Breaking News

ರಾಜ್ಯ

ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಆರಂಭಕ್ಕೆ ವಿರೋಧ: ದುಸ್ಥಿತಿ ಕಂಡು ಗವಿಸಿದ್ದೇಶ್ವರ ಸ್ವಾಮೀಜಿ ಕಣ್ಣೀರು

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ನಗರಕ್ಕೆ ಹೊಂದಿಕೊಂಡು ಬಲ್ಡೋಟಾ ಸ್ಟೀಲ್ ಕಾರ್ಖಾನೆ  ಸ್ಥಾಪನೆಗೆ ವಿರೋಧಿಸಿ ಸೋಮವಾರ (ಫೆ.24) ಕೊಪ್ಪಳ ಬಂದ್ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆ ನಡೆಯಿತು. ಈ ಸಭೆಯಲ್ಲಿ ಕೊಪ್ಪಳದ ಸುಪ್ರಸಿದ್ಧ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ (Abhinava Gavisiddeshwara Swamiji) ಕಣ್ಣೀರು ಹಾಕಿದ ಘಟನೆ ನಡೆಯಿತು. ಸಭೆಯಲ್ಲಿ ಈಗಾಗಲೇ ಇರೋ ಅನೇಕ ಸ್ಟೀಲ್ ಪ್ಯಾಕ್ಟರಿಗಳಿಂದ ಸುತ್ತಮುತ್ತಲಿನ ಜನರ ಮೇಲೆ …

Read More »

ಮಹಾಕುಂಭಕ್ಕೆ ಕರೆದೊಯ್ದು ಪತ್ನಿಯ ಕೊಂದು, ಮಕ್ಕಳ ಬಳಿ ನಿಮ್ಮಮ್ಮ ಕಳೆದುಹೋದ್ಲು ಎಂದಿದ್ದ ವ್ಯಕ್ತಿ,

ಪ್ರಯಾಗ್​ರಾಜ್​, ಫೆಬ್ರವರಿ 24: ಮಹಾಕುಂಭಮೇಳಕ್ಕೆಂದು ವ್ಯಕ್ತಿಯೊಬ್ಬ ಪತ್ನಿಯನ್ನು ಕರೆದೊಯ್ದು,  ಕೊಲೆ ಮಾಡಿ, ಮಕ್ಕಳ ಬಳಿ ನಿಮ್ಮ ಅಮ್ಮ ಕಳೆದುಹೋಗಿದ್ದಾಳೆ ಎಂದು ಕಥೆ ಕಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳ ಅಂತಿಮ ಘಟ್ಟಕ್ಕೆ ತಲುಪಿದೆ. ಶಿವರಾತ್ರಿಯಂದು ಕೊನೆಗೊಳ್ಳಲಿದ್ದು ನಿತ್ಯ ಲಕ್ಷಾಂತರ ಭಕ್ತರು ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೆಹಲಿಯ ವ್ಯಕ್ತಿ ತನ್ನ ಪತ್ನಿಯೊಂದಿಗೆ ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಲು  ಪ್ರಯಾಗ್‌ರಾಜ್‌ಗೆ …

Read More »

82ನೇ ದಾಖಲೆಯ ಶತಕ; ಪಾಕ್ ವಿರುದ್ಧ ಗೆಲುವಿನ ಸೆಂಚುರಿ ಬಾರಿಸಿದ ವಿರಾಟ್

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ 5 ನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದಾರೆ. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ 82 ನೇ ಶತಕವಾಗಿದೆ. ಅದೇ ಸಮಯದಲ್ಲಿ, ಪಾಕಿಸ್ತಾನ ವಿರುದ್ಧ ಅವರು ನಾಲ್ಕನೇ ಬಾರಿಗೆ 100 ರನ್​ಗಳ ಗಡಿ ದಾಟಿದ ಸಾಧನೆ ಮಾಡಿದ್ದಾರೆ. ರನ್ ಬರ.. ಕಳಪೆ ಫಾರ್ಮ್​.. ನಿವೃತ್ತಿ ಘೋಷಿಸಿಸಿ… ಕಳೆದ ಕೆಲವು ದಿನಗಳಿಂದ ಕೊಹ್ಲಿ ವಿಚಾರದಲ್ಲಿ ಹಲವು …

Read More »

ಮಹಾರಾಷ್ಟ್ರದಲ್ಲಿ ಕನ್ನಡದ ಬಸ್​ಗಳಿಗೆ ಮಸಿ: ಬೆಳಗಾವಿ-ಮಹಾರಾಷ್ಟ್ರ ಸಂಚಾರ ಸ್ಥಗಿತ

ಬೆಳಗಾವಿ, ಫೆಬ್ರವರಿ 23: ಕನ್ನಡ ಮಾತನಾಡು ಎಂದಿದ್ದಕ್ಕೆ ಕೆಎಸ್​​ಆರ್​ಟಿಸಿ (KSRTC) ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮತ್ತೊಬ್ಬನನ್ನು ಬಂಧಿಸಲಾಗಿದೆ. 2 ದಿನಗಳ ಹಿಂದೆ ಕಂಡಕ್ಟರ್ ಮಹದೇವಪ್ಪ ದೂರು ದಾಖಲಿಸಿದ್ದರು. ಹೀಗಾಗಿ ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ್ದ ಪೊಲೀಸರು, ಇಂದು ಮತ್ತೋರ್ವ ಆರೋಪಿ ಮೋಹನ್ ಹಂಚಿನಮನಿ(25) ಅರೆಸ್ಟ್​ ಮಾಡಿದ್ದಾರೆ. ಸದ್ಯ ಮಾರಿಹಾಳ ಠಾಣೆ ಪೊಲೀಸರಿಂದ ಒಟ್ಟು ಐವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಇನ್ನೂ …

Read More »

ಕುಡಿಯುವ ನೀರು ವ್ಯರ್ಥ ಮಾಡಿದವರಿಗೆ ಜಲಮಂಡಳಿ ದಂಡಾಸ್ತ್ರ: 5.60 ಲಕ್ಷ ರೂ ವಸೂಲಿ

ಬೆಂಗಳೂರು,: ನಗರದಲ್ಲಿ ಕುಡಿಯುವ ನೀರಿನ ಕೊರತೆಯನ್ನು ತಪ್ಪಿಸಲು ಜಲಮಂಡಳಿ (BWSSB) ಇತ್ತೀಚೆಗೆ ಹೊಸ ಆದೇಶ ಹೊರಡಿಸಿತ್ತು. ಆ ಮೂಲಕ ಕುಡಿಯುವ ನೀರನ್ನು ವ್ಯರ್ಥಮಾಡಿದ್ದಲ್ಲಿ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿತ್ತು. ಆದರೂ ಸಿಲಿಕಾನ್​ ಸಿಟಿಯ ಕೆಲ ಜನರು ಕುಡಿವ ನೀರು ವ್ಯರ್ಥಮಾಡಿದ ಹಿನ್ನಲೆ ದಂಡಾಸ್ತ್ರ ಪ್ರಯೋಗ ಮಾಡಲಾಗಿದೆ. ಆ ಮೂಲಕ ಬೇಸಿಗೆ ಆರಂಭದಲ್ಲೇ ಬೆಂಗಳೂರು ಜನತೆಗೆ ಜಲಮಂಡಳಿ ಶಾಕ್ ನೀಡಿದೆ. ಕುಡಿಯುವ ನೀರು ವ್ಯರ್ಥ ಮಾಡಿದವರಿಗೆ ಜಲಮಂಡಳಿ ದಂಡಾಸ್ತ್ರ ಪ್ರಯೋಗ ಮಾಡಿದೆ. 112 ಕೇಸ್ ದಾಖಲಾಗಿದ್ದು, …

Read More »

ಜಾತ್ರೆಗೆ ಹೋಗೋದಾಗಿ ಹೇಳಿದ್ದ ಮಹಿಳೆ ಶವವಾಗಿ ಪತ್ತೆ

ಹಾವೇರಿ, ಫೆಬ್ರವರಿ 23: ಜಾತ್ರೆಗೆ ಎಂದು ಮನೆಯಿಂದ ಹೋಗಿದ್ದ ಮಹಿಳೆ (woman) ದಾರಿ ಮಧ್ಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅರೆ ಬೆತ್ತಲಾಗಿ ಬಿದ್ದಿದ್ದಳು. ಅದನ್ನು ಕಂಡ ದೇವಸ್ಥಾನದ ಪೂಜಾರಿ ಅಲ್ಲೆ ಇದ್ದ ಭಿಕ್ಷುಕರಿಗೆ ಹೇಳಿ ಬಟ್ಟೆ ಉಡಿಸಿ ಸ್ಥಳಿಯರ ಸಹಾಯದಿಂದ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ತೀವ್ರ ಹಲ್ಲೆಗೊಳಗಾದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಎಂಟು ದಿನದ ನಂತರ ಸಾವನಪ್ಪಿದ್ದಾರೆ. ಇದು ರೇಪ್ ಆ್ಯಂಡ್​ ಮರ್ಡರ್ ಅಂತ ಸಂಬಂಧಿಕರು ಆರೋಪಿಸುತ್ತಿದ್ದಾರೆ.ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಮಹಿಳೆಯ …

Read More »

ಛತ್ರಪತಿ ಶಿವಾಜಿ ಮಹಾರಾಜರ ಸುವರ್ಣ ಮಹೋತ್ಸವ ಮತ್ತು 398 ನೇ ಜನ್ಮದಿನ ಆಚರಣೆ

ಬೆಂಗಳೂರು : ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತು (ಕೆಕೆಎಂಪಿ) ಬೆಂಗಳೂರಿನ ವಸಂತ ನಗರದ ಕೆಕೆಎಂಪಿ ಕಲ್ಯಾಣ ಮಂಟಪದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 398 ನೇ ಜನ್ಮ ದಿನಾಚರಣೆಯ ಜೊತೆಗೆ ತನ್ನ ಸುವರ್ಣ ಮಹೋತ್ಸವವನ್ನು ಯಶಸ್ವಿಯಾಗಿ ಆಯೋಜಿಸಿತು. ಕಾರ್ಯಕ್ರಮದಲ್ಲಿ ಗಣ್ಯರು, ಸಮುದಾಯ ಮುಖಂಡರು ಮತ್ತು ಫಲಾನುಭವಿಗಳು ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಗವಿಪುರಂ ಗೋಸಾಯಿ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ …

Read More »

ವಿಕೋಪಕ್ಕೆ ತಿರುಗಿದ ಮುಸುರೆ ನೀರು ಚೆಲ್ಲುವ ವಿವಾದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!!!

ವಿಕೋಪಕ್ಕೆ ತಿರುಗಿದ ಮುಸುರೆ ನೀರು ಚೆಲ್ಲುವ ವಿವಾದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!!! ಮುಸುರೆ‌ ನೀರು ಚೆಲ್ಲುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದು ಹಲ್ಲೆಯಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಗ್ರಾಮದಲ್ಲಿ ಮುಸುರೆ‌ ನೀರು ಚೆಲ್ಲುವ ವಿಚಾರಕ್ಕೆ ಸಂಬಂಧಿಸಿದಂತೆ ಕೋಳಿಕೊಪ್ಪ ಗ್ರಾಮದ ರಾಕೇಶ ಜಾಧವ್ ಎಂಬಾತ ರಾಕೇಶ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾನೆ. …

Read More »

ಇಳಕಲ್ ಸೀರೆಯಲ್ಲಿ ಸಂದೇಶ ನೇಯ್ದು ಪಿಎಂ ಮೋದಿಗೆ ರವಾನೆ…!!

ಆನಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ನಿಷೇಧಿಸಲು ವಿನೂತನ ಅಭಿಯಾನ… ಇಳಕಲ್ ಸೀರೆಯಲ್ಲಿ ಸಂದೇಶ ನೇಯ್ದು ಪಿಎಂ ಮೋದಿಗೆ ರವಾನೆ…!! ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್‌ಗಳ ಹಾವಳಿ ಹೆಚ್ಚಾಗಿದ್ದು, ಯುವಕರು ಬೆಟ್ಟಿಂಗ್ ಆ್ಯಪ್ ಮಾರು ಹೋಗಿ ದುಡ್ಡು ಕಳೆದುಕೊಂಡು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಬಾಗಲಕೋಟೆಯ ಇಳಕಲನ ನೇಕಾರ ಮೇಘರಾಜ್ ಗುದ್ದಟ್ಟಿ ಆನ್‌ಲೈನ್ ಆ್ಯಪ್‌ಗಳನ್ನು ನಿಷೇಧಿಸಿ ಎಂದು ವಿಭಿನ್ನ ಅಭಿಯಾನ ಹಮ್ಮಿಕೊಂಡಿದ್ದಾರೆ. ಕನ್ನಡ ನಾಡಿನ ಹೆಮ್ಮೆಯ ಜಗತ್ಪ್ರಸಿದ್ಧ ಇಳಕಲ್ ಸೀರೆಯ ಸೆರಗಿನಲ್ಲಿ, …

Read More »

ಕಸ ಗೂಡಿಸಿದ ಖಾನಾಪುರ ಎಂಎಲ್ಎ ಹಾಗೂ ಪ.ಪಂ ಅಧ್ಯಕ್ಷೆ

ಕಸ ಗೂಡಿಸಿದ ಖಾನಾಪುರ ಎಂಎಲ್ಎ ಹಾಗೂ ಪ.ಪಂ ಅಧ್ಯಕ್ಷೆ ಖಾನಾಪೂರ ಮಲಪ್ರಭಾ ನದಿ ದಂಡೆಯಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಪಟ್ಟಣ ಪಂಚಾಯಿತಿ ಪ್ರತಿನಿಧಿಗಳೊಂದಿಗೆ ಸೇರಿ ಕಸ ಗೂಡಿಸಿ ಸ್ವಚ್ಛಗೊಳಿಸಿದರು. ಮಲಪ್ರಭಾ ನದಿ ದಂಡೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಮಾಡಿದ ತ್ಯಾಜ್ಯ ಹಾಗೂ ಪ್ರವಾಸಿಗರು ಬಿಸಾಡಿದ ನೀರಿನ ಬಾಟಲ್ ಸಹಿತ ರಾಶಿಯಾಗಿ ಬಿದ್ದಿದ್ದ ಕಸವನ್ನು ಶಾಸಕ ವಿಠ್ಠಲ ಹಲಗೆಕರ್ ಅವರು ತಮ್ಮ ಕೈಯಿಂದಲೇ ಬುಟ್ಟಿಗೆ ತುಂಬಿದರು. ಅದರಂತೆಯೇ ಪಟ್ಟಣ ಪಂಚಾಯಿತಿಯ …

Read More »