ಲೋಕಾಪುರ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದೇ ರೋಗಿಗಳು ಪರದಾಡುವಂತಾಗಿದೆ. ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಲವು ಗ್ರಾಮಗಳ ರೋಗಿಗಳು ಬರುತ್ತಾರೆ. ಅಪಘಾತವಾದಾಗ ಪ್ರಥಮ ಚಿಕಿತ್ಸೆ ನೀಡಬೇಕಾದ ಕೇಂದ್ರದಲ್ಲಿ ಸುಮಾರು ವರ್ಷದಿಂದ ವೈದ್ಯರು ಇಲ್ಲದೆ ಆಯುಷ್ ವೈದ್ಯ ಮತ್ತು ಶುಶ್ರೂಷಕಿಯರೇ ಇಲ್ಲಿ ತಪಾಸಣೆ ಮಾಡಿ ಚಿಕಿತ್ಸೆ ನೀಡುತ್ತಾರೆ. ಕೆಲ ತಿಂಗಳ ಹಿಂದೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಅವರು ಅನೀರೀಕ್ಷಿತವಾಗಿ …
Read More »ದಸರಾ: ಶ್ವಾನ ‘ಗೋಪಿ’ ಜೊತೆ ಪಾಲ್ಗೊಂಡ ಸುಧಾ ಮೂರ್ತಿ
ಮೈಸೂರು: ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರು ಇಲ್ಲಿನ ಜೆ.ಕೆ. ಮೈದಾನದಲ್ಲಿ ಭಾನುವಾರ ನಡೆದ ‘ಮುದ್ದುಪ್ರಾಣಿಗಳ ಪ್ರದರ್ಶನ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ತಾವು ಸಾಕು ನಾಯಿ ‘ಗೋಪಿ’ಯೊಂದಿಗೆ ಪಾಲ್ಗೊಂಡು ಗಮನಸೆಳೆದರು. ‘ಗೋಪಿ’ಯ ದಿನಚರಿಯನ್ನು ಪರಿಚಯಿಸಿ ಅದನ್ನು ಮುದ್ದಾಡಿದರು. ಅದು ಕೂಡ ಸುಧಾ ಅವರಿಗೆ ಮುತ್ತು ನೀಡಿತು. ‘ಮುದ್ದು ಪ್ರಾಣಿಗಳು ಮಕ್ಕಳಿದ್ದಂತೆ. ಅವುಗಳನ್ನು ನಾವು ಪ್ರೀತಿಯಿಂದ ನೋಡಿಕೊಳ್ಳಬೇಕು. ಇಂತಹ ಪ್ರದರ್ಶನಗಳಿಂದ ಮಕ್ಕಳಲ್ಲಿ ಪ್ರಾಣಿಗಳ ಬಗ್ಗೆ ಪ್ರೀತಿ ಹೆಚ್ಚಾಗುತ್ತದೆ; ಬೀದಿ ನಾಯಿಗಳಿಗೆ ಆಹಾರ ಕೊಡಬೇಕು ಎಂಬ …
Read More »ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಬಿಜೆಪಿಯವರಿಗೆ ಕೆಲಸವಿಲ್ಲ: ಮಧು ಬಂಗಾರಪ್ಪ
ಮೈಸೂರು: ‘ಬಿಜೆಪಿ ನಾಯಕರಿಗೆ ಮಾಡಲು ಕೆಲಸವಿಲ್ಲ. ಆದ್ದರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೀಕಿಸಿದರು. ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಫ್ಐಆರ್ ದಾಖಲಾದಾಕ್ಷಣ ರಾಜೀನಾಮೆ ನೀಡಬೇಕೆಂಬ ಕಾನೂನಿದೆಯೇ? ಬಿಜೆಪಿಯವರು ಸುಮ್ಮನೆ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಅವರಲ್ಲಿ ಎಷ್ಟು ಜನರು ಜಾಮೀನಿನ ಮೇಲಿಲ್ಲ? ಆ ಪಕ್ಷದ ಎಷ್ಟೋ ಮಂದಿಗೆ ರಾಜಕಾರಣಿ ಆಗಲು ಯೋಗ್ಯತೆ ಇದೆಯೇ? ಅವರು ರಾಜಕಾರಣ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ವಾಗ್ದಾಳಿ …
Read More »ಬೆಂಗಳೂರಿಗೆ ಬರ್ಬೇಕು ಅಂತ ನಟ ದರ್ಶನ್ ಹಠ ಹಿಡಿದಿರೋದು ಏಕೆ?
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲೇ ಇದೆ. ಇದರ ನಡುವೆ ದರ್ಶನ್ ಹೇಗಾದರೂ ಮಾಡಿ ಬೆಂಗಳೂರಿಗೆ ವಾಪಸ್ ಬರಲೇಬೇಕು ಎಂದು ಹಠ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ದರ್ಶನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಇದೇ ಕಾರಣ ಮುಂದಿಟ್ಟುಕೊಂಡು ಬಳ್ಳಾರಿಯಿಂದ ಬೆಂಗಳೂರಿಗೆ ಮತ್ತೆ ಶಿಫ್ಟ್ ಆಗಲು ದರ್ಶನ್ ಮುಂದಾಗಿದ್ದಾರೆ. ಮೊದಲಿಗೆ ಈ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಆದ ಬಳಿಕ ಬೆಂಗಳೂರಿನ …
Read More »ಸರ್ಕಾರ ಬಿದ್ದರೆ ಬೀಳಲಿ..’ ಎಂದ ಕಾಂಗ್ರೆಸ್ ಪ್ರಭಾವಿ ನಾಯಕ
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಬೇಕು ಎಂದು ಬಿಜೆಪಿ-ಜೆಡಿಎಸ್ ತೊಡೆ ತಟ್ಟಿವೆ. ಮತ್ತೊಂದೆಡೆ ಮುಡಾ ಕೇಸ್ನಿಂದಾಗಿ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ. ಈಗ ಸ್ವಪಕ್ಷದಿಂದಲೇ ಸರ್ಕಾರ ಬೀಳುವ ಬಗ್ಗೆ ಮಾತುಕೇಳಿಬಂದಿದೆ. ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಅವರು ಸರ್ಕಾರ ಬಿದ್ದರೆ ಬೀಳಲಿ, …
Read More »ಸಿಎಂ ಕುರ್ಚಿಯಲ್ಲಿ ‘ಟಗರು’ ಗಟ್ಟಿಯಾಗಿ ಕುಳಿತಿದೆ: ಯಾರೂ ಕೆಳಗಿಳಿಸಲು ಸಾಧ್ಯವಿಲ್ಲ ಎಂದ ಸಚಿವ ಜಮೀರ್ ಅಹ್ಮದ್
ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್, ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಸಿಎಂ ಆಗಬೇಕು ಅಂತಾ ಎಲ್ಲಾ ಜಾತಿಯವರಿಗೂ ಆಸೆ ಇರುತ್ತೆ. ದಲಿತರಿಗೆ, ಮುಸ್ಲಿಮರಿಗೆ, ಒಕ್ಕಲಿಗರಿಗೆ ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ ಈ ಐದು ವರ್ಷದ ಅವಧಿ ಸಿಎಂ ಹುದ್ದೆ ಖಾಲಿಯಿಲ್ಲ. ಸಿದ್ದರಾಮಯ್ಯ 5 …
Read More »ದಸರಾ’ ಹಿನ್ನೆಲೆ ‘KSRTC’ಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ!
ಬೆಂಗಳೂರು : ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್ಆರ್ಟಿಸಿ 2000ಕ್ಕೂ ಅಧಿಕ ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಅಕ್ಟೋಬರ್ 9ರಿಂದ 12ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅ.13 ಮತ್ತು 14ರಂದು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್ಗಳ ಸಂಚಾರ ಇರಲಿದೆ. ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, …
Read More »ಗುಪ್ತಚರ ಏಜೆನ್ಸಿಗಳು ವಿಫಲವಾಗಿವೆ: ಗೃಹ ಸಚಿವ
ಗುಪ್ತಚರ ಏಜೆನ್ಸಿಗಳು ವಿಫಲವಾಗಿವೆ: ಗೃಹ ಸಚಿವ ಹುಬ್ಬಳ್ಳಿ: ‘ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಪಾಕಿಸ್ತಾನದವರು ಸುಲಭವಾಗಿ ಬೆಂಗಳೂರಿಗೆ ಬರುತ್ತಿದ್ದಾರೆ. ರಾಜ್ಯ ಪೊಲೀಸರಿಗೆ ಮಾಹಿತಿ ದೊರೆತ ತಕ್ಷಣ ಕೆಲವರನ್ನು ಬಂಧಿಸಲಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಬಳಿ ರಾ (ಆರ್ಎಡಬ್ಲು), ಕೇಂದ್ರ ಗುಪ್ತಚರ, ಸಿಬಿಐ ಅಂಥ ಏಜೆನ್ಸಿಗಳು ಇದ್ದಾಗಲೂ ರಾಜ್ಯಕ್ಕೆ ನುಸುಳುಕೋರರು ಬಂದು ಪಾಸ್ಪೋರ್ಟ್ ಮಾಡಿಸಿಕೊಳ್ಳುತ್ತಿದ್ದಾರೆ …
Read More »ಶಬರಿ ಕೊಳ್ಳ ಪ್ರವಾಸಿ ತಾಣ ಮಾಡಲು ಕ್ರಮ: ಸಂಸದ ಜಗದೀಶ ಶೆಟ್ಟರ್
ರಾಮದುರ್ಗ: ‘ತಾಲ್ಲೂಕಿನ ಸುರೇಬಾನ ಸಮೀಪದ ಶಬರಿ ಕೊಳ್ಳದ ದೇವಸ್ಥಾನವನ್ನು ಪ್ರವಾಸಿ ತಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ತಾಲ್ಲೂಕಿನ ಶಬರಿ ಕೊಳ್ಳದ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದೇವಿ ದರ್ಶನದ ನಂತರ ಮಾತನಾಡಿದ ಅವರು, ತಾಲ್ಲೂಕಿನಲ್ಲಿರುವ ಐತಿಹಾಸಿಕ ಶಬರಿಕೊಳ್ಳದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ದೊರಕಿಸಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದರು. ರಾಮದುರ್ಗ ಮಂಡಲ ಅಧ್ಯಕ್ಷ ಡಾ. ಕೆ.ವಿ …
Read More »ಅ. 8ಕ್ಕೆ ಚನ್ನಮ್ಮನ ಕಿತ್ತೂರಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ: ಶಾಸಕ ಬಾಬಾಸಾಹೇಬ
ಕಿತ್ತೂರು: ‘ಇಲ್ಲಿಯ ಕೋಟೆ ಆವರಣಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅ. 8ಕ್ಕೆ ಭೇಟಿ ನೀಡಿ, ಮಹತ್ವಾಕಾಂಕ್ಷೆಯ ಯೋಜನೆ ಆಗಿರುವ ‘ಥೀಮ್ ಪಾರ್ಕ್’ ಸೇರಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಕೋಟೆ ಆವರಣದೊಳಗೆ ನಡೆದಿರುವ ಸ್ವಚ್ಛತೆ ಮತ್ತು ಇತರ ಸಿದ್ಧತಾ ಕಾರ್ಯ ವೀಕ್ಷಣೆಗೆ ಅಧಿಕಾರಿಗಳ ಜತೆ ಶನಿವಾರ ಆಗಮಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಅ. 23 ರಿಂದ 25 ರವರೆಗೆ ನಡೆಯಲಿರುವ ‘ಚನ್ನಮ್ಮನ …
Read More »
Laxmi News 24×7