Breaking News

ರಾಜ್ಯ

ನಾಳೆಯಿಂದ ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ‘ಗವಿಮಠ ರಥೋತ್ಸವ’

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಪ್ರಸಿದ್ಧಿಯ ಗವಿಸಿದ್ದೇಶ್ವರ ಮಹಾ ರಥೋತ್ಸವ ನಾಳೆ (ಸೋಮವಾರ) ಸಂಜೆ 5:30 ಗಂಟೆಗೆ ಆರಂಭವಾಗಲಿದ್ದು, ಇಡೀ ಕೊಪ್ಪಳ ನಗರಿ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಮೇಘಾಲಯ ರಾಜ್ಯಪಾಲರಿಂದ ಚಾಲನೆ: ಮಹಾರಥೋತ್ಸವಕ್ಕೆ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಚಾಲನೆ ನೀಡಲಿದ್ದಾರೆ. ಮಹಾರಥೋತ್ಸವದ ನಂತರ ಮಠದ ಕೈಲಾಸ ಮಂಟಪದಲ್ಲಿ ನಡೆಯುವ ಭಕ್ತ ಹಿತಚಿಂತನಾ ಸಭೆಯಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಹಾಸಂಸ್ಥಾನ ಮಠದ ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಕಾಗಿನೆಲೆಯ ಮಹಾಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಕಾಖಂಡಕಿ ಗುರುದೇವಾಶ್ರಮದ …

Read More »

23ನೇ ಚಿತ್ರಸಂತೆ ಉದ್ಘಾಟನೆ: ಸಿಎಂ ಚಿತ್ರ ಬಿಡಿಸಿ ಗಿಫ್ಟ್ ಕೊಟ್ಟ ಕಲಾವಿದರು- ಫೋಟೋಗಳು

ಬೆಂಗಳೂರು: ನಗರದ ಕುಮಾರಕೃಪಾ ರಸ್ತೆಯಲ್ಲಿನ ಚಿತ್ರಕಲಾ ಪರಿಷತ್​​ನಲ್ಲಿ ಆಯೋಜಿಸಿರುವ ಪ್ರತಿಷ್ಟಿತ 23ನೇ ಚಿತ್ರಸಂತೆಯನ್ನು ಕ್ವಾನ್ವಸ್ ಮೇಲೆ ಬರೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಈ ಮೂಲಕ 8ನೇ ಬಾರಿ ಚಿತ್ರಸಂತೆಗೆ ಅವರು ಚಾಲನೆ ನೀಡಿದಂತಾಯಿತು. ಬಳಿಕ ಮಾತನಾಡಿದ ಸಿಎಂ, “ಅತ್ಯಂತ ಸಂತೋಷದಿದ 23ನೇ ಚಿತ್ರಸಂತೆ ಉದ್ಘಾಟಿಸಿದ್ದೇನೆ. ಇದು ನಾನು 8ನೇ ಬಾರಿ ಚಿತ್ರಸಂತೆಯಲ್ಲಿ ಭಾಗವಹಿಸುತ್ತಿರುವುದು. ಕಲಾವಿದರನ್ನು ಪ್ರೋತ್ಸಾಹಿಸಲು ಚಿತ್ರ ಪ್ರದರ್ಶನ ಹಾಗೂ ಮಾರಾಟದ ವೇದಿಕೆಯನ್ನು ಚಿತ್ರಕಲಾ ಪರಿಷತ್ ಅನೇಕ ವರ್ಷದಿಂದ …

Read More »

ನಿಧಿಗಾಗಿ 8 ತಿಂಗಳ ಗಂಡು ಮಗು ಬಲಿ ಕೊಡಲು ಯತ್ನ! ಮನೆಯಲ್ಲಿ ಗುಂಡಿ ತೋಡಿರುವುದು ಪತ್ತೆ

ಬೆಂಗಳೂರು(ಹೊಸಕೋಟೆ): ನಿಧಿ ಆಸೆಗೆ 8 ತಿಂಗಳ ಗಂಡು ಮಗುವನ್ನು ಬಲಿ ಕೊಡುವ ಯತ್ನ ನಡೆಯುತ್ತಿದೆ ಎಂಬ ದೂರಿನ ಮೇಲೆ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ತಂಡ ದಾಳಿ ಮಾಡಿ, ಮಗುವನ್ನು ರಕ್ಷಿಸಿದ ಘಟನೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೊನಿಯಲ್ಲಿ ನಡೆದಿದೆ. ಸೈಯದ್ ಇಮ್ರಾನ್ ಎಂಬಾತನ ಮನೆ ಮೇಲೆ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಲೈನ್, ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಸೂಲಿಬೆಲೆ ಪೊಲೀಸರು ದಾಳಿ ಮಾಡಿದ್ದಾರೆ.ಈ ಕುರಿತು …

Read More »

ಇದು ‘ನೇಣು ಭಾಗ್ಯದ ಸರ್ಕಾರ’

ಇದು ‘ನೇಣು ಭಾಗ್ಯದ ಸರ್ಕಾರ’ ಬಳ್ಳಾರಿ ಘಟನೆಯಲ್ಲಿ ಎಸ್ಪಿಯಲ್ಲ… ಗೃಹ ಸಚಿವರು ಮತ್ತು ಝಮೀರ್ ಅಹ್ಮದರನ್ನು ಅಮಾನತ್ತು ಮಾಡಬೇಕಿತ್ತು; ಆರ್.ಅಶೋಕ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬಳ್ಳಾರಿ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಿರುವುದು ತಪ್ಪು ನಿರ್ಧಾರ. ಬದಲಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಅಮಾನತು ಮಾಡಬೇಕಿತ್ತು. ಇದು ‘ನೇಣು ಭಾಗ್ಯದ ಸರ್ಕಾರ’ ಎಂದು ರಾಜ್ಯ …

Read More »

ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ

ಇಂದು ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,   ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಚಾರಗಳ ಕುರಿತು ಚರ್ಚೆ ನಡೆಸಿದರು ಈ ವೇಳೆ ವಿ.ಪ. ಸದಸ್ಯೆ ಬಿಲ್ಕಿಸ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. #SatishJarkiholi #shivamogga

Read More »

ಹೈದರಾಬಾದ್‌ನಲ್ಲಿ ಸುಧಾರಿತ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಗಳ ಅಧ್ಯಯನ – ಬೆಳಗಾವಿ ಆಯುಕ್ತ ಕಾರ್ತಿಕ್ ಎಂ. ಭೇಟಿ

ಹೈದರಾಬಾದ್‌ನಲ್ಲಿ ಸುಧಾರಿತ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಗಳ ಅಧ್ಯಯನ – ಬೆಳಗಾವಿ ಆಯುಕ್ತ ಕಾರ್ತಿಕ್ ಎಂ. ಭೇಟಿ ಹೈದರಾಬಾದ್ / ಬೆಳಗಾವಿ:ಸ್ವಚ್ಛ ಭಾರತ ಮಿಷನ್ (ನಗರ)–2.0ರ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮದ ಭಾಗವಾಗಿ, ಕರ್ನಾಟಕ ಸ್ವಚ್ಛ ಭಾರತ ಮಿಷನ್ (ನಗರ) ರಾಜ್ಯ ನಿರ್ದೇಶಕರಾದ ಡಾ. ಆರ್. ಸೆಲ್ವಮಣಿ, ಐಎಎಸ್ ಅವರ ನೇತೃತ್ವದಲ್ಲಿ ಕರ್ನಾಟಕದ ವಿವಿಧ ನಗರಗಳ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ತಂಡ ಹೈದರಾಬಾದ್‌ಗೆ ಅಧ್ಯಯನ ಪ್ರವಾಸ ಕೈಗೊಂಡಿತು. ಈ ತಂಡದಲ್ಲಿ ಬೆಳಗಾವಿ …

Read More »

ಅಕ್ರಮ ಮರಳು ಅಡ್ಡೆಗಳ ಮೇಲೆ ಬೆಂಗಳೂರು ಲೋಕಾಯುಕ್ತರ ಅನಿರೀಕ್ಷಿತ ದಾಳಿ

ಅಕ್ರಮ ಮರಳು ಅಡ್ಡೆಗಳ ಮೇಲೆ ಬೆಂಗಳೂರು ಲೋಕಾಯುಕ್ತರ ಅನಿರೀಕ್ಷಿತ ದಾಳಿ ಸ್ಥಳೀಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಲೋಕಾಯುಕ್ತರು!!! ಹುನಗುಂದ ಮತ್ತು ಇಳಕಲ್ ತಾಲೂಕುಗಳಲ್ಲಿ ಅವ್ಯಾಹತ ಮರಳು ದಂಧೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಮತ್ತು ಇಳಕಲ್ ತಾಲೂಕುಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಬೆಂಗಳೂರಿನ ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸುವ ಮೂಲಕ ಬ್ರೇಕ್ ಹಾಕಿದೆ. ಸ್ಥಳೀಯ ಅಧಿಕಾರಿಗಳು ಈ ದಂಧೆಗೆ ಸಾಥ್ ನೀಡುತ್ತಿರುವ ಶಂಕೆಯ ಹಿನ್ನೆಲೆಯಲ್ಲಿ, ಜಿಲ್ಲಾ ಅಧಿಕಾರಿಗಳಿಗೂ …

Read More »

ರಾಜ್ಯ ಬರಹಗಾರರ ಸಂಘದಿಂದ ಸಾವಿತ್ರಿಬಾಯಿ ಫೂಲೆ ಜಯಂತಿ

ರಾಜ್ಯ ಬರಹಗಾರರ ಸಂಘದಿಂದ ಸಾವಿತ್ರಿಬಾಯಿ ಫೂಲೆ ಜಯಂತಿ ಮಹಿಳಾ ಸಾಕ್ಷರತೆಗೆ ಒತ್ತು ನೀಡಿದವರಿಗೆ ಪ್ರಶಸ್ತಿ ಪ್ರದಾನ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫೂಲೆ ಅವರ ಜಯಂತಿಯ ನಿಮಿತ್ಯ ಮಹಿಳಾ ಸಾಕ್ಷರತೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯ ಶಿಕ್ಷಕೀಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫೂಲೆ ಅವರ …

Read More »

ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ ಬ್ರೈಲ್ ಅವರ 217ನೇ ಜನ್ಮದಿನಾಚರಣೆ

ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ ಬ್ರೈಲ್ ಅವರ 217ನೇ ಜನ್ಮದಿನಾಚರಣೆ ವೈಯಕ್ತಿಕ ಬದುಕಿಗಿಂತ ಸಮಾಜಕ್ಕಾಗಿ ದುಡಿದು ಮಹಾತ್ಮರೆನಿಸಿಕೊಂಡವರು “ ಲೂಯಿ ಬ್ರೈಲ್”; ರಮೇಶ್ ಸಂಕರೆಡ್ಡಿ ವೈಯಕ್ತಿಕ ಬದುಕಿಗಿಂತ ಸಮಾಜಕ್ಕಾಗಿ ದುಡಿದವರು ಕೇಲವೇ ಕೆಲವು ಮಹಾತ್ಮಾರಿದ್ದಾರೆ. ಅವರಲ್ಲಿ ಲೂಯಿ ಬ್ರೈಲ್ ಅವರು ಸಮಾಜದ ಕಲ್ಯಾಣಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟ ಮಹಾತ್ಮರು ಎಂದು ಪ್ರಾಧ್ಯಾಪಕ ರಮೇಶ್ ಸಂಕರೆಡ್ಡಿ ಅಭಿಪ್ರಾಯಪಟ್ಟರು. ಬೆಳಗಾವಿಯ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ …

Read More »

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ ‘ಹಮಾರಾ ದೇಶ್’ ಸಂಘಟನೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಹಿಂದೂಗಳ ರಕ್ಷಣೆಗಾಗಿ ರಾಷ್ಟ್ರಪತಿಗಳ ಹಸ್ತಕ್ಷೇಪಕ್ಕೆ ಆಗ್ರಹ ಅಲ್ಪಸಂಖ್ಯಾತ ಹಿಂದೂಗಳ ಸುರಕ್ಷತೆಗಾಗಿ ಜಾಗತಿಕ ಮಟ್ಟದಲ್ಲಿ ಒತ್ತಡ ಹೇರಲು ಮನವಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ‘ಹಮಾರಾ ದೇಶ್’ ಸಂಘಟನೆಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ …

Read More »