Breaking News

ರಾಜ್ಯ

ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ: ‘ಮಗುವಿನ ಮುಖ ನೋಡಲು ಆಗುತ್ತಿಲ್ಲ’: ಸಚಿವ ಸಂತೋಷ್​ ಲಾಡ್

ಹುಬ್ಬಳ್ಳಿ(ಧಾರವಾಡ): “5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಯತ್ನ ಹಾಗೂ ಕೊಲೆ ಇಡೀ ಸಮಾಜ ತಲೆ ತಗ್ಗಿಸುವ ವಿಚಾರ. ಮಗುವಿನ ಮುಖ ನೋಡಲು ಆಗುತ್ತಿಲ್ಲ” ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್​ ಲಾಡ್ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯ ಕಿಮ್ಸ್​​ ಶವಾಗಾರಕ್ಕೆ ಭೇಟಿ ನೀಡಿ ಮೃತ ಮಗುವನ್ನು ನೋಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಬಾಲಕಿಯನ್ನು ಹತ್ಯೆ ಮಾಡಿದ ಆರೋಪಿ ಡ್ರಗ್ ಸೇವನೆ ಬಗ್ಗೆ ಮಾಹಿತಿ …

Read More »

ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಸಿದ್ದಾರೂಢರ ಸ್ವಾಮಿಯವರ ರಥೋತ್ಸವ

ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಸಿದ್ದಾರೂಢರ ಸ್ವಾಮಿಯವರ ರಥೋತ್ಸವ ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಸಿದ್ದಾರೂಢರ ಸ್ವಾಮೀಜಿಯವರ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಸಿದ್ದಾರೂಢರ ಜಾತ್ರೆಯ ಅಂಗವಾಗಿ ಮಠದ ಆವರಣದಲ್ಲಿ ರಥೋತ್ಸವ ಜರುಗಿತು. ರಥೋತ್ಸವ ಪ್ರಾರಂಭವಾಗುತ್ತಿದಂತೆ ಭಕ್ತರ ಹರ್ಷದ್ಗೋಗಾರ ಮುಗಿಲು ಮುಟ್ಟಿತ್ತು. ರಥೋತ್ಸವ ಹೋಗುತ್ತಿದಂತೆ ಭಕ್ತರು ರಥದ ಮೇಲೆ ಹೂವುಗಳನ್ನು ಅರ್ಪಿಸಿ ಭಕ್ತಿಯ ಪರಾಕಾಷ್ಠೆಯನ್ನು ಮೆರೆದರು. ಓಂ ನಮ ಶಿವಾಯ ಮಂತ್ರ ಘೋಷದೊಂದಿಗೆ,ಸಕಲವಾದ್ಯಗಳೊಂದಿಗೆ ಈ …

Read More »

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಬ್ಯಾಂಕ್​​​ ಜನಾರ್ಧನ್​​ ​ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್​​​ ಜನಾರ್ಧನ್​​​ ತಮ್ಮ 76ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಚಂದನವನದ ಖ್ಯಾತ ಹಾಸ್ಯನಟನ ನಿಧನಕ್ಕೆ ಸಂತಾಪ ವ್ಯಕ್ತವಾಗುತ್ತಿದೆ. ​​ ಸಂಜೆ ಅಂತ್ಯಕ್ರಿಯೆ: ಬಹುದಿನಗಳಿಂದ ವಯೋಸಹಜ ಕಾಯಿಲೆ ವಿರುದ್ಧ ಹೋರಾಡುತ್ತಿದ್ದ ಜನಪ್ರಿಯ ನಟ ಮುಂಜಾನೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. …

Read More »

ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ

ಸರಿಯಾಗಿ ಬಾಳಿ ಎಂದು ಬುದ್ದಿವಾದ ಹೇಳಲು ಹೋದವರ ಮೇಲೆಯೇ ಹಲ್ಲೆ ಮೊಮ್ಮಕ್ಕಳ ಮೇಲಿನ ಹ* ಲ್ಲೆ ಪ್ರಶ್ನಿಸಿದಕ್ಕೆ ಅಜ್ಜಿ, ಮಗ ಹಾಗೂ ಮಗಳ ಮೇಲೆ ಮಾರಣಾಂತಿಕ ಹ*ಲ್ಲೆ‌ ಆರೋಪ ಕೊಡಲಿ ಹಾಗೂ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಆರೋಪ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಘಟನೆ ಘಟನೆಯಲ್ಲಿ ಉಮರಾಣಿ ಗ್ರಾಮದ ಭೀಮಾ ಜಿಡ್ಡಿಮನಿ( 20), ಶೋಭಾ ಶಂಕರ್ ಜಿಡ್ಡಿಮನಿ( 40), ವಿಠ್ಠಲ ಶಂಕರ ಜಿಡ್ಡಿಮನಿಗೆ ಗಂಭೀರ ಗಾಯ ಗಂಭೀರ …

Read More »

ಡ್ರಗ್ಸ್ ಹಾವಳಿ ಹುಬ್ಬಳ್ಳಿ-ಧಾರವಾಡದಲ್ಲಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ, ಏಪ್ರಿಲ್​ 13: ಐದು ವರ್ಷದ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಆರೋಪಿ ಡ್ರಗ್ಸ್ ಮತ್ತಿನಲ್ಲಿ ಕೃತ್ಯವೆಸಗಿದ್ದಾನೆಂದು ಹೇಳುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಬೇಕು. ಆರೋಪಿ ಕೊಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಹೀಗಾಗಿ ಪೊಲೀಸರು ಎನ್​ಕೌಂಟರ್​ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Read More »

ಬಳ್ಳಾರಿ: ಮಲಗಿರುವಾಗ ನಾಗರ ಹಾವು ಕಡಿದು 10ನೇ ತರಗತಿ ಬಾಲಕಿ ಸಾವು

ಬಳ್ಳಾರಿ: ಮಲಗಿದ್ದಾಗ ನಾಗರ ಹಾವು ಕಡಿದು 10ನೇ ತರಗತಿ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹೊಸ ಮೋಕಾ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. 15 ವರ್ಷದ ಬಾಲಕಿ ಶ್ರಾವಣಿ ಹಾವು ಕಡಿತದಿಂದ ಮೃತಪಟ್ಟವಳು. ಬಾಲಕಿಯು ಹೊಸ ಮೋಕಾ ಗ್ರಾಮದ ಲಕ್ಷ್ಮಣ ಹಾಗೂ ಶೇಕಮ್ಮ ದಂಪತಿಯ ಮಗಳಾಗಿದ್ದಳು. ಶ್ರಾವಣಿ ಮೋಕಾ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ರಾತ್ರಿ ಮಲಗಿರುವಾಗ ಬಾಲಕಿಗೆ ಮೂರು ಸಲ ನಾಗರ ಹಾವು ಕಚ್ಚಿದೆ. …

Read More »

ವಕ್ಫ್ ಮಸೂದೆ ವಿರೋಧಿಸಿ ಪ್ರಚೋದನಕಾರಿ ಹೇಳಿಕೆ: ಪ್ರಮುಖ ಆರೋಪಿ‌ ಕಬೀರ್ ಖಾನ್ ಬಂಧನ –

ದಾವಣಗೆರೆ: ವಕ್ಫ್ ಮಸೂದೆ ವಿರೋಧಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದ ಮೇಲೆ ಕಬೀರ್ ಖಾನ್ ಎಂಬವರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಸರ್ಕಾರ ವಕ್ಫ್ ಮಸೂದೆ ಮಂಡನೆ ಮಾಡಿದ ಬೆನ್ನಲ್ಲೇ ಕಬೀರ್ ಖಾನ್ ನೀಡಿದ್ದ ಪ್ರಚೋದನಕಾರಿ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು.‌ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಳಿಕ ಪ್ರಕಣದ ಪ್ರಮುಖ ಆರೋಪಿ ಕಾಂಗ್ರೆಸ್ ಮಾಜಿ‌ ಕಾರ್ಪೋರೇಟರ್ ಕಬೀರ್ ಖಾನ್ ನಾಪತ್ತೆಯಾಗಿದ್ದರು. ದಾವಣಗೆರೆ ಪೊಲೀಸರು ಹುಡುಕಾಟ ಆರಂಭಿಸಿದ್ದರು. …

Read More »

ನಡು ರಸ್ತೆಯಲ್ಲೇ ಮಹಿಳೆಗೆ ಪೈಪ್, ದೊಣ್ಣೆಯಿಂದ ಮನಬಂದಂತೆ ಹಲ್ಲೆ: ಆರು ಆರೋಪಿಗಳ ಬಂಧನ

ದಾವಣಗೆರೆ : ಆರು ಜನ ಆರೋಪಿಗಳು ಮಹಿಳೆಯೋರ್ವರಿಗೆ ಮನಬಂದಂತೆ ಹಲ್ಲೆ‌ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ (ಏ.09) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಮಾಜ‌ವೇ ತಲೆ ತಗ್ಗಿಸುವ ಘಟನೆ ನಡೆಯುತ್ತಿದ್ದರೂ ಅಲ್ಲಿ ನೆರೆದಿದ್ದವರು ಅದನ್ನು ತಡೆಯಲು ಮುಂದಾಗದೇ ಗುಂಪು ಗುಂಪಿನಲ್ಲಿ ನಿಂತು ವೀಕ್ಷಿಸಿದ್ದಾರೆ ಎಂದು ವರದಿಯಾಗಿದೆ. ಮಹಿಳೆಗೆ ಥಳಿಸಿದ ಮೊಹಮ್ಮದ್ ನಯಾಜ್ (32), ಮೊಹಮ್ಮದ್ ಗೌಸ್ ಪೀರ್ (45), ಚಾಂದ್ ಪೀರ್(35), ಇನಾಯಿತ್ ಉಲ್ಲಾ(51), ದಸ್ತಗೀರ್(24) ಹಾಗೂ …

Read More »

ಕಮಿಷನ್ ಕೊಟ್ಟರೂ ಅಧಿಕಾರಿಗಳು ಬಾಕಿ ಹಣ ಬಿಡುಗಡೆ ಮಾಡ್ತಿಲ್ಲ:ಗುತ್ತಿಗೆದಾರರ ಸಂಘ ಆಕ್ರೋಶ

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ 60% ಕಮಿಷನ್ ಕೊಡದೇ ಯಾವುದೇ ಕೆಲಸ ಆಗಲ್ಲ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಬೆನ್ನಲ್ಲೇ ಹಾವೇರಿ ಗುತ್ತಿಗೆದಾರರ ಸಂಘ ಸಹ ಆಕ್ರೋಶ ಹೊರಹಾಕಿದೆ. “ಹಾವೇರಿ ಗುತ್ತಿಗೆದಾರರಿಗೆ ಬರಬೇಕಿದ್ದ ಕಾಮಗಾರಿಗಳ ನೂರಾರು ಕೋಟಿ ಹಣ ಪಾವತಿಸದೇ ಸರ್ಕಾರ ಸತಾಯಿಸುತ್ತಿದೆ. ಅಲ್ಲದೆ ಕೆಲವೊಂದು ಇಲಾಖೆಗಳಲ್ಲಿ 10 ರಿಂದ 13 ಪರ್ಸೆಂಟ್ ಕಮಿಷನ್ ಕೊಟ್ಟರೂ ಬಾಕಿ ಹಣ ಬಿಡುಗಡೆ ಮಾಡಿಸದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ” ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ …

Read More »

ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದ ಪ್ರಕರಣದ ಆರೋಪಿ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದಾನೆ.

ಹುಬ್ಬಳ್ಳಿ: ಇಲ್ಲಿನ ಅಶೋಕ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ, ಹತ್ಯೆಗೈದ ಆರೋಪಿ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ಬಿಹಾರದ ರಕ್ಷಿತ್​ ಕ್ರಾಂತಿ ಸಾವನ್ನಪ್ಪಿದ ಆರೋಪಿ ಎಂದು ಗುರುತಿಸಲಾಗಿದೆ. ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಎಚ್ಚರಿಕೆ ನೀಡಿದರೂ ಹಲ್ಲೆಗೆ ಮುಂದಾಗಿದ್ದರಿಂದ ಗುಂಡು ಹಾರಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದಕ್ಕೂ ಮುನ್ನ, ಘಟನೆ ಖಂಡಿಸಿ ಸ್ಥಳೀಯರು ಅಶೋಕನಗರ ಪೊಲೀಸ್​ ಠಾಣೆ ಎದುರು …

Read More »