Breaking News

ರಾಜ್ಯ

ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಎಲ್​ಆರ್​ಟಿ ಯೋಜನೆ ಜಾರಿಗೆ ತರಲು ಚಿಂತನೆ: ಸಂತೋಷ ಲಾಡ್

ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ಅವಳಿ ನಗರದ ನಡುವೆ ಸಂಚರಿಸುವ ಬಿಆರ್​ಟಿಎಸ್ ಬಸ್​ ಬದಲು ಲಘು ರೈಲು (ಎಲ್​ಆರ್​ಟಿ) ಯೋಜನೆ ಜಾರಿಗೆ ತರಲು ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಪಿಪಿಪಿ ಮಾಡಲ್​ನಲ್ಲಿ ಬರಬೇಕು. ಸಾರ್ವಜನಿಕ ಸಹಭಾಗಿತ್ವದಲ್ಲಿ ಬರುವುದರಿಂದ ಅವರೇ ಬಂಡವಾಳ ಹೂಡಿಕೆ ಮಾಡಬೇಕು. ಕಾರಿಡಾರ್ ನಿರ್ಮಾಣ ಹಾಗೂ ಬಸ್ ನಿರ್ವಹಣೆ ಮಾಡಬೇಕು ಎಂಬ ಯೋಜನೆ ಇಟ್ಟುಕೊಂಡಿದ್ದೇವೆ …

Read More »

ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪ್ರಕರಣ ರದ್ದು ಕೋರಿ ಅರ್ಜಿ, ಕೋರ್ಟ್ ಹೇಳಿದ್ದೇನು?

ಬೆಂಗಳೂರು, ಜನವರಿ 06: ನಗರದ ಮಾರತಹಳ್ಳಿಯಲ್ಲಿ ನೇಣಿಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಟೆಕ್ಕಿ ವಿಚಾರ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳ ಅಂಗಳ ತಲುಪುವ ಮೂಲಕ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪ್ರಕರಣವನ್ನು ರದ್ದುಕೋರಿ ನಿಖಿತಾ,‌ ನಿಶಾ, ಅನುರಾಗ್, ಸುಶೀಲ್​ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅತುಲ್ ಸುಭಾಪ್​ ಪತ್ನಿ ಹಾಗೂ ಕುಟುಂಬದವರು ಸಲ್ಲಿಸಿದ್ದ …

Read More »

ಮುಳಬಾಗಲು ಆರ್.ಎಫ್.ಓ ಅಧಿಕಾರಿಯ ಕುರ್ಚಿ ಫೈಟ್

ಕೋಲಾರ, : ಕುರ್ಚಿಗಾಗಿ (Chair) ಸರ್ಕಾರದ ಆದೇಶವನ್ನೇ ಅಧಿಕಾರಿಗಳು ಗಾಳಿಗೆ ತೂರಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಧಿಕಾರ ಹಸ್ತಾಂತರ ಮಾಡಲು ಇಚ್ಚಿಸಿದೆ ಕಚೇರಿಗೆ ಬೀಗ ಹಾಕಿಕೊಂಡು ಹೋಗಿದ್ದ ಅಧಿಕಾರಿಯ ಕಾರ್ಯವೈಖರಿ ಕುರಿತು ದಿಶಾ ಸಭೆಯಲ್ಲಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುರ್ಚಿಗಾಗಿ ಇಬ್ಬರ ಅಧಿಕಾರಿಗಳ ನಡುವೆ ನಡೆಯುತ್ತಿರುವ ಹೈಡ್ರಾಮಾ ಜಿಲ್ಲೆಯ ಜನರಿಗೆ ಪುಕ್ಕಟೆ ಮನರಂಜನೆ‌ ನೀಡುತ್ತಿದೆ. ಮುಳಬಾಗಲು ಆರ್.ಎಫ್.ಓ ಅಧಿಕಾರಿಯ ಕುರ್ಚಿ ಫೈಟ್ ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಸದ ಮಲ್ಲೇಶ್ ಬಾಬು ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ …

Read More »

ಕಾ, ಜಿ ಸಿ ಬಯ್ಯಾರೆಡ್ಡಿ ರವರ ಅಂತೀಮ ದರ್ಶನ

ಕಾ, ಜಿ ಸಿ ಬಯ್ಯಾರೆಡ್ಡಿ ರವರ ಅಂತೀಮ ದರ್ಶನ ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷರು, ಸಂಯುಕ್ತ ಹೋರಾಟ – ಕರ್ನಾಟಕ ಸಂಚಾಲಕರು ಮತ್ತು ಸಿಪಿಐ ( ಎಂ) ಪಕ್ಷದ ಕಾರ್ಯದರ್ಶಿ, ಕಾ.ಜಿ ಸಿ ಬಯ್ಯಾರೆಡ್ಡಿ ಅನಾರೋಗ್ಯದಿಂದ ದಿನಾಂಕ :04/01/2025 ರಂದು ಬೆಳಿಗ್ಗೆ ಜಯನಗರ,3 ನೇ ಬ್ಲಾಕ್, ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಡರಂಗದ ವಿಚಾರಗಳಿಗೆ ಮತ್ತು ರೈತಪರ ಚಳುವಳಿಗೆ ಹಿರಿಯನ್ನು ಕಳೆದುಕೊಂಡ ನಮಗೆ ತುಂಬಲಾರದ ನಷ್ಟವಾಗಿದೆ.ಅವರ ಅಗಲಿಕೆಯಿಂದ ಆಘಾತವಾಗಿದೆ. MES …

Read More »

ಸಿದ್ದಿ ಸಾಧನೆಗಾಗಿ ಬಬಲಾದಿ ಅಜ್ಜನವರು ಮದ್ಯವನ್ನು ಸೇವಿಸುತ್ತಿದ್ದರು,ಆದರೆ ಯಾರು ಕೂಡಾ ಮದ್ಯವನ್ನು ಸೇವಿಸಬಾರದು:ಗುರು ಸಿದ್ದರಾಮಯ್ಯ ಅಜ್ಜನವರು

ಚಿಕ್ಕೋಡಿ:ಬಬಲಾದಿಯ ಸದಾಶಿವ ಅಜ್ಜನವರು ಮುಂದೆ ಆಗುವುದನ್ನು ಹೇಳಿದ್ದಾರೆ. ಹಿಂದೆ ಆಗಿ ಹೋಗಿದ್ದನ್ನು ಬರೆದಿಟ್ಟಿದ್ದಾರೆ. ಅವರ ಕಾರ್ಯಸಿದ್ದಿಗಾಗಿ ಮದ್ಯವನ್ನು ಸೇವಿಸುತ್ತಿದ್ದರು. ಆದರೆ ಯಾರು ಕೂಡಾ ಮದ್ಯವನ್ನು ಸೇವಿಸಬಾರದೆಂದು ಮೂಲಮಹಾ ಸಂಸ್ಥಾನ ಮಠದ ಬಬಲಾದಿಯ ಒಡೆಯರಾದಂತಹ ಶ್ರೀಗುರು ಸಿದ್ದರಾಮಯ್ಯ ಅಜ್ಜನವರು ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ರುದ್ರ ಭೂಮಿಯ ಉದ್ಘಾಟನೆ ಹಾಗೂ ಬಿಲ್ವಪತ್ರೆ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಲಕ್ಷ್ಮೀದೇವಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.ಸದ್ಯದ ಪ್ರಪಂಚದಲ್ಲಿ ಒಂದು …

Read More »

ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ; ಲಾಕಡೌನ್ ಆಗುತ್ತಾ???

ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ; ಲಾಕಡೌನ್ ಆಗುತ್ತಾ??? ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದೇನು?? ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ಯಾವುದೇ ರೀತಿ ಭಯ ಪಡುವ ಅಗತ್ಯತೆಯಿಲ್ಲ ಎಚ್ಚರಿಕೆಯಿಂದ ಇರಬೇಕು ಅಷ್ಟೇ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಚಳಿಗಾಲದಲ್ಲಿ ಸಹಜವಾಗಿ ಶೀತ, ಕೆಮ್ಮು, ಕಫ ಇದ್ದೇ ಇರುತ್ತೆ. ಆದರೆ ಇಂತಹ ಆರೋಗ್ಯ ಲಕ್ಷಣ ಹೆಚ್ಎಂಪಿವಿ ಪ್ರಕರಣವಲ್ಲ. . 2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 …

Read More »

ಜೆಪಿಸಿಯ ಅಧಿಕಾರಿಗಳೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಂಡ ವಕ್ಫ್ ಹೋರಾಟದ ತಂಡ

ದೆಹಲಿ: ನಾವು ಶನಿವಾರ ವರದಿ ಮಾಡಿದ ಹಾಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ರಾಜ್ಯದಲ್ಲಿ ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದೆ. ಅವರ ತಂಡದ ಕೆಲ ನಾಯಕರು ಇಂದು ಮಧ್ಯಾಹ್ನ ಸಂಸತ್ ಭವನದಲ್ಲಿ ಜೆಪಿಸಿಯ ಕೆಲ ಅಧಿಕಾರಿಗಳೊಂದಿಗೆ ಕಾಫಿ ಅಥವಾ ಟೀ ಹೀರುತ್ತಿರುವುದನ್ನು ನೋಡಬಹುದು. ಮಾಜಿ ಸಂಸದರಾದ ಪ್ರತಾಪ್ ಸಿಂಹ, ಬಿವಿ ನಾಯಕ್, ಶಾಸಕ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಮೊದಲಾದವರು ಅಧಿಕಾರಿಗಳೊಂದಿಗೆ ಮತ್ತಷ್ಟು ಮಾಹಿತಿ ಹಂಚಿಕೊಂಡರು …

Read More »

ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ

ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಿದ ಆರೋಪದಲ್ಲಿ ನಟ ದರ್ಶನ್​ ಹಾಗೂ ಅವರ ಸಹಚರರು ಜೈಲು ಸೇರಿದ್ದರು. ಕೆಲವು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ಅವರಿಗೆ ಇತ್ತೀಚೆಗೆ ಹೈಕೋರ್ಟ್​ ಜಾಮೀನು ನೀಡಿತ್ತು. ದರ್ಶನ್​ಗೆ ಬೆನ್ನು ನೋವು ಕಾಡುತ್ತಿದೆ. ಹೆಚ್ಚಿನ ಚಿಕಿತ್ಸೆ ಬಗ್ಗೆ ಅವರು ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ನಡುವೆ ದರ್ಶನ್ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ದರ್ಶನ್​ಗೆ ನೀಡಿರುವ ಬೇಲ್​ ರದ್ದು …

Read More »

ದೆಹಲಿ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ಕೇವಲ ಶಿವಕುಮಾರ್​​ರನ್ನು ಮಾತ್ರ ಚರ್ಚೆಗೆ ಕರೆದಿದ್ದು ಯಾಕೆ?

ಯಾದಗಿರಿ: ಜಿಲ್ಲೆಯ ಪ್ರವಾಸದಲ್ಲಿರುವ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದರು. ವಿಷಯವೇನೆಂದರೆ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕರ್ನಾಟಕ ಮಾದರಿಯನ್ನು ಅನುಸರಿಸಲು ಎಐಸಿಸಿ ನಿರ್ಧರಿಸಿದ್ದು ಅವುಗಳ ಬಗ್ಗೆ ಚರ್ಚೆಗೆ ಸಿದ್ದರಾಮಯ್ಯರನ್ನು ಬಿಟ್ಟು ಡಿಕೆ ಶಿವಕುಮಾರ್ ಅವರನ್ನು ಕರೆದಿದೆ. ಹೀಗ್ಯಾಕೆ ಅಂತ ಕೇಳಿದರೆ, ಉತ್ತರಿಸಲು ತಡವರಿಸುವ ಜಾರಕಿಹೊಳಿ, ಈ ಪ್ರಶ್ನೆ ತನ್ನನಲ್ಲ, ಶಿವಕುಮಾರ್ ಇಲ್ಲವೇ ಸಿದ್ದರಾಮಯ್ಯರನ್ನು ಕೇಳಬೇಕು, ತನ್ನ ಇಲಾಖೆಗೆ ಸಂಬಂಧಪಟ್ಟಿದ್ದು ಏನಾದರೂ ಇದ್ದರೆ …

Read More »

ಹುಬ್ಬಳ್ಳಿ-ಧಾರವಾಡದ ಬಿಆರ್‌ಟಿಎಸ್ ಯೋಜನೆ ಆರ್ಥಿಕ ನಷ್ಟದಲ್ಲಿದೆ

ಹುಬ್ಬಳ್ಳಿ, ಜನವರಿ 06: ಅದು ಹುಬ್ಬಳ್ಳಿ-ಧಾರವಾಡ (Hubballi-Dharwad) ಅವಳಿ ನಗರದ ಮಹತ್ವಾಕಾಂಕ್ಷೆಯ ಯೋಜನೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆ ಯೋಜನೆ ಆರಂಭ ಮಾಡುವ ಮುನ್ನವೇ ಸಾಕಷ್ಟು ಅಪಸ್ವರ ಕೇಳಿ ಬಂದಿದ್ದವು. ಹಾಗೂ ಹೀಗೂ ಯೋಜನೆ ಆರಂಭಿಸಲಾಗಿತ್ತು. ಆದರೆ ಆ ಯೋಜನೆಯಿಂದ ಆಗಿರುವ ಅನಕೂಲಕ್ಕಿಂತ ಅನಾನೂಕಲವೇ ಜಾಸ್ತಿ. ಆರ್ಥಿಕವಾಗಿಯೂ ಆ ಯೋಜನೆ ಸಾಕಷ್ಟು ನಷ್ಟದಲ್ಲಿದೆ. ಅವಳಿ ನಗರದಲ್ಲಿರುವ ಆ ಯೋಜನೆ ಇದೀಗ ಬಂದ್ ಆಗೋ ಲಕ್ಷಣವೇ ಹೆಚ್ಚಾಗಿದೆ. ಆ ಯೋಜನೆ‌ ಬದಲಾಗಿ ಮತ್ತೊಂದು ಯೋಜನೆ …

Read More »