Breaking News

ರಾಜ್ಯ

ಬೆಂಗಳೂರು: KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದ್ದು, ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು: KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದ್ದು, ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, KAS ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ.‌ ಮುಂದಿನ 10 ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ನಮಗೆ …

Read More »

ಸಾರಿಗೆ ನಿಗಮಗಳ ಪರಿಸ್ಥಿತಿ ಸುಧಾರಣೆ ಬಗ್ಗೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ (

ಬೆಂಗಳೂರು: ಸರ್ಕಾರ ವಾರ್ಷಿಕ 2,000 ಕೋಟಿ ರೂ. ಅನುದಾನ ನೀಡಿದರೆ ರಸ್ತೆ ಸಾರಿಗೆ ನಿಗಮಗಳ ಪರಿಸ್ಥಿತಿ ಸುಧಾರಣೆಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.‌ ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ವಾರ್ಷಿಕ ರಸ್ತೆ ಸಾರಿಗೆ ನಿಗಮಗಳಿಗೆ 2,000 ಕೋಟಿ ಅನುದಾನ ನೀಡಿದರೆ ಪರಿಸ್ಥಿತಿ ಸುಧಾರಣೆ ಆಗಲಿದೆ. ಈಗ ವಾರ್ಷಿಕ 500-300 ಕೋಟಿ ರೂ. ವರೆಗೆ ಅನುದಾನ ನೀಡಲಾಗುತ್ತಿದೆ. ರಸ್ತೆ ಸಾರಿಗೆ ನಿಗಮಗಳ ಸುಧಾರಣೆ ಕ್ರಮಗಳ ಬಗ್ಗೆ …

Read More »

ಸಿಎಂ ಜೊತೆ ಊಟ ಇದೇ ಮೊದಲೇನಲ್ಲ ಎಂದ ಸತೀಶ್ ಜಾರಕಿಹೊಳಿ

ಸಿಎಂ ಜೊತೆ ಊಟ ಇದೇ ಮೊದಲೇನಲ್ಲ ಎಂದ ಸತೀಶ್ ಜಾರಕಿಹೊಳಿ: ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ್ದ ಸಚಿವ ಸತೀಶ್‌ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ನಾವು ಸೇರಿದ್ದೇವೆ ಎಂದು ಹೇಳಿದ್ದರು. ಕುವೆಂಪು ನಗರದ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ನಾವು ಅವರ ಮನೆಗೆ ಹೋಗುತ್ತೇವೆ. ಅವರು ನಮ್ಮ ಮನೆಗೆ ಬರುತ್ತಾರೆ. ಸಿಎಂ …

Read More »

‘ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು:C.M.

ಬೆಂಗಳೂರು: ”ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.‌ ವಿಧಾನಸೌಧದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ”ಸಚಿವ ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆಯಾ ಎಂಬ ಪ್ರಶ್ನೆಗೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು, ಅವೆಲ್ಲಾ ಸುಳ್ಳು. ಯಾವ ಬದಲಾವಣೆಯೂ ಇಲ್ಲ. ಯಾವುದೂ ಇಲ್ಲ” ಎಂದು ಸ್ಪಷ್ಟಪಡಿಸಿದರು. ”ಊಟಕ್ಕೆ ಸೇರಿದರೆ ಅದನ್ನೇ ಸಭೆ ನಡೆಸಿದ್ದಾರೆ ಎಂದು ಊಹೆ ಮಾಡಿದರೆ ಏನು …

Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಣ ರಾಜಕೀಯ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ರಾಜ್ಯದ ನಾಯಕರೊಂದಿಗೆ ಸುದೀರ್ಘ ಚರ್ಚೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿರುವ ಬಣ ರಾಜಕೀಯವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಬಿಜೆಪಿ ನಾಯಕರುಗಳ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ್ದ ಜೆ.ಪಿ.ನಡ್ಡಾ, ಬಿಜೆಪಿಯ ಬಣ ರಾಜಕೀಯಕ್ಕೆ ಅಂತ್ಯ ಹಾಡಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ಹುಡುಕಲು ಏನೆಲ್ಲಾ ಮಾಡಬೇಕು, ಪಕ್ಷದ ಮಟ್ಟದಲ್ಲಿ ಯಾವ ತೀರ್ಮಾನಗಳು ಆಗಬೇಕು, ಯಾವ ರೀತಿ ಪಕ್ಷದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂಬೆಲ್ಲ ವಿಚಾರವಾಗಿ ರಾಜ್ಯ ಬಿಜೆಪಿಯ ಪ್ರಮುಖ ಮುಖಂಡರ ಜತೆ ಸುದೀರ್ಘ …

Read More »

ಸರ್ಕಾರದ ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಹತ್ತು ಹಲವು ಯೋಜನೆ

ಹಾವೇರಿ : ರಾಜ್ಯ ಸರ್ಕಾರ ರಾಜ್ಯದ ವಿವಿಧೆಡೆ 50 ಅಕ್ಕ ಕೆಫೆ ನಿರ್ಮಿಸಿದೆ. ಜಿಲ್ಲೆಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಿರ್ಮಾಣಗೊಂಡಿರುವ ಅಕ್ಕ ಕೆಫೆಯನ್ನು ಲಿಂಗತ್ವ ಅಲ್ಪಸಂಖ್ಯಾತರೇ ನಿರ್ವಹಣೆ ಮಾಡಲಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ನೇತೃತ್ವದಲ್ಲಿ ನಡೆಯುವ ಅಕ್ಕ ಕೆಫೆ ನಾಳೆಯಿಂದ ಪ್ರಾರಂಭವಾಗಲಿದೆ. ಹಾವೇರಿಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುಮಾರು 15 ಲಕ್ಷ ರೂಪಾಯಿ ಅನುದಾನದಲ್ಲಿ ಅಕ್ಕ ಕೆಫೆಯನ್ನ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಪ್ರಥಮ ಭಾರಿಗೆ ಲಿಂಗತ್ವ ಅಲ್ಪಸಂಖ್ಯಾತರು ಇದರ …

Read More »

ಕಾಮಗಾರಿ ನಡೆಯುತ್ತಿದ್ದ ಜಾಗದ ಮೋರಿಯೇ ಇತನ ಬಾಳಿಗೆ ಕಂಟಕ

ಬೆಂಗಳೂರು, (ಜನವರಿ 03): ಬೆಂಗಳೂರಿನ ಹೆಸರಘಟ್ಟ ರಸ್ತೆಯ ಲಕ್ಷ್ಮಿಪುರದ ನಿವಾಸಿ ಹರೀಶ್ ನಿನ್ನೆ ರಾತ್ರಿ 9.5ರ ಸುಮಾರು ತನ್ನ ಚಿಕ್ಕಮ್ಮನ ಮನೆಗೆ ತೆರಳಬೇಕಿತ್ತು. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ‌ ಹರೀಶ್, ರಾತ್ರಿ ಊಟ ತೆಗೆದುಕೊಂಡು ತನ್ನ ಮನೆಗೆ ಹೊರಟಿದ್ದ. ಈ ವೇಳೆ ರಸ್ತೆಯ ಪಕ್ಕದಲ್ಲಿನ ತಡೆಗೋಡೆ ಇಲ್ಲದ ಜಾಗಕ್ಕೆ ಹೋಗಿ ಮೂರ್ತ ವಿಸರ್ಜನೆಗೆ ಹೋಗಿದ್ದಾನೆ ಅಷ್ಟೇ ಆಯತಪ್ಪಿ ಚರಂಡಿಯಲ್ಲಿ ಬಿದ್ದಿದ್ದಾನೆ. ಕಳೆದ ಆರು ತಿಂಗಳ ಹಿಂದೆ ಹರೀಶ್ ಮನೆ ಬಿಟ್ಟು …

Read More »

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!

ಬೆಂಗಳೂರು, : ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕ ಸತೀಶ್ ಕುಮಾರ್(25) ಎಂದು ಗುರುತಿಸಲಾಗಿದ್ದು, ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿ ಸಹ ಸತೀಶ್​ನ ಲವ್ ಪ್ರಪೋಸ್​ಗೆ ಒಪ್ಪಿಗೆ ನೀಡಿದ್ದಳು. ಹೀಗೆ ಪರಸ್ಪರ ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಆದ್ರೆ, ಈ …

Read More »

ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ

ನಾಳೆ ಶನಿವಾರ ಒಂದು ದಿನ ಕಳೆದರೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಗಂಡಸರ ಜೇಬಿಗೆ ಕತ್ತರಿ ಬೀಳಲಿದೆ. ಭಾನುವಾರ ಬೆಳಗ್ಗೆಯಿಂದಲೇ ಅಂದರೆ ಜನವರಿ 5ರಿಂದ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಕರ್ನಾಟಕ ನಾಲ್ಕು ನಿಗಮಗಳ ಬಸ್​​ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು …

Read More »

ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು

ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯನ್ನು ಸಲ್ಲಿಸುವ ಮೂಲಕ ಈ ಭಾಗದಲ್ಲಿ ಅಧ್ಯಾತ್ಮಿಕ ಸಂಘಟನೆಯನ್ನು ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಿಜಗುಣ ದೇವರ ಸೇವಾ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಶುಕ್ರವಾರದಂದು …

Read More »