ಹೊಸನಗರ: ತಾಲ್ಲೂಕಿನಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಹೊಸನಗರ ಸಮೀಪದ ಹೋಲಿ ರಿಡೀಮರ್ ಶಾಲೆ ಬಳಿ ಬೃಹತ್ ಗಾತ್ರದ ಮರವೊಂದು ಹೆದ್ದಾರಿ ಮೇಲೆ ಉರುಳಿ ಬಿದ್ದಿದೆ. ಶುಕ್ರವಾರ ಮಧ್ಯಾಹ್ನ 1.30ರ ವೇಳೆಗೆ ಹೆದ್ದಾರಿಗೆ ಮರ ಬಿದ್ದಿದ್ದು, ಈ ಮಾರ್ಗದ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಸಿಬ್ಬಂದಿ ದೌಡಾಯಿಸಿ, ಸ್ಥಳೀಯರ ಸಹಕಾರದಿಂದ ಮರ ತೆರವು ಮಾಡಿದರು. ಕಾರ್ಯಾಚರಣೆ ವೇಳೆ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಹೆಚ್ಚಿನ ವಾಹನ …
Read More »ಚಿಕ್ಕೋಡಿ | ತುಂಬಿದ ಜಲಾಶಯಗಳು: ನೀರಿನ ಹರಿವು ಹೆಚ್ಚಳ
ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಕೃಷ್ಣಾ ನದಿಯಿಂದ ರಾಜ್ಯಕ್ಕೆ 216220 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾದಲ್ಲಿ 19.8 ಸೆಂ.ಮೀ., 16.8 ಸೆಂ.ಮೀ., ಕಾಳಮ್ಮವಾಡಿಯಲ್ಲಿ 15 ಸೆಂ.ಮೀ., ಮಹಾಬಳೇಶ್ವರದಲ್ಲಿ 26.7 ಸೆಂ.ಮೀ., ನವಜಾದಲ್ಲಿ 17.2 ಸೆಂ.ಮೀ., ರಾಧಾನಗರಿಯಲ್ಲಿ 23.4 ಸೆಂ.ಮೀ., ಸಾಂಗಲಿಯಲ್ಲಿ 2.6 ಸೆಂ.ಮೀ., ಕೊಲ್ಹಾಪುರದಲ್ಲಿ 10.4 ಸೆಂ.ಮೀ. ನಷ್ಟು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಚಿಕ್ಕೋಡಿಯಲ್ಲಿ 5.2 ಸೆಂ.ಮೀ., ಅಂಕಲಿಯಲ್ಲಿ 4.2 ಸೆಂ.ಮೀ., ಸದಲಗಾದಲ್ಲಿ 5.7 …
Read More »ರಾ.ಹೆದ್ದಾರಿ ಸಂಚಾರಕ್ಕೆ ಮೂರ್ನಾಲ್ಕು ದಿನಗಳಲ್ಲಿ ಗ್ರೀನ್ ಸಿಗ್ನಲ್ ?
ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನ ಸಂಚಾರ ನಿಂತು ಹೋಗಿ ಇಂದಿಗೆ 11 ದಿನ ಪೂರ್ಣಗೊಂಡಿದೆ. ಬ್ರಿಟಿಷ್ ಕಾಲದಿಂದ ಹಿಡಿದು, ಶಿರೂರು ಮಣ್ಣು ಕುಸಿತದ ಘಟನೆ ನಡೆವ ತನಕ ಈ ಹೆದ್ದಾರಿ ಬಂದ್ ಆದ ಉದಾಹರಣೆಗಳಿಲ್ಲ. ಕೊಂಕಣ ಸೀಮೆ, ಪಶ್ಚಿಮ ಘಟ್ಟಗಳ ಸಾಲಿನ ಕರಾವಳಿಯಲ್ಲಿ ಮುಂಬಯಿ ಪ್ರಾಂತ, ಗೋವಾ, ಕರಾವಳಿ ಕರ್ನಾಟಕ, ಕೇರಳವೂ ಸೇರಿದಂತೆ ನಾಲ್ಕು ರಾಜ್ಯಗಳನ್ನು ಬೆಸೆಯುವ ಈ ರಾಷ್ಟ್ರೀಯ ಹೆದ್ದಾರಿ ಮೊದಲು ಎನ್ ಎಚ್ 17 …
Read More »ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ
ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಮುಂದುವರೆದ ಪರಿಣಾಮ ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಶನಿವಾರದವರೆಗೆ ರಜೆ ವಿಸ್ತರಿಸಲಾಗಿದೆ. ಜು.25 ಮತ್ತು 26 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆ ಮುಂದುವರೆದ ಪರಿಣಾಮ ರಜೆ ವಿಸ್ತರಿಸಿದ್ದು, ಜು.27 ರಂದು ರಜೆ ಘೋಷಿಸಲಾಗಿದೆ.ಈ ಕುರಿತಂತೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ. …
Read More »ಮೂಡಲಗಿ: ನದಿ ನೀರಿನಲ್ಲಿ ಕಬ್ಬಿನ ಬೆಳೆ
ಮೂಡಲಗಿ: ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಬುಧವಾರ ಮಧ್ಯಾಹ್ನ ನೀರು ಬಿಟ್ಟಿದ್ದರಿಂದ ಗುರುವಾರ ಬೆಳಿಗ್ಗೆಯಿಂದ ತಾಲ್ಲೂಕಿನ ಮಸಗುಪ್ಪಿ, ಸುಣಧೋಳಿ, ಕಮಲದಿನ್ನಿ, ಅವರಾಧಿ, ಢವಳೇಶ್ವರ ಗ್ರಾಮಗಳ ಬಳಿಯಲ್ಲಿ ನದಿ ನೀರಿನ ಹರಿವು ವಿಸ್ತಾರಗೊಂಡು ಸಾವಿರಾರು ಎಕರೆಯಷ್ಟು ಕಬ್ಬಿನ ಬೆಳೆ ನೀರಿನಲ್ಲಿ ನಿಂತಿದೆ. ಪ್ರವಾಹ ಭೀತಿ ಇರುವ ತೋಟಪಟ್ಟಿಗಳಲ್ಲಿ ವಾಸವಾಗಿರುವ ಜನರು ಜಾನುವಾರು ಸಹಿತಿ ಸುರಕ್ಷಿತ ಸ್ಥಳಕ್ಕೆ ಬೆಳಿಗ್ಗೆಯಿಂದ ತೆರಳುತ್ತಿದ್ದಾರೆ. ಪ್ರವಾಹ ಸಮಸ್ಯೆ ನಿರ್ವಹಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶೀಲ್ದಾರ್ ಮಹಾದೇವ ಸನ್ನಮುರೆ …
Read More »ಖಾನಾಪುರ ತಾಲ್ಲೂಕಿನಲ್ಲಿ ಮುಂದುವರೆದ ಮಳೆ: ಜನಜೀವನ ಅಸ್ತವ್ಯಸ್ತ
ಖಾನಾಪುರ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರವೂ ಮಳೆ ಮುಂದುವರೆದಿದ್ದು, ತಾಲ್ಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ತಾಲ್ಲೂಕಿನಾದ್ಯಂತ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಗಳ ಮೇಲೆ ಪ್ರವಾಹೋಪಾದಿಯಲ್ಲಿ ನೀರು ಹರಿಯುತ್ತಿದೆ. ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ನೀಲಾವಡೆ ಗ್ರಾಮದ ಬಳಿ ಮಲಪ್ರಭಾ ನದಿಯ ಸೇತುವೆಯ, ಸಿಂಧನೂರು-ಹೆಮ್ಮಡಗಾ ಮಾರ್ಗದ ಅಲಾತ್ರಿ ಹಳ್ಳದ ಸೇತುವೆ, ದೇವಾಚಿಹಟ್ಟಿ-ಜಾಂಬೋಟಿ ಮಾರ್ಗಗಳ ಸೇತುವೆ ಸೇರಿದಂತೆ ನೇರಸಾ-ಗವ್ವಾಳಿ, ಹೆಮ್ಮಡಗಾ-ತಳೇವಾಡಿ, ಚಿಕಲೆ-ಅಮಗಾಂವ, ಮೋದೆಕೊಪ್ಪ-ತೀರ್ಥಕುಂಡೆ, ದೇವಾಚಿಹಟ್ಟಿ-ತೋರಾಳಿ, ತಿವೋಲಿ-ಶಿರೋಲಿ, ಅಮಟೆ-ಗೋಲ್ಯಾಳಿ, …
Read More »ಚಿಕ್ಕೋಡಿ: ಯಕ್ಸಂಬಾ-ದತ್ತವಾಡ ಸೇತುವೆ ಮುಳುಗಡೆ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದ ಕಾಳಮ್ಮವಾಡಿ, ರಾಧಾನಗರಿ, ಮಹಾಬಳೇಶ್ವರ, ಕೊಯ್ನಾ ಮುಂತಾದ ಕಡೆಗೆ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲೂ ಜಿಟಿ ಜಿಟಿ ಮಳೆಯು ಸುರಿಯುತ್ತಲೇ ಇದೆ. ಹೀಗಾಗಿ ಉಪ ವಿಭಾಗ ವ್ಯಾಪ್ತಿಯಲ್ಲಿ ಈಗಾಗಲೇ ವೇದಗಂಗಾ ನದಿಯ 4, ದೂಧಗಂಗಾ ನದಿಯ 4, ಕೃಷ್ಣಾ ನದಿಯ 1 ಸೇತುವೆ ಜಲಾವೃತಗೊಂಡಿವೆ. ಗುರುವಾರ ಬೆಳಿಗ್ಗೆ ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿರುವ …
Read More »ರಾಧಾನಗರಿ ಡ್ಯಾಂನಿಂದ ನೀರು ಬಿಡುಗಡೆ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿದ್ದು, ದೂಧಗಂಗಾ ನದಿಗೆ ಅಡ್ಡಲಾಗಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯದ 6 ಸ್ವಯಂ ಚಾಲಿತ ಗೇಟ್ಗಳನ್ನು ತೆರೆದು 2928 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. 8.36 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂ ಬಹುತೇಕ ಭರ್ತಿಯಾಗಿದೆ. ಹೀಗಾಗಿ ಗುರುವಾರ ಬೆಳಿಗ್ಗೆಯಿಂದ ಅಣೆಕಟ್ಟುಯಿಂದ ನೀರನ್ನು ಹೊರಬಿಡಲಾಗುತ್ತಿದೆ. ಇನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಪಂಚಗಂಗಾ ನದಿ ಅಪಾಯದ ಮಟ್ಟ ಮೀರಿ …
Read More »ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿ ರ್ಯಾಲಿ. ಮತ್ತೆ ಜೈಲುಪಾಲಾದ
ಮುಂಬೈ: ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರೋಡೆಕೋರನೊಬ್ಬ ಜೈಲಿನಿಂದ ಬಿಡುಗಡೆಗೊಂಡ ಕೆಲವೇ ದಿನದಲ್ಲಿ ಮತ್ತೆ ಜೈಲು ಪಾಲಾಗಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಅಂದಹಾಗೆ ಈ ದರೋಡೆಕೋರನನ್ನು ಸುಖಾಸುಮ್ಮನೆ ಜೈಲಿಗೆ ಹಾಕಿಲ್ಲ ಇದರ ಹಿಂದೆ ಒಂದು ಕತೆ ಇದೆ. ಮಹಾರಾಷ್ಟ್ರದ ನಾಸಿಕ್ ಮೂಲದ ದರೋಡೆಕೋರನಾಗಿರುವ ಹರ್ಷದ್ ಪಾಟಂಕರ್ ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಇದೆ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ ಇತ್ತ ಜೈಲಿನಿಂದ ಬಿಡುಗಡೆಗೊಳ್ಳುತ್ತಿರುವ ವಿಚಾರ ಆತನ ಬೆಂಬಲಿಗರಿಗೆ …
Read More »ಲಿಂಗನಮಕ್ಕಿಯಲ್ಲಿ ಭಾರೀ ಒಳಹರಿವು: ಗಂಗೆ ಪೂಜೆ
ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯಕ್ಕೆ ಭಾರೀ ಒಳಹರಿವು ಬರುತ್ತಿದ್ದು 1804.80 ಅಡಿಗೆ ತಲುಪಿದೆ. ಜಲಾಶಯ ನೀರಿನ ಮಟ್ಟವು ಈಗಾಗಲೇ ಗೇಟ್ ಮಟ್ಟ ತಲುಪಿದ್ದು ಸಂಪ್ರದಾಯದಂತೆ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಶುಕ್ರವಾರ ಗಂಗೆ ಪೂಜೆ ನೆರವೇರಿಸಿದರು. ನಂತರ ಕೆಲ ನಿಮಿಷಗಳ ಕಾಲ ಗೇಟ್ ಮೂಲಕ ನೀರು ಹೊರಬಿಡಲಾಯಿತು. ರಾಜ್ಯಕ್ಕೆ ಅತಿ ಕಡಿಮೆ ವೆಚ್ಚದಲ್ಲಿ ಜಲ ವಿದ್ಯುತ್ ಪೂರೈಸುವ ಏಕೈಕ ಜಲಾಶಯ ಇದಾಗಿದ್ದು ಶುಕ್ರವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ 1804.40 ಅಡಿ ತಲುಪಿತ್ತು. …
Read More »
Laxmi News 24×7