ರಾಜ್ಯ

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ: ಈ ಸೌಲಭ್ಯ ಪಡೆಯುವುದು ಹೇಗೆ?

ಬೆಂಗಳೂರು : ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಹಾಗೂ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ರಾಜ್ಯದಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆ ಇದೆ. 2018 ರ ಮಾರ್ಚ್ ನಿಂದ ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಾ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿತ್ತು. ನಂತರ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಎರಡೂ ಯೋಜನೆಗಳ ಉದ್ದೇಶ ಮತ್ತು …

Read More »

ಹೊಸ ಬೈಕ್ ಖರೀದಿಸಿ ಊರಿಗೆ ಹೋಗುವಾಗ ಅಪಘಾತ

ಹಾವೇರಿ: ಹೊಸ ಬೈಕ್ ಖರೀದಿಸಿ ಸಂಭ್ರಮದಿಂದ ಮನೆಗೆ ಹೋಗುತ್ತಿದ್ದ ಯುವಕರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ‌ ಹೃದಯವಿದ್ರಾವಕ ಘಟನೆ ಹಾವೇರಿ ಸಮೀಪದ ಗೌರಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಜಿಲ್ಲೆ ಹಾನಗಲ್ ತಾಲೂಕಿನ ವರ್ದಿ ಗ್ರಾಮದ 25 ವರ್ಷದ ನಾಗರಾಜ್ ಪವಾಡಿ ಮತ್ತು ಶಂಕರಿಕೊಪ್ಪ ಗ್ರಾಮದ 25 ವರ್ಷದ ಮಲ್ಲೇಶಪ್ಪ ದೇವಿಹೊಸೂರು ಮೃತ ಯುವಕರು. ಹೊಸ ಬೈಕ್ ತೆಗೆದುಕೊಂಡು ಊರಿಗೆ ಹೊರಟಿದ್ದ ನಾಗರಾಜ್ ಅವರ ಬೈಕ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಈ …

Read More »

ಸ್ಟೈಪಂಡ್ ಹಗರಣ: ಕಲಬುರಗಿಯ 7 ಕಡೆಗಳಲ್ಲಿ ಇ.ಡಿ ದಾಳಿ

ಕಲಬುರಗಿ: ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಸ್ಟೈಪಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲ್‌ಗುಂದಿ ಅವರ ಮನೆ ಸೇರಿದಂತೆ ಏಳು‌ ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ. ಭೀಮಾಶಂಕರ ಬಿಲಗುಂದಿ, ಎಂಆರ್‌ಎಂಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಸ್.ಎಂ. ಪಟೇಲ್ ಮತ್ತು ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಲೆಕ್ಕಪರಿಶೋಧಕ ಸುಭಾಷ್ ಚಂದ್ರ ಅವರ ಸಂಬಂಧಿತ ಸ್ಥಳಗಳು ಸೇರಿದಂತೆ ಕಲಬುರಗಿಯ ಜಿಲ್ಲೆಯ …

Read More »

ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಬೆಳಗಾವಿ: ಎರಡು ಕಾರುಗಳ ಮಧ್ಯೆ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ದಾರುಣ ಘಟನೆ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಹಿರೇಬಾಗೇವಾಡಿ ಗ್ರಾಮದ ಅನಿಸ್‌ ಮುಸ್ತಾಕ್ ಸೈಯದ್‌ (ಕಾರ್‌ ಚಾಲಕ– 30), ಇವರ ಪತ್ನಿ ಅಯಿಮಾನ್ ಅನಿಸ್‌ ಸೈಯದ್‌(24), ಪುತ್ರ ಅಹ್ಮದ್‌ ಅನಿಸ್‌ ಸೈಯದ್‌ (1.5) ಮೃತರು. ಅನಿಸ್‌ ಅವರ ಸಹೋದರಿ ಆಯಿಷಾ ಅನ್ವರ್ ಸೈಯದ್‌ ತೀವ್ರ …

Read More »

ಸ್ಕೇಟಿಂಗ್ ಮೂಲಕ ರಾಜಹಂಸಗಢ ಏರುವ ಸ್ಪರ್ಧೆ… ಬೆಳಗಾವಿಯ ಸ್ಕೇಟರ್ಸ್’ಗಳಿಂದ ಉತ್ತಮ ಪ್ರತಿಕ್ರಿಯೆ

ಸ್ಕೇಟಿಂಗ್ ಮೂಲಕ ರಾಜಹಂಸಗಢ ಏರುವ ಸ್ಪರ್ಧೆ… ಬೆಳಗಾವಿಯ ಸ್ಕೇಟರ್ಸ್’ಗಳಿಂದ ಉತ್ತಮ ಪ್ರತಿಕ್ರಿಯೆ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನಿಂದ ರಾಜಹಂಸಗಡ ಕೋಟೆಯಲ್ಲಿ ಸ್ಕೇಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಫಿಟ್ ಇಂಡಿಯಾ ಸ್ಟ್ರಾಂಗ್ ಇಂಡಿಯಾ ಅಭಿಯಾನದಡಿಯಲ್ಲಿ, ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನಿಂದ ರಾಜಹಂಸಗಡ ಕೋಟೆಯಲ್ಲಿ 2 ಕಿಲೋಮೀಟರ್ ಸ್ಕೇಟಿಂಗ್ ಮತ್ತು ಕೋಟೆಯನ್ನು ಏರುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲೆಯ 150 ಕ್ಕೂ ಹೆಚ್ಚು ಉನ್ನತ ಸ್ಕೇಟರ್‌ಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯನ್ನು …

Read More »

ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ

ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಧ್ಯಮಗೋಷ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿಯನ್ನು …

Read More »

ಭಾರತ ಪಾಕಿಸ್ತಾನ ನಡುವೆ ಯದ್ಧದ ಪ್ರಸಂಗ ಎದುರಾದರೇ… ಯುದ್ಧಕ್ಕೆ ನಾವು ರೆಡಿ ಎಂದ ಬೆಳಗಾವಿಯ ಮಾಜಿ ಸೈನಿಕರು..!!!

ಭಾರತ ಪಾಕಿಸ್ತಾನ ನಡುವೆ ಯದ್ಧದ ಪ್ರಸಂಗ ಎದುರಾದರೇ… ಯುದ್ಧಕ್ಕೆ ನಾವು ರೆಡಿ ಎಂದ ಬೆಳಗಾವಿಯ ಮಾಜಿ ಸೈನಿಕರು..!!! ಭಾರತ ಪಾಕಿಸ್ತಾನ ನಡುವೆ ಯದ್ಧದ ಪ್ರಸಂಗ ಎದುರಾದರೆ ನಾವು ಯುದ್ಧ ಮಾಡಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲು ಸಿದ್ಧರಾಗಿದ್ದೇವೆಂದು ಬೆಳಗಾವಿಯ ಮಾಜಿ ಸೈನಿಕ ಸಂಘನೆಯ ಜಿಲ್ಲಾಧ್ಯಕ್ಷ ಜಗದೀಶ ಪುಜಾರಿ ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ 36 ಸಾವಿರ ಮಾಜಿ ಸೈನಿಕರಿದ್ದಾರೆ. ಭಾರತದ ಗಡಿಯ …

Read More »

ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ರಾಜ್ಯದ ಸಮಗ್ರ ಅಭಿವೃದ್ಧಿ ಸಾಕಾರಕ್ಕಾಗಿ ರಾಜ್ಯ ಸರಕಾರವು ಜಾರಿಗೆ ತಂದಿರುವ “ಪಂಚ ಗ್ಯಾರಂಟಿ” ಯೋಜನೆಗಳ ಕುರಿತ ಕಿರುಪುಸ್ತಕವನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು …

Read More »

ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ಜಮೀನುಗಳಲ್ಲಿ ವಿದ್ಯುತ್ ನ್ನು ಈ ಹಿಂದೆ ನೀಡಲಾಗುತ್ತಿದ್ದ ರೀತಿಯಲ್ಲಿ ಒದಗಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ

ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ಜಮೀನುಗಳಲ್ಲಿ ವಿದ್ಯುತ್ ನ್ನು ಈ ಹಿಂದೆ ನೀಡಲಾಗುತ್ತಿದ್ದ ರೀತಿಯಲ್ಲಿ ಒದಗಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಖಾನಾಪೂರ ತಾಲೂಕಿನ ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ರೈತಾಪಿ ವರ್ಗದವರು ಹಾಗೂ ಸಾರ್ವಜನಿಕರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಹೆಸ್ಕಾಂ ಇಲಾಖೆಯು ಇದರ ಮೊದಲು ಗ್ರಾಮಗಳ ಜಮೀನುಗಳಲ್ಲಿಯ ವಿದ್ಯುತ್ ನ್ನು ಹೇಗೆ ನೀಡಲಿಗುತ್ತಿತ್ತು ಹಾಗೆಯೇ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು ತದನಂತರದಲ್ಲಿ ತಹಶೀಲ್ದಾರ್ …

Read More »

ಕನ್ನಡದಿಂದ ಬ್ಯಾನ್ ಆದ ಸೋನು ನಿಗಮ್

‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು ನನ್ನ ಕನ್ನಡ ಹಾಡುಗಳನ್ನು ಹಿಂದಿ ಸೇರಿ ಇತರ ಭಾಷೆಗಳ ಹಾಡೆಗಳಿಗಿಂತಲೂ ಹೆಚ್ಚು ಗೌರವದಿಂದ ನೋಡಿದ್ದೇನೆ. ಈ ಮಾತಿಗೆ ಸಾಕ್ಷಿಯಾಗಿ ನೂರಾರು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನು ಪ್ರತಿಯೊಂದು ಕರ್ನಾಟಕದ ಕಾರ್ಯಕ್ರಮಕ್ಕಾಗಿಯೂ ಒಂದು …

Read More »