ದರ್ಶನ್ ಪ್ರಕರಣದಲ್ಲಿ ನಟ ಚಿಕ್ಕಣ್ಣ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ನಟ ಚಿಕ್ಕಣ್ಣ ಅವರ ಹೇಳಿಕೆಯೇ ಈಗ ದರ್ಶನ್ಗೆ ಕಂಟಕವಾಗಿದ್ದು ಚಿಕ್ಕಣ್ಣ ಅವರಿಗೆ ತಲೆನೋವಾಗಿದೆ. ದರ್ಶನ್ ವಿರುದ್ಧ ಹಲವು ಮಹತ್ವದ ಸಾಕ್ಷಿಗಳನ್ನು ಕಲೆಹಾಕಿರುವ ಪೊಲೀಸರು, ಚಿಕ್ಕಣ್ಣ ವಿಚಾರದಲ್ಲೂ ಚಾಣಾಕ್ಷತೆಯಿಂದ ನಡೆದುಕೊಂಡಿದ್ದಾರೆ. ಈಗ ಚಿಕ್ಕಣ್ಣ ಅವರ ಹೇಳಿಕೆ ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ಗೆ ಶಿಕ್ಷೆ ಕೊಡಿಸಲು ಮಹತ್ವದ ಸಾಕ್ಷಿಯಾಗುವ ಸಾಧ್ಯತೆ ಇದೆ. …
Read More »ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್ ಸುಧೀರ್- ಸೋನಲ್
ಬೆಂಗಳೂರು: ಡೈರೆಕ್ಟರ್ ತರುಣ್ ಕಿಶೋರ್ ಸುಧೀರ್ ಹಾಗೂ ಕನ್ನಡದ ನಟಿ ಸೋನಲ್ ಮಂಥೆರೊ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತರುಣ್ ಕಿಶೋರ್ ಸುಧೀರ್ , ಸೋನಲ್ ಮಂಥೆರೊ ಜೋಡಿ ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಈ ಮದುವೆಯ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಈ ಜೋಡಿಯ ಹೊಸ ಜೀವನಕ್ಕೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಆಗಸ್ಟ್-11 ರಂದು ಬೆಳಗ್ಗೆ 10:50 ರಿಂದ 11:35 ಸಮಯದ ತುಲಾ ಲಗ್ನದಲ್ಲಿ …
Read More »ವಿಜಯೇಂದ್ರ ಹಗರಣದ ತನಿಖೆಗೆ ಯತ್ನಾಳ ಪಾದಯಾತ್ರೆ ನಡೆಸಲಿ:ಎಂ.ಬಿ.ಪಾಟೀಲ ವ್ಯಂಗ್ಯ
ವಿಜಯಪುರ: ಬಿಜೆಪಿ ಪಕ್ಷದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಮತ್ತೊಂದು ಪಾದಯಾತ್ರೆ ನಡೆಸಲಿದ್ದಾರಂತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿರುವ ಭ್ರಷ್ಟಾಚಾರದ ಪಟ್ಟಿ ಇರಿಸಿಕೊಂಡು ಯತ್ನಾಳ್ ಪಾದಯಾತ್ರೆ ನಡೆಸಲಿ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಕುಟುಕಿದ್ದಾರೆ. ಭಾನುವಾರ (ಆ.11) ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ, ಬಿಎಸ್ವೈ ಒಂದು ಬಣ, ಅಶೋಕ್ ಬಣ, ಅಶ್ವತ್ಥನಾರಾಯಣ ಬಣ, ರಮೇಶ ಜಾರಕಿಹೊಳಿ, ಯತ್ನಾಳ ಬಣ, ಬಿ.ಎಲ್. ಸಂತೋಷ …
Read More »ಬೆಂಗಳೂರಿನ ಕಾಫಿ ಶಾಪ್ ವಾಶ್ ರೂಂನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್
ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಕಾಫಿ ಔಟ್ ಲೆಟ್ ನ ಕಸದ ಬುಟ್ಟಿಯೊಳಗೆ ಸುಮಾರು ಎರಡು ಗಂಟೆಗಳ ಕಾಲ ವೀಡಿಯೊ ರೆಕಾರ್ಡಿಂಗ್ ಮಾಡಿದಂತ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಸಂಬಂಧ ಕೆಫೆ ಸಿಬ್ಬಂದಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾನಗರದ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಔಟ್ ಲೆಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶೌಚಾಲಯದಲ್ಲಿ ಫೋನ್ ಅಡಗಿಸಿಟ್ಟಿದ್ದಾರೆ ಎಂದು ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ …
Read More »ರೆಸಾರ್ಟ್ ನಲ್ಲಿ ಸಭೆ ನಡೆಸಿದ ಜಾರಕಿಹೊಳಿ, ಯತ್ನಾಳ್, ಸಿಂಹ,ಜೊಲ್ಲೆ,
ಬೆಳಗಾವಿ: ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೇ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಪ್ರಭಾವಿ ನಾಯಕರಾದ ರಮೇಶ್ ಜಾರಕಿಹೊಳಿ (Ramesh jarkiholi) ಮತ್ತು ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ನೇತೃತ್ವದಲ್ಲಿ ಬಿಜೆಪಿ ಅತೃಪ್ತ ಶಾಸಕರು ಹಾಗೂ ನಾಯಕರ ಸಭೆ ನಡೆಸುತ್ತಿದ್ದಾರೆ. ಜಾರಕಿಹೊಳಿ, ಯತ್ನಾಳ್ ಗೆ ಹಲವ ಮುಖಂಡರು ಸಾಥ್ ನೀಡಿದ್ದಾರೆ. ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ಅಣ್ಣಸಾಹೆಬ್ ಜೊಲ್ಲೆ, …
Read More »ಕರ್ನಾಟಕದಲ್ಲಿ ‘ಭೂ ಕುಸಿತ ತಡೆ’ಗೆ ಶೀಘ್ರವೇ ‘ಹೊಸ ನೀತಿ’ ಜಾರಿ
ಬೆಂಗಳೂರು: ಕೇರಳದ ವಯನಾಡಿನಲ್ಲಿ ಉಂಟಾದಂತ ಭೂ ಕುಸಿತದ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಭೂ ಕುರಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿಗೆ ತರಲು ನಿರ್ಧರಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ …
Read More »6 ವರ್ಷಗಳಾದರೂ ನಿರ್ಮಾಣಗೊಳ್ಳದ ಸೇತುವೆ: ಗಡಿಯಲ್ಲಿ ದೋಣಿ ನಂಬಿ ಬದುಕು
ಜುಗೂಳ(ಬೆಳಗಾವಿ ಜಿಲ್ಲೆ): ‘ಪ್ರವಾಹದಾಗ ಕೃಷ್ಣಾ ನದಿ ಉಕ್ಕಿ ಹರಿತಿರ್ತೇತಿ. ನೀರಿನ ಸೆಳವಿಗೆ ಸಿಕ್ಕು, ಒಮ್ಮಿಂದೊಮ್ಮೆ ದೋಣಿ ಅಲುಗಾಡಿದಂಗ್ ಆಗ್ತೇತಿ. ಒಂದು ವೇಳೆ ದೋಣಿ ಪಲ್ಟಿ ಆದ್ರ, ಗಂಡ್ಮಕ್ಳು ಹೆಂಗೋ ಈಜ್ಕೊಂತ ದಡ ಸೇರ್ತಿವಿ. ಆದ್ರ ಹೆಣ್ಮಕ್ಳು ಮತ್ತು ವಯಸ್ಸಾದಾವ್ರ ಇದ್ರ, ಅವರ ಕತಿ ಏನ್ರೀ…’ ಕಾಗವಾಡ ತಾಲ್ಲೂಕಿನ ಜುಗೂಳ ಗ್ರಾಮಸ್ಥ ದಯಾನಂದ ಮಿಣಚೆ ಅವರು ಸಂಕಷ್ಟ ತೋಡಿಕೊಂಡಿದ್ದು ಹೀಗೆ. ಜುಗೂಳ ಮತ್ತು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಖಿದ್ರಾಪುರ ಅಕ್ಕಪಕ್ಕದಲ್ಲಿವೆ. ಒಂದು …
Read More »ಅಂಗನವಾಡಿಗೆ ಸ್ನಾತಕೋತ್ತರ ಪದವೀಧರರು: ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು15 ಮಂದಿ ನೇಮಕ
ಬೆಳಗಾವಿ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಈ ವರ್ಷ 197 ಕಾರ್ಯಕರ್ತೆಯರು ನೇಮಕಗೊಂಡಿದ್ದಾರೆ. ಅವರಲ್ಲಿ 15 ಮಂದಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ 5,656 ಅಂಗನವಾಡಿ ಕೇಂದ್ರಗಳಿವೆ. 1,200ಕ್ಕೂ ಅಧಿಕ ಕೇಂದ್ರಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಜಿಲ್ಲೆಯಲ್ಲಿ 283 ಅಂಗನವಾಡಿ ಕಾರ್ಯಕರ್ತೆಯರ ನೇಮಕಕ್ಕೆ 2023ರ ಜೂನ್ನಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. …
Read More »ಚಿಕ್ಕೋಡಿಯಲ್ಲಿ ಮತ್ತೇ ಪ್ರವಾಹ ಭೀತಿ!
ಚಿಕ್ಕೋಡಿ: ಮಹಾ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದಲ್ಲಿ ಕೃಷ್ಣಾ ,ಉಪ ನದಿಗಳು ಭೋರ್ಗರೆಯುತ್ತಿವೆ. ಮಹಾರಾಷ್ಟ್ರದಲ್ಲಿ ಕೃಷ್ಣಾ ಹಾಗೂ ನದಿಗಳಿಗೆ ನಿರ್ಮಿಸಿದ ಅಣೆಕಟ್ಟೆಗಳು ಭಾಗಶಃ ಭರ್ತಿಯಾಗಿವೆ. ವಾಯುಭಾರ ಕುಸಿತದಿಂದ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮತ್ತೆ ಮಳೆಯಾದಲ್ಲಿ ಉಪ ವಿಭಾಗದ ನದಿ ತೀರದ ಗ್ರಾಮಗಳ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಲಿದೆ. ಮಹಾರಾಷ್ಟ್ರದ ಕೊಂಕಣದಲ್ಲಿ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಮಳೆ ಬೀಳುತ್ತಿದೆ. ಚಿಕ್ಕೋಡಿ …
Read More »ಸಹಕಾರದ ಸೇವೆಯಿಂದ ಆತ್ಮತೃಪ್ತಿ: ನ್ಯಾ ಸುಮಲತಾ ಬೆಣ್ಣಿಕಲ್ಲ
ಸವದತ್ತಿ: ಇಲ್ಲಿನ ನ್ಯಾಯಾಲಯದಲ್ಲಿನ ನ್ಯಾಯಾಧೀಶರು ಹಾಗೂ ವಕೀಲರ ಸಹಕಾರದಿಂದ ಸಲ್ಲಿಸಿದ ಸೇವೆ ಆತ್ಮತೃಪ್ತಿ ತಂದಿದೆ ಎಂದು ಪ್ರಧಾನ ದಿವಾಣಿ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಹೇಳಿದರು. ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಪದೋನ್ನತ್ತಿ ಹೊಂದಿ ವರ್ಗಾವಣೆ ಹೊಂದಿದ ಪ್ರಯುಕ್ತ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಾಗರಿಕ ಸೇವೆಯಲ್ಲಿ ಪದೋನ್ನತ್ತಿ, ವರ್ಗಾವಣೆ ಅನಿವಾರ್ಯ. ಆದರೆ ಇಲ್ಲಿನವರೊಂದಿಗಿನ ಭಾಂದವ್ಯ ಅವಿಸ್ಮರಣೀಯ. ಸೇವೆಗೆ ನೇಮಕಗೊಂಡ ಆರಂಭದಲ್ಲಿ ಇಲ್ಲಿನ ಸೌಕರ್ಯಗಳ …
Read More »
Laxmi News 24×7