ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಗರದ ಪೊಲೀಸರು ನಿರ್ಧರಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆಯಾಗಿ ಸುಮಾರು 6 ತಿಂಗಳ ಬಳಿಕ ನಟ ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಶುಕ್ರವಾರ (ಡಿ.15) ಜಾಮೀನು ಮಂಜೂರಾಗಿತ್ತು. ಇದರಂತೆ ಸೋಮವಾರ ನ್ಯಾಯಾಲಯಕ್ಕೆ ಜಾಮೀನು ಶ್ಯೂರಿಟಿ ಒದಗಿಸಿದ್ದ ಪವಿತ್ರಾ ಗೌಡ, ಪ್ರದೂಷ್, …
Read More »ಗಾಂಧಿ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಪ್ರತಿ ಕಾಂಗ್ರೆಸ್ಸಿಗನಿಗೂ ಹೆಮ್ಮೆ
ಬೆಳಗಾವಿ: “1924ರ ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇಂದು ನಾವು ಆ ದಿನದ 100 ವರ್ಷಗಳನ್ನು ಪೂರೈಸಿದ್ದೇವೆ. ಇದು ಪ್ರತಿಯೊಬ್ಬ ಕಾಂಗ್ರೆಸ್ಸಿಗನಿಗೂ ಹೆಮ್ಮೆಯ ವಿಷಯ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು. ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೂಡಿ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಬೆಳಗಾವಿ ಕಾಂಗ್ರೆಸ್ ಅಧಿವೇಶನ ಭಾರತೀಯ ರಾಜಕಾರಣದಲ್ಲಿಯೇ ಐತಿಹಾಸಿಕ. ಕರ್ನಾಟಕ ಸರ್ಕಾರ ಶತಮಾನೋತ್ಸವ …
Read More »ಜಮೀರ್-ಯತ್ನಾಳ್ ಜುಗಲ್ ಬಂದಿ!
ಇನ್ನೊಂದೆಡೆ ಇಂದು ಸುವರ್ಣಸೌಧದ ಸಚಿವರ ಚೇಂಬರ್ನಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಪರಸ್ಪರ ಭೇಟಿಯಾದ ವೇಳೆ ಅನ್ಯೋನ್ಯತೆಯಿಂದ ಮಾತುಕತೆ ನಡೆಸಿದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುವರ್ಣಸೌಧ ಕಚೇರಿಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಯೋಜನೆ ಕುರಿತು ಚರ್ಚಿಸಿದರು. ಈ ವೇಳೆ ಯತ್ನಾಳ್ ಅವರನ್ನು ಪ್ರೀತಿಯಿಂದಲೇ ಬರಮಾಡಿಕೊಂಡ ಜಮೀರ್, ಕಾಫಿ ಕೊಟ್ಟು ಉಪಚರಿಸಿದರು. …
Read More »ಸದನದಲ್ಲಿ ಪರಸ್ಪರ ನಮಸ್ಕರಿಸಿದ ವಿಜಯೇಂದ್ರ-ಯತ್ನಾಳ್
ಬೆಳಗಾವಿ: ಬಹಿರಂಗವಾಗಿ ಪರಸ್ಪರ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖಾಮುಖಿಯಾಗಿ ಕುಶಲೋಪರಿ ವಿಚಾರಿಸಿದ ಪ್ರಸಂಗ ಇಂದು ಸದನದಲ್ಲಿ ನಡೆಯಿತು. ಭಿನ್ನಮತದ ಹಿನ್ನೆಲೆ ಪರಸ್ಪರ ವೈಮನಸ್ಸು ಹೊಂದಿದ್ದವರು ಸೋಮವಾರ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿಜಯೇಂದ್ರ ಪರಸ್ಪರ ನಮಸ್ಕರಿಸಿ, ಮಾತನಾಡಿಸುವ ಮೂಲಕ ಗಮನ ಸೆಳೆದರು. ನಿನ್ನೆ ಬೆಳಗ್ಗೆ ಸದನದಲ್ಲಿ ಈ ಅಪರೂಪದ ಕ್ಷಣ ಕಂಡುಬಂದಿತ್ತು. ಸೋಮವಾರ ಸದನದಲ್ಲಿ ತಾವೇ ಖುದ್ದಾಗಿ ಯತ್ನಾಳ್ …
Read More »ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ” ಎಂದು ಶಾಸಕ ಬಿಜೆಪಿ ರಮೇಶ್ ಜಾರಕಿಹೊಳಿ
ಬೆಳಗಾವಿ: “ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ” ಎಂದು ಶಾಸಕ ಬಿಜೆಪಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿಂದು ಮಾತನಾಡಿದ ಅವರು, ದೆಹಲಿ ಹೈಕಮಾಂಡ್ ನಾಯಕರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, “ಮೊದಲ ಹಂತದ ಹೋರಾಟದ ವರದಿ ನೀಡಿದ್ದೇವೆ. ಜೆಪಿಸಿ ಸಮಿತಿಗೂ ವರದಿ ನೀಡಿದ್ದೇವೆ. ಯತ್ನಾಳ್ ಶೋಕಾಸ್ ನೋಟಿಸ್ಗೆ ಉತ್ತರ ಕೊಟ್ಟಿದ್ದಾರೆ. ಇದನ್ನು ಬಿಟ್ಟು ಬೇರೆ ಏನಿಲ್ಲ” ಎಂದರು. ವಿಜಯೇಂದ್ರ ಪರ ಮಾಜಿ ಶಾಸಕರ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿ, “ಆ …
Read More »ವೇಶ್ಯೆವಾಟಿಕೆ ನಡೆಸುತ್ತಿದ್ದ ಇಬ್ಬರನ್ನೂ ಬಂಧಿಸಿದ ಪೊಲೀಸ್
ಮೈಸೂರು : ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆಯ (Hebbalu Police Station) ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿದ್ದ ಇಬ್ಬರನ್ನೂ ಬಂಧಿಸಿದ ಪೊಲೀಸ್ ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಮನೆಯಲ್ಲಿ ಮೈಸೂರು, ಹಾಸನ, ಕೆ.ಆರ್ ನಗರ (Mysore, Hassan, K. R. Nagar) ಮೂಲದ ಐವರು ಮಹಿಳೆಯರಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ. ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಕುರಿತು ಒಡನಾಡಿ ಸಂಸ್ಥೆ ಮುಖ್ಯಸ್ಥ (Head of the organization) ಸ್ಟ್ಯಾನ್ಲಿ ಪರುಶು …
Read More »ಮೆಟ್ರೋ ನಿಲ್ದಾಣದಲ್ಲಿ ಲಿಪ್ ಟು ಲಿಪ್ ಕಿಸ್ ಮಾಡುತ್ತ ನಿಂತ ಜೊಡಿ
ಪ್ರೇಮಿಗಳು ಮಿತಿ ಮೀರಿ (lovers behaving beyond limits) ಸಾರ್ವಜನಿಕ ಸ್ಥಳಗಳಾದ ಮೆಟ್ರೋ, ರೈಲು, ಬಸ್ಸು ಹೀಗೆ ಸಾರ್ವಜನಿಕ ಸ್ಥಳ (public places) ಗಳಲ್ಲಿ ವರ್ತಿಸುತ್ತಿರುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಮತ್ತೊಂದು ಇಂತಹದ್ದೇ ಘಟನೆ ಮೆಟ್ರೋ ನಿಲ್ದಾಣ (Metro station) ದಲ್ಲಿ ನಡೆದಿದ್ದು, ಪ್ರೇಮಿಗಳಿಬ್ಬರು ಜಗತ್ತಿನ ಪರಿಜ್ಞಾನವೇ ಇಲ್ಲದೆ ಎಲ್ಲರೆದುರಲ್ಲೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ಲಿಪ್ ಟು ಲಿಪ್ (lip-to-lip) Kiss ಮಾಡಿದ್ದಾರೆ. ಈ ದೃಶ್ಯ ಸದ್ಯ …
Read More »ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ ಹಾಗು ಲಕ್ಷ್ಮಣ್ ಇಂದು ಜೈಲಿನಿಂದ ಬಿಡುಗಡೆಯಾದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಲಕ್ಷ್ಮಣ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೂನ್ 11ರಂದು ಬಂಧಿಸಲ್ಪಟ್ಟು ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ್ದ ಪವಿತ್ರಾ ಗೌಡ ಹಾಗು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿ ಲಕ್ಷ್ಮಣ್ ಬಿಡುಗಡೆಯಾಗಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ, ಪ್ರದೋಷ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್ ಹಾಗೂ ಜಗದೀಶ್ಗೆ ಕಳೆದ ಶುಕ್ರವಾರ ಹೈಕೋರ್ಟ್ ಜಾಮೀನು ನೀಡಿತ್ತು. ಎರಡನೇ ಶನಿವಾರ ಹಾಗು ಭಾನುವಾರ ರಜೆ ಇದ್ದ ಕಾರಣ …
Read More »ಹೆಣ್ಣುಭ್ರೂಣ ಹತ್ಯೆ ಮಾಹಿತಿ ನೀಡುವವರಿಗೆ 1 ಲಕ್ಷ ಬಹುಮಾನ: ದಿನೇಶ್ ಗುಂಡೂರಾವ್
ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ ಗುತ್ತೇದಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ ಹಾಗೂ ಸರ್ಕಾರಕ್ಕೆ ವರದಿಯಾಗುತ್ತಿದೆ …
Read More »ಸುವರ್ಣಸೌಧದೊಳಗೆ ಅಂಬೇಡ್ಕರ್, ಸುಭಾಷ್ ಚಂದ್ರಬೋಸ್, ಸ್ವಾಮಿ ವಿವೇಕಾನಂದ ಸೇರಿದಂತೆ ಗಣ್ಯರ ತೈಲ ಕಲಾಕೃತಿಗಳನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಬೆಳಗಾವಿ: ಡಾ. ಬಿ. ಆರ್. ಅಂಬೇಡ್ಕರ್, ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರು ವಿನ್ಯಾಸಗೊಂಡ ಹಾಗೂ ದೇಶದ ಪ್ರಥಮ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರಪ್ರಸಾದ್, ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಮತ್ತು ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ಕಲಾಕೃತಿಗಳನ್ನು ಸುವರ್ಣಸೌಧದ ಸದನದ ಒಳಗೆ ಸಿಎಂ …
Read More »
Laxmi News 24×7