ಬೆಂಗಳೂರು,ಏ 1-ರೈತರು ತಾವು ಬೆಳೆದ ಫಸಲನ್ನು ರಸ್ತೆಗೆ ಚೆಲ್ಲುವುದಾಗಲೀ, ನಾಶ ಮಾಡುವುದಾಗಲೀ ಮಾಡಬಾರದು. ಕೊರೋನಾ ರೋಗ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ.ಹೀಗಾಗಿ ರೈತರು ಆತುರಕ್ಕೊಳಗಾಗದೇ ತಾಳ್ಮೆಯಿಂದ ಕೃಷಿ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಿಗೆ ಮನವಿ ಮಾಡಿದ್ದಾರೆ. ರಾಯಚೂರು ಸೇರಿದಂತೆ ಬೇರೆ ಯಾವುದೇ ಭಾಗದಲ್ಲಿ ರೈತರ ಬೆಳೆ ಸಮೀಕ್ಷೆಯಾಗದೇ ಇದ್ದದ್ದು ಕಂಡುಬಂದಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಕೃಷಿ …
Read More »ಕೊರೋನಾ ಎಫೆಕ್ಟ್ : ಮಧ್ಯಂತರ ಜಾಮೀನಿನ ಮೇಲೆ 11 ಕೈದಿಗಳಿಗೆ ಬಿಡುಗಡೆ ಭಾಗ್ಯ..!
ಹುಬ್ಬಳ್ಳಿ: ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಗೆ ಒಳಗಾದವರು ಮತ್ತು ಇಷ್ಟೇ ಅವಧಿಗೆ ಶಿಕ್ಷೆಗೆ ಒಳಗಾಗುವ ಅಪರಾಧ ಪ್ರಕರಣ ಹೊಂದಿದ್ದವರ 11 ಜನ ಕೈದಿಗಳನ್ನು ಇಲ್ಲಿನ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಕೊರೊನೊ ಸೋಂಕು ವ್ಯಾಪಕವಾಗಿ ಹರಡುವ ಆತಂಕವಿರುವ ಕಾರಣ ಕಾರಾಗೃಹದಲ್ಲಿರುವ ಕೈದಿಗಳ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ಎದುರಿಸುತ್ತಿರುವ ಕೈದಿಗಳ ಪಟ್ಟಿ ಸಿದ್ಧಪಡಿಸುವಂತೆ ಎಲ್ಲ ಜೈಲುಗಳ ಮುಖ್ಯಸ್ಥರಿಗೆ ಮೇಲಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿನ …
Read More »ಲಾಕ್ಡೌನ್ನಿಂದ ಉಂಟಾದ ಸಮಸ್ಯೆಗೆ ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.
ಬೆಂಗಳೂರು, ಏ.1-ಲಾಕ್ಡೌನ್ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ’ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ. ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ …
Read More »ಲಾಕ್ ಡೌನ್ ನಿಯಮ ಮೀರಿ ರಸ್ತೆಗಿಳಿದ ಜನರ ಮೇಲೆ ವಿನಾಕಾರಣ ಲಾಠಿ ಚಾರ್ಜ್ ಮಾಡಬೇಡಿ: ಸಂತೋಷ ಜಾರಕಿಹೊಳಿ
ಲಾಕ್ ಡೌನ್ ನಿಯಮ ಮೀರಿ ರಸ್ತೆಗಿಳಿದ ಜನರ ಮೇಲೆ ವಿನಾಕಾರಣ ಲಾಠಿ ಚಾರ್ಜ್ ಮಾಡಬೇಡಿ: ಸಂತೋಷ ಜಾರಕಿಹೊಳಿ ಅಗತ್ಯ ವಸ್ತುಗಳನ್ನು ತರಲು ಹೋದವರ ಮೇಲೆ ಲಾಠಿ ಚಾರ್ಜ್ ಮಾಡಬೇಡಿ/ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದರೆ ಮಹಾಮಾರಿ ಕೊರೊನಾ ವೈರಸ್ ರೋಗವನ್ನು ನಿಯಂತ್ರಿಸಲು ಸಾಧ್ಯ/ಪೋಲಿಸರಿಗೆ ಹಾಗೂ ಸಾರ್ವಜನಿಕರಿಗೆ ಮನವಿ ಮಾಡಿದ ಸಂತೋಷ ಜಾರಕಿಹೊಳಿ ಸರ್ಕಾರ ದಿಢೀರನೆ ಲಾಕ್ ಡೌನ್ ನಿರ್ಧಾರ ಘೋಷಣೆ ಮಾಡಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಮೊದಲ ಬಾರಿ ಇಂಥದೊಂದು ಬಿಕ್ಕಟ್ಟು ಎದುರಿಸುವ ಸಂಧರ್ಭ …
Read More »ನಮಗೆ ಬಹಳ ತ್ರಾಸ ಆಗುತ್ತಿದೆ. ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ:ಸಚಿವ ಜಗದೀಶ್ ಶೆಟ್ಟರಗೆ ಕರೆ ಮಾಡ್ತಿದಾರಂತೆ ಜನ
ಬೆಳಗಾವಿ: ‘ನಮಗೆ ಬಹಳ ತ್ರಾಸ ಆಗುತ್ತಿದೆ. ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ ಎಂದು ಕೆಲವರು ನನಗೆ ಕರೆ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊರೊನಾ ವೈರಸ್ ಹತ್ತಿಕ್ಕಲು ದೇಶದಾದ್ಯಂತ ಏ.14ರವರೆಗ ಲಾಕ್ ಡೌನ್ ಘೋಷಿಸಿದೆ. ಈ ದಿನಗಳಲ್ಲಿ ಮಧ್ಯ ಕುಡಿಯದೆ ಇದ್ರೆ ಏನು ಆಗುವುದಿಲ್ಲ. ಆದರೆ ನನಗೆ ಕೆಲವರು ವೈನ್ ಶಾಪ್ ಗಳನ್ನು ಎರಡು ದಿನಗಳ …
Read More »ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಏಪ್ರಿಲ್ 14ರವರೆಗೆ ಮುಂದುವರಿಯಲಿದೆ.
ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿಯನ್ನು ಕೊಟ್ಟಿದೆ. ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಏಪ್ರಿಲ್ 14 ರವರೆಗೆ ಮದ್ಯ ಮಾರಾಟ ಬಂದ್ ಮಾಡಿ ಆದೇಶ ಹೊರಡಿಸಿದೆ. ಅಬಕಾರಿ ಇಲಾಖೆ ಆಯುಕ್ತರು ಮಾರ್ಚ್ 21 ಹೊರಡಿಸಿದ್ದ ಆದೇಶದ ಪ್ರಕಾರ ಮಾರ್ಚ್ 31ರ ಮಧ್ಯರಾತ್ರಿಗೆ ಮದ್ಯ ಮಾರಾಟ ನಿಷೇಧ ಅಂತ್ಯವಾಗಲಿತ್ತು. ಆದರೆ, ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಏಪ್ರಿಲ್ …
Read More »ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. :ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …
Read More »ಕೊರೊನಾ ಬಗ್ಗೆ ರಾಮನಗರ ಜನ ಭಯಪಡೋ ಅವಶ್ಯಕತೆಯಿಲ್ಲ: ಮಾಜಿ ಸಿಎಂ
ರಾಮನಗರ: ಕೊರೊನಾ ತಡೆಗೆ ರಾಮನಗರ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಪರಿಣಾಮವಾಗಿ ಜಿಲ್ಲೆಯಲ್ಲಿ ಈವರೆಗೆ 200ಕ್ಕೂ ಹೆಚ್ಚು ಜನರು ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಗಂಭೀರವಾದ ಪ್ರಕರಣವಾಗಲಿ, ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ. ಹೀಗಾಗಿ ಸಾರ್ವಜನಿಕರು ಭಯಭೀತರಾಗುವಂತಹ ಅವಶ್ಯಕತೆಯಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 26 ಮಂದಿ ವೈದ್ಯಾಧಿಕಾರಿಗಳು ಇದ್ದು, 4 ಜನ ವೈದ್ಯರ ಕೊರತೆ ಇದೆ. ವೈದ್ಯರ ಮೂರು ಬ್ಯಾಚ್ಗಳನ್ನು ಮಾಡಿ ಕೆಲಸ …
Read More »“ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ “
ಬೆಳಗಾವಿ – ಶಾಸಕ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಂಗಳವಾರ ವಿವಿಧೆಡೆ ಸುತ್ತಾಡಿ ಕೊರೋನಾ ಸಂಬಂಧ ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸಿದರು. ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ ನೀಡಿದ್ದರು. ಸ್ಥಳೀಯ ಆಸ್ಪತ್ರೆ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ಭೇಟಿ ನೀಡಿ, ಕೊರೋನಾ ಸಂಬಂಧ ಕೈಗೊಂಡಿರುವ ಮುನ್ನೆಚ್ಚರಿಕೆಗಳನ್ನು ವಿಚಾರಿಸಿದರು. ವೈದ್ಯರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿ ಜೊತೆ ಚರ್ಚೆ …
Read More »‘ನೀವು ಬೀದಿಗೆ ಬಂದರೆ ನಾನು ನಿಮ್ಮ ಜೊತೆ ಬರುತ್ತೇನೆ’ : ಕೊರೋನಾ ಜಾಗೃತಿಗೆ ಪೊಲೀಸರ ವಿಭಿನ್ನ ಪ್ರಯತ್ನ
ತುಮಕೂರು : ಭಾರತ ಲಾಕ್ಡೌನ್ ಆಗಿ ಇಂದಿಗೆ ಹೇಳು ದಿನ ಕಳೆಯುತ್ತಿದ್ದ ಆದರೆ ಜನರು ಮಾತ್ರ ಸರ್ಕಾರಗಳ ಆದೇಶವನ್ನು ಧಿಕ್ಕರಿಸಿ ಬೈಕುಗಳಲ್ಲಿ ಕಾರುಗಳಲ್ಲಿ ಮನಸೋಇಚ್ಛೆ ಓಡುತ್ತಿರುವುದು ಎಷ್ಟೇ ಮನವಿ ಮಾಡಿದರೂ ಜನರು ಮಾತ್ರ ಓಡಾಡುತ್ತಿರುವುದನ್ನು ಬಿಡುತ್ತಿಲ್ಲ ಇದರಿಂದ ಬೇಸತ್ತ ಅಧಿಕಾರಿಗಳು ಜನರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಹಾಗೂ ಸರ್ಕಲ್ಗಳಲ್ಲಿ ಕೊರೊನಾ ವೈರಸ್ ಬಗ್ಗೆ ಪೋಲಿಸ್ ಅದಿಕಾರಿಗಳು ಸಿಬ್ಬಂದಿಗಳು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಬರೆಹಗಳನ್ನು ಬರೆಸುವ ಮೂಲಕ ಜನರ …
Read More »
Laxmi News 24×7