Breaking News

ರಾಜ್ಯ

ಬಳ್ಳಾರಿ ಬಳಿಕ ರಾಯಚೂರು ಜಿಲ್ಲೆಯಲ್ಲಿ 1 ತಿಂಗಳಲ್ಲಿ ನಾಲ್ವರು ಬಾಣಂತಿಯರ ಸಾವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಿಸೇರಿಯನ್ ಶಸ್ತ್ರಚಿಕಿತ್ಸೆಯ ನಂತರ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ಬಳಸಿದ IV ದ್ರಾವಣವನ್ನು ಇಲ್ಲಿಯೂ ಬಳಸಲಾಗಿದೆ ಎನ್ನಲಾಗಿದೆ. ಮೃತರ ಸಂಬಂಧಿಕರು ಆರೋಗ್ಯ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ಈ ಘಟನೆಯಿಂದ ಕರ್ನಾಟಕದಲ್ಲಿ ಬಾಣಂತಿಯರ ಸಾವುಗಳ ಬಗ್ಗೆ ಮತ್ತೆ ಚರ್ಚೆ ಹುಟ್ಟಿಕೊಂಡಿದೆ.   ರಾಯಚೂರು, ಡಿಸೆಂಬರ್​ 11: ಬಳ್ಳಾರಿ (Ballari) ಬಳಿಕ ರಾಯಚೂರು (Raichur) ಜಿಲ್ಲೆಯಲ್ಲೂ ಬಾಣಂತಿಯರ ಸಾವಾಗಿದೆ. ಸಿಂಧನೂರು (Sindhanur) ತಾಲೂಕು ಆಸ್ಪತ್ರೆಗೆ …

Read More »

ಈ ವರ್ಷ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಸೈಕೋ ಕಿಲ್ಲರ್ಸ್​ಗಳಿವರು

2025 ಅನ್ನು ಬರಮಾಡಿಕೊಳ್ಳಲು ಎಲ್ಲರೂ ಸಜ್ಜಾಗಿದ್ದಾರೆ. ಈ ವರ್ಷ ನಡೆದಿದ್ದೆಲ್ಲಾ ಕಹಿಗಳನ್ನು ಮರೆತು ಮುಂಬರುವ ವರ್ಷಗಳೆಲ್ಲಾ ಸಿಹಿಯನ್ನೇ ತರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ 2024ರಲ್ಲಿ ಒಳ್ಳೆಯ ಘಟನೆಗಳ ಜತೆಗೆ ಕೆಟ್ಟ ಘಟನೆಗಳೂ ಕೂಡ ನಡೆದಿವೆ. ಅದರಲ್ಲೂ ಸೈಕೋ ಕಿಲ್ಲರ್​ಗಳು ನಡೆಸಿರುವ ಕೃತ್ಯಗಳು ಮನಸ್ಸಿಂದ ಮಾಸುವುದು ತುಂಬಾ ಕಷ್ಟ. ಗೋವಾದಲ್ಲಿ ಸ್ವಂತ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ತಾಯಿ ಮೈಂಡ್‌ಫುಲ್ ಎಐ ಲ್ಯಾಬ್‌ನ ಸಂಸ್ಥಾಪಕಿ ಮತ್ತು ಸಿಇಒ, 39 ವರ್ಷದ ಸುಚನಾ ಸೇಠ್ …

Read More »

ಇಂದು ಸಂಜೆ ಹುಟ್ಟೂರಿನಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ

ಬೆಂಗಳೂರು/ಮಂಡ್ಯ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ, ಕಲಾಪ್ರೇಮಿ, ಮಾಜಿ ಸಿಎಂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (SM Krishna) ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ (Somanahalli) ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಕೃಷ್ಣ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ …

Read More »

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್​: ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆ ಪ್ರಯತ್ನ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಕೊಚ್ಚಿಗೆದ್ದ ಹೋರಾಟಗಾರರು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಪೊಲೀಸರು ಸಹ ಮತ್ತಷ್ಟು ಲಾಠಿ ಚಾರ್ಜ್ ಮಾಡಿದ್ದರಿಂದ ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಲಾಠಿಚಾರ್ಜ್​ ಮಾಡಿದ್ದನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಬೆಳಗಾವಿ, (ಡಿಸೆಂಬರ್ 10): 2ಎ ಮೀಸಲಾತಿಗಾಗಿ ಪಂಚಮಸಾಲಿ …

Read More »

ಶಿರೂರು ಗುಡ್ಡ ಕುಸಿತ: ಪತ್ತೆಯಾಗದ ಇಬ್ಬರ ಶವ, ಮರಣ ಪತ್ರ ನೀಡದ ಆಡಳಿತದ ವಿರುದ್ಧ ಆಕ್ರೋಶ

ಅಂಕೋಲದ ಶಿರೂರಿನಲ್ಲಿ ಸಂಭವಿಸಿದ್ದ ಭಯಾನಕ ಭೂಕುಸಿತದ ರಕ್ಷಣಾ ಕಾರ್ಯಾಚರಣೆ ಎಂದೋ ಸ್ಥಗಿತಗೊಂಡಿದೆ. ಆದಾಗ್ಯೂ, ಇನ್ನೂ ಇಬ್ಬರ ಶವ ಪತ್ತೆಯಾಗಿಲ್ಲ. ಅಷ್ಟೇ ಅಲ್ಲ ಅವರ ಕುಟುಂಬದವರಿಗೆ ಮರಣ ಪತ್ರವನ್ನೂ ಆಡಳಿತ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಏತನ್ಮಧ್ಯೆ ರಕ್ಷಣಾ ಕಾರ್ಯಾಚರಣೆಯಲ್ಲೂ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಕೋರ್ಟ್ ಆದೇಶದ ಹೊರತಾಗಿಯೂ ಎಸ್​​ಪಿ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.   ಕಾರವಾರ, ಡಿಸೆಂಬರ್ 11: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ ಭೀಕರ …

Read More »

ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌

ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಮ್ಮ ಮೇಲೆಯೇ ಕಲ್ಲುತೂರಿದ್ದಕ್ಕೆ ಸಿಟ್ಟಾದ …

Read More »

ಸಂಘರ್ಷದ ಸ್ವರೂಪ ಪಡೆದ ಪಂಚಮಸಾಲಿ ಸಮಾಜದ ಹೋರಾಟ,

ಸಂಘರ್ಷದ ಸ್ವರೂಪ ಪಡೆದ ಪಂಚಮಸಾಲಿ ಸಮಾಜದ ಹೋರಾಟ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನ, ಕಲ್ಲು ತೂರಾಟ, ಲಾಠಿ ಪ್ರಹಾರ, ಹಲವರಿಗೆ ಗಾಯ, ಪಂಚಮಸಾಲಿ ಮುಖಂಡರು ಪೋಲೀಸರ ವಶಕ್ಕೆ, ಒಂದು ಗಂಟೆಗೂ ಹೆಚ್ಚು ಸಮಯ ರಾಷ್ಡ್ರೀಯ ಹೆದ್ದಾರಿ ಬಂದ್ಪಂಚಮಸಾಲಿ ಹೋರಾಟಗಾರ ಮೇಲೆ ಲಾಠಿ ಚಾರ್ಜ್: 20 ಪೊಲೀಸರು 50 ಜನರಿಗೆ ಗಾಯ; ಹಲವು ನಾಯಕರ ಬಂಧನಬೆಳಗಾವಿಯಲ್ಲಿ ವಾಹನ, ಪೊಲೀಸರ ಮೇಲೆ ಕಲ್ಲು ತೂರಾಟ, ಹಲವರಿಗೆ ಗಾಯ

Read More »

ನಾನು ಎಂದಿಗೂ ಪಂಚಮಸಾಲಿ ಸಮುದಾಯದ ಪರ: ಹೆಬ್ಬಾಳಕರ್‌…!!

ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ. ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗ ಮಂಗಳವಾರ ನಡೆದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ವಕೀಲರ ಪ್ರತಿಭಟನೆಯಲ್ಲಿ …

Read More »

ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ ಗೋಕಾಕ- ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ ರಾಜಕಾರಣದ ಮೂಲಕ ಗಮನ ಹರಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪಿಕರ್ ಆಗಿ, ಕೇಂದ್ರದ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. …

Read More »

ಬೆಳಗಾವಿ-ಶಬರಿಮಲೆ ಕೊಲ್ಲಂ ನಡುವೆ ವಿಶೇಷ ರೈಲು

ಬೆಳಗಾವಿ: ಬೆಳಗಾವಿ-ಶಬರಿಮಲೆ ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸೋಮವಾರ ಡಿ-09 ರಂದು ಬೆಳಗಾವಿ ರೈಲು ನಿಲ್ದಾಣದಲ್ಲಿ ಬೆಳಗಾವಿಯಿಂದ ಶಬರಿಮಲೆಗೆ ತೆರಳುವ ವಿಶೇಷ ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ಕರ್ನಾಟಕದಿಂದ ಪ್ರತಿ ವರ್ಷ ಲಕ್ಷಾಂತರ ಭಕ್ತರು ಯಾತ್ರೆ ಕೈಗೊಳ್ಳುತ್ತಾರೆ. ಜಿಲ್ಲೆಯಿಂದಲೂ …

Read More »