಲಾಕ್ ಡೌನ್ ಮಾಡಲಾಗಿದ್ದು, ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮಕೈಗೊಂಡಿದೆ ಇಂಥವರಿಗೆ ಪಾಸ್ ವಿತರಿಸಿದೆ. ಆದರೆ ಇದೇ ಪಾಸುಗಳನ್ನು ನಕಲಿ ಮಾಡಿ ಮಾರುತ್ತಿದ್ದ ಆರೋಪಿಗಳು. ಇಲ್ಲಿನ ದಂಟರಮಕ್ಕಿ ಬಡಾವಣೆ ನಿವಾಸಿಗಳು. ಆರೋಪಿಗಳಿಂದ ಸ್ಕ್ಯಾನರ್, ಪ್ರಿಂಟರ್, ಕಂಪ್ಯೂಟರ್, ಮೊಬೈಲ್ ಹಾಗೂ ನಕಲಿ ಕರ್ಫ್ಯೂ ಪಾಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ತಲಾ …
Read More »ಅಕ್ಕಿ ಚೀಲಗಳ ಮಧ್ಯೆ ಅಡಗಿಸಿ ಕಾರ್ಮಿಕರ ಸಾಗಿಸುತ್ತಿದ್ದ ಪಿಕಪ್ ವಾಹನ ವಶಕ್ಕೆ
ಚಿಕ್ಕಮಗಳೂರು : ಅಕ್ಕಿ ಚೀಲವನ್ನು ಆಸರೆಯಾಗಿ ಬಳಸಿಕೊಂಡು ಟಾರ್ಪಲ್ ಮುಚ್ಚಿ ಪಿಕಪ್ ವಾಹನದಲ್ಲಿ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿಗೆ ಹೊರಟಿದ್ದ ವಾಹನವನ್ನು ವಶಕ್ಕೆ ಪಡೆದು ಜಿಲ್ಲಾ ಪೊಲೀಸರು 30 ಜನರನ್ನು ಹಾಸ್ಟೆಲ್ ಒಂದರಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲೆಯ ಗಡಿ ಪ್ರದೇಶವಾದ ಬೇಲೂರು ತಾಲೂಕಿನ ಪುರ ಎಸ್ಟೇಟ್ ನಿಂದ ಬಂದಿದ್ದ ಇವರು ತೋಟದಲ್ಲಿ ಕೆಲಸವಿಲ್ಲದೆ ಮಾಲೀಕರು ತಮ್ಮ ಮನೆಗಳಿಗೆ ತೆರಳಲು ತಿಳಿಸಿದ್ದು ಕೆಲಸವಿಲ್ಲದೆ ಹೊಟ್ಟೆ ಬಟ್ಟೆಗೂ ಕಷ್ಟವಾಗಿದೆ ವಾಹನದಲ್ಲಿ ಊರಿಗೆ ಬರುತ್ತಿದ್ದೇವೆ …
Read More »ಜಿಲ್ಲಾಧಿಕಾರಿಗಳು ತಕ್ಷಣ ಕಬ್ಬಿನ ಹಣದ ಪಾವತಿ ಮತ್ತು ಬಾಕಿಯ ವಿವರ ನೀಡಬೇಕು:ಸಿದಗೌಡ ಮೋದಗಿ
ಬೆಳಗಾವಿ: ಪ್ರಸಕ್ತ ವರ್ಷ ಕಬ್ಬು ನುರಿಯುವ ಹಂಗಾಮು ಆರಂಭವಾದಾಗಿನಿಂದ ಮಾರ್ಚ 31 ರವರೆಗೆ ಯಾವ ಯಾವ ಸಕ್ಕರೆ ಕಾರ್ಖಾನೆಗಳು ಎಷ್ಟೆಷ್ಟು ಕಬ್ಬು ನುರಿಸಿವೆ ಮತ್ತು ಯಾವ ಯಾವ ಸಕ್ಕರೆ ಕಾರ್ಖಾನೆಗಳು ಈವರೆಗೆ ರೈತರಿಗೆ ಎಷ್ಟು ಹಣ ಸಂದಾಯ ಮಾಡಿವೆ ಮತ್ತು ಎಷ್ಟು ಪಾವತಿಸಿವೆ ಂಬುದರ ಬಗ್ಗೆ ಜಿಲ್ಲಾಧಿಕಾರಿಗಳು ತಕ್ಷಣ ಬಹಿರಂಗ ಪಡಿಸಬೇಕು ಎಂದು ಭಾರತೀಯ ಕೃಷಿಕ ಸಮಾಜ (ಸಂ) ದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅವರು ಆಗ್ರಹಿಸಿದ್ದಾರೆ. ರೈತರ, ಕೃಷಿ …
Read More »“ಕೊರೋನಾ ಹರಡುವದಂತೆ ತಡೆಯಲು ಸಾಮಾಜಿಕ ಅಂತರ ಒಂದೇ ಪರಿಹಾರ”
ಬೆಳಗಾವಿ:ಕೊರೋನಾ ಹರಡುವದಂತೆ ತಡೆಯಲು ಸಾಮಾಜಿಕ ಅಂತರ ಒಂದೇ ಪರಿಹಾರ ಆಗಿದ್ದು ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದ ಗೃಹ ಕಚೇರಿಯಲ್ಲಿ ಮಾತನಾಡಿ ಪಡಿತರ ವಿತರಣೆಯಲ್ಲಿ ಜನರಿಗೆ ತೊಂದರೆಯಾಗುತ್ತಿರುವುದು ನಿಜವಾಗಿದೆ.ಬೇರೆ ಜಿಲ್ಲೆಗಳಿಂದ ವಲಸೆ ಬಂದವರಿಗೆ ರೇಷನ ನೀಡಲು ನಿರಾಕರಿಸಲಾಗುತ್ತಿದೆ. ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದರು. ದುಡಿಯುವ ಕೂಲಿ ಕಾರ್ಮಿಕರಿಗೆ ಬಹಳಷ್ಟು ತೊಂದರೆಯಾಗಿದೆ. ಮತ್ತೆ ಹದಿನೈದು ದಿನ …
Read More »“ರೈತರ ಸಮಸ್ಯೆಗಳಿಗೆ ಸ್ಪಂದಿಸಿರುವ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ”…….
ಬೆಳಗಾವಿ: ರೈತರ ಸಮಸ್ಯೆಗಳಿಗೆ ಸ್ಪಂದಿಸಿರುವ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಯೋಗ್ಯ ದರದಲ್ಲಿ ತರಕಾರಿಗಳನ್ನು ಖರೀದಿಸಿ ಬಡ ಜನರಿಗೆ ವಿತರಿಸಲು ಮುಂದಾಗಿದ್ದಾರೆ. ಕೊರೋನಾ ಸಂಕಷ್ಟದ ಸ್ಥತಿಯಲ್ಲಿರೈತರು ಬೆಳೆದ ತರಕಾರಿಗಳನ್ನು ಖರೀದಿಸಲು ಯಾರೂ ಮುಂದಾಗದೆ ಇರುವ ಕಾರಣ ಮತ್ತು ಬೇರೆ ರಾಜ್ಯಗಳಿಗೆ ಕಳುಹಿಸಲು ಕೂಡ ಅವಕಾಶ ಇಲ್ಲದ ಕಾರಣ ಶಾಸಕರು ಖುದ್ದಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಯೋಗ್ಯ ಬೆಲೆಯಲ್ಲಿ ತರಕಾರಿ ಖರೀದಿಸಿ ಜನರಿಗೆ ವಿತರಿಸುವ ಕಾರ್ಯ ಮಾಡಿದ್ದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. …
Read More »ತಬ್ಲಿಘಿ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು – ಸಿಟಿ ರವಿ
ಬೆಂಗಳೂರು: ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು ಎಂದು ಕನ್ನಡ ಮತ್ತು ಸಂಸ್ಕøತಿ ಖಾತೆಯ ಸಚಿವ ಸಿಟಿ ರವಿ ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ವಿಚಾರಕ್ಕೆ, ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ …
Read More »ಕೊರೊನಾಗಿಂತಲೂ ಭಯಾನಕ ಪೊಲೀಸ್ ವೈರಸ್’
– ಆರೋಪಿಯ ವಿರುದ್ಧ ಎಫ್ಐಆರ್ ಮಂಗಳೂರು: ಜಗತ್ತು ಕೊರೊನಾ ಎಂಬ ಮಹಾಮಾರಿಗೆ ನಲುಗಿ ಹೋಗಿದೆ. ವೈದ್ಯರು, ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ರಾತ್ರಿ ಹಗಲೆನ್ನದೇ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಂತೆ ಮಂಗಳೂರಿನಲ್ಲಿ ಕೂಡ ಕಟ್ಟು ನಿಟ್ಟಾಗಿ ನಿಯಮ ಪಾಲಿಸುವಂತೆ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ಪೊಲೀಸರ ಬಗ್ಗೆ ಕಿಡಿಗೇಡಿಯೊಬ್ಬ ಕೀಳು ಮಟ್ಟದ ಪೋಸ್ಟ್ ಮಾಡಲಾಗಿದೆ. ಆರೋಪಿಯ ವಿರುದ್ಧ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ …
Read More »ಕೊರೋನಾ ತಡೆಯಲು ಕೆ,ಎಮ್,ಎಫ್,ನಿರ್ದೇಶಕರಿಂದ ಸುರಂಗ ಮಾರ್ಗ ಉದ್ಘಾಟನೆ.
ಗೋಕಾಕ: ಕೊಣ್ಣೂರ ಪಟ್ಟಣದ ವಾಲ್ಮೀಕಿ ವೃತ್ತದ ವಾರ್ಡ ನಂ 10 ರಲ್ಲಿ ದಾನಿಗಳಾದ ಆಶಾ ಟೆಕ್ಸ್ ಟೈಲ್ , ಶ್ರೀ ಐಶ್ವರ್ಯ ಸ್ಟೀಲ್ಸ ಆ್ಯಂಡ್ ಹಾರ್ಡವೆರ್ಸ ಮತ್ತು ವಿನೋದ ಕರನಿಂಗ ಇವರ ನೇತೃತ್ವದಲ್ಲಿ ಮತ್ತು ಸಾರ್ವಜನಿಕರಿಗಾಗಿ ಪದ್ಮಾವತಿ ಪೆಟ್ರೋಲಿಯಂ ಮಾಲೀಕರಾದ ಅಕ್ಷಯ ಬೆಡಕಿಹಾಳ ಇವರು ನೀಡಿದ ಸಾನಿಟೈಸರ್ ಸುರಂಗವನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಸುಪುತ್ರ ಹಾಗೂ ಕೆ,ಎಮ್,ಎಪ್,ನಿರ್ದೇಶಕರಾದ ಅಮರನಾಥ ಜಾರಕಿಹೋಳಿಯವರು ಉದ್ಘಾಟಿಸಿದರು ಇದೆ ಸಂದರ್ಭದಲ್ಲಿ …
Read More »ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ಎಲ್ಲರಿಗೂ ನೀಡಲು ಸಾಧ್ಯವಿಲ್ಲ: ಏಮ್ಸ್ ನಿರ್ದೇಶಕ
ನವದೆಹಲಿ: ಮಲೇರಿಯಾಗೆ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೊನಾಗೆ ಪರಿಣಾಮಕಾರಿಯೇ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈಗ ಈ ವಿಚಾರದ ಕುರಿತು ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಪ್ರತಿಕ್ರಿಯಿಸಿದ್ದಾರೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೊನಾಗೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಕೆಲ ಲ್ಯಾಬ್ಗಳು ವರದಿ ನೀಡಿವೆ. ಈ ವರದಿಗೆ ನೀಡಿದ ಡೇಟಾಗಳು ಗಟ್ಟಿಯಾಗಿಲ್ಲ. ಚೀನಾ ಮತ್ತು ಫ್ರಾನ್ಸ್ ಅಧ್ಯಯನಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಅಜಿಥ್ರೊಮೈಸಿನ್ ಗಳು ಗಂಭೀರ ಸ್ಥಿತಿಯಲ್ಲಿರುವ ಕೋವಿಡ್-19 ರೋಗಿಗಳಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿವೆ ಎಂದು …
Read More »ಇಟಲಿಯಲ್ಲಿದ್ದ ಮಂಗಳೂರಿನ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಖಾದರ್
ಮಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು ಮಾಜಿ ಸಚಿವ ಯು.ಟಿ ಖಾದರ್, ತನ್ನ ಕಾರಿನಲ್ಲಿ ಮಂಗಳೂರಿಗೆ ಕರೆತಂದು ಯುವತಿ ಮನೆಗೆ ಸೇಫ್ ಆಗಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಇಟಲಿಯಲ್ಲಿ ವಾಸವಾಗಿದ್ದ ಮಂಗಳೂರಿನ ಮೂಲದ ಶ್ರೀಮಧು ಇಟಲಿಯಿಂದ ಮಾ.22ರಂದು ಕೊನೆ ವಿಮಾನದಲ್ಲಿ ದೆಹಲಿ ತಲುಪಿದ್ದಳು. ಇಟಲಿಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಆಕೆಯನ್ನು ದೆಹಲಿಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ …
Read More »
Laxmi News 24×7