ಬೆಂಗಳೂರು: ಇತರರ ಗುರುತಿನ ಕಳವು ಮಾಡಿ ವಂಚಿಸಿದ್ದ ಆರೋಪ ಹೊತ್ತಿರುವ ವಿದ್ಯಾರ್ಥಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ವಾಟ್ಸ್ಆ್ಯಪ್ ಮೂಲಕ ಜಾರಿ ಮಾಡಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ವಿದ್ಯಾರ್ಥಿ ಪವನ್ ಕುಮಾರ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 (ಬಿಎನ್ಎಸ್ಎಸ್) ಅಥವಾ ಹಿಂದಿನ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ವಾಟ್ಸ್ಆ್ಯಪ್ಗಳ ಮೂಲಕ …
Read More »ಯಡಿಯೂರಪ್ಪನವರು ಸುಳ್ಳು ಆರೋಪಗಳಿಂದ ಮುಕ್ತರಾಗುವ ದಿನಗಳು ಸಮೀಪ:ಬಿ.ವೈ.ರಾಘವೇಂದ್ರ
ಶಿವಮೊಗ್ಗ: “ಯಡಿಯೂರಪ್ಪನವರಿಗೆ ಜೀವನಪೂರ್ತಿ ಹೋರಾಟ ಮಾಡುವ ಅನಿವಾರ್ಯತೆ ಅಧಿಕಾರಿದಲ್ಲಿದ್ದಾಗ ಮತ್ತು ಅಧಿಕಾರಿದಲಿಲ್ಲದಿದ್ದಾಗಲೂ ಇದೆ. ಈಗ ಪೋಕ್ಸೋ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಅವರು ಎಲ್ಲ ಸುಳ್ಳು ಆರೋಪಗಳಿಂದ ಮುಕ್ತವಾಗಿ ಹೊರಬರುವ ದಿನಗಳು ಹತ್ತಿರ ಇದೆ” ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಿದೆ. ಅಧಿಕಾರಿಗಳು ಕಣ್ಣೀರು ಹಾಕುತ್ತಿದ್ದಾರೆ. ನಾವು ಖಾಲಿ ಕೈಯಲ್ಲಿ ಜಿಲ್ಲೆಗೆ ಬಂದಿಲ್ಲ. ಇಂಥವರಿಗೆ ಇಂತಿಷ್ಟು ಹಣ ಕೊಟ್ಟು …
Read More »ವಿಧಾನಸೌಧದ ಆವರಣದಲ್ಲಿ ಜಾತ್ರೆಯ ವಾತಾವರಣ
ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಆಯೋಜನೆ ಮಾಡಿರುವ ಪುಸ್ತಕ ಮೇಳಕ್ಕೆ ಪುಸ್ತಕಪ್ರಿಯರಿಂದ ಇಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಧಾನಸೌಧದ ಸಚಿವಾಲಯದ ವತಿಯಿಂದ ನಿನ್ನೆಯಿಂದ ಮಾ.3 ರವರೆಗೆ ಆಯೋಜನೆ ಮಾಡಿರುವ ಪುಸ್ತಕ ಜಾತ್ರೆಗೆ ಇಂದು ಸಾವಿರಾರು ಪುಸ್ತಕಪ್ರಿಯರು ಆಗಮಿಸಿ ಎಲ್ಲಾ ಮಳಿಗೆಗಳನ್ನು ವೀಕ್ಷಿಸಿ ತಮಗೆ ಬೇಕಾದ ಪುಸ್ತಕ ಖರೀದಿ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. ಸಾಹಿತ್ಯಾಸಕ್ತರು, ಪುಸ್ತಕಪ್ರಿಯರು, ವಿದ್ಯಾರ್ಥಿಗಳು, ವಯೋವೃದ್ಧರೂ ಸಹ ಪುಸ್ತಕ ಮೇಳಕ್ಕೆ ಆಗಮಿಸಿ ಪುಸ್ತಕ ಖರೀದಿಸಿದರು. ಇದರ ಜೊತೆಗೆ …
Read More »ವೀರರಾಣಿ ಬೆಳವಡಿ ಮಲ್ಲಮ್ಮಾಜಿಯ ವಂಶಜರು
ಬೆಳಗಾವಿ: ಅವರ ಪೂರ್ವಜರು ಸಂಸ್ಥಾನ ಆಳಿದ ದೊರೆಗಳು. ದರಬಾರಿನಲ್ಲಿ ಕಾರುಬಾರು ಮಾಡಿದವರು. ಆದರೆ, ಕಾಲಗಳು ಉರುಳಿದಂತೆ ವಂಶಜರು ಎಲ್ಲವನ್ನೂ ಕಳೆದುಕೊಂಡು ಸಾಮಾನ್ಯರಂತೆ ಬದುಕುತ್ತಿದ್ದಾರೆ. ಅವರು ಬೇರಾರೂ ಅಲ್ಲ, ವೀರರಾಣಿ ಬೆಳವಡಿ ಮಲ್ಲಮ್ಮಾಜಿಯ ವಂಶಜರು. ಸಮರ ಸಿಂಹಿಣಿ ವಂಶಜರ ಜೊತೆಗೆ ಈಟಿವಿ ಭಾರತ ನಡೆಸಿದ ಎಕ್ಸ್ಕ್ಲ್ಯೂಸಿವ್ ಮಾತುಕತೆ ಇಲ್ಲಿದೆ. ಬೆಳವಡಿ ಸಂಸ್ಥಾನದ 31ನೇ ಅರಸ ವೀರ ಬೊಮ್ಮಪ್ಪನಾಯಿಕ ದೇಸಾಯಿ ಅವರು ಅಲ್ಲಿಯೇ ಸಮೀಪದ ಮುಳಕೂರ ಸಂಸ್ಥಾನದಲ್ಲಿ ಬಂದು ನೆಲೆಸಿದರು. ಆ ಬೊಮ್ಮಪ್ಪನಾಯಿಕ ಅವರ …
Read More »ಬಾಗಲಕೋಟೆ : ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ…
ರಾಜ್ಯ ಸರ್ಕಾರ ಎಸ್ಸಿಎಸ್ಪಿ ಮತ್ತು ಟಿ ಎಸ್ ಪಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ….. ಎಂದು ಆರೋಪಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಬಿಜೆಪಿ ಜಿಲ್ಲಾ ಕಚೇರಿಯಿಂದ ಡಿಸಿ ಕಚೇರಿ ವರೆಗೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಲಾಯಿತು. ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಮೋಸ ಮಾಡುತ್ತಿದೆ 2023-24 ರಲ್ಲಿ ದಲಿತರಿಗೆ ಮೀಸಲಿಟ್ಟ 11,144 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದೆ 2024-25 ಸಾಲಿಗೆ ದಲಿತರಿಗೆ ಮೀಸಲಿಟ್ಟ …
Read More »ಸೈಕಲ್ ಏರಿ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಅಭಯ್ ಪಾಟೀಲ್
ಸೈಕಲ್ ಏರಿ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಅಭಯ್ ಪಾಟೀಲ್ ಸೈಕಲ್ ತುಳಿದು ಜನರ ಸಮಸ್ಯೆ ಆಲಿಸಲು ಬಂದ ಶಾಸಕರು ತಮ್ಮದೇಯಾದ ವಿಶಿಷ್ಟತೆಗೆ ಖ್ಯಾತಿಯಾದ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಇಂದು ಸೈಕಲ್ ತುಳಿದ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆಗಳನ್ನು ಆಲಿಸಿದರು. ಹೌದು, ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲರು ಇಂದು ಸೈಕಲ್ ಫೇರಿ ಮೂಲಕ ವಿಶೇಷ ಅಭಿಯಾನವನ್ನು ನಡೆಸಿದರು. ವಾರ್ಡ ನಂ …
Read More »ರಾಜ್ಯದಲ್ಲಿ ಬೀಸಲಿದೆ ಸಿಎಂ ಬದಲಾವಣೆ ಗಾಳಿ… ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ
ಬಿಜೆಪಿ ಹೈಕಮಾಂಡ್ ಭಿನ್ನಮತಗಳನ್ನು ಶಮಗೊಳಿಸಲು ಗಟ್ಟಿಯಾಗಿದೆ. ಆದರೇ ರಾಜ್ಯದಲ್ಲಿ ಸಿಎಂ ಬದಲಾವಣೆ ಗಾಳಿ ಬೀಸಲಿದೆ ಎಂಬ ಸ್ಫೋಟಕ ಹೇಳಿಕೆಯನ್ನು ಪರೋಕ್ಷವಾಗಿ ಮಾಜಿ ಸಚಿವ ಶ್ರೀರಾಮುಲು ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಹರಿಯುತ್ತಿರುವ ನೀರಿದಂತೆ. ಹಲವಾರು ಜನರು ಇದರಲ್ಲಿ ಬಂದು-ಹೋಗುತ್ತಾರೆ. ರಾಜ್ಯದಲ್ಲಿ ಅನೇಕ ದಿಗ್ಗಜರು ವಿರೇಂದ್ರ ಪಾಟೀಲ್, ದೇವರಾಜ್ ಅರಸ್ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಬದಲಾವಣೆಯ ಗಾಳಿ ಬೀಸಿತ್ತು. ಮಹಾರಾಷ್ಟ್ರದಲ್ಲಿಯೂ ಇತ್ತಿಚೆಗೆ ಅಂತಹ ಬದಲಾವಣೆಯನ್ನು …
Read More »ಪುಸ್ತಕ ಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿ
ಬೆಂಗಳೂರು: “ನಾನು ಜೀವನದಲ್ಲಿ ಪುಸ್ತಕ ಹಿಡಿದು ಓದಿದವನಲ್ಲ, ಶಾಲೆಯಲ್ಲಿ ಹೇಗೋ ಅಲ್ಪಸ್ವಲ್ಪ ಓದಿ ಪಾಸ್ ಆದೆ. ಡಿಗ್ರಿಯಲ್ಲಿರುವಾಗ ಓದಲೇ ಇಲ್ಲ. ನಾನು ಮಂತ್ರಿಯಾದ ನಂತರ ಮುಕ್ತ ವಿವಿಯಲ್ಲಿ ಪದವಿ ಪಡೆದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಮೊದಲ ಬಾರಿಗೆ ವಿಧಾನ ಸಭೆಗೆ ಬಂದಾಗ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ನಾಣಯ್ಯ ಅವರಂತಹ …
Read More »ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಇದೇ ಮೊದಲ ಬಾರಿಗೆ ಶಕ್ತಿಸೌಧ ವಿಧಾನಸೌಧದ ಆವರಣದಲ್ಲಿ ಸಚಿವಾಲಯದ ವತಿಯಿಂದ ಪುಸ್ತಕ ಜಾತ್ರೆ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪುಸ್ತಕ ಮೇಳಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಅತ್ಯಂತ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. 151 ಪುಸ್ತಕ ಮಳಿಗೆಗಳು ಇವೆ. ಪುಸ್ತಕಪ್ರಿಯರಿಗೆ ಇದೊಂದು ಹಬ್ಬ. ಬೇರೆ ಭಾಷೆಯಿಂದ ಭಾಷಾಂತರ ಆಗಿರುವ ಪುಸ್ತಕಗಳು ಸಹ ಇಲ್ಲಿ ಸಿಗುತ್ತವೆ. ದೇಶ ಸುತ್ತು, ಕೋಶ ಓದು ಅಂತ ಗಾದೆ ಇದೆ. ಜ್ಞಾನ ವಿಕಾಸ ಮಾಡಬೇಕು. …
Read More »ಯತ್ನಾಳ್ ವಿರುದ್ಧ ಅಖಾಡಕ್ಕಿಳಿದ ವಿಜಯೇಂದ್ರ ಬಣ
ಬೆಂಗಳೂರು: ಬಿಜೆಪಿ ಒಡೆದು ಬಣಗಳಾಗಿರುವುದು ಗೊತ್ತಿರದ ವಿಷಯವೇನಲ್ಲ. ಬಿಜೆಪಿಯಲ್ಲಿ ಒಳ ಜಗಳ ಸದ್ಯಕ್ಕಂತೂ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಿಜೆಪಿಯ ಅತೃಪ್ತ ಶಾಸಕ ಬಸನಗೌಡ ಯತ್ನಾಳ್ ಬಿ.ವೈ. ವಿಜಯೇಂದ್ರ ವಿರುದ್ಧ ಲಿಂಗಾಯತ ದಾಳವನ್ನು ಉರುಳಿಸಿದ್ದು, ಈ ಮೂಲಕ ಇಬ್ಬರೂ ನಾಯಕರ ನಡುವೆ ಲಿಂಗಾಯತ ಸಮರ ಶುರುವಾಗಿದೆ. ಮೊನ್ನೆಯಷ್ಟೇ ಯತ್ನಾಳ್ ಪ್ರಮುಖ ಲಿಂಗಾಯತ ನಾಯಕರ ಜೊತೆ ಸಭೆ ಮಾಡಿದ್ದನ್ನು ಸಹಿಸಿಕೊಳ್ಳಲಾಗದ ವಿಜಯೇಂದ್ರ ಬೆಂಬಲಿತ ಗುಂಪು ಇದೀಗ ಯತ್ನಾಳ್ ಅವರಿಗೆ ಟಕ್ಕರ್ ಕೊಡೋಕೆ ಮುಂದಾಗಿದೆ. …
Read More »
Laxmi News 24×7