ಬೈಲಹೊಂಗಲ: ‘ಸಮಾಜ ತಿದ್ದುವಲ್ಲಿ ಮಠಗಳು ಅವಿರತವಾಗಿ ಪ್ರಯತ್ನಿಸುತ್ತಿದ್ದು, ಇಂಥಹ ಪವಿತ್ರ ಕ್ಷೇತ್ರಗಳಲ್ಲಿ ರಾಜಕೀಯ ಬೆರಸದೇ, ಭಕ್ತರಾಗಿ ಬಂದು ಇವುಗಳ ಉದ್ಧಾರಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಬೈಲವಾಡ ಗ್ರಾಮದ ವರ್ತಿ ಸಿದ್ಧಬಸವೇಶ್ವರ ದೇವಸ್ಥಾನ ಆವರಣದಲ್ಲಿ ನಿರ್ಮಿಸಿದ ಕಲ್ಯಾಣ ಮಂಟಪ ಉದ್ಘಾಟನೆ ಹಾಗೂ ಗುರುಭವನ ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯು ಐತಿಹಾಸಿಕ, ಧಾರ್ಮಿಕ ಕ್ಷೇತ್ರ ಸೇರಿದಂತೆ ಹಲವಾರು ರಂಗದಲ್ಲಿ ಮುಂಚೂಣಿಯಲ್ಲಿದೆ. ಸಾಧಕರು ತಮ್ಮ …
Read More »ಅರಭಾವಿ ತೋಟಗಾರಿಕೆ ಕಾಲೇಜಿಗೆ ರನ್ನರ್ ಅಪ್ ಪ್ರಶಸ್ತಿ
ಮೂಡಲಗಿ: ಬೀದರ್ನಲ್ಲಿ ಇತ್ತೀಚೆಗೆ ಜರುಗಿದ 15ನೇ ತೋಟಗಾರಿಕೆ ಮಹಾವಿದ್ಯಾಲಯದ ಯುವಜನೋತ್ಸವ-2024ರಲ್ಲಿ ತಾಲ್ಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯವು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ. ಮಹಾವಿದ್ಯಾಯದ ವಿದ್ಯಾರ್ಥಿಗಳು ಏಕಪಾತ್ರಾಭಿನಯ, ಮೈಮ್, ಸ್ಕಿಟ್, ಕಾರ್ಟೂನ್ ಬಿಡಿಸುವುದು, ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ, ಲಘು ಗಾಯನ, ಸ್ಥಳದಲ್ಲಿ ಚಿತ್ರ ಬಿಡಿಸುವುದು, ತೇಪೆ ಚಿತ್ರಗಾರಿಕೆ ದ್ವಿತೀಯ ಸ್ಥಾನ ಹಾಗೂ ಜಾನಪದ ಹಾಡು, ಏಕಾಂಕ ನಾಟಕ, ಪೋಸ್ಟರ್ ತಯಾರಿಕೆ, ಎಕ್ಸ್ಟೊಂಬರ್ ತೃತೀಯ ಸ್ಥಾನ ಹಾಗೂ ಭಾಷಣ ಸ್ಪರ್ಧೆಯಲ್ಲಿ …
Read More »“ಲೇ ಜಮೀರ್” ಎಂದ ಪುನೀತ್ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ!
ಸಚಿವ ಜಮೀರ್ ಅಹಮದ್ ಬಗ್ಗೆ ಬೇಕಾಬಿಟ್ಟಿ ಮಾತನಾಡಿದ್ದ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಗುನ್ನಾ ಕೊಟ್ಟಿದ್ದಾರೆ. ಜಮೀರ್ ಅಹಮದ್ ಖಾನ್ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್ ಮಾಡಿದ್ದ ಪುನೀತ್ ಕೆರೆಹಳ್ಳಿ ಅವರು ಬೇಕಾಬಿಟ್ಟಿ ಮಾತನಾಡಿದ್ದರು. ಈ ಸಂಬಂಧ ವಿಡಿಯೋವೊಂದನ್ನು ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪುನೀತ್. ಜಮೀರ್ ಅವರ ಬಗ್ಗೆ ಏ ಜಮೀರ್ ಎಂದು …
Read More »ಬಿಡಿಸಿಸಿ ಬ್ಯಾಂಕ್ ಒಳ್ಳೆಯ ರೀತಿ ಆಡಳಿತ ನೀಡಲಿದೆ: ಸಚಿವ ಸತೀಶ್ ಜಾರಕಿಹೊಳಿ…!!
ಬೆಳಗಾವಿ : ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಬಿಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಎಲ್ಲರ ಅಭಿಪ್ರಾಯ ಪಡೆದುಕೊಂಡು ಒಳ್ಳೆಯ ರೀತಿ ಆಡಳಿತ ನಡೆಸಬೇಕೆಂಬ ತಿರ್ಮಾಣ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ರಾಯಬಾಗ ತಾಲೂಕಿನ ಅಪ್ಪಾಸಾಹೇಬ ಕುಲಗೋಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಅವರೇ …
Read More »ಕಾಗವಾಡ ನ್ಯಾಯವಾದಿ ಸಂಘದ ಮುಷ್ಕರಕ್ಕೆ ಮಾಜಿ ಸಚಿವ ಶ್ರೀಮಂತ ಪಾಟೀಲ್ ಭೇಟಿ ನೀಡಿ ಬೆಂಬಲ ಸೂಚಿಸಿದರು. ಸ್ಥಳ ಕಾಗವಾಡ
ಕಾಗವಾಡ: ಪಟ್ಟಣದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಿಸಲು ಆಗಿನ ಎಪಿಎಂಸಿ ಸಚಿವ ಬಂಡೆಪ್ಪಾ ಕಾಶಪ್ಪನ್ನವರ ಅನುಮತಿ ನೀಡಿದ್ದರು. ಆದರೇ ಕೆರೆ ಪಕ್ಕದ ಜಾಗ ಬಫರ್ ಝೋನ್ ಎಂದು ಪರಿಗಣಿಸಿ ನ್ಯಾಯಾಲಯ ನಿರ್ಮಾಣಕ್ಕಾಗಿ ಅಡ್ಡಿ ಉಂಟಾಗಿ ಅದು ನೆನೆಗುದಿಗೆ ಬಿದ್ದಿದ್ದು, ದಿ. 12 ರಂದು ಪಟ್ಟಣದಲ್ಲಿ ತಾಲೂಕಾ ವಕೀಲರ ಸಂಘದ ಸದಸ್ಯರು ಹಮ್ಮಿಕೊಂಡಿರುವ ಅನಿರ್ಧಿಷ್ಠಾವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು ಉಗ್ರವಾಗಿ ಹೋರಾಟ ಪ್ರಾರಂಭಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕಾಗವಾಡ …
Read More »ಮರಕುಂಬಿ ಅಸ್ಪೃಶ್ಯತೆ ಪ್ರಕರಣ. 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಅಸ್ಪೃಶ್ಯತೆಯ ಪ್ರಕರಣದ 99 ಜನರಿಗೆ ಧಾರವಾಡ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಅಸ್ಪೃಶ್ಯತೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ವರ್ಷದ ಹಿಂದೆ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗ 117 ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು. ಈ ಪ್ರಕರಣ ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆಯಿತು. ಕಳೆದ ಅಕ್ಟೋಬರ್ 24 ರಂದು …
Read More »John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
ಗದಗ: ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು ಹಾಗೂ ಗೌರವದಿಂದ ಇರಬೇಕಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಸ್ಟಿಸ್ ಮೈಕೆಲ್ ಕುನ್ನಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದ್ದು, ಪ್ರಹ್ಲಾದ್ ಜೋಶಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ …
Read More »ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಬುಧವಾರ (ನ)ಆದೇಶ ನೀಡಿದೆ. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ. 6 ವಾರದಲ್ಲಿ …
Read More »ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ. ‘ನಮಗೆ ಮನೆಯ ಹಕ್ಕುಪತ್ರ ನೀಡಿಲ್ಲ’ ಎಂದು ಆರೋಪಿಸುತ್ತಿರುವ ದೂರುದಾರರು, ಮನೆ ಮುಂದೆ ಫಲಕ ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ‘ಚುನಾವಣಾ ಬಹಿಷ್ಕಾರ ಪ್ರದೇಶ’ ಎಂದು ಫಲಕ ಹಾಕಿರುವ ಮತದಾರರು, ‘ಉಳುವವನೇ ಭೂಮಿ ಒಡೆಯ ದಲಿತನ ಜಮೀನನ್ನು ಬೇರೊಬ್ಬ ವ್ಯಕ್ತಿಗೆ ಮಾಡಿಕೊಂಡ ಕಂದಾಯ ಇಲಾಖೆ. ಮೂಲ ನಿವಾಸಿಗಳಿಗೆ ಹಕ್ಕು ಪತ್ರ ನೀಡುತ್ತೇವೆ ಎಂದು ಉಪ ವಿಭಾಗಾಧಿಕಾರಿಗಳ ಸುಳ್ಳು …
Read More »ಚಾಲಕರಿಗೆ ತಲೆನೋವಾದ ‘ಪ್ಯಾನಿಕ್ ಬಟನ್’
ಕಲಬುರಗಿ: ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾದ ಜಿಲ್ಲೆಯ ಸಾರ್ವಜನಿಕ ಸೇವಾ ವಾಹನಗಳ ಪೈಕಿ 197 ವಾಹನಗಳಿಗೆ ಮಾತ್ರವೇ ವೆಹಿಕಲ್ ಲೋಕೇಶನ್ ಟ್ರ್ಯಾಕಿಂಗ್ (ವಿಎಲ್ಟಿ) ಮತ್ತು ತುರ್ತು ಸಂದರ್ಭದ ಬಟನ್ (ಪ್ಯಾನಿಕ್ ಬಟನ್) ಉಪಕರಣ ಅಳವಡಿಕೆಯಾಗಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸಾರ್ವಜನಿಕ ಸೇವಾ ವಾಹನಗಳಿಗೆ ವಿಎಲ್ಟಿ ಡಿವೈಸ್ ಅಳವಡಿಸುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸೂಚಿಸಿದ್ದಾರೆ. ಅದರಂತೆ ಶಾಲಾ ವಾಹನ, …
Read More »
Laxmi News 24×7