Breaking News

ರಾಜ್ಯ

ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ

ಮೂಡಲಗಿ : ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಡಾ.ಬಿ. ಆರ್.ಅಂಬೇಡ್ಕರ ಸಮುದಾಯ ಭವನ ಗಂಗಾನಗರದಲ್ಲಿ ತಾತ್ಕಾಲಿಕವಾಗಿ ಕಛೇರಿ ಪ್ರಾರಂಭಿಸುವದಾಗಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದರು. ಅವರು ಬುಧವಾರ ಪಟ್ಟಣನದಲ್ಲಿ ನೂತನ ತಾಲೂಕು ಪಂಚಾಯತ ಕಾರ್ಯಾಲಯವನ್ನು ಪ್ರಾರಂಭಿಸುವ ಸಲುವಾಗಿ ಭೇಟಿ ನೀಡಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಉಪಸ್ಥಿತಿಯಲ್ಲಿ ಇದೇ ಭಾನುವಾರ …

Read More »

ಸರ್ಕಾರಿ ಆಸ್ಪತ್ರೆಗಳ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು: ಡಿಸಿಎಂ ಅಶ್ವತ್ಥ ನಾರಾಯಣ್

  ಮೈಸೂರು, ಜ.23- ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಕಾತೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ನಗರದ ವೈದ್ಯಕೀಯ ಮಹಿಳಾ ಯುಜಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯ ಆವರಣದಲ್ಲಿಂದು ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ …

Read More »

ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ. ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ ಎಂದಿದ್ದಾನೆ.

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಪೊಲೀಸರ ಮುಂದೆ ಶರಣಾಗಿದ್ದು, ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಇದರ ಬೆನ್ನಲ್ಲೇ ಆತನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದ್ದ ಬೆನ್ನಲ್ಲೇ ಅಂದು ಮಧ್ಯಾಹ್ನ 2.30ಕ್ಕೆ ಇಂಡಿಗೋ ವಿಮಾನ ಸಂಸ್ಥೆಯ ಮ್ಯಾನೇಜರ್​ಗೆ ಅನಾಮಧೇಯ ಕರೆಯೊಂದು ಬಂದಿತ್ತು. ಮಂಗಳೂರಿನಿಂದ ಹೈದರಾಬಾದ್​ಗೆ ತೆರಳುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿ ಬೆದರಿಕೆಯೊಡ್ಡಿದ್ದ. ವಿಷಯ …

Read More »

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್.

ಮತಕ್ಷೇತ್ರದ ಅಭಿವೃದ್ಧಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿಗಳು 110 ಕೋಟಿ ಬಿಡುಗಡೆ ಮಾಡಿದ್ದಾರೆ ಶಾಸಕ ಶ್ರೀಮಂತ ಪಾಟೀಲ್. ಕಾಗವಾಡ ಮತ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಇಲ್ಲಿಯವರೆಗೆ ಸುಮಾರು 110 ಕೋಟಿ ಅನುದಾನವನ್ನು ಕೊಟ್ಟಿದ್ದು ಅದರಿಂದ ಗ್ರಾಮೀಣ ಭಾಗದ ಕುಡಿಯುವ ನೀರು, ತೋಟದ ರಸ್ತೆ,ಕೆರೆಗಳ ಅಭಿವೃದ್ಧಿ, ಚರಂಡಿ, ಸ್ಮಶಾನ ದೇವಸ್ಥಾನ ಹೀಗೆ ಗ್ರಾಮೀಣ ಭಾಗಗಳನ್ನು ಸಮಸ್ಯೆಗಳು ನನ್ನ ಅವಧಿಯಲ್ಲಿ ಒಂದು ಕಾಣದಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಹೇಳಿದರು …

Read More »

ಸಿಎಎ ಮತ್ತು ಎನ್ಆರ್‌ಸಿ ವಿರೋಧಿಸಿಶಿವಾಜಿನಗರ ಇಂದು ಸಂಪೂರ್ಣ ಸ್ತಬ್ಧ……

ಬೆಂಗಳೂರು, ಜ.21- ಸಿಎಎ ಮತ್ತು ಎನ್ಆರ್‌ಸಿ ವಿರೋಧಿಸಿ ಬೆಂಗಳೂರಿನ ಪ್ರಮುಖ ವಾಣಿಜ್ಯ ಚಟುವಟಿಕೆ ಕೇಂದ್ರವಾದ ಶಿವಾಜಿನಗರ ಇಂದು ಸಂಪೂರ್ಣ ಸ್ತಬ್ಧವಾಗಿತ್ತು. ಸುಮಾರು ಐದು ಸಾವಿರಕ್ಕೂ ಹೆಚ್ಚು ಅಂಗಡಿ-ಮುಂಗಟ್ಟುಗಳು, ಫುಟ್‍ಪಾತ್ ವ್ಯಾಪಾರಿಗಳು ತಮ್ಮ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿ ಬಂದ್‍ಗೆ ಬೆಂಬಲ ನೀಡಿದ್ದರು. ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಕಂಟೋನ್ಮೆಂಟ್‍ನ 9 ಮಾರುಕಟ್ಟೆಗಳು ಬಂದ್‍ನಿಂದ ಬಿಕೋ ಎನ್ನುತ್ತಿದ್ದವು. ನಾಲಾ ವೆಜಿಟೆಬಲ್ ಮಾರ್ಕೆಟ್, ಈವಿನಿಂಗ್ ಬಜಾರ್, ಗುಜರಿ ಮಾರುಕಟ್ಟೆ, ಬಂಡಿಮೋಟಾ ಮಾರ್ಕೆಟ್, ಸ್ಟೀಫನ್ ಸ್ಟೋರ್, ಸೆಂಟ್ರಲ್ ಸ್ಟ್ರೀಟ್ …

Read More »

ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಸೂಪರ್‍ ಸ್ಟಾರ್ ರಜನಿಕಾಂತ್

ಚೆನ್ನೈ, ಜ.21- ದ್ರಾವಿಡ ಚಳವಳಿಯ ಪಿತಾಮಹ ಪೆರಿಯಾರ್ ವಿರುದ್ಧ ಹೇಳಿಕೆ ನೀಡಿ ಅವರ ವರ್ಚಸ್ಸಿಗೆ ಧಕ್ಕೆ ತಂದಿರುವ ಸೂಪರ್‍ ಸ್ಟಾರ್ ರಜನಿಕಾಂತ್ ಅವರು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದ ದ್ರಾವಿಡರ್ ವಿದುತಲೈ ಕಳಗಂ ಸಂಘಟನೆಯ ಸದಸ್ಯರಿಗೆ ರಜನಿ ತಮ್ಮ ಶೈಲಿಯಲ್ಲೇ ಜವಾಬು ನೀಡಿರುವುದೇ ಅಲ್ಲದೆ ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಜನಿ ಅವರು ಸಮಾರಂಭವೊಂದರಲ್ಲಿ 1971ರಲ್ಲಿ ಸಮಾಜ ದಲ್ಲಿನ ಮೌಢ್ಯತೆ ನಿರ್ಮೂಲನೆ ಯನ್ನು ಹೋಗಲಾಡಿಸಲು ಪೆರಿಯಾರ್ ಅವರು ಸಾಕಷ್ಟು …

Read More »

ಯಮಕನಮರಡಿ ವೈ.ವಿ.ಎಸ್ ಶಾಲಾ ಆವರಣದಲ್ಲಿ ನೃತ್ಯೋತ್ಸವ…..

ಯಮಕನಮರಡಿ ವೈ.ವಿ.ಎಸ್ ಶಾಲಾ ಆವರಣದಲ್ಲಿ ಯ.ವಿ ಸಂಘದ ಪೂರ್ವ-ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವತಿಯಿಂದ ನಡೆದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಾಗೂ ಅವರು ಅತ್ಯಂತ ಗೌರವದಿಂದ ಮಾಡಿದ ಸನ್ಮಾನವನ್ನು ಪ್ರೀತಿಯಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ. ಬಿ. ಹಂಜಿ, ಉಪಾಧ್ಯಕ್ಷರಾದ ಶ್ರೀ ರಾಮಗೊಂಡಾ …

Read More »

ಜನ ಸಂಪರ್ಕ ಸಭೆ 20-01-2020 ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದ ರವಿ ಡಿ ಚೆನ್ನಣ್ಣನವರ್,

ಜನ ಸಂಪರ್ಕ ಸಭೆ 20-01-2020 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ರವಿ ಡಿ ಚೆನ್ನಣ್ಣನವರ್, ಐ.ಪಿ.ಎಸ್, ರವರು ಇಂದು ನಂದಗುಡಿಯಲ್ಲಿ ಜನ ಸಂಪರ್ಕ ಸಭೆ ನಡೆಸಿದರು ಸಾರ್ವಜನಿಕರು ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ಟ್ರಾಫಿಕ್ ಸಮಸ್ಯೆ ಮತ್ತು ಗಾಂಜಾ ಹಾವಳಿ ಬಗ್ಗೆ ದೂರಿದರು ಸ್ಥಳದಲ್ಲೇ ಉಪಸ್ಥಿತರಿದ್ದ ಪಿ.ಎಸ್.ಐ ಮತ್ತು ಸಿ.ಪಿ.ಐ ರವರಿಂದ ಸಮಸ್ಯೆಯ ಪರಿಹಾರದ ಬಗ್ಗೆ ಸಾರ್ವಜನಿಕರಿಗೆ ಭರವಸೆ ನೀಡಿದರು, ಹಾಗೆಯೇ ಜಿಲ್ಲೆಯ ಹೆಚ್ಚುವರಿ ಅಧೀಕ್ಷಕರಾದ …

Read More »

 ಸೊಲ್ಲಾಪುರದ ಮಹಾನಗರದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ

”ಟಿಇಟಿ ತಪ್ಪಾಗಿ ಪ್ರಕಟವಾದ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆಗಳು” ಸೊಲ್ಲಾಪುರದ ಮತ್ತೆ ಮಹಾನಗರದಲ್ಲಿ ಕನ್ನಡಿಗರಿಗೆ ಅವಮಾನ 1 ರಲ್ಲಿ 30 ಅಂಕ ಮತ್ತು ಪೇಪರ್ 2 ರಲ್ಲಿ 30 ಅಂಕ ಹೀಗೆ ಒಟ್ಟು 60 ಅಂಕಗಳ ಕನ್ನಡ ಭಾಷೆಯ ಪ್ರಶ್ನೆಗಳು ತಪ್ಪಾಗಿ ಪ್ರಕಟಗೊಂಡಿದ್ದು ರಿಂದ ಮರುಪರೀಕ್ಷೆ ಹೌದು ಮಹಾರಾಷ್ಟ್ರ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹುದ್ದೆಗಾಗಿ ರವಿವಾರ ನಡೆದ ಶಿಕ್ಷಕರ ಅಹ೯ತಾ ಪರೀಕ್ಷೆ (ಟಿಇಟಿ) ಯಲ್ಲಿ ಪೇಪರ್ 1ಯಲ್ಲಿ ಪೇಪರ್ …

Read More »

ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ.

ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಸಮೀಪ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಬಸ್ ಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಗೈಲ್ಲ. ಐಮಂಗಲ ಗೇಟ್​​ ಬಳಿ ಬಸ್​ ಬರುತ್ತಿರುವಾಗ …

Read More »