Breaking News

ರಾಜ್ಯ

ಫೆ. 5 ರಿಂದ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ ನೀರು

ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವರ 2024-25ನೇ ಸಾಲಿನ ಜಾತ್ರೆ ಮತ್ತು ಕಾರ್ಣಿಕೋತ್ಸವ ಇದೇ ತಿಂಗಳಲ್ಲಿ ಜರುಗಲಿದೆ. ಈ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಫೆಬ್ರವರಿ 5 ರಿಂದ 11ರ ವರೆಗೆ 5,800 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಫೆಬ್ರವರಿ 5ರ ರಾತ್ರಿ 100 ಕ್ಯೂಸೆಕ್​ ಮತ್ತು ಫೆಬ್ರವರಿ 6 ರಿಂದ ಫೆಬ್ರವರಿ 11ರ ವರೆಗೆ ಪ್ರತಿದಿನ 800 …

Read More »

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ವಾಟಾಳ್ ನಾಗರಾಜ್​ರಿಂದ ಒನಕೆ ಪ್ರತಿಭಟನೆ

ಮೈಸೂರು : ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲಗಾರರಿಗೆ ನೀಡುತ್ತಿರುವ ಹಿಂಸೆ ಹಾಗೂ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಒನಕೆ ಹಿಡಿದು ವಿನೂತನವಾಗಿ ಭಾನುವಾರ ಹಾರ್ಡಿಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳ ಕಪ್ಪು ಹಣ ತಂದು ರಾಜ್ಯದ ಜನರಿಗೆ ಹಿಂಸೆ ಕೊಡುವ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ತಲೆ …

Read More »

ಪ್ರಾಜೆಕ್ಟ್ ಹೆಲ್ಮೆಟ್” ರಸ್ತೆ ಸುರಕ್ಷಾ, ಜಾಗೃತಿ ಅಭಿಯಾನಕ್ಕೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ಗುಲಾಬಿ ಹೂವು ನೀಡಿ ಹೆಲ್ಮೆಟ್ ಧರಿಸುವಂತೆ ವಿನಂತಿ

ಪ್ರಾಜೆಕ್ಟ್ ಹೆಲ್ಮೆಟ್” ರಸ್ತೆ ಸುರಕ್ಷಾ, ಜಾಗೃತಿ ಅಭಿಯಾನಕ್ಕೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ಗುಲಾಬಿ ಹೂವು ನೀಡಿ ಹೆಲ್ಮೆಟ್ ಧರಿಸುವಂತೆ ವಿನಂತಿ ಬೆಳಗಾವಿ ನಗರ ಪೊಲೀಸ ವತಿಯಿಂದ ಹಮ್ಮಿಕೊಂಡ “ಪ್ರಾಜೆಕ್ಟ್ ಹೆಲ್ಮೆಟ್” ರಸ್ತೆ ಸುರಕ್ಷಾ, ಜಾಗೃತಿ ಮತ್ತು ಜಾರಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಚಾಲನೆಯನ್ನು ನೀಡಿದರು. ಬೆಳಗಾವಿ ನಗರ ಪೊಲೀಸನ ವತಿಯಿಂದ ಹಮ್ಮಿಕೊಂಡಿದ್ದ “ಪ್ರಾಜೆಕ್ಟ್ ಹೆಲ್ಮೆಟ್” ರಸ್ತೆ ಸುರಕ್ಷಾ, ಜಾಗೃತಿ ಮತ್ತು …

Read More »

ಕಾಂಗ್ರೆಸ್ಸಿನ ಪ್ರಬಲ ಶಾಸಕ ಬಿ ಆರ್ ಪಾಟೀಲ್ ರಾಜೀನಾಮೆ

ಕಾಂಗ್ರೆಸ್ಸಿನ ಪ್ರಬಲ ಶಾಸಕ ಬಿ ಆರ್ ಪಾಟೀಲ್ ರಾಜೀನಾಮೆ ಕಾರಣವೇನು ಗೊತ್ತಾ… ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಆಘಾತ ಎದುರಾಗಿದ್ದು ಕಾಂಗ್ರೆಸ್ಸಿನ ಪ್ರಬಲ ಶಾಸಕ ಬಿ ಆರ್ ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಸಚಿವ ಸ್ಥಾನಕ್ಕಾಗಿ ನಾನು ಕೆಳಮಟ್ಟದ ರಾಜಕಾರಣ ಮಾಡುತ್ತಿಲ್ಲ ಎಂದು ಬಿ.ಆರ್. ಪಾಟೀಲ್ ಸ್ಪರ್ಷಪಡಿಸಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೊದಲೇ ರಾಜೀನಾಮೆ ಕೊಡುವ ನಿರ್ಧಾರವನ್ನು …

Read More »

ಬಿಮ್ಸನಲ್ಲಿ ಆತಂಕ ಸೃಷ್ಠಿಸಿದ ನಕಲಿ ವಿದ್ಯಾರ್ಥಿ ಓಡಾಟ…!!! ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಪಿಜಿ ವಿದ್ಯಾರ್ಥಿ ಎಂದು ಹೇಳಿ ಬಿಮ್ಸ್ ಆಸ್ಪತ್ರೆಯಲ್ಲಿ ಯುವಕನೊಬ್ಬ ಹುಚ್ಚಾಟ ನಡೆಸಿದ್ದಾನೆ. ಈತನ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ವೇಷ ಧರಿಸಿ ಬೀಮ್ಸ್ ಆಸ್ಪತ್ರೆಯ ಈತ, ಕ್ಲಾಸ್ ರೂಂ, ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಓಡಾಟ ನಡೆಸಿದ್ದಾನೆ. ಬಿಮ್ಸ್ ನಲ್ಲಿ ಬಂದು ಕುಳಿತು ವಿದ್ಯಾರ್ಥಿಗಳಿಗೆ ಆತಂಕ ಸೃಷ್ಟಿಸಿದ ಘಟನೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಮ್ಸ್ ನಲ್ಲಿ ನರ್ಸಿಂಗ್ ಸ್ಟಾಪ್, ‌ವಿದ್ಯಾರ್ಥಿಗಳ ಜೊತೆಗೆ …

Read More »

ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರೇ ಹುಷಾರ್: 10 ವರ್ಷದವರೆಗೆ ಶಿಕ್ಷೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡುವ ಕಸರತ್ತು ನಡೆಸುವ ಮಧ್ಯೆಯೇ ಇತ್ತ ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರ ಮೇಲೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನಿನ ತಿದ್ದುಪಡಿಗೆ ಸಹಕಾರ ಇಲಾಖೆಯೂ ಸಿದ್ಧತೆ ನಡೆಸಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿಗಾರರ ವಿರುದ್ಧ ನಿಯಂತ್ರಣ ಹೇರಲು ಇರುವ ಕಾನೂನನ್ನೇ ಪ್ರಯೋಗ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುಗ್ರೀವಾಜ್ಞೆ …

Read More »

ವೇಶ್ಯಾವಾಟಿಕೆ ದಂಧೆ: ಲಾಡ್ಜ್​​​​​​​​​​ ಮೇಲೆ ಪೊಲೀಸ್ ದಾಳಿ –

ಚಾಮರಾಜನಗರ: ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೊಳ್ಳೇಗಾಲ ಪೊಲೀಸರು ಶನಿವಾರ ರಾತ್ರಿ ಇಲ್ಲಿನ ಲಾಡ್ಜ್‌ವೊಂದರ ಮೇಲೆ ಮಾಡಿದ್ದು ನಾಲ್ವರು ಮಹಿಳೆಯರು, ನಾಲ್ವರು ಪುರುಷರು ಹಾಗೂ ಲಾಡ್ಜ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ಪಟ್ಟಣದ ಹೃದಯಭಾಗದಲ್ಲಿರುವ ಶೆಟ್ಟೀಸ್ ಫೋರಂನ ಜಶ್ವಂತ್ ರೆಸಿಡೆನ್ಸಿ ಲಾಡ್ಜ್​ ಮೇಲೆ ಪೊಲೀಸ್ ವೃತ್ತ ನಿರೀಕ್ಷಕ ಶಿವಮಾದಯ್ಯ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

Read More »

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಆರಂಭದಲ್ಲೇ ವಿಘ್ನ

ಧಾರವಾಡ: ಸುದೀರ್ಘ ಹೋರಾಟದ ಫಲವಾಗಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ರಾಜ್ಯ ಸರ್ಕಾರ ಅಸ್ತು ಅಂದಿದೆ. ಇನ್ನೇನು ಕಾರ್ಯಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವಷ್ಟರಲ್ಲಿ ಹೊಸ ಪಾಲಿಕೆ ಸೇರಲು ಕೆಲ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್​ಗಳನ್ನು ವಿಂಗಡಿಸಿ, 26 ವಾರ್ಡ್​​ ಧಾರವಾಡಕ್ಕೆ ನೀಡಿ ಪ್ರತ್ಯೇಕ ಪಾಲಿಕೆ ಘೋಷಿಸಲಾಗಿದೆ. ಈ ಕುರಿತು ಸರ್ಕಾರ ಇತ್ತೀಚೆಗೆ ಗೆಜೆಟ್ ನೋಟಿಪಿಕೇಷನ್​ ಸಹ ಮಾಡಿದೆ. ಇದರ ನಡುವೆ ಧಾರವಾಡ ಸುತ್ತಮುತ್ತಲಿನ ಗ್ರಾಮಗಳನ್ನೂ …

Read More »

ವಿವಿಧ ಕ್ಷೇತ್ರಗಳ 9 ಸಾಧಕರಿಗೆ ‘ವೇದಾಂತ ಎಕ್ಸ್‌ಲೆನ್ಸ್‌ ಅವಾರ್ಡ್‌’ ಪ್ರದಾನ ‘ಪುರಸ್ಕಾರದಿಂದ ಕ್ರಿಯಾಶೀಲತೆ ಹೆಚ್ಚಳ’

ವಿವಿಧ ಕ್ಷೇತ್ರಗಳ 9 ಸಾಧಕರಿಗೆ ‘ವೇದಾಂತ ಎಕ್ಸ್‌ಲೆನ್ಸ್‌ ಅವಾರ್ಡ್‌’ ಪ್ರದಾನ ‘ಪುರಸ್ಕಾರದಿಂದ ಕ್ರಿಯಾಶೀಲತೆ ಹೆಚ್ಚಳ’ ಬೆಳಗಾವಿ: ‘ವಿವಿಧ ರಂಗಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ಪುರಸ್ಕಾರ ನೀಡಿರುವ ಕಾರ್ಯ ಶ್ಲಾಘನೀಯ. ಇದರಿಂದ ತಮ್ಮ ಜವಾಬ್ದಾರಿ ಹೆಚ್ಚಿದ್ದು, ಇನ್ನಷ್ಟು ಕ್ರಿಯಾಶೀಲ, ಪ್ರಾಮಾಣಿಕವಾಗಿ ತಾವು ಸೇವೆ ಸಲ್ಲಿಸಲು ಉತ್ಸಾಹ ಬರುತ್ತದೆ’ ಎಂದು ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಜೆ.ಭಜಂತ್ರಿ ಹೇಳಿದರು. ಇಲ್ಲಿನ ಮಹಿಳಾ ವಿದ್ಯಾಲಯದಲ್ಲಿ ವೇದಾಂತ ಫೌಂಡೇಷನ್ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರಿಗೆ …

Read More »

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ

ಬೆಂಗಳೂರು: ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್ ಅಲಿಯಾಸ್ ಸೈಕೋ ಕಿರಣ್ (21) ಬಂಧಿತ ಆರೋಪಿ. ಪ್ರೊಕ್ಲಮೇಷನ್ ಹಾಗೂ ವಾರೆಂಟ್‌ಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ಶುಕ್ರವಾರ ಹೆಚ್ಎಎಲ್‌ ಠಾಣೆ ಪೊಲೀಸರ ತಂಡ ತೆರಳಿತ್ತು. ಪೊಲೀಸರ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಘಟನೆಯಲ್ಲಿ ಎಚ್ಎಎಲ್ ಠಾಣೆಯ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿದ್ದವು ವರದಿಯಾಗಿದೆ. ಬಳಿಕ ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯ …

Read More »