ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ 14ರ ವರೆಗೆ 5 ದಿನಗಳ ಕಾಲ ನಡೆಯಲಿದೆ. ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್., ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ದೇಶ ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸಲಿವೆ. ಯುದ್ಧವಿಮಾನ, …
Read More »‘ಶೀಘ್ರದಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ’
ಹುಬ್ಬಳ್ಳಿ, ಅಕ್ಟೋಬರ್ 04: ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ ಸನ್ನಿಹಿತವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿರುವ ಭ್ರಷ್ಟ ಸರ್ಕಾರವನ್ನು ತೊಲಗಿಸಲು ನಮ್ಮ ಹೋರಾಟ ಮುಂದುವರಿಯಲಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲೂ ಹೋರಾಟ ನಡೆಸುತ್ತೇವೆ. ಸರ್ಕಾರದ ತಪ್ಪುಗಳನ್ನು ಜನರಿಗೆ ತಿಳಿಸುವುದು ವಿರೋಧ ಪಕ್ಷದ ಕರ್ತವ್ಯವಾಗಿದೆ. ಆ ಕೆಲಸ ನಿರಂತರವಾಗಿ ಇರಲಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ …
Read More »ಇಂದಿನಿಂದ ಸಿಎಂ ಸಿದ್ದರಾಮಯ್ಯ 2 ದಿನ ರಾಯಚೂರು ಪ್ರವಾಸ : 1,635 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ
ರಾಯಚೂರು : ಮುಡಾ ಹಗರಣದ ಮಧ್ಯೆಯು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದಾದ ಬಳಿಕ ಇಂದಿನಿಂದ ಎರಡು ದಿನಗಳ ಕಾಲ ಅವರು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಹೌದು ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ರಾಯಚೂರು ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ರಾಯಚೂರು, ಸಿಂಧನೂರು, ಮಾನ್ವಿಯಲ್ಲಿ …
Read More »ಜೈಲಲ್ಲಿ ರಾಜಾತಿಥ್ಯ ಪ್ರಕರಣ : ರೌಡಿಗಳಿಗೆ ದುಬಾರಿ ಮದ್ಯ ಪೂರೈಕೆ : ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಈ ವೇಳೆ ಅವರಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಎರಡು FIR ದಾಖಲಾಗಿತ್ತು. ಈ ಒಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಅಲ್ಲಿನ ವ್ಯವಸ್ಥೆ ನೋಡಿ ದಂಗಾಗಿದ್ದಾರೆ. ಹೌದು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು, ಜೈಲಿನಲ್ಲಿ ನಟ ದರ್ಶನ್ ಒಂದು ಕೈಯಲ್ಲಿ ಕಾಫಿ ಕುಡಿಯುತ್ತಾ, ಮತ್ತೊಂದು ಕೈಯಲ್ಲಿ …
Read More »ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೋ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ.
ಬೆಳಗಾವಿ: ಭ್ರಷ್ಟಾಚಾರದ ಆರೋಪಗಳನ್ನು ಹೊತ್ತ ಜನಪ್ರತಿನಿಧಿಗಳು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆಯಾಗಿದೆ. ಯಾರೂ ಈ ರೀತಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ”ಈ ಹಿಂದೆ ಇದೇ ರೀತಿ ಆಪಾದನೆಗಳು ಬಂದಾಗ ಜನಪ್ರತಿನಿಧಿಗಳು ತತ್ ಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು. ಈಗ ಅಂತಹ ನೈತಿಕತೆ ಕಾಣುತ್ತಿಲ್ಲ. …
Read More »ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ
ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿ ಬಾಡಿಗೆ ಮನೆಯಲ್ಲಿ ಗಂಡ-ಹೆಂಡತಿ ಎಂದು ಹೇಳಿ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಕುರ್ಲಿ ಗ್ರಾಮದ ಶ್ರೀಸಂಗಮ ಕೃಷ್ಣಾತ್ ನಿಕಾಡೆ(24) ಎಂಬ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ …
Read More »CM ರಾಜೀನಾಮೆ ಕೇಳುವವರಿಗೆ ಚಾಮುಂಡೇಶ್ವರಿ ಒಳ್ಳೆ ಬುದ್ದಿ ಕೊಡಲಿ: ಜಿಟಿಡಿ ಟಾಂಗ್
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಜಿ.ಟಿ.ದೇವಗೌಡ, ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ ಎಂದರು. ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಮುಡಾ ಪ್ರಕರಣದಲ್ಲಿ ಯಾರೆಲ್ಲರ ವಿರುದ್ಧ ಎಫ್ಐಆರ್ ದಾಖಲಾಗಿದೆಯೋ ಎಲ್ಲರೂ ರಾಜೀನಾಮೆ ಕೊಡಲಿ’ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಏಳುಬೀಳುಗಳನ್ನು ಸ್ವಾರಸ್ಯಕರವಾಗಿ …
Read More »ಕಾಂಗ್ರೆಸ್ ಹೈಕಮಾಂಡ್ ಹಲ್ಲು ಇಲ್ಲದ ಹೈಕಮಾಂಡ್: ಎನ್.ರವಿಕುಮಾರ್
ಕಲಬುರಗಿ: ‘ಕಾಂಗ್ರೆಸ್ ಹೈಕಮಾಂಡ್ ಹಲ್ಲು ಇಲ್ಲದ ಹೈಕಮಾಂಡ್ ಆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಲು ಆಗುತ್ತಿಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಟೀಕಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ. ಬಿಜೆಪಿಯಲ್ಲಿ ಏನಾದರು ಸಣ್ಣ-ಪುಟ್ಟ ಬೆಳವಣಿಗೆ ನಡೆದರೆ ರಾಜೀನಾಮೆ ಕೇಳುತ್ತಾರೆ. ಅವರದ್ದೇ ಪಕ್ಷದ ಸಿದ್ದರಾಮಯ್ಯ ಅವರು ದೊಡ್ಡ …
Read More »ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿ 3 ವರ್ಷಗಳಲ್ಲಿ ಫಿಲಂ ಸಿಟಿ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ 160 ಎಕರೆ ಪ್ರದೇಶದಲ್ಲಿ ಫಿಲಂ ಸಿಟಿಯನ್ನು (ಚಿತ್ರ ನಗರಿ) ಮೂರು ವರ್ಷಗಳಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಸರಾ ಮಹೋತ್ಸವದ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ …
Read More »ವೀರಮಾರುತಿ ನಗರ: ಶೌಚಕ್ಕೆ ಬಯಲೇ ಗತಿ
ವೀರಮಾರುತಿ ನಗರ: ಶೌಚಕ್ಕೆ ಬಯಲೇ ಗತಿ ಹುಬ್ಬಳ್ಳಿ: ‘ಮನೆಯೊಳಗ ಪಾಯಿಖಾನಿ ಕಟ್ಟಿಕೊಳ್ಳಾಕ ಜಾಗ ಇಲ್ಲ, ಮನಿ ಸಮೀಪದಾಗ ಇದ್ದ ಪಬ್ಲಿಕ್ ಪಾಯಿಖಾನಿ ಬಂದ್ ಆಗಿ 9 ವರ್ಷ ಆತು. ಹೊತ್ತ ಮುಳಗಿದ ಮ್ಯಾಲ, ಬೆಳಕ ಹರಿಯುವ ಮೊದಲ ಚರಂಡಿ ಪಕ್ಕ, ಗಿಡಗಂಟಿ ಮರೀಯಾಗ ಶೌಚಕ್ಕ ಹೋಗು ಪರಿಸ್ಥಿತಿ ಐತಿ. 67 ವರ್ಷದಾಕಿ ಅದೀನ್ರಿ. ಸರಿಯಾಗಿ ನಡದ್ಯಾಡಾಕ ಬರ್ತಿಲ್ಲ. ಶೌಚಾಲಯ ಇಲ್ಲದ ಭಾರೀ ಸಮಸ್ಯೆ ಆಗೈತಿ. ಈ ತ್ರಾಸ ಯಾರ ಹತ್ರ …
Read More »
Laxmi News 24×7