Breaking News

ರಾಜ್ಯ

ಬೆಂಗ್ಳೂರಿನ 2 ವಾರ್ಡ್‍ಗಳು ಸೀಲ್‍ಡೌನ್ – ಬಿಬಿಎಂಪಿಯಿಂದಲೇ ಆಹಾರ ವಿತರಣೆ

ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಸೀಲ್ ಮಾಡಲಾಗುತ್ತದೆ ಎನ್ನುವ ಸುದ್ದಿಗಳ ಮಧ್ಯೆ ನಗರದ ಮಧ್ಯೆ ಬಾಪೂಜಿನಗರ ಮತ್ತು ಪಾದರಾಯನಪುರ ವಾರ್ಡ್ ಅನ್ನು ಸಂಪೂರ್ಣ ಸೀಲ್ ಮಾಡಲು ಬಿಬಿಎಂಪಿ ಮುಂದಾಗಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು, ಬಾಪೂಜಿ ನಗರ ವಾರ್ಡ್ 134 & ಪಾದರಾಯನಪುರ ವಾರ್ಡ್ 135ರಲ್ಲಿ ಕೋವಿಡ್ -19  ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಣ …

Read More »

ದೂರದಿಂದಲೇ ಒಂದಾದ ಪ್ರೇಮಿಗಳು – ಬೆಂಗ್ಳೂರಿನ ಗಿರಿನಗರ ಠಾಣೆಯಲ್ಲೊಂದು ಅಪರೂಪದ ದೃಶ್ಯ

ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಅನೇಕ ಮದುವೆ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ. ಆದರೂ ಕೆಲವು ಜೋಡಿಗಳು ಲಾಕ್‍ಡೌನ್ ನಿಯಮವನ್ನು ಪಾಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಕೊರೊನಾ ಲಾಕ್‍ಡೌನ್ ನಡುವೆಯೇ ಪ್ರೇಮಿಗಳಿಬ್ಬರು ಮದುವೆಯಾಗಿದ್ದಾರೆ. ಮುರುಗನ್ ಮತ್ತು ಮೇಘಶ್ರೀ ಮದುವೆಯಾದ ಪ್ರೇಮಿಗಳು. ಇವರಿಬ್ಬರು ಅನೇಕ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮರುಗನ್ ಮತ್ತು ಮೇಘಶ್ರೀ ಮನೆಯಿಂದ ಓಡಿ …

Read More »

ಕೊರೊನಾದಿಂದ ಕಂಗೆಟ್ಟಿರುವ ರೈತರಿಗೆ ಆಸರೆ- ವೈದ್ಯ, ಗುತ್ತಿಗೆದಾರನಿಂದ ನೂತನ ಪ್ರಯತ್

ಯಾದಗಿರಿ: ಕೊರೊನಾದಿಂದಾಗಿ ದೇಶವೇ ಲಾಕ್‍ಡೌನ್ ಆಗಿದ್ದು, ಬೆಳೆದ ಹಣ್ಣುಗಳನ್ನು ಕೊಳ್ಳುವವರೇ ಇಲ್ಲದಂತಾಗಿದೆ. ಅದೇ ರೀತಿ ಯಾದಗಿರಿ ಜಿಲ್ಲೆಯ ರೈತರಿಗೂ ಸಂಕಷ್ಟ ಎದುರಗಿದ್ದು,  ಜಿಲ್ಲೆಯ ಖಾಸಗಿ ವೈದ್ಯ ಮತ್ತು ಗುತ್ತಿಗೆದಾರ ಸ್ಪಂದಿಸುವ ಮೂಲಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ ಸಂಕಷ್ಟದಲ್ಲಿರುವ ಜಿಲ್ಲೆಯ ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ನೆರವಾಗಲು ರಾಜ್ಯದಲ್ಲಿಯೇ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಲಾಕ್‍ಡೌನ್ ಗೆ ಸಿಲುಕಿ, ಸಾರಿಗೆ ಮತ್ತು ಸರಿಯಾದ ಮಾರುಕಟ್ಟೆ ಇಲ್ಲದೆ ಬೆಳೆದ …

Read More »

ದೆಹಲಿಯಲ್ಲಿ ಕೊರೊನಾ ವಿರುದ್ಧ OPERATION SHIELD

ನವದೆಹಲಿ: ಕೊರೊನಾ ರುದ್ರ ಕುಣಿತಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಬೆದರಿ ಹೋಗಿದೆ. ನಿಜಾಮುದ್ದಿನ್ ಮರ್ಕಜ್ ಪ್ರಕರಣ ಬಳಿಕ ನೋಡ ನೋಡುತ್ತಿದ್ದಂತೆ ಅಂಕಿ ಆಕಾಶಕ್ಕೆ ಏರುತ್ತಿದೆ. ಈ ಮಿಂಚಿನ ಓಟಕ್ಕೊಂದು ಬ್ರೇಕ್ ಹಾಕಲು ಮುಂದಾಗಿರುವ ಕೇಜ್ರಿವಾಲ್ ಸರ್ಕಾರ ಆಪರೇಷನ್ ಶೀಲ್ಡ್ ಔಟ್ ಆರಂಭಿಸಿದ್ದು, ಆರು ಸೂತ್ರಗಳನ್ನು ಜಾರಿ ತರಲು ಮುಂದಾಗಿದೆ. ಅಲ್ಲೊಂದು, ಇಲ್ಲೊಂದು ಪ್ರಕರಣ ಎಂದುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಡಿತದಲ್ಲಿದ್ದ ಕೊರೊನಾ ಸೋಂಕು ನಿಜಾಮುದ್ದೀನ್ ಮರ್ಕಜ್ ಪ್ರಕರಣ ಬಳಿಕ ನೋಡ …

Read More »

ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

ಬೆಂಗಳೂರು: ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಕೂಡ ಲಾಕ್‍ಡೌನ್ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎನ್ನುವ ಬಗ್ಗೆ ಸ್ವತಃ ಗೃಹಮಂತ್ರಿಗಳು ಹಾಗೂ ಬೆಂಗಳೂರು ಕಮಿಷನರ್ ಖುದ್ದು ಚೆಕ್ ಪೋಸ್ಟ್ ಹಾಗೂ ಬಾರ್ಡರ್‌ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ನಕಲಿ ಪಾಸ್‍ಗಳನ್ನು ಬಳಸಿ ಹಾಗೂ ಅನವಶ್ಯಕವಾಗಿ ಓಡಾಟ ಮಾಡುತ್ತಿದ್ದವರ ಪಾಸ್‍ಗಳನ್ನು ವಶಕ್ಕೆ ಪಡೆದು ವಾಹನಗಳನ್ನು ಸೀಜ್ ಮಾಡಿದ್ದಾರೆ. ದೇಶಾದ್ಯಂತ ಲಾಕ್‍ಡೌನ್ ಹೇರಿದರೂ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ …

Read More »

ಜನರಿಗೆ ಕೆಲಸ ಇಲ್ಲದೆ ಬೇರೆ ಬೇರೆ ರಾಜ್ಯಗಳಿಗೆ ಗುಳೆ ಹೋಗುವುದಕ್ಕೆ ಕಾರಣ ಇಲ್ಲಿದೆ. ರಾಮದುರ್ಗ ತಾಲೂಕಿನ ಅಸಲಿ ಕಥೆ,

ಹೆಸರಿಗೆ ಮಾತ್ರ ಉದ್ಯೋಗ ಖಾತ್ರಿ…  ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಅಸಲಿ ಕಥೆ, ಜನರಿಗೆ ಕೆಲಸ ಇಲ್ಲದೆ ಬೇರೆ ಬೇರೆ ರಾಜ್ಯಗಳಿಗೆ ಗುಳೆ ಹೋಗುವುದಕ್ಕೆ ಕಾರಣ ಇಲ್ಲಿದೆ.   ರಾಮದುರ್ಗ:ಗ್ರಾಮ ಪಂಚಾಯ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸಕ್ಕೆ ಅಂತ ಕಾರ್ಮಿಕರು ಹೋಗುತ್ತಾರೆ, ಅವರ ಹತ್ತಿರದಿಂದ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ, ಅವರ ಕೆಲಸಕ್ಕೆ ಅಂತಾನೆ ಸರ್ಕಾರ ನೇರವಾಗಿ ಅವರವರ ಖಾತೆಗಳಿಗೆ ಹಣ ವರ್ಗಾವಣೆ ಮಾಡುತ್ತದೆ. ಅದೇನು ಸರಿ ಬಿಡಿ ನೇರವಾಗಿ ಉದ್ಯೋಗ ಚೀಟಿದಾರರಿಗೆ …

Read More »

ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ರಮೇಶ್ ಜಾರಕಿಹೊಳಿ ಕೊಕ್ ಕೊಟ್ಟ B.S.Y

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರವು ಸೋಂಕು ಹರಡುವುದನ್ನು ತಡೆಯುವಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿಯೇ ಹೊಸದಾಗಿ ಜಿಲ್ಲೆಯ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರಿಗೆ ಕೋಕ್ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತವಾರಿಯನ್ನು ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ …

Read More »

“SSLC-PUC ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ”

,ಸದ್ಯಕ್ಕೆ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಈ ಹಿಂದೆಯೇ ಸುರೇಶ್ ಕುಮಾರ್ 21 ದಿನಗಳ ನಂತರವಷ್ಟೇ ಪರೀಕ್ಷೆಗಳ ವಿಚಾರ ಚರ್ಚೆಯಾಗಲಿದೆ ಎಂದು ಹೇಳಿದ್ದರು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ಪರೀಕ್ಷೆಗಳ ಕುರಿತು ಹಲವು ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯ ಹಿರಿಯ …

Read More »

ರಾಜ್ಯದಲ್ಲಿ ಕೊರೊನಾ ವಿರುದ್ಧ ‘3ಟಿ’ ಅಸ್ತ್ರ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ಫೈನಲ್ ವಾರ್ ಎಂದು ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ‘3ಟಿ’ ಅಸ್ತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟು ಜನರಿಗೆ 197 ಕೊರೊನಾ ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 16 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬಾಗಲಕೋಟೆಯಲ್ಲಿ 3 ಮಕ್ಕಳಲ್ಲೇ ಕೊರೊನಾ ಪತ್ತೆಯಾದರೆ, ಹೊಸ 3 ಪ್ರಕರಣಗಳಲ್ಲಿ ಮಕ್ಕಳಿಂದಲೇ …

Read More »

ಏಪ್ರಿಲ್ 14ರವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. ಪರಿಸ್ಥಿತಿ ನೋಡಿ ತೀರ್ಮಾನ

ಬೆಂಗಳೂರು: ಲಾಕ್‍ಡೌನ್ ಮಧ್ಯೆ ಎಣ್ಣೆ ಬೇಕು ಎಣ್ಣೆ ಅಂತ ಗಲ್ಲಿಗಲ್ಲಿಯ ಸಂದಿ ಮೂಲೆಯಲ್ಲಿ ಸುತ್ತಾಡುತ್ತಿದ್ದ ಕುಡುಕರಿಗೆ ಅಬಕಾರಿ ಇಲಾಖೆ ಬಿಗ್‍ಶಾಕ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇತ್ತೀಚೆಗೆ ಮಾತನಾಡಿ, ಏಪ್ರಿಲ್ 14ರವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. ಏ.14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದರು. ಆದರೆ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ನಡೆಸಿದ್ದರು. ಇದಕ್ಕೆ ಬ್ರೇಕ್ ಹಾಕಲು ಅಬಕಾರಿ ಇಲಾಖೆ …

Read More »