Breaking News

ರಾಜ್ಯ

ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ; ಕುಮಾರಸ್ವಾಮಿ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ವಿಧಿಸಿದ್ದ ಆದೇಶ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು : ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್‌ ಮತ್ತು ಶಾಸಕ ಸುರೇಶ್‌ ಬಾಬು ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸಂಜಯನಗರ ಠಾಣಾ ಪೊಲೀಸರಿಗೆ ಸೂಚಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ಮಾರ್ಚ್ 28ರವರೆಗೆ ಹೈಕೋರ್ಟ್‌ ವಿಸ್ತರಿಸಿ ಆದೇಶಿಸಿದೆ. ಚಂದ್ರಶೇಖರ್‌ ನೀಡಿರುವ ದೂರು ಆಧರಿಸಿ ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಸಂಜಯನಗರ ಠಾಣಾ …

Read More »

ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ:C.M.

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಸಂಬಂಧ ಪ್ರತಿಪಕ್ಷಗಳ ಆಕ್ಷೇಪಕ್ಕೆ ಸಮಗ್ರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ಉತ್ತರಿಸಿದರು. ವಂದನಾನಿರ್ಣಯದ ಮೇಲೆ ವಿರೋಧಪಕ್ಷದ ನಾಯಕರು ಸೇರಿದಂತೆ 16 ಜನ ಸದಸ್ಯರು ಸುಮಾರು 9ಗಂಟೆ 56 ನಿಮಿಷಗಳ ಕಾಲ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು. ಇತ್ತೀಚೆಗೆ ಹೆಚ್ಚು ವಿದ್ಯಾವಂತರು, ವಿಚಾರವಂತರು ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ, …

Read More »

ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ನಟಿ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವೈದ್ಯೆ ಅಕುಲಾ ಅನುರಾಧ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ವಿವರ: ಮಾರ್ಚ್ 17ರಂದು ವಿಜಯಪುರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಯತ್ನಾಳ್, ರನ್ಯಾ ರಾವ್ ಯಾರ ಜೊತೆ ಸಂಬಂಧ ಹೊಂದಿದ್ದಾರೆ, ಎಲ್ಲಿಂದ ಚಿನ್ನ ತಂದಿದ್ದಾರೆ ಎಂಬ …

Read More »

ಒಂದೇ ಬಾರಿ ಎರಡು ಮದುವೆಯಾಗಿದ್ದ ವ್ಯಕ್ತಿಯೋರ್ವ ತನ್ನ ಓರ್ವ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಆಕೆಯನ್ನು ಕೊಂದು ಹಾಕಿದ್ದಾನೆ.

ಆನೇಕಲ್​​​(ಬೆಂಗಳೂರು): ಎರಡೆರಡು ಮದುವೆಯಾಗಿದ್ದ ಪತಿ ಓರ್ವ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದ ಘಟನೆ ರಾಚಾಮಾನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಅನಿತಾ (29) ಮೃತ ಮಹಿಳೆ. ಬಾಬು (32) ಪತ್ನಿ ಕೊಂದ ಹಂತಕ. ಘಟನೆಯ ವಿವರ: 9 ವರ್ಷಗಳ ಹಿಂದೆ ಬಾಬು ಇಬ್ಬರು ಯುವತಿಯರನ್ನು ಪ್ರೀತಿಸಿ, ಒಂದೇ ದಿನ ಇಬ್ಬರಿಗೂ ತಾಳಿ ಕಟ್ಟಿದ್ದ. ಈ ಪೈಕಿ ಓರ್ವ ಪತ್ನಿ ಅನಿತಾ ಮೈಸೂರಿನ ಚಿಕ್ಕ ಮಾರ್ಕೆಟ್​ನವರು. ಪತಿ ತನ್ನ ಮೇಲೆ ದಿನನಿತ್ಯ …

Read More »

ಚಿಕ್ಕಬಳ್ಳಾಪುರ (Chikkaballapur) ಪಟ್ಟಣದ ಒಎಂಬಿ ನಗರದಲ್ಲಿನ ಜನರು ಮಾಟಮಂತ್ರದ (Black Magic) ಭೀತಿಯಲ್ಲಿ ವಾಸಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರ, ಮಾರ್ಚ್​ 19: ಚಿಕ್ಕಬಳ್ಳಾಪುರ (Chikkaballapur) ಪಟ್ಟಣದ ಒಎಂಬಿ ನಗರದಲ್ಲಿನ ಜನರು ಮಾಟಮಂತ್ರದ (Black Magic) ಭೀತಿಯಲ್ಲಿ ವಾಸಿಸುತ್ತಿದ್ದಾರೆ. ನಿತ್ಯ ಬೆಳಗಾದರೆ ಕೆಲ ಅಂಗಡಿ ಮತ್ತು ಮನೆಗಳ ಮುಂದೆ ನಿಂಬೆಹಣ್ಣು, ಅರಿಶಿನ ಮತ್ತು ಕುಂಕಮ ಇರುತ್ತಿದ್ದು ಮಾಟಮಂತ್ರದ ಕುರುಹುಗಳು ಎನ್ನಲಾಗುತ್ತಿದೆ. ಇದೇ ರಸ್ತೆಯಲ್ಲಿರುವ ಶಾಂತಕುಮಾರ್ ಎಂಬುವರ ಟೈಲರಿಂಗ್ ಅಂಗಡಿ ಮುಂದೆ ಪ್ರತಿ ದಿನವೂ ಒಂದಲ್ಲ ಒಂದು ನಿಂಬೆಹಣ್ಣಿನ ತುಂಡುಗಳು, ಹರಿಶಿನ ಕುಂಕುಮದ ಕುರುಹುಗಳು ಪತ್ತೆಯಾಗುತ್ತಿದ್ದವಂತೆ. ಇದರಿಂದ ಆತಂಕಗೊಂಡ ಟೈಲರ್ ಶಾಂತಕುಮಾರ್ ಅವರು …

Read More »

ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ…ಆಗಿದ್ದೇನು?

ಶಿವಮೊಗ್ಗ, (ಮಾರ್ಚ್ 18): ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲ ಆದೇಶ ನೀಡಿದರೂ ಸಹ ಕೆಎಸ್​ಆರ್​ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್​ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಅದರಂತೆ ಕೆಎಸ್ ಆರ್ ಟಿಸಿಯ ಶಿರಸಿ ಡಿಪೋದ ಕೆಎಸ್​ಆರ್​ಟಿಸಿ ಬಸನ್ನು ತಂದು ಕೋರ್ಟ್​ ಆವರಣದಲ್ಲಿ ನಿಲ್ಲಿಸಲಾಗಿದೆ. 2022ರ ಜುಲೈ 7 ರಂದು ಪತ್ರಿಕೆ ಹಂಚಲು ಹೋಗಿದ್ದ ಗಣೇಶ್ ಎನ್ನುವಾತನಿಗೆ ಸಾಗರದ ಪ್ರವಾಸಿ ಮಂದಿರದ ಎದುರು ಶಿರಸಿ …

Read More »

ಗಂದಿಗವಾಡ ಕೆರೆದಂಡೆಯ ರಸ್ತೆ ದುರಸ್ತಿಗೆ ಆಗ್ರಹ ಖಾನಾಪೂರ ತಾಲೂಕು ಗಂದಿಗವಾಡ ಗ್ರಾಮ

ಹಾಳಾಗಿರುವ ಕೆರೆ ದಂಡೆಯ ರಸ್ತೆ ದುರಸ್ತಿಗೆ ಆಗ್ರಹ ದೊಡ್ಡ ಕೆರೆಯ ದಂಡೆ ಕೊರೆದು ಕಿರಿದಾಗಿರುವ ರಸ್ತೆ ಅಪಾಯದ ಅಂಚಿನಲ್ಲಿ ಗ್ರಾಮ ಸಂಪರ್ಕಿಸುವ ಮುಖ್ಯ ರಸ್ತೆ ಖಾನಾಪೂರ ತಾಲೂಕಿನ ಗಂದಿಗವಾಡ ಗ್ರಾಮದ ದೊಡ್ಡ ಕೆರ ದಂಡೆಯ ಮಣ್ಣು ಕುಸಿದು ಗ್ರಾಮವನ್ನು ಸಂಪರ್ಕಿಸುವ ಮುಖ್ಯರಸ್ತೆ ಹಾಳಾಗಿದ್ದು ದೋಸ್ತಿಗೊಳಿಸಲು ಗ್ರಾಮಸ್ಥರು ಹಾಗೂ ರಾಜ್ಯ ಗಡಿನಾಡು ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ ನೀರಿನ ರಭಸಕ್ಕೆ ಕೊರೆದು ಮಣ್ಣು ಕುಸಿದು ದಂಡೆಗಳು ಹಾಳಾಗಿದ್ದು ರಸ್ತೆ ಕಿರಿದಾಗಿದೆ ಇದರಿಂದ ಅಪಾಯಕ್ಕೆ …

Read More »

ಸಂಕೇಶ್ವರ SDVS ಸಂಘದಿಂದ ಮಾನಿನಿ ಕಾರ್ಯಕ್ರಮ ಆಯೋಜನೆ

ಹುಕ್ಕೇರಿ : ಸಂಕೇಶ್ವರ SDVS ಸಂಘದಿಂದ ಮಾನಿನಿ ಕಾರ್ಯಕ್ರಮ ಆಯೋಜನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಅನ್ನಪೂರ್ಣ ಇನ್ಸ್ಟಿಟ್ಯೂಟ್ ಆಪ್ ಮ್ಯಾನೆಜ್‌ಮೆಂಟ್‌ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ ಅಂಗವಾಗಿ ಮಾರ್ಚ 18 ರಂದು ಮಾನಿನಿ – 2025 ಕಾರ್ಯಕ್ರಮ ಆಯೋಜಿಸಲಾಗಿದೆ. ಮಾದ್ಯಮಗಳೊಂದಿಗೆ ಮಾತನಾಡಿದ ವ್ಯವಸ್ಥಾಪಕ ನಿರ್ದೆಶಕಿ ಶ್ರೀಮತಿ ವಿದ್ಯಾ ಸ್ವಾಮಿ ಮಹಿಳಾ ದಿನಾಚಾರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗನನಿಯ ಸಾಧನೆ ಮಾಡಿದ ಮಹಿಳೆಯರ ಸಾಕ್ಷ್ಯ ಚಿತ್ರಗಳೊಂದಿಗೆ ಸುಮಾರು ಒಂದನೂರು ಬೇರೆ …

Read More »

ಬೀಡಿ -ಕಿತ್ತೂರು ಮುಖ್ಯ ರಸ್ತೆ ಇದು ಕಚರಾ ಡಿಪೋನೋ ಅಥವಾ ಬೀಡಿ ಗ್ರಾಮದ ರಸ್ತೆಯೋ???

ಇದು ಕಚರಾ ಡಿಪೋನೋ ಅಥವಾ ಬೀಡಿ ಗ್ರಾಮದ ರಸ್ತೆಯೋ??? ಮಾಧ್ಯಮಗಳಲ್ಲಿ ವರದಿ ಪ್ರಸಾರವಾದರೂ ಅಧಿಕಾರಿಗಳು ಡೋಂಟ್ ಕೇರ್… ಖಾನಾಪೂರ ತಾಲೂಕಿನ ಬೀಡಿ ಗ್ರಾಮ ಪಂಚಾಯಿತಿಯಿಂದ ಸಂಗ್ರಹಿಸುವ ತ್ಯಾಜ್ಯವನ್ನು ಬೀಡಿ -ಕಿತ್ತೂರು ಮುಖ್ಯ ರಸ್ತೆಯ ಬದಿಯಲ್ಲಿ ಎಸೆಯಲಾಗುತ್ತಿದ್ದು, ಇದರಿಂದಾಗಿ ರಸ್ತೆಯಲ್ಲಿ ಓಡಾಡುವ ಜನರು, ಶಾಲಾ ಮಕ್ಕಳು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಳಲ್ಲಿ ವರದಿ ಪ್ರಸಾರವಾದರೂ ಕೂಡ ಗ್ರಾ.ಪಂ. ಅಧಿಕಾರಿಗಳಾಗಲಿ, ಪಿಡಿಓಗಳಾಗಲಿ ಕ್ಯಾರೆ ಎನ್ನುತ್ತಿಲ್ಲ. ಪ್ರತಿನಿತ್ಯವೂ ಸಾವಿರಾರು ಜನ ಸಂಚರಿಸುವ …

Read More »

ವಿಜಯಪುರದಲ್ಲಿ ಮೆಚ್ಚಿನ ಅಪ್ಪುವಿನ ಜನ್ಮದಿನಾಚರಣೆ

ವಿಜಯಪುರದಲ್ಲಿ ಮೆಚ್ಚಿನ ಅಪ್ಪುವಿನ ಜನ್ಮದಿನಾಚರಣೆ:ಪ್ರಸಾದ ವಿತರಣಾ ಕಾರ್ಯದಲ್ಲಿ ಅಪ್ಪುಗೆ ನಮನ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ 50ನೇ ವರ್ಷದ ಜನ್ಮದಿನ ಹಿನ್ನಲೆಯಲ್ಲಿ ವಿಜಯಪುರ ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿನ ಗಜಾನನ ಮಹಾಮಂಡಳದ ವತಿಯಿಂದ ಜನ್ಮದಿನವನ್ನು ಆಚರಿಸಲಾಯಿತು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ನಡೆಯುವ ಮಹಾಮಂಡಳದಿಂದ ಪ್ರತಿ ಸೋಮವಾರ ಐದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ, ಬಡವರಿಗೆ ಅನ್ನ ಪ್ರಸಾದ ವಿತರಿಸಲಾಗುತ್ತದೆ. ಈ ಸೋಮವಾರ ನಟ ದಿವಂಗತ ಪುನೀತ …

Read More »