ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಅಸ್ಪೃಶ್ಯತೆ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಕೋರ್ಟು ತೀರ್ಪು ಪ್ರಕರಣದ ಬೆನ್ನಲ್ಲೇ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತನಾದ ಅಪರಾಧಿಯನ್ನು ರಾಮಣ್ಣ ತಂದೆ ಲಕ್ಷ್ಮಣ ಭೋವಿ (30) ಎಂದು ಗುರುತಿಸಲಾಗಿದೆ. ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ಅಸ್ಪೃಶ್ಯತೆ ಆಚರಣೆ ಪ್ರಕರಣದಲ್ಲಿ ರಾಮಣ್ಣ ಭೋವಿ ಮೇಲೂ ಆರೋಪ ಕೇಳಿ ಬಂದಿತ್ತು. ಈತನೂ ಸೇರಿದಂತೆ 117 ಜನರ ಮೇಲೆ …
Read More »ದಲಿತರ ಮೇಲೆ ದೌರ್ಜನ್ಯ ಪ್ರಕರಣ; ಒಂದೇ ಗ್ರಾಮದ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ! ಸುದ್ದಿ ತಿಳಿಯುತ್ತಿದಂತೆ ಓರ್ವ ಸಾವು!
ಕೊಪ್ಪಳ: ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ (Assault Case) ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಪ್ಪಳ ಜಿಲ್ಲೆಯ (Koppala) ಗಂಗಾವತಿ ತಾಲೂಕಿನ (Gangavathi) ಮರಕುಂಬಿ ಗ್ರಾಮದ ನಿವಾಸಿಗಳಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ನೀಡಿ ಆದೇಶ ನೀಡಿದೆ. 2014ರ ಆಗಸ್ಟ್ 28 ರಂದು ಘಟನೆ ನಡೆದಿತ್ತು. ಮಂಜುನಾಥ್ ಎನ್ನುವವರಿಗೆ ನಾಲ್ವರು ಯುವಕರು ಹಲ್ಲೆ ಮಾಡಿದ್ದರು. ಥಿಯೇಟರ್ನಿಂದ (Cinema Theatre) ಊರಿಗೆ ತೆರಳಿದ್ದ ಮಂಜುನಾಥ್ ಊರಿವರಿಗೆ ವಿಷಯ ಮುಟ್ಟಿಸಿದ್ದರು. …
Read More »ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : `ಗೃಹ ಆರೋಗ್ಯ ಯೋಜನೆ’ಯಡಿ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!
ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ: ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ. ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯು …
Read More »ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಎಂಇಎಸ್ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕರಾಳ ದಿನಾಚರಣೆ ಆಚರಿಸಲು ಅನುಮತಿ ಕೋರಿ ಬರುವ ಎಂಇಎಸ್ ನಾಯಕರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಈ ಬಾರಿ ಯಾವುದೇ ಕಾರಣಕ್ಕೂ ಕದ್ದು ಮುಚ್ಚಿ ಕರಾಳ ದಿನಾಚರಣೆಗೆ ಅನುಮತಿ ನೀಡಿದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.
Read More »ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್ ನಾಮಪತ್ರ ಸಲ್ಲಿಕೆ
ರಾಮನಗರ: ಎನ್ಡಿಎ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಯೋಗೇಶ್ವರ್ ಕೊನೆ ಕ್ಷಣದಲ್ಲಿ ಕೈ ಹಿಡಿದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಮೈತ್ರಿ ಪಕ್ಷದ ನಾಯಕರು ಘೋಷಣೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಶಕ್ತಿಪ್ರದರ್ಶನಕ್ಕೆ ಜೆಡಿಎಸ್ ಸಿದ್ಧತೆ ಮಾಡಿಕೊಂಡಿದೆ. ಕೊನೆ ಕ್ಷಣದವರೆಗೂ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಜಯಮುತ್ತು ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತಿತ್ತು. ಇಬ್ಬರೂ ಚುನಾವಣಾ ಧಿಕಾರಿ ಕಚೇರಿಯಿಂದ ನಾಮಪತ್ರ …
Read More »ಅಧಿಕಾರಿಗಳ ಗೈರು; ಗ್ರಾಮಸಭೆ ಮುಂದೂಡಿಕೆ
ಯಮಕನಮರಡಿ: ಗ್ರಾಮಸಭೆಗೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಲಿಖಿತವಾಗಿ ಪತ್ರ ನೀಡಿದರೂ ಗ್ರಾಮಸಭೆಗೆ ಬರದೇ ಇರುವುದು ದುರಾದೃಷ್ಟದ ಸಂಗತಿ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವಂತಹ ಗ್ರಾಮಸಭೆಗೆ ನೋಡಲ್ ಅಧಿಕಾರಿಗಳು ಗೈರು ಇರುವುದರಿಂದ ಸಭೆ ಮುಂದೂಡಿ ಎಂದು ಯಮಕನಮರಡಿ ವಾರ್ಡ್ 1 ಗ್ರಾ. ಪಂ ಸದಸ್ಯ ರವಿ ಹಂಜಿ ಆಗ್ರಹಿಸಿದರು. ಯಮಕನಮರಡಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಮಾತನಾಡಿದ ಅವರು, ವಿವಿಧ ಇಲಾಖೆಯ ಅಧಿಕಾರಿಗಳು ಇಲ್ಲದೇ ಸಭೆ ಮಾಡುವುದು ತಪ್ಪು. ಸಮಸ್ಯೆಗಳಿಗೆ ಆಯಾ ಇಲಾಖೆಯ …
Read More »ಕಿತ್ತೂರು ಉತ್ಸವ | ವಾಣಿಜ್ಯ ಮಳಿಗೆಗಳಲ್ಲಿ ಜನಜಂಗುಳಿ
ಕಿತ್ತೂರು: ಇಲ್ಲಿಯ ಕೋಟೆ ಆವರಣದಲ್ಲಿ ಆಯೋಜಿಸಿದ ‘ಚನ್ನಮ್ಮನ ಕಿತ್ತೂರು ಉತ್ಸವ’ದ ಮೊದಲ ದಿನವೇ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗೆ ಜನಸಾಗರವೇ ಹರಿದು ಬಂತು. ‘ಮೊದಲ ದಿನವಾಗಿದ್ದರಿಂದ ಕೊಳ್ಳುವವರಿಗಿಂತ ನೋಡುವವರೆ ಹೆಚ್ಚಾಗಿದ್ದಾರೆ. ಇನ್ನು ಮೇಲೆ ವ್ಯಾಪಾರ ಆಗಬೇಕಷ್ಟೆ’ ಎಂದು ವರ್ತಕರು ಹೇಳಿದರು. ‘ಗ್ರಾಮೀಣ ಭಾಗದ ಉತ್ಪಾದಕರು ತಾವು ಸಿದ್ದಪಡಿಸಿದ್ದ ಆಹಾರ ಪದಾರ್ಥ, ಮತ್ತಿತರ ವಸ್ತುಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಮಳಿಗೆ ವ್ಯವಸ್ಥೆ ಮಾಡಿಕೊಡಲಾಗಿದೆ. ಇದನ್ನು ಜನರು ಉಪಯೋಗಿಸಿಕೊಳ್ಳಬೇಕು’ ಎಂಬುದು …
Read More »ಕಿತ್ತೂರು ಹಿರಿಮೆ ಸಾರಿದ ಮೆರವಣಿಗೆ
ಕಿತ್ತೂರು : ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಪ್ರಯುಕ್ತ ಬುಧವಾರ ನಡೆದ ಜಾನಪದ ಕಲಾವಾಹಿನಿ ಮೆರವಣಿಗೆ, ಕ್ರಾಂತಿ ನೆಲದ ಹಿರಿಮೆ ಸಾದರಪಡಿಸಿತು. ರಾಜಬೀದಿಯಲ್ಲಿ ಜನಸಾಗರವಿದ್ದರೆ, ಸಂಭ್ರಮವು ಎಲ್ಲೆಡೆ ಆವರಿಸಿತ್ತು. ಎಲ್ಲರೂ ಜೊತೆಗೂಡಿ ಚೆಂದದ ಲೋಕವನ್ನೇ ಸೃಷ್ಟಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಬಂದ ‘ವಿಜಯ ಜ್ಯೋತಿ’ಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮೆರವಣಿಗೆಗೆ ಚಾಲನೆ ನೀಡಿದರು. ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ …
Read More »ಕಿತ್ತೂರು ವಿಜಯೋತ್ಸವ: ಕಲಾವಿದರಿಗೆ ಮನಸೋತ ಜನಸಾಗರ
ಚನ್ನಮ್ಮನ ಕಿತ್ತೂರು: ಕಿತ್ತೂರ ನಾಡು ಹತ್ತೂರು ಕಲಾವಿದರನ್ನು ಬುಧವಾರ ಚುಂಬಕಶಕ್ತಿಯಂತೆ ಸೆಳೆಯಿತು. ಜನಪದರು, ಸಂಗೀತಗಾರರು, ನೃತ್ಯಪಟುಗಳು ಸೇರಿ ಕಲಾವಿದರ ದಂಡೇ ಕ್ರಾಂತಿಯ ನೆಲದತ್ತ ಹರಿದುಬಂದಿತ್ತು. ಬೆಳಿಗ್ಗೆ ಆರಂಭಗೊಂಡ ಜಾನಪದ ಕಲಾವಾಹಿನಿ ಮೆರವಣಿಗೆ ಮಧ್ಯಾಹ್ನದವರೆಗೂ ಸಾಗಿತು. ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದ ಈ ಮೆರವಣಿಗೆ ಮೇಲೂ ಕಾರ್ಮೋಡ ಕವಿದಿತ್ತು. ಆದರೆ, ವರುಣ ಬಿಡುವು ಕೊಟ್ಟಿದ್ದರಿಂದ ಮೆರವಣಿಗೆ ರಂಗೇರಿತು. ಉತ್ಸವದ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗಾಗಿ ಶಾಲಾ …
Read More »ಹೇಳಿಕೆ ಹಿಂಪಡೆಯಿರಿ ಇಲ್ಲವೇ ಮಾನನಷ್ಟ ಮೊಕದ್ದಮೆ ಎದುರಿಸಿ:ಬೈರತಿಗೆ BY ರಾಘವೇಂದ್ರ
ಶಿವಮೊಗ್ಗ: ‘ಮುಡಾ ಹಗರಣದಲ್ಲಿ ತಮ್ಮ ಭ್ರಷ್ಟ ನಾಯಕರನ್ನು ಉಳಿಸಿಕೊಳ್ಳಲು ಹಾಗೂ ಪ್ರಕರಣದ ದಿಕ್ಕನ್ನು ಬೇರೆ ಕಡೆ ತಿರುಗಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನಮ್ಮ ತಾಯಿ ಅವರ ಸಹಜ ಸಾವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸಲ್ಲ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ‘ಆಚಾರವಿಲ್ಲದ ತಮ್ಮ ನಾಲಿಗೆಯನ್ನು ಬೈರತಿ ಸುರೇಶ್, ಕಾಂಗ್ರೆಸ್ ಪಕ್ಷದ ಮೂಲ ರಾಜಕೀಯ ಸಂಸ್ಕೃತಿಯಾದ ಲಜ್ಜೆಗೆಟ್ಟ ರಾಜಕಾರಣಕ್ಕೆ ಬಳಸಿಕೊಂಡಿರುವುದು ಆಕ್ಷೇಪಾರ್ಹ. ಇದು ಅವರ ಸ್ಮರಣೆಗೆ ಮಾತ್ರವಲ್ಲ, ಮಾನವೀಯತೆಯ ಮೌಲ್ಯಗಳಿಗೂ …
Read More »
Laxmi News 24×7