Breaking News

ರಾಜ್ಯ

ಸರಣಿ ಕಳ್ಳತನ ಪ್ರಕರಣ. ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ದಾಂಡೇಲಿ: ನಗರದ ಲಿಂಕ್ ರಸ್ತೆಯಲ್ಲಿ ಸರಣಿ ಕಳ್ಳತನ ಮಾಡಿದ್ದ ಆರೋಪಿಗಳಾದ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದ ಘಟನೆ ಸೋಮವಾರ(ಸೆ. 30) ನಡೆದಿದೆ. ಇದೇ ಸೆ: 19 ರಂದು ನಗರದ ಲಿಂಕ್ ರಸ್ತೆಯಲ್ಲಿರುವ ಅಭಿಷೇಕ್ ಕಾಳೆ ಮಾಲಕತ್ವದ ಮೆಡಿಕಲ್ ಅಂಗಡಿಯೊಳಗಿದ್ದ ನಗದು 4 ಲಕ್ಷ ರೂಪಾಯಿ ಮತ್ತು ಚಿನ್ನದ ಆಭರಣಗಳು, ಇದೇ ಕಟ್ಟಡದಲ್ಲಿರುವ ಪಕ್ಕದ ಶರಣ್.ಸಿ.ಅರಳಿಯವರ ಕಿರಾಣಿ ಅಂಗಡಿಯಿಂದ 5 ರಿಂದ 50 ಸಾವಿರ ರೂಪಾಯಿ ನಗದು, ಅಲ್ಲೇ ಹತ್ತಿರದಲ್ಲಿರುವ ವಿಷ್ಣು …

Read More »

ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು

ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರೀ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಬ್ರಹನ್ಮಠ ಶ್ರೀ ಸಿದ್ಧೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಮಹಾಸ್ವಾಮಿಗಳು, ಪ್ರಾಂಶುಪಾಲರಾದ ಶ್ರೀ ಎಮ್.ಎಮ್. ಮಗದುಮ್ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಈ …

Read More »

ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜೆ.ಪಿ.ನಡ್ಡಾ, ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್, ಇ.ಡಿ. ಅಧಿಕಾರಿಗಳು ಸೇರಿ ಹಲವರ ವಿರುದ್ಧ ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.   ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಬೆಂಗಳೂರಿನ ತಿಲಕ್​ ನಗರ ಠಾಣೆಗೆ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ …

Read More »

ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

ಬೆಳಗಾವಿ: ನಗರದ ಹೊಟೇಲ್‌ನಲ್ಲಿ ಬಿಲ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ನಡುವಿನ ಗಲಾಟೆಯಲ್ಲಿ ಬಿಎಸ್‌ಎಫ್ ಯೋಧನೋರ್ವ ಯುವಕನಿಗೆ ಚಾಕು ಇರಿದ ಘಟನೆ ನಗರದ ಎಪಿಎಂಸಿ ರಸ್ತೆಯ ಆಯಿ ಹೊಟೇಲ್‌ನಲ್ಲಿ ಸೋಮವಾರ(ಸೆ30) ನಡೆದಿದೆ. ಬಿಎಸ್‌ಎಫ್ ಯೋಧ ರುಕ್ಮಿಣಿ ನಗರದ ಪರುಶರಾಮ ರಾಮಗೊಂಡನವರ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಗ್ಯಾಂಗ್‌ವಾಡಿಯ ಅಲ್ತಾಫ್ ಚೌಗಲಾ ಎಂಬ ಯುವಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ಆಯಿ ಹೊಟೇಲ್‌ನಲ್ಲಿ ಊಟಕ್ಕೆಬಂದಿದ್ದ ನಾಲ್ವರು ಗ್ಯಾಂಗ್‌ವಾಡಿಯ ಯುವಕರು ಹೊಟೇಲ್ …

Read More »

ಕ್ಷುಲ್ಲಕ ಕಾರಣ; ಕೊಲೆಯಲ್ಲಿ ಅಂತ್ಯ; ಪ್ರಕರಣ ದಾಖಲು

ಬೈಲಹೊಂಗಲ: ಕ್ಷುಲ್ಲಕ ಕಾರಣಕ್ಕೆ ಸಹೋದರಿಯರಿಬ್ಬರ ನಡುವೆ ಮಾತಿನ ಚಕಮಕಿಗೊಂಡು, ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲೂಕಿನ ಅಮಟೂರ ಬೇವಿನಕೊಪ್ಪ ರಸ್ತೆ ಮಧ್ಯೆದಲ್ಲಿ ಸೋಮವಾರ (ಸೆ.30) ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಅಮಟೂರ ಗ್ರಾಮದ ಕೇದಾರಿ ಯಲ್ಲಪ್ಪ ಅಂಗಡಿ (42) ಎಂದು ಗುರುತಿಸಲಾಗಿದೆ.   ತಮ್ಮ ಜಮೀನಿನಲ್ಲಿ ಬೇರೆಯವರಿಗೆ ದಾಟಲು ಅನುವು ಮಾಡಿಕೊಟ್ಟಿದ್ದಕ್ಕೆ ಚಾಕುವಿನಿಂದ ಇರಿದ ಪರಿಣಾಮವಾಗಿ ತೀವ್ರವಾಗಿ ರಕ್ತಸ್ರಾವಗೊಂಡಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಆರೋಪಿಗಳಾದ ಬಾಳಪ್ಪ ಶಿವಾನಂದ ಅಂಗಡಿ …

Read More »

ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

ಲಕ್ನೋ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಪ್ರತಿನಿಧಿಸುತ್ತಿರುವ ವಾರಾಣಸಿಯ ರಸ್ತೆಯೊಂದರ ಚಿತ್ರವನ್ನು ಹಂಚಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್(Akhilesh Yadav) ಅವರು ನಗರದಲ್ಲಿ ಸ್ವಚ್ಛತೆಯ ಕೊರತೆಯ ಬಗ್ಗೆ ಬಿಜೆಪಿ(BJP) ಸರಕಾರದ ವಿರುದ್ಧ ಸೋಮವಾರ(ಸೆ30) ಟೀಕಾ ಪ್ರಹಾರ ನಡೆಸಿದ್ದಾರೆ.   ಎಕ್ಸ್ ನಲ್ಲಿ ಕಸದ ರಾಶಿಯ ಫೋಟೋವೊಂದನ್ನು ಪೋಸ್ಟ್ ಮಾಡಿರುವ ಅಖಿಲೇಶ್ ”ಇದು ದೇಶದ ಪ್ರಮುಖ ಸಂಸದೀಯ ಕ್ಷೇತ್ರದ ಸ್ಥಿತಿ, ಕಸದ ರಾಶಿಯೇ ರಸ್ತೆ ಎಂದರೆ ತಪ್ಪಾಗದು. ಇದೇನಾ ‘ಸ್ವಚ್ಛ …

Read More »

ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ. ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಗದಗ: ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.   ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರೊ. ಭಗವಾನ್ ಅವರು ಹೆಸರಿಗೆ ತಕ್ಕಂಗೆ ಭಗವಂತನ ಮೇಲೆ ನಂಬಿಕೆ ಇಟ್ಟಿದ್ದಾರೆ ಇಲ್ಲಾ ನೋಡಿ, ಭಗವಂತನ ಮೇಲೆ ನಂಬಿಕೆ ಇಲ್ಲಾ ಅಂದರೆ, ಭಗವಾನ್ ಅಂತ ಹೆಸರು ಇಟ್ಟಿಕೊಂಡಿದ್ದೆ …

Read More »

ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ: ಆರ್.ವಿ.ದೇಶಪಾಂಡೆ

ಬೆಂಗಳೂರು: ಬಡತನದ ರೇಖೆಗಿಂತ ಕೆಳಗೆ (ಬಿಪಿಎಲ್) ಇರುವ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಅಪರ ಮುಖ್ಯ ಕಾರ್ಯದರ್ಶಿಯೂ ಆದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾಹಿತಿ ನೀಡಿದರು.   ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು, ಅರ್ಹರಿಗೆ ಈ ಸೌಲಭ್ಯ ಒದಗಿಸುವ ಉದ್ದೇಶದಿಂದ …

Read More »

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡೋವರೆಗೂ ಹೋರಾಟ- ಆರ್‌.ಅಶೋಕ್

ಬೆಂಗಳೂರು : ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವವರೆಗೆ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ತನಕ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ವಿಪಕ್ಷ ನಾಯಕ ಆರ್​.ಅಶೋಕ್ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಯಲ್ಲಿ ಮಾತನಾಡಿ, ಸಿಎಂ ವಿರುದ್ಧದ ಮುಡಾ ಹಗರಣ ಸಂಬಂಧ ನಮ್ಮ ಹೋರಾಟವು ನಿರಂತರವಾಗಿ ನಡೆಯುತ್ತಿರುವುದಕ್ಕೆ ಪ್ರಕರಣ ಈ ಹಂತಕ್ಕೆ ಬಂದು ನಿಂತಿದೆ ಎಂದರು.   ಹಗರಣ ಬೆಳಕಿಗೆ ಬಂದಾಗ ಬಿ.ನಾಗೇಂದ್ರ ತಾನು ರಾಜೀನಾಮೆ ಕೊಡಲ್ಲ ಎಂದಿದ್ದರು. ಆದರೆ ಕಾನೂನಿನ ಕುಣಿಕೆಯಲ್ಲಿ …

Read More »

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಮೊಬೈಲ್ ರಿಪೇರಿ, ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, ಡೊಮೆಸ್ಟಿಕ್ ಎಲಕ್ಟ್ರಿಷಿಯನ್, ಮೋಟಾರ್ ರೀವೈಂಡಿಂಗ್, ಮೊಬೈಲ್ ರಿಪೇರಿ, ಬ್ಯೂಟಿ ಥೆರಪಿಸ್ಟ್, ಕಂಪ್ಯೂಟರ್, ಎಫ್.ಟಿ.ಸಿ.ಪಿ. ತರಬೇತಿ ನೀಡಿ ಉಚಿತವಾಗಿ 5,000 ರೂ. ಮೌಲ್ಯದ ಉಪಕರಣಗಳ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಗ್ರಾಮೀಣ ಅಭ್ಯರ್ಥಿಗಳು ಆಕ್ಟೋಬರ್ 24 ರೊಳಗೆ davanagere.nic.in ವೆಬ್‍ಸೈಟ್ ಮೂಲಕ ಅರ್ಜಿ …

Read More »