Breaking News

ರಾಜ್ಯ

ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತ: ಶಾಸಕ ರಮೇಶ್ ಜಾರಕಿಹೊಳಿ

ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತವಾಗಿದ್ದು ಎಚ್.ವಿಶ್ವನಾಥ್ ಅವರನ್ನು ಮಂತ್ರಿ ಮಾಡಲು ನಾವೆಲ್ಲ ಪ್ರಯತ್ನಿಸುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು.. ಶಾಸಕರಾದ ಮಹೇಶ್ ಕುಮಠಹಳ್ಳಿ, ಶ್ರೀಮಂತ ಪಾಟೀಲ್, ಮಾಜಿ ಸಚಿವ ಆರ್.ಶಂಕರ್ ಜೊತೆ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ಸಿಎಂ ಯಡಿಯೂರಪ್ಪ ಹೇಳಿದ್ದು ನಿಜ. ಅವರು ನಮ್ಮ ನಾಯಕರು. ನಮ್ಮ …

Read More »

ಐಎಂಎ ಬಹುಕೋಟಿ ವಂಚನೆ ಪ್ರಕರಣ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ

ಬೆಂಗಳೂರು,ಜ.29- ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಕ್ಕೆ ಸಿಲುಕಿರುವ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿಗೆ ಸಂಕಷ್ಟ ಎದುರಾಗಿದೆ. ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಐಎಂಎ ಪ್ರಕರಣದಲ್ಲಿ ಆರೋಪಿ ಮನ್ಸೂರ್‍ಖಾನ್‍ಗೆ ಸಹಾಯ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಬಿಐ, ಇಬ್ಬರು ಅಧಿಕಾರಿಗಳ ವಿರುದ್ಧ …

Read More »

ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್

ಬೆಂಗಳೂರು: ಆತನದ್ದು ತೀರ ಬಡ ಕುಟುಂಬ. ಮನೆಯಲ್ಲಿ ಹೆಚ್ಚು ಕಲಿತವರಿಲ್ಲ. ಸರ್ಕಾರಿ ನೌಕರಿ ಅಂದ್ರೆ ದೊಡ್ಡದು, ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್ ಪಾಸ್ ಆಗುವ ಹಂತದಲ್ಲಿ ಇದ್ದಾನೆಂದ್ರೆ ಸಂತಸಕ್ಕೆ ಪಾರವೇ ಇಲ್ಲ. ಹೌದು, ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಧು ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ಪಾಸಾಗಿದ್ದು, ಸಂದರ್ಶನಕ್ಕೆ ಕಾಯುತ್ತಿದ್ದಾರೆ. ದಿನಕ್ಕೆ ಎಂಟು ಗಂಟೆ ಕಂಡಕ್ಟರ್ ಕೆಲಸ ಮಾಡುತ್ತಿದ್ದ ಮಧು …

Read More »

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …

Read More »

ಖಾಸಗಿಯವರ ಪಾಲಾಗಿದೆ ಜನ ಔಷಧಿ ಕೇಂದ್ರ- ಔಷಧಗಳು ನೋ ಸ್ಟಾಕ್!

ಕಾರವಾರ: ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯಲಿ ಅನ್ನೋ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಜನ ಔಷಧಿ ಎನ್ನುವ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಈ ಕೇಂದ್ರಗಳಲ್ಲಿ ಜನರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯುತ್ತಿಲ್ಲ ಅನ್ನೋದಕ್ಕೆ ಜಿಲ್ಲೆಯ ಹಲವಾರು ಕೇಂದ್ರಗಳು ಸಾಕ್ಷಿಯಾಗಿವೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಕೂಡ ಜನ ಔಷಧಿ ಕೇಂದ್ರಗಳನ್ನ ತೆರೆಯಲಾಗಿದೆ. ಈ ಕೇಂದ್ರಗಳೆಲ್ಲ ಖಾಸಗಿಯವರ ಸಹಭಾಗಿತ್ವದಲ್ಲಿ ನಡೆಸಲ್ಪಡುತ್ತಿವೆ. ಈ ಕೇಂದ್ರಗಳಲ್ಲಿ ಜನ ಔಷಧಿ ಮಾರ್ಕಿನ ಔಷಧಗಳು ದೊರೆಯುತ್ತಿಲ್ಲ …

Read More »

ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ

ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ ಬಂಗಾರಪೇಟೆ ತಾಲ್ಲೂಕು ಹುಲಿಬೆಲೆ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ನಿನ್ನೆ ರಾತ್ರಿ ನಾಯಿಯೊಂದು ಸತ್ತಿದ್ದು, ಇದುವರೆಗೂ ತೆರವುಗೊಳಿಸುವಲ್ಲಿ ಗ್ರಾಮ ಪಂಚಾಯ್ತಿ ವಿಫಲವಾಗಿದೆ. ವಿಪರ್ಯಾಸ ಎಂದರೆ ನಾಯಿ ಸತ್ತ ಸ್ಥಳದಲ್ಲೇ ಅಂಗನವಾಡಿ ಕೇಂದ್ರವಿದ್ದು, ವಾಸನೆಯಿಂದ ಮಕ್ಕಳು ಹೈರಾಣಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗನವಾಡಿ ಕಾರ್ಯಕರ್ತೆ, ಪಂಚಾಯಿತಿಗೆ ಮಾಹಿತಿ ನೀಡಲಾಗಿದೆ. ಸತ್ತ …

Read More »

ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ.

  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದತಪ್ಪಿನಿಂದ ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್   ಬಾಗಲಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದ ತಪ್ಪಿನಿಂದ ವಿಲಾಸಿ ಜೀವನ ನಡೆಸುತ್ತಿದ್ದ ನೆಹರು ಅಂತಹ ಓರ್ವ ಅಯೋಗ್ಯ ವ್ಯಕ್ತಿ ಈ ದೇಶದ ಮೊದಲ ಪ್ರಧಾನಿಯಾದರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ. …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ;

ಹುಬ್ಬಳ್ಳಿ, ಜ.28- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ; ಆರೋಪ ಸಾಬೀತುಪಡಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿರುದ್ಧ ಹೋರಾಟ ನಡೆಸಲು ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ತಿಳಿಸಿದರು.  ಸಿಎಎ ಸಂವಿಧಾನಕ್ಕೆ ವಿರುದ್ಧವಾದಂತಹ ಕಾಯಿದೆ. ಜಾತಿ, ಧರ್ಮ ಆಧಾರದ ಮೇಲೆ ಈ …

Read More »

ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ. ಅವರಿಗೆ 80ವರ್ಷ ವಯಸ್ಸಾಗಿತ್ತು. ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. 1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ …

Read More »

ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸುಖಿ.ವಿ, ಬೀದಿ ನಾಟಕದ ಮೂಲಕ ಸ್ವಚ್ಚತೆಯ ಅರಿವು ಮೂಡಿಸಿದ ಬಿ.ಆರ್.ಪ್ರತ್ಯಕ್ಷಾ ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಲಾಯಿತು.

  ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು …

Read More »