ಹಾವೇರಿ : ರಾಜ್ಯದಲ್ಲಿ ಡೇಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾವೇರಿ ಜಿಲ್ಲೆಯಲ್ಲಿ ಡೇಂಘಿ ಮಹಾಮಾರಿಗೆ ಮೊದಲ ಬಲಿಯಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ 30 ವರ್ಷದ ಮಹಿಳೆ ಡೇಂಘಿಗೆ ಸಾವನ್ನಪ್ಪಿದ್ದಾರೆ. ಹೌದು ಮಹಾಮಾರಿ ಡೇಂಘಿಗೆ 30 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯ (30) ಎಂಬ ಮಹಿಳೆ ಇದೀಗ ಸಾವನ್ನಪ್ಪಿದ್ದಾರೆ.ಹಾವೇರಿ ನಗರದ ಮಲ್ಲಾಡದ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಜ್ವರದಿಂದ …
Read More »3 ದಿನ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ
ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಲಿದ್ದಾರೆ. ಹೌದು ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನಗಳ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾಗಿ ಮುಖ್ಯಮಂತ್ರಿ …
Read More »ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ನೀಡಲು ಒತ್ತಾಯ
ಇಳಕಲ್: ಕೊಲೆಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು. ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿಯ ಕಂಠಿ ವೃತ್ತದಲ್ಲಿ ಮಂಗಳವಾರ ವೀರಮಾಹೇಶ್ವರ ಜಂಗಮ ಸಮಾಜದವರು ತಹಶೀಲ್ದಾರ್ ಸತೀಶ ಕೂಡಲಗಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರ ಹತ್ತಿರದ ರೇಣುಕಾಚಾರ್ಯ ವೃತ್ತದಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತ ತಲುಪಿದರು. ಸಂದೇಶಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ …
Read More »ವೀರಶೈವ ಲಿಂಗಾಯತ ವಧು-ವರರ ಮುಖಾಮುಖಿ ಸಮಾವೇಶ
ಬೆಂಗಳೂರು: ಡಾಕ್ಟರ್ಸ್, ಇಂಜಿನಿಯರ್ಸ್, ವಿವಿಧ ಪದವೀಧರರು, ಎನ್ಆರ್ಐಗಳು ಹಾಗೂ ಇನ್ನಿತರೆ ಎಲ್ಲ ವೀರಶೈವ ಲಿಂಗಾಯತ ವಧು-ವರರ ಮಾಸಿಕ ಮುಖಾ-ಮುಖಿ ಸಮಾವೇಶವು ಜೂ.30 ಭಾನುವಾರ ಮಧ್ಯಾಹ್ನ 2ಕ್ಕೆ ಹಮ್ಮಿಕೊಂಡಿರುವುದಾಗಿ ಲಿಂಗಾಯತ ಕಲ್ಯಾಣ ಟ್ರಸ್ಟ್ ತಿಳಿಸಿದೆ. ಗಾಂಧಿನಗರದ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತ ವಧು-ವರರು ಮತ್ತು ಪೋಷಕರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು. ಆನ್ಲೈನ್ ಮುಖಾಂತರ ಹೆಸರು ನೋಂದಾಯಿಸಲು www.lingayathkalyanatrust.org ಲಾಗ್ಇನ್ ಆಗಿ. ಹೆಚ್ಚಿನ ಮಾಹಿತಿಗೆ ದೂ: 080 …
Read More »ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ …
Read More »ಬುಧವಾರ ಮತ್ತೆ ಎರಡು ಅನಧಿಕೃತ ಆಸ್ಪತ್ರೆ ಸೀಜ್
ಚನ್ನಮ್ಮನ ಕಿತ್ತೂರು : ಮಕ್ಕಳ ಮಾರಾಟ ಹಾಗೂ ಭ್ರೂಣ ಹತ್ಯೆ ಪ್ರಕರಣದ ಬೆನ್ನಲೇ ಕಿತ್ತೂರಿನಲ್ಲಿ ಬುಧವಾರ ಮತ್ತೆ ಎರಡು ಆಸ್ಪತ್ರೆಗಳಿಗೆ ತಾಲೂಕು ವೈದ್ಯಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆಗಳನ್ನು ಬಂದ್ ಮಾಡಿದ್ದಾರೆ. ಇಲ್ಲಿಯ ಪೊಲೀಸ್ ಠಾಣೆ ಎದುರು ಕಾಲೇಜು ರಸ್ತೆಯಲ್ಲಿರುವ ಮಹೇಶ ಹಟ್ಟಿಹೊಳಿಗೆ ಸೇರಿದ ‘ಧನ್ವಂತರಿ ಕ್ಲಿನಿಕ್’ ಹಾಗೂ ರೈತರ ಓಣಿ ಕ್ರಾಸ್ ಹತ್ತಿರ ಇರುವ ಇಬ್ರಾಹಿಂ ಜಮಾದಾರ್ ಗೆ ಸೇರಿದ ‘ಜಮಾದಾರ ಕ್ಲಿನಿಕ್’ ಅನ್ನು ಪರವಾನಿಗೆ ಇಲ್ಲದೆ ನಡೆಸುತ್ತಿದ್ದರು ಎಂದು …
Read More »ಭಾರತಕ್ಕೆ ಇಂಗ್ಲೆಂಡ್ ಎದುರಾಳಿ; ಅಫ್ಘಾನಿಸ್ಥಾನಕ್ಕೆ ದಕ್ಷಿಣ ಆಫ್ರಿಕಾ
ಟರೂಬ/ಪ್ರೊವಿಡೆನ್ಸ್: ಟಿ20 ವಿಶ್ವಕಪ್ ಪಂದ್ಯಾವಳಿ ಸೆಮಿಫೈನಲ್ನತ್ತ ಮುಖ ಮಾಡಿದೆ. ದಾಖಲೆ ಸಂಖ್ಯೆಯ 20 ತಂಡಗಳಲ್ಲಿ 4 ಮಾತ್ರ ರೇಸ್ನಲ್ಲಿ ಉಳಿದುಕೊಂಡಿವೆ. ಸೂಪರ್-8 ಮೊದಲ ವಿಭಾಗದಿಂದ ಭಾರತ (6 ಅಂಕ) ಮತ್ತು ಅಫ್ಘಾನಿಸ್ಥಾನ (4 ಅಂಕ); ಎರಡನೇ ವಿಭಾಗದಿಂದ ದಕ್ಷಿಣ ಆಫ್ರಿಕಾ (6 ಅಂಕ) ಮತ್ತು ಇಂಗ್ಲೆಂಡ್ (4 ಅಂಕ) ಸೆಮಿಫೈನಲ್ ಪ್ರವೇಶಿಸಿವೆ. ಟರೂಬದಲ್ಲಿ ನಡೆಯುವ ಮೊದಲ ಸೆಮಿಫೈನಲ್ನಲ್ಲಿ ದ. ಆಫ್ರಿಕಾ- ಅಫ್ಘಾನಿ ಸ್ಥಾನ ಮುಖಾಮುಖೀ ಆಗಲಿವೆ. ಗಯಾನಾದ ಪ್ರೊವಿಡೆನ್ಸ್ನಲ್ಲಿ ಭಾರತ ತಂಡ …
Read More »ವೇಶ್ಯಾವಾಟಿಕೆ ಸಂತ್ರಸ್ತೆ ವಿಚಾರಣೆ ಅನ್ಯಾಯ, ಶಿಕ್ಷಿಸಲು ಯಾವುದೇ ಕಾನೂನು ಇಲ್ಲ: ಹೈಕೋರ್ಟ್ ಆದೇಶ
ಬೆಂಗಳೂರು: ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ವಿಚಾರಣೆಗೆ ಗುರಿಪಡಿಸುವುದು ಕಾನೂನು ಪ್ರಕ್ರಿಯೆ ದುರುಪಯೋಗ ಮತ್ತು ಅನ್ಯಾಯಕ್ಕೆ ಕಾರಣವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವೇಶ್ಯಾವಾಟಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯ ಪೀಠ ಅರ್ಜಿಯನ್ನು ಪುರಸ್ಕರಿಸಿದೆ. ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ವಿಚಾರಣೆಗೆ ಗುರಿಪಡಿಸದಂತೆ ಹೇಳಿದ್ದು, ಸಂತ್ರಸ್ತ ಮಹಿಳೆಯ ವಿರುದ್ಧ ವಿಚಾರಣಾ ನ್ಯಾಯಾಲಯ ಪ್ರಕ್ರಿಯೆಯನ್ನು …
Read More »15ರಿಂದ 26ರವರೆಗೆ ವಿಧಾನಮಂಡಲದ ಅಧಿವೇಶನ?
ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಜುಲೈ 15ರಿಂದ ಪ್ರಾರಂಭಗೊಳ್ಳುವ ಸಾಧ್ಯತೆ ಇದೆ. ಜುಲೈ 15ರಿಂದ 26 ರವರೆಗೆ ಅಧಿವೇಶನ ಕರೆಯಲು ಸರ್ಕಾರ ತೀರ್ಮಾನಿಸಿದೆ. ಜು.4 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾಣೆಯ ಬಳಿಕ ಮೊದಲ ಬಾರಿಗೆ ಅಧಿವೇಶನ ನಡೆಯುತ್ತಿರುವುದರಿಂದ ಆಡಳಿತ- ವಿಪಕ್ಷದ ಮಧ್ಯೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ.
Read More »ಬಂಗಾರ ದರ ಮತ್ತೆ ಇಳಿಕೆ
26: ಬಂಗಾರ ದರ ನಿನ್ನೆಗೆ ಅಂದರೆ ಜೂನ್ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್ 24) ದರ ಮತ್ತೆ ಇಳಿಕೆಯಾಗಿದೆ. ಹಾಗಾದರೆ ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 10 ಗ್ರಾಂ ಬಂಗಾರ ದರ (22 & 24 ಕ್ಯಾರೇಟ್) ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಮಾಹಿತಿಯನ್ನು ಇಲ್ಲಿ ಗಮನಿಸಿ. ನಿನ್ನೆ (ಜೂನ್ 25) ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 66,250 …
Read More »
Laxmi News 24×7