ಹೆಬ್ರಿ : ಎನ್ ಕೌಂಟರ್ ನಲ್ಲಿ ಹತನಾದ ನಕ್ಸಲ್ ನಾಯಕ ವಿಕ್ರಂಗೌಡನ ಮೃತದೇಹದ ಅಂತ್ಯಸಂಸ್ಕಾರ ಹುಟ್ಟೂರಿನಲ್ಲಿ ಇಂದು ನೆರವೇರಿದೆ. ಹೆಬ್ರಿಯ ಕೂಡ್ಲು ಗ್ರಾಮದ ಮನೆ ಆವರಣದಲ್ಲಿ ವಿಕ್ರಂಗೌಡನ ಅಂತ್ಯಸಂಸ್ಕಾರ ನೆರವೇರಿದ್ದು, ಚಿತೆಗೆ ತಮ್ಮ ಸುರೇಶ್ ಗೌಡ ಅಗ್ನಿ ಸ್ಪರ್ಶ ಮಾಡಿದರು. ಈ ವೇಳೆ ಗ್ರಾಮದ ಜನರು, ಪೊಲೀಸರು ಹಾಜರಿದ್ದರು. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹದಳ(ANF) ನಡೆಸಿದ ಎನ್ಕೌಂಟರ್ ನಲ್ಲಿ ಕಬ್ಬಿನಾಲೆ ಮೂಲದ ನಕ್ಸಲ್ …
Read More »ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
ಬೆಳಗಾವಿ: ಇತ್ತೀಚೆಗೆ ಮೈಸೂರು ಜಿಲ್ಲೆ ಎಚ್.ಡಿ. ಕೋಟೆಯಲ್ಲಿ ನಡೆದಿದ್ದ ಸಮಾರಂಭದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದ ಬೆನ್ನಲ್ಲೇ, ಇದೀಗ ಸಚಿವ ಸ್ಥಾನಕ್ಕೆ ಇಬ್ಬರು ಶಾಸಕರು ಬೇಡಿಕೆ ಇಟ್ಟಿದ್ದಾರೆ. ಅಪರೇಷನ್ ಕಮಲ ಚರ್ಚೆಯ ನಡುವೆಯೇ, ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸಿಫ್ ಸೇಠ್ …
Read More »ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ
ಮುಂಬಯಿ: ‘ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲು ಅಕ್ರಮ ಬಿಟ್ಕಾಯಿನ್ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬಿಜೆಪಿಯ ಆರೋಪವನ್ನು ಸಂಸದೆ ಮತ್ತು ಎನ್ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಬುಧವಾರ(ನ20)ತಳ್ಳಿಹಾಕಿದ್ದಾರೆ. ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಳೆ “ಆಡಿಯೋ ಕ್ಲಿಪ್ ನಲ್ಲಿ ಇರುವುದು ನನ್ನ ಧ್ವನಿ ಅಲ್ಲ. ಈ ಎಲ್ಲಾ ಧ್ವನಿ ಟಿಪ್ಪಣಿಗಳು ಮತ್ತು ಸಂದೇಶಗಳು ನಕಲಿ” ಎಂದರು. ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಅವರು …
Read More »ನೀತಿ ಸಂಹಿತೆ ಉಲ್ಲಂಘನೆ: BJP ನಾಯಕ ತಾವ್ಡೆ ವಿರುದ್ಧ 2 FIR
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಾಲ್ಘರ್ನ ಹೋಟೆಲ್ನಲ್ಲಿ ಮತದಾರರಿಗೆ ನಗದು ಹಂಚಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಪಕ್ಷದ ಅಭ್ಯರ್ಥಿ ರಾಜನ್ ನಾಯಕ್ ಮತ್ತು ಇತರರ ವಿರುದ್ಧ ಪೊಲೀಸರು ಮಂಗಳವಾರ ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ …
Read More »ಮಹಾರಾಷ್ಟ್ರದ 288, ಜಾರ್ಖಂಡ್ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ
ನವದೆಹಲಿ: ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಇತ್ತ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, …
Read More »ಹೇರ್ ಡ್ರೈಯರ್’ ಸ್ಪೋಟಗೊಂಡು ಮಹಿಳೆಯ ಮುಂಗೈ. ಬೆರಳು ಕಟ್!
ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೋರಿಯರ್ ಓಪನ್ ಮಾಡಿ …
Read More »ಎಲೆಕ್ಟ್ರಿಕ್ ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಕೇಸ್ : ಮಾಲೀಕ ನಾಪತ್ತೆ, `FIR’ ದಾಖಲು!
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂ ಅಗ್ನಿ ಅವಘಡದಲ್ಲಿ ಯುವತಿ ಮೃತಪಟ್ಟ ಬೆನ್ನಲ್ಲೇ ಶೋರೂಂ ಮಾಲೀಕ ನಾಪತ್ತೆಯಾಗಿದ್ದು, ಎಫ್ ಐಆರ್ ದಾಖಲಾಗಿದೆ. ಎಲೆಕ್ಟ್ರೀಕ್ ಬೈಕ್ ಶೋರೂಂ ಅಗ್ನಿ ಅವಘಡ ಸಂಬಂಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಎಲೆಕ್ಟ್ರಿಕ್ ಬೈಕ್ ಶೋರೂಂ ಮಾಲೀಕ ಪುನೀತ್ ಗೌಡ ನಾಪತ್ತೆಯಾಗಿರುವುದು ತಿಳಿದುಬಂದಿದೆ. ದುರಂತದಲ್ಲಿ ಸಜೀವದಹನವಾಗಿದ್ದ ಯುವತಿ ಪ್ರಿಯಾ ಸಹೋದರ ಪ್ರತಾಪ್ ನೀಡಿರುವ ದೂರಿನ ಮೇರೆಗೆ ಶೋ ರೂಂ ಮಾಲೀಕ, ಮ್ಯಾನೇಜರ್ ವಿರುದ್ಧ …
Read More »ಅಳ್ನಾವರ | ಕೃಷಿ ಕಾರ್ಮಿಕರ ಕೊರತೆ: ಕಬ್ಬು, ಭತ್ತ ಕಟಾವು ಚುರುಕು
ಅಳ್ನಾವರ: ಮಲೆನಾಡಿನ ಸೆರಗಿನ ಈ ಭಾಗದಲ್ಲಿ ಮಳೆ ವಿರಮಿಸಿದ್ದು, ಮುಖ್ಯ ಬೆಳೆಗಳಾದ ಕಬ್ಬು, ಭತ್ತ ಕಟಾವು ಕಾರ್ಯ ಚುರುಕುಗೊಂಡಿದೆ. ಹಲವೆಡೆ ಬೆಳೆದ ಗೋವಿನಜೋಳ ಕಟಾವು ಮುಕ್ತಾಯದ ಹಂತದಲ್ಲಿದೆ. ತಾಲೂಕಿನಾದ್ಯಂತ ಹೊಲಗಳಲ್ಲಿ ಕಾರ್ಮಿಕರು ಒಕ್ಕಲು ಮಾಡುವ ನೋಟ ಎಲ್ಲೆಡೆ ಕಂಡುಬರುತ್ತಿದೆ. ತಾಲ್ಲೂಕಿನಲ್ಲಿ ಸುಮಾರು 1,895 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಹಾಗೂ 1,740 ಹೆಕ್ಟೇರ್ ಭತ್ತ, 1,920 ಹೆಕ್ಟೇರ್ ಗೋವಿನಜೋಳ ಬೆಳೆಯಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿವೆ. ಹೊರ ರಾಜ್ಯದ ಕಾರ್ಮಿಕರು: ‘ಪ್ರತಿ …
Read More »ರೈತನ ಎರಡೂ ಕಾಲುಗಳ ಮೇಲೆ ಹರಿದ ಬಸ್ ಚಕ್ರ
ಹಾವೇರಿ: ಹಾವೇರಿ ಕೇಂದ್ರ ಬಸ್ ನಿಲ್ದಾಣದ ಪ್ರವೇಶದ್ವಾರದಲ್ಲಿ ರಸ್ತೆ ದಾಟುತ್ತಿದ್ದ ರೈತ ಕರಿಯಪ್ಪ ಮುಚ್ಚಿಕೊಪ್ಪನವರ ಕಾಲಿನ ಮೇಲೆ ಬಸ್ ಹರಿದು ಅಪಘಾತ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯ ಎಂದು ಆರೋಪಿಸಿದ ಸ್ಥಳೀಯರು, ವಾಹನ ಸಂಚಾರ ತಡೆದು ರಸ್ತೆಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ‘ಕನಕಾಪುರದ ರೈತ ಕರಿಯಪ್ಪ ಅವರು ಕೆಲಸ ನಿಮಿತ್ತ ಹಾವೇರಿಗೆ ಬಂದಿದ್ದರು. ಕೆಲಸ ಮುಗಿಸಿಕೊಂಡು ಊರಿಗೆ ಹೋಗಲೆಂದು ಹಾನಗಲ್ ರಸ್ತೆಯ ಮೂಲಕ ಬಸ್ ನಿಲ್ದಾಣದೊಳಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ …
Read More »ಬಗರ್ಹುಕುಂ: ಹಕ್ಕುಪತ್ರಕ್ಕೆ ಆಗ್ರಹ, ಪ್ರತಿಭಟನೆ
ಧಾರವಾಡ: ಜಿಲ್ಲೆಯ ಎಲ್ಲ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕು ಎಂಬುದು ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಜಿಲ್ಲಾ ಘಟಕದವರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಮಾವೇಶಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರಗಳು ಕಾರ್ಪೋರೇಟ್ ಪರವಾದ ಕೃಷಿ …
Read More »
Laxmi News 24×7