Breaking News

ರಾಜ್ಯ

ಗಾಂಧೀಜಿ ಕಲ್ಪನೆಯ ಸ್ವದೇಶಿ, ಗ್ರಾಮ ಸ್ವರಾಜ್ ಬಲಪಡಿಸಲು ಖಾದಿ ಖರೀದಿಸಿ: ಚನ್ನರಾಜ ಹಟ್ಟಿಹೊಳಿ

ಬೈಲಹೊಂಗಲ: ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘದ ಸಹಯೋಗದಲ್ಲಿ ಬೈಲಹೊಂಗಲ ನಗರದಲ್ಲಿ ಆರಂಭಿಸಲಾಗಿರುವ ‘ಖಾದಿಲೂಮ್’ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಕೈಯಿಂದ ನೇಯ್ದ ಖಾದಿ ಹಾಗೂ ರೇಷ್ಮೆ ಬಟ್ಟೆಗಳು ಮಳಿಗೆಯಲ್ಲಿ ಲಭ್ಯವಿವೆ. ಖಾದಿ ಬಟ್ಟೆಗಳಿಗೆ ಪ್ರಾಮುಖ್ಯತೆ ನೀಡಲು ಈ ಮಳಿಗೆ ಆರಂಭಿಸಲಾಗಿದ್ದು, ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಸ್ವದೇಶಿ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಖಾದಿ ಖರೀದಿಸೋಣ. ತನ್ಮೂಲಕ ನೇಕಾರರ ಆರ್ಥಿಕ …

Read More »

ಗ್ರಾಹಕರ ಸೋಗಿನಲ್ಲಿ ಬ್ಯಾಂಕ್​ನಲ್ಲಿ ಹೊಂಚು ಹಾಕಿ ಹಣ ದೋಚುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ಬ್ಯಾಂಕ್​ನಲ್ಲಿ ಹಣ ಡ್ರಾ ಮಾಡುವ ಗ್ರಾಹಕರನ್ನು ಹಿಂಬಾಲಿಸಿಕೊಂಡು ಬಂದು ಹಣ ದೋಚುತ್ತಿದ್ದ ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್​​ನ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ದೇವನಹಳ್ಳಿಯ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ಕೆ. ಹರಿಕೃಷ್ಣ ಮತ್ತು ತಮಿಳುನಾಡಿನ ಕೆ. ಸುಧಾಕರ್ ಬಂಧಿತ ಆರೋಪಿಗಳು. ಬಂಧಿತರಿಬ್ಬರು ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಜ. 4ರಂದು ಗ್ರಾಹಕರೊಬ್ಬರ ಹಣ ದೋಚಿ ಪರಾರಿಯಾಗಿದ್ದರು.   ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ …

Read More »

ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಆರೋಪ : ಫೈನಾನ್ಸ್ ಮ್ಯಾನೇಜರ್ ಬಂಧನ

ದಾವಣಗೆರೆ : ಸ್ನೇಹಿತರ ಹೆಸರಿನಲ್ಲಿ ಖಾತೆಗಳನ್ನು ತೆರೆದು ತಮ್ಮದೇ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪದಡಿ ಮ್ಯಾನೇಜರ್​ವೊಬ್ಬರನ್ನು ಜಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗಳೂರು ಪಟ್ಟಣದ ಕೆಎಲ್ಎಂ ಆ್ಯಕ್ಸಿವ್ ಫಿನ್ ವೆಸ್ಟ್ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಅರವಿಂದ ಹನುಮಂತ ಬಂಧಿತ ಆರೋಪಿ.‌   ಬಂಧಿತ ಆರೋಪಿಯು ಫೈನಾನ್ಸ್ ಕಂಪನಿಯಲ್ಲಿ ಮ್ಯಾನೇಜರ್​ ಆಗಿ ಕಾರ್ಯನಿರ್ವಹಿಸುತ್ತಿದ್ದು, ಸ್ನೇಹಿತರ ಹೆಸರಿನಲ್ಲಿ ಖಾತೆಗಳನ್ನು ತೆರೆದು ನಕಲಿ ಬಂಗಾರದ ಆಭರಣಗಳನ್ನು ಅಡವಿಟ್ಟಿದ್ದರು. ಬಳಿಕ …

Read More »

ಮೈಕ್ರೋ ಫೈನಾನ್ಸ್​ ಸಂಸ್ಥೆಗಳ ಕಿರುಕುಳ ನಿಯಂತ್ರಿಸಲು ಶೀಘ್ರದಲ್ಲೇ ಸುಗ್ರೀವಾಜ್ಞೆ :ಡಿ ಕೆ ಶಿ

ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೋ ಫೈನಾನ್ಸ್​ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ, ಕಾನೂನು ಕೈಗೆ ತೆಗೆದುಕೊಂಡು, ಬಡವರ ಮೇಲೆ ದಬ್ಬಾಳಿಕೆ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಇದನ್ನು ನಿಯಂತ್ರಿಸಲು ಪೊಲೀಸರಿಗೆ ಹೆಚ್ಚಿನ …

Read More »

ಒಕ್ಕುಂದ ಗ್ರಾಮದ 10ನೇ ವರ್ಷದ ಉತ್ಸವ ಮೆರವಣಿಗೆಯಲ್ಲಿ ಗೊಂಬೆ ಮತ್ತು ಡೊಳ್ಳು ಕುಣಿತ ಗಮನ ಸೆಳೆದವು.

ಬೈಲಹೊಂಗಲ : ತಾಲೂಕಿನ ಒಕ್ಕುಂದ ಗ್ರಾಮದಲ್ಲಿ ತಿರುಳ್ಗನ್ನಡನಾಡು ಒಕ್ಕುಂದ ಉತ್ಸವ ನಿಮಿತ್ತ ಶನಿವಾರ ಬೆಳಗ್ಗೆ ಅಮೋಘವರ್ಷ ನೃಪತುಂಗ ಜ್ಯೋತಿ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. ಗೊಂಬೆ ಮತ್ತು ಡೊಳ್ಳು ಕುಣಿತ ಮೆರವಣಿಗೆಯಲ್ಲಿ ಗಮನ ಸೆಳೆದವು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಒಕ್ಕುಂದ ಗ್ರಾಮದ 10ನೇ ವರ್ಷದ ಉತ್ಸವ ಹಿನ್ನೆಲೆ ಮಲಪ್ರಭಾ ನದಿ ದಂಡೆಯ ಮೇಲೆ ನೃಪತುಂಗ ಜ್ಯೋತಿಗೆ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಪರಮಪೂಜ್ಯ ರಾಚೋಟಿ ಸ್ವಾಮೀಜಿ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ …

Read More »

ಮೈಕ್ರೋ ಫೈನಾನ್ಸ್​​ ಕಿರುಕುಳ ಆರೋಪಕ್ಕೆ ಹಾವೇರಿ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ಹಾವೇರಿ: ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ ಕೇಳಿಬಂದಿದೆ. ರಾಣೇಬೆನ್ನೂರು ನಗರದ ಅಡವಿ ಆಂಜನೇಯ ಬಡಾವಣೆಯ 42 ವರ್ಷದ ಮಾಲತೇಶ್ ಅರಸಿಕೇರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೈಕ್ರೋ ಫೈನಾನ್ಸ್​​ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮಾಲತೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಮಾಲತೇಶ್ ಅಡವಿ ಆಂಜನೇಯ ಬಡಾವಣೆಯಲ್ಲಿ ಹೇರ್ ಕಟಿಂಗ್ ಸಲೂನ್​ ನಡೆಸುತ್ತಿದ್ದರು. ಮಾಲತೇಶ್ – ಗೀತಾ ದಂಪತಿ ನಾಲ್ಕು ಲಕ್ಷಕ್ಕೂ ಅಧಿಕ ಸಾಲ …

Read More »

ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ದಂಡ ವಿಧಿಸಿರುವ ಜಿಲ್ಲಾ ಗ್ರಾಹಕರ ಆಯೋಗ,

ಧಾರವಾಡ: ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ, ಪರಿಹಾರ ನೀಡಲು ಆದೇಶಿಸಿದೆ. ಧಾರವಾಡದ ನಿವಾಸಿ, ವಕೀಲ ಚೇತನ್​ಕುಮಾರ ಈಟಿ ಎಂಬವರು 23,999 ರೂ ಮೌಲ್ಯದ ಹೊಸ ಮೊಬೈಲ್​​ ಅನ್ನು ಬಜಾಜ್ ಫೈನಾನ್ಸ್ ಕಂಪೆನಿಯಿಂದ ಸಾಲ ಪಡೆದು ಖರೀದಿಸಿದ್ದರು. ಆ ಮೊಬೈಲ್‌ಗೆ ಆದಿತ್ಯ ಬಿರ್ಲಾ ವಿಮಾ ಕಂಪೆನಿಯಲ್ಲಿ 1 ಲಕ್ಷ ರೂ. ಮೊತ್ತದ ಗ್ರೂಪ್ ಹೆಲ್ತ್ ವಿಮೆ ಮಾಡಿಸಿದ್ದರು. 23/02/2023ರಂದು ದೂರುದಾರರು …

Read More »

ತ್ರಿವೇಣಿ ಸಂಗಮದಲ್ಲಿ ಮಿಂದವರು ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂದರು!

ಪ್ರಯಾಗ್​​ರಾಜ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ ಬಾಯ್ಮುಚ್ಚಿಕೊಂಡು ಕೆಲಸ ಮಾಡಿ ಅಂತ ರಾಜ್ಯದ ಕಾಂಗ್ರೆಸ್ ನಾಯಕರನ್ನು ಗದರುವ ಬದಲು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ವಿಷಯದಲ್ಲಿ ಆಗಿರಬಹುದಾದ ಒಪ್ಪಂದದ ಬಗ್ಗೆ ಅಂತ ಹೇಳಿದ್ದರೆ ಇಂಥ ಉಪದ್ವ್ಯಾಪಗಳಿಗೆ ಅವಕಾಶವಿರುತ್ತಿರಲಿಲ್ಲ. ಇಲ್ನೋಡಿ, ಬೆಳಗಾವಿಯ ಮೂರ್ನಾಲ್ಕು ಜನ ಪ್ರಯಾಗ್​ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿ ನದಿತೀರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಫೋಟೋವೊಂದನ್ನು ಹಿಡಿದು ಮುಂದಿನ …

Read More »

ಹೈಕಮಾಂಡ್​​ ಮುಂದೆ ಮೂರು ಬೇಡಿಕೆ ಇಟ್ಟ ಯತ್ನಾಳ್

ಬೆಂಗಳೂರು, : ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವರ್ಸಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಅಂತಿಮ ಹಂತದ ಕದನ ದಿಲ್ಲಿಗೆ ಶಿಫ್ಟ್ ಆಗಿದೆ. ಈಗಾಗಲೇ ಬೆಂಗಳೂರಿನಿಂದ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮತ್ತು ಎನ್‌.ಆರ್ ಸಂತೋಷ್ ದೆಹಲಿಗೆ ತೆರಳಿದ್ದು, ಇನ್ನು ನಾಳೆ(ಫೆಬ್ರವರಿ 04) ಬಸನಗೌಡ ಪಾಟೀಲ್ ಯತ್ನಾಳ್, ಬಿ.ಪಿ ಹರೀಶ್ ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ್ ದೆಹಲಿಗೆ ತೆರಳಲಿದ್ದಾರೆ. ಇದಲ್ಲದೇ ಯತ್ನಾಳ್​ ಟೀಮ್ …

Read More »

ಬಾಲಕಿಯನ್ನು ಕರೆದ್ಯೊಯ್ದು ಸುಲೇಮಾನ್ ಅತ್ಯಾಚಾರ: ವಿಡಿಯೋ ಮಾಡಿದ ಅಲ್ತಾಫ್ ಅರೆಸ್ಟ್!

ಗದಗ, ): ಮಂಡ್ಯದಲ್ಲಿ 8 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಇಂದು (ಫೆಬ್ರವರಿ 03) ಗದಗನಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದ್ಯೊಯ್ದು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು,  ಕಾಮಾಂಧರ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.  ಅತ್ಯಾಚಾರಿ ಆರೋಪಿ ಸುಲೇಮಾನ್​ ಸೇರಿದಂತೆ ಅತ್ಯಾಚಾರ ಎಸಗುವುದನ್ನು ವಿಡಿಯೋ ಮಾಡಿದ್ದ …

Read More »