Breaking News

ರಾಜ್ಯ

ಮುಗಳಖೋಡ ಮಠದಲ್ಲಿ ಭಜ೯ರಿಯಾಗಿ ನಡೆದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ : ಬ್ರಹ್ಮಾಂಡ ಗುರೂಜಿ ಉಪಸ್ಥಿತಿ

ಮುಗಳಖೋಡ ಮಠದಲ್ಲಿ ಭಜ೯ರಿಯಾಗಿ ನಡೆದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ : ಬ್ರಹ್ಮಾಂಡ ಗುರೂಜಿ ಉಪಸ್ಥಿತಿ ಬೆಳಗಾವಿ: ಇಂದು ರಾಯಬಾಗ ತಾಲೂಕಿನ ಮುಗಳಖೋಡದ ಜಿಡಗಾ ಮಠದಲ್ಲಿ, ಈ ವಷ೯ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಾಯಬಾಗ ತಾಲೂಕು ಸೇರಿದಂತೆ ಇತರೆಡೆಯಿಂದ ಸುಮಾರು ೧೦ ಸಾವಿರಕ್ಕೂ ಹೆಚ್ಚು ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸಿದರು. ಮಠದ ಹೆಲಿಪ್ಯಾಡ ಆವರಣದಲ್ಲಿ ನಿಮಿ೯ಸಲಾಗಿದ್ದ ಮಂಟಪದಲ್ಲಿ ಹಳ್ಳಿ …

Read More »

ಕಾಂಗ್ರೆಸ್ ನಲ್ಲಿ ಮೂರು ಗುಂಪುಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ.

ಕೋಲಾರ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿದ್ದು, ಈ ಗುಂಪುಗಾರಿಕೆಯೇ ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಹೈಕಮಾಂಡ್​ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ. ರಾಜ್ಯ ಕಾಂಗ್ರೆಸ್​ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಎಂಬ ಮೂರು ಗುಂಪುಗಳಿದ್ದು, ಅಕ್ಷರಶಃ ಮನೆಯೊಂದು …

Read More »

ನಮಗೆ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿದೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಟಾಂಗ್ ನೀಡಿದರು.

ಹಾಸನ: ಸಿಎಂ ಬಿ ಎಸ್ ಯಡಿಯೂರಪ್ಪ ಮೂರುವರೆ ವರ್ಷದ ಬಳಿಕ ಚುನಾವಣಾ ನಿವೃತ್ತಿ ಹೊಂದುತ್ತಾರೆ ಎಂಬ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಮಾಧುಸ್ವಾಮಿ, ನಮ್ಮ ಬಳಿಯಾಗಲಿ ಅಥಾವ ಯಾವುದೇ ಸಭೆಯಲ್ಲಾಗಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಯಡಿಯೂರಪ್ಪ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ …

Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ

; ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಲ್ಯಾಪ್ ಟಾಪ್ ಬ್ಯಾಗ್ ಒಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಪತ್ತೆಯಾಗಿತ್ತು. ಈ ಬ್ಯಾಗ್ ನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಅದರಲ್ಲಿ ಸಜೀವ ಬಾಂಬ್ ಇರುವುದು ಗೊತ್ತಾಗಿದೆ. ತಕ್ಷಣ ಬ್ಯಾಗ್ ನ್ನು ವಿಮಾನ ನಿಲ್ದಾಣದ ಹೊರಗೆ ತಂದು ಸುರಕ್ಷಿತ ಸ್ಥಳದಲ್ಲಿ ಇರಿಸಿದ್ದಾರೆ. …

Read More »

ಶಾ ಕಾರ್ಯಕ್ರಮದ ಸಂದರ್ಭ ತೇಜಸ್ವಿಸೂರ್ಯ ವಾಟ್ಸಪ್ ಅಕೌಂಟ್ ಡಿಲೀಟ್

ಶಾ ಕಾರ್ಯಕ್ರಮದ ಸಂದರ್ಭ ತೇಜಸ್ವಿಸೂರ್ಯ ವಾಟ್ಸಪ್ ಅಕೌಂಟ್ ಡಿಲೀ ಬೆಂಗಳೂರು, ಜ.19: ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ವಾಟ್ಸಪ್ ಗ್ರೂಪ್‌ನಿಂದ ಎಕ್ಸಿಟ್ ಆಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿಸೂರ್ಯ, ಇದೀಗ ತಮ್ಮ ವಾಟ್ಸಪ್ ಖಾತೆಯನ್ನೇ ಅಳಿಸಿ ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಜಯನಗರದಲ್ಲಿ ತಮ್ಮ ಕಚೇರಿ ಉದ್ಘಾಟನೆಗೆ ಮಾಧ್ಯಮ ಪ್ರತಿನಿಧಿಗಳನ್ನು ಆಹ್ವಾನಿಸಿ, ಕೊನೆ ಕ್ಷಣದಲ್ಲಿ ಭದ್ರತಾ ನೆಪ ಹೇಳಿ ಮಾಧ್ಯಮಗಳಿಗೆ ನಿಷೇಧ ಹೇರಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ …

Read More »

ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ: ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾವಿರಾರು ಸಂಖ್ಯೆಯಲ್ಲಿ ನೊಂದಾಯಿತ ಪ್ರತಿನಿಧಿಗಳು ಆಗಮಿಸಲಿದ್ದು, ಅವರಿಗೆ ಟ್ರಾವೆಲಿಂಗ್ ಬ್ಯಾಗ್ ನೀಡುವ ಸಂದರ್ಭದಲ್ಲಿ ಯಾವುದೇ ಗೊಂದಲವಾಗದಂತೆ ಸೂಕ್ತ ಭದ್ರತಾ ಸಿಬ್ಬಂದಿ ನೇಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಾಹಿತ್ಯ ಸಮ್ಮೇಳನದ ನೋಂದಣಿ ಸಮಿತಿ ಅಧ್ಯಕ್ಷ ತಿಪ್ಪಣಪ್ಪ ಕಮಕನೂರ್ ತಿಳಿಸಿದರು. ನಗರದ …

Read More »

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು. ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ …

Read More »

ಶಿರಡಿ ಬಂದ್, ಬಾಬಾ ದರ್ಶನಕ್ಕೆ ಇಲ್ಲ ಯಾವುದೇ ಅಡ್ಡಿ

ಶಿರಡಿ/ನಾಸಿಕ್, ಜ.19- ಸದ್ಗುರು ಸಾಯಿಬಾಬಾ ಜನ್ಮ ಸ್ಥಳ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಡೆಸುತ್ತಿರುವ ಶಿರಡಿ ಬಂದ್ ಹೊರತಾಗಿಯೂ ಬಾಬಾ ಮಂದಿರ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿರುತ್ತದೆ ಎಂದು ದೇಗುಲದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಶಿರಡಿ ಅನಿರ್ದಿಷ್ಟಾವಧಿ ಬಂದ್ ಕರೆಯಿಂದಾಗಿ ಆತಂಕಗೊಂಡಿದ್ದ ಸಹಸ್ರಾರು ಸಾಯಿಬಾಬಾ ಭಕ್ತರಿಗೆ ಇದರಿಂದ ನಿರಾಳ ದೊರೆತಂತಾಗಿದೆ. ಉದ್ಧವ್ ಠಾಕ್ರೆ ಪರ್ಬಾನಿಯ ಪತ್ರಿ ಗ್ರಾಮ ಸಾಯಿ ಬಾಬಾ ಜನ್ಮಸ್ಥಳ ಎಂದಿದ್ದಲ್ಲದೆ, ಇದರ …

Read More »

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ……..

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಳೆದ ರಾತ್ರಿ ಜನಿಸಿದ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯಲ್ಲಿ ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಅಮಿತ್ ಶಾ ಉಪಹಾರಕ್ಕೆ ಆಗಮಿಸಿದ್ದರು. ಈ ವೇಳೆ ಅಮಿತ್ ಶಾ ಅವರು ಜೋಶಿ ಮನೆಯಲ್ಲಿ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು. ಹುಬ್ಬಳ್ಳಿ ಚಿಟಗುಪ್ಪಿ …

Read More »

ಪೌರತ್ವ ಕೇವಲ ಹಕ್ಕು ಮಾತ್ರವಲ್ಲ ಸಮಾಜದ ಕರ್ತವ್ಯ! ನ್ಯಾಯಮೂರ್ತಿ ಶರತ್ ಎ. ಬೊಬ್ಡೆ

ನಾಗ್ಪುರ, ಜ.19-ಪೌರತ್ವ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕರೂ ಸಮಾಜದಲ್ಲಿ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರತ್ ಎ. ಬೊಬ್ಡೆ ಹೇಳಿದ್ದಾರೆ. ನಾಗ್ಪುರದ ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗಪುರ ಯುನಿವರ್ಸಿಟಿ (ಆರ್‍ಟಿಎಂಎನ್‍ಯು) 107ನೇ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ಮಾತನಾಡಿದರು. ಪೌರತ್ವವನ್ನು ಯಾರೂ ಕೂಡ ಕೇವಲ ಹಕ್ಕು ಎಂದು ತಿಳಿಯಬಾರದು. ಇದು ಹಕ್ಕಿಗಿಂತಲೂ ನಾವು ಜವಾಬ್ದಾರಿಯುತ ಪ್ರಜೆಗಳಾಗಿ ಸಮಾಜದ ಕಡೆಗೆ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ …

Read More »