ಬೆಂಗಳೂರು, ಆ.28- ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕೃಷ್ಣಾದಲ್ಲಿ ತಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಅವರು, ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಶೀಘ್ರ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು …
Read More »ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಬಿಸಿಯೂಟ ಸವಿದ ರಾಷ್ಟ್ರಪಕ್ಷಿ
ವಿಜಯಪುರ : ಜಿಲ್ಲೆಯ ಸರ್ಕಾರಿ ಶಾಲೆಗೆ ಆಗಮಿಸಿದ ರಾಷ್ಟ್ರಪಕ್ಷಿ ನವಿಲು, ಅಕ್ಷರ ದಾಸೋಹ ಯೋಜನೆಯಲ್ಲಿ ಮಕ್ಕಳೊಂದಿಗೆ ಕೂಡಿ ಬಿಸಿಯೂಟ ಸವಿದು ಅಚ್ಚರಿ ಮೂಡಿಸಿದೆ. ವಿಜಯಪುರ ತಾಲೂಕಿನ ಜಂಬಗಿ (ಆ) ಗ್ರಾಮದ ಕೆರೂರ ವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ವಸ್ತಿ ಶಾಲಾ ಪರಿಸರದಲ್ಲೇ ಓಡಾಡಿಕೊಂಡಿದ್ದ ರಾಷ್ಟ್ರಪಕ್ಷಿ ಮಯೂರಿ, ಇದೀಗ ಏಕಾಏಕಿ ಶಾಲೆಗೆ ಆಗಮಿಸಿ ಮಕ್ಕಳೊಂದಿಗೆ ಬಿಸಿಯೂಟ ಸವಿಯಲು ಆರಂಭಿಸಿದೆ. ಶಾಲಾ ಆವರಣದಲ್ಲಿ ಪಂಕ್ತಿ ಸಾಲಿನಲ್ಲಿ ಕುಳಿತು ಮಕ್ಕಳು ಬಿಸಿಯೂಟ ಸೇವಿಸುವ ಮುನ್ನ ಪ್ರಾರ್ಥನೆ …
Read More »ದರ್ಶನ್ ಆಂಡ್ ಗ್ಯಾಂಗ್’ ನ್ಯಾಯಾಂಗ ಅವಧಿ ಮತ್ತೆ ವಿಸ್ತರಣೆ
ಬೆಂಗಳೂರು, ಆಗಸ್ಟ್ 28: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಬಾರಿ ಕೋರ್ಟ್ 14 ದಿನಗಳವರೆಗೆ ವಿಸ್ತರಿಸಿದ್ದ ಅವಧಿಗೆ ಇಂದು ಬುಧವಾರಕ್ಕೆ ಮುಗಿದ ಹಿನ್ನೆಲೆ ಮತ್ತೆ ವಿಚಾರಣೆ ನಡೆಯಿತು. ನಟ ದರ್ಶನ್ ಪ್ರಕರಣದಲ್ಲಿ ಎಲ್ಲ 17 ಆರೋಪಿಗಳ ನ್ಯಾಯಾಂಗ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ …
Read More »ಬೆಳಗಾವಿ: ಕೆಎಎಸ್ ಪರೀಕ್ಷೆಯ ಒಎಂಆರ್ ಶೀಟ್ ನೀಡಲು ವಿಳಂಬ- ದಿಢೀರ್ ಪ್ರತಿಭಟನೆ
ಬೆಳಗಾವಿ: ಬೆಳಗಾವಿಯ ಅಂಜುಮನ್ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪರೀಕ್ಷೆಯಲ್ಲಿ, ಒಎಂಆರ್ ಶೀಟ್ ನೀಡಲು 15 ನಿಮಿಷ ವಿಳಂಬವಾಗಿದೆ. ಇದರಿಂದ ರೊಚ್ಚಿಗೆದ್ದ ಪರೀಕ್ಷಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಪರೀಕ್ಷೆ ಆರಂಭವಾಗಬೇಕಿತ್ತು. ಹತ್ತು ನಿಮಿಷ ತಡವಾದರೂ ಒಎಂಆರ್ ಸೀಟ್ ನೀಡಲಿಲ್ಲ. ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಬಂದು ಘೋಷಣೆ ಕೂಗತೊಡಗಿದರು. ಇದರಿಂದ ಪರೀಕ್ಷಾ ಕೇಂದ್ರದಲ್ಲಿ …
Read More »ಎರಡು ದಶಕಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಯಲ್ಲಮ್ಮ ಪುರಸಭೆ ಕಾಂಗ್ರೆಸ್ ತೆಕ್ಕೆಗೆ
ಸವದತ್ತಿ: ಎರಡು ದಶಕಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಯಲ್ಲಮ್ಮ ಪುರಸಭೆ ಇದೀಗ ಶಾಸಕ ವಿಶ್ವಾಸ್ ವೈದ್ಯ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ತೆಕ್ಕೆಗೆ ಮರಳಿದೆ. ಹಲವು ತಿಂಗಳಿಂದ ತೆರವಾಗಿದ್ದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಮಂಗಳವಾರ ಆಯ್ಕೆಯಾದರು. 2ನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮೀಸಲಾತಿ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯಕ್ಷ ಸ್ಥಾನಕ್ಕೆ ದಾವಲಬಿ …
Read More »ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ
ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ ರಾಮದುರ್ಗ: ಸವದತ್ತಿಯ ನವೀಲು ತೀರ್ಥ ಅಣೆಕಟ್ಟೆಯಿಂದ 10 ಸಾವಿರಕ್ಕೂ ಹೆಚ್ಚಿನ ನೀರು ಹರಿಸಿದ್ದರಿಂದ ತಾಲ್ಲೂಕಿನ ಹಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿ ವಾಹನಗಳ ಸಂಚಾರ ಸ್ಥಗಿತವಾಗಿದೆ. ಹಳೇ ಸೇತುವೆ ಮೇಲೆ ನಾಲ್ಕು ಐದು ಅಡಿಯಷ್ಟು ನೀರು ಹರಿಯುತ್ತಿದ್ದು ಪಕ್ಕದಲ್ಲಿದ್ದ ಜಾನಕಿರಾಮ ದೇವಸ್ಥಾನ ಜಲಾವೃತವಾಗಿದೆ. ನವೀಲು ತೀರ್ಥ ಅಣೆಕಟ್ಟೆ ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿದ್ದು, ಈಗಾಗಲೇ ಅಣೆಕಟ್ಟೆಯಲ್ಲಿ 2078.10 ಅಡಿ ನೀರು ಸಂಗ್ರಹವಾಗಿದೆ. ಒಳ …
Read More »ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ಶಿಫ್ಟ್
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ನ್ನು ಸ್ಥಳಾಂತರ ಮಾಡಲು ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಐಷರಾಮಿ ಸವಲತ್ತು ಮತ್ತು ರೌಡಿ ಸಹವಾಸ ಮಾಡಿದ್ದ ದರ್ಶನ್ ಫೋಟೋ, ವಿಡಿಯೋ ವೈರಲ್ ಆಗಿದ್ದವು. ಇದರಿಂದ ಸರ್ಕಾರಕ್ಕೆ ಮತ್ತು ಗೃಹ ಇಲಾಖೆಗೆ ಮುಜುಗರ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ರೇಣುಕಸ್ವಾಮಿ ಕೊಲೆ ಕೇಸಿನ ಆರೋಪಿಗಳನ್ನು ಸ್ಥಳಾಂತರ ಮಾಡಲು ಅನುಮತಿ ನೀಡುವಂತೆ ಪೊಲೀಸರು ಮತ್ತು ಜೈಲಾಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು. ಮನವಿಗೆ …
Read More »ಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …
Read More »ಧಾರವಾಡ: ಕರ್ನಾಟಕ ವಿ.ವಿ ಪದವಿ ಪರೀಕ್ಷೆ ಮುಂದೂಡಿಕೆ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯವು ಆಗಸ್ಟ್ 27ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿದೆ. ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಆಗಸ್ಟ್ 27ಕ್ಕೆ ನಿಗದಿಯಾಗಿರುವುದರಿಂದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿರುವ ಪದವಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ www.kud.ac.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಎನ್.ವೈ.ಮಟ್ಟಿಹಾಳ್ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
Read More »ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ; ಕನ್ನಡತಿ ಶ್ರೇಯಾಂಕಾ ಪಾಟೀಲ್ಗೆ ಸ್ಥಾನ
ಅಕ್ಟೋಬರ್ 3ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್ಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಪಂದ್ಯಾವಳಿ ಅಲ್ಲಿ ದಂಗೆ ಶುರುವಾದ ಬಳಿಕ, ಯುಎಇಗೆ ಸ್ಥಳಾಂತರ ಮಾಡಿದೆ. ಭಾರತ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಟಿ20 ವಿಶ್ವಕಪ್ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂದಾನಗೆ ತಂಡದ ಉಪನಾಯಕಿ ಪಟ್ಟ …
Read More »
Laxmi News 24×7