Breaking News

ರಾಜ್ಯ

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

ಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ‌ ತಿರುಗಿ ನೋಡಬೇಕೆಂಬ ಅಧಮ್ಯ ವಿಶ್ವಾಸ. ತಂದೆ – ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನಿರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ‍್ಯಾಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಹೌದು, ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ …

Read More »

ಮೃತದೇಹಗಳನ್ನು ಗುರುತಿಸುತ್ತಿರುವ ಸಚಿವ ಸಂತೋಷ್​ ಲಾಡ್‌

ಧಾರವಾಡ/ಬೆಂಗಳೂರು: ಜಮ್ಮು ಕಾಶ್ಮೀರ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಗುರುತು ಪತ್ತೆ ನಡೆಯುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕಣಿವೆನಾಡಿಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಲಾಡ್‌, ತೊಂದರೆಗೊಳಗಾದ ಕನ್ನಡಿಗರ ನೆರವಿಗೆ ನಿಂತಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ಸಂತೋಷ್‌ ಲಾಡ್‌ ನೆರವಾಗಿದ್ದಾರೆ. ಮೃತದೇಹಗಳು ನಿಮ್ಮ ಸಂಬಂಧಿಕರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿ …

Read More »

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು. ನಂತರ …

Read More »

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

ಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ ರ‍್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ಅವರು ತಮ್ಮ ಮೂರನೇ ಪ್ರಯತ್ನದಲ್ಲಿ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧನ್ಯ ಅವರು ಇಲ್ಲಿನ ಸಾಂಬಾರ ಮಂಡಳಿಯ ನಿವೃತ್ತ ಸಹಾಯಕ ನಿರ್ದೇಶಕ ಟಿ. ಸುಬ್ರಹ್ಮಣ್ಯ ಹಾಗೂ ಸಕಲೇಶಪುರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಹಿರಿಯ ಶಿರಸ್ತೇದಾರ್ ಪಿ. ವಿಜಯಕುಮಾರಿ ದಂಪತಿಯ ಪುತ್ರಿಯಾಗಿದ್ದಾರೆ.ಈ ಹಿಂದೆ ಮೂರು ಸಲ …

Read More »

ಹಲ್ಲೆ ಆರೋಪ ಮಾಡಿದ್ದ ವಿಂಗ್ ಕಮಾಂಡರ್ ನಾಪತ್ತೆ: ಜಾಮೀನಿನ ಮೇಲೆ ಹೊರಬಂದ ಬೈಕ್ ಸವಾರ

ಬೆಂಗಳೂರು: ವಾಯುಪಡೆ ವಿಂಗ್ ಕಮಾಂಡರ್ ಹಾಗೂ ವ್ಯಕ್ತಿ ನಡುವೆ ನಡೆದಿದ್ದ ಬೀದಿ ಕಾಳಗ ಸಂಬಂಧ ದೂರು, ಪ್ರತಿದೂರು ದಾಖಲಿಸಿಕೊಂಡಿರುವ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸದ್ಯ ಅಧಿಕಾರಿ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಭಾಷೆ ವಿಚಾರಕ್ಕಾಗಿ ತಮ್ಮ ಕಾರನ್ನು ಅಡ್ಡಗಟ್ಟಿ ಬೈಕ್​ ಸವಾರ ವಿಕಾಸ್ ಕುಮಾರ್ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ವಿಂಗ್ ಕಮಾಂಡರ್ ಶೀಲಾದಿತ್ಯ, ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿ …

Read More »

ಕೊನೆಗೂ ಉದ್ಘಾಟನೆಗೊಂಡ ಧಾರವಾಡ ಗಾಂಧಿ ಭವನ….ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಲಾಡರಿಂದ ಉದ್ಘಾಟನೆ

ಕೊನೆಗೂ ಉದ್ಘಾಟನೆಗೊಂಡ ಧಾರವಾಡ ಗಾಂಧಿ ಭವನ….ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಲಾಡರಿಂದ ಉದ್ಘಾಟನೆ ಇತ್ತೀಚೆಗಷ್ಟೇ ಧಾರವಾಡ ಗಾಂಧಿ ಭವನ‌ ಉದ್ಘಾಟನೆಗೆ ಆಹ್ರಹಿಸಿ‌ ಜನತೆ ಆಗ್ರಹಿಸಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಇದರ ಫ್ರತಿಫಲವಾಗಿ ಕಳೆದ ದಿನ‌ ಸೋಮವಾರ ಧಾರವಾಡ ಭವ್ಯ ಗಾಂಧಿ ಭವನವು ಜಿಲ್ಲಾ ಉಸ್ತುವಾರಿ ಸಚಿವರಾ ಸಂತೋಷ ಲಾಡ್‌ರಿಂದ ಉದ್ಘಾಟನೆಗೊಂಡಿತ್ತು. ಧಾರವಾಡದ ಹೊಸ ಬಸ್ ನಿಲ್ದಾಣದ ಹತ್ತಿರ ನಿರ್ಮಾಣವಾಗಿದ್ದ ಗಾಂಧಿ ಭವನವನ್ನು ಉದ್ಘಾಟನೆ ಸೋಮವಾರ ಧಾರವಾಡ ಜಿಲ್ಲಾ …

Read More »

ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ

ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಉಚ್ಛಾಟಿತ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪಾಟಿಲ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು ರಾಜ್ಯಾದ್ಯಂತ ಮುಸ್ಲಿಮ ಸಮಾಜದ ಬಾಂಧವರು ಯತ್ನಾಳರನ್ನು ಬಂದಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಆತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ …

Read More »

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಜಾಂಬೋಟ್ಟಿಯ ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿದರು. ಜಾಂಬೋಟ್ಟಿಯ ಅರುಣ ಮಹಾರಾಜರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿ …

Read More »

ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್‌ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ

ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್‌ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ ನನಗೆ ಹಿಂದುತ್ವ ಉಳಿಸುವಂತೆ ನಿರ್ಣಯ ಮಾಡಬೇಕೆಂದು ಹೇಳುತ್ತಿದ್ದಾರೆ. ರಾಜ್ಯದ ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಜಯ ದಶಮಿಯವರೆಗೂ ರಾಜ್ಯ ಸುತ್ತುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ‌ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಕುರಿತು ಮಾತನಾಡಿದರು. ಕೇಂದ್ರದ …

Read More »

ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ

ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಗ್ಗೋಡದ ಗೋ ಶಾಲೆಯ ದನಗಳನ್ನು ಬೇರೆಡೆ ಸಾಗಾಟ ಮಾಡಲಾಗ್ತಿದೆ ಎಂಬ ಮುಸ್ಲಿಂ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಾನಹಾನಿ ಕೇಸ್ ಹಾಕಲಾಗುತ್ತದೆ. ಸಿದ್ದೇಶ್ವರ ಸಂಸ್ಥೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದೇವೆ. ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಎಲ್ಲರ ಮೇಲೆ ಮಾನಹಾನಿ ಕೇಸ್ ಹಾಕಲಾಗುತ್ತದೆ. ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. …

Read More »