Breaking News

ರಾಜ್ಯ

ಮಹಿಳೆ ಹತ್ಯೆ: ಕಾರು ಸಮೇತ ದುಷ್ಕರ್ಮಿಗಳು ಪರಾರಿ

ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ಎಂ.ಶೋಭಾ (48) ಎಂಬುವವರನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಲಾಗಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ. ‘ಸ್ಥಳೀಯ ಗಣೇಶನಗರದ ಶೋಭಾ, ವಾಹನ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದರು.ಎರಡನೇ ಮಗಳ ಜೊತೆ ವಾಸವಿದ್ದರು. ಮಗಳು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.   ‘ಶೋಭಾ ಅವರ ಮಾಂಗಲ್ಯ ಸರ, ಚಿನ್ನದ ಸರ, ಮೊಬೈಲ್ ಅನ್ನು ದೋಚಿರುವ ದುಷ್ಕರ್ಮಿಗಳು, …

Read More »

ರಾಜಕೀಯ ಕಾರಣಕ್ಕೆ ನೇಹಾ ಕೊಲೆ ಪ್ರಕರಣ ಬಳಕೆ : ಸಿಎಂ ಸಿದ್ದರಾಮಯ್ಯ

ಮೈಸೂರು: ನೇಹಾ ಹಿರೇಮಠ ಅವರ ಕೊಲೆ ವೈಯಕ್ತಿಕ ಕಾರಣಕ್ಕೆ ಸಂಭವಿಸಿದೆ. ಇದನ್ನು ನಾನು ತೀವ್ರ ಖಂಡಿಸುತ್ತೇನೆ. ಈ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆದರೆ, ಬಿಜೆಪಿ ಇದನ್ನೇ ಅಸವಾಗಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದರು. ನಾವು ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಕಾಂಗ್ರೆಸ್ …

Read More »

ಅಳಿಯ, ಮಗ, ಮೊಮ್ಮಗ ಮೂವರು ಸೋಲ್ತಾರೆ – ಇದು ಡಿಕೆಶಿ ಭವಿಷ್ಯ

ಮೈಸೂರು : ಈ ಲೋಕಸಭಾ ಚುನಾವಣೆಯಲ್ಲಿ ದೇವೆಗೌಡರ(Devegowda) ಅಳಿಯ, ಮಗ, ಮೊಮ್ಮಗ ಮೂವರು ಸೋಲ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌(D K Shivakumar) ವೇದಿಕೆ ಮೇಲೆ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಎಂ ಲಕ್ಷ್ಮಣ್ ಪರ ಪ್ರಚಾರ ನಡೆಸಿ ಮಾತನಾಡಿದ ಡಿ ಕೆ ಶಿವಕುಮಾರ್ , ಹೆಚ್‌ಡಿಡಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಅಳಿಯನನ್ನ ಬಿಜೆಪಿಯಿಂದ ನಿಲ್ಲಿಸಿ ಮಂಡ್ಯದಲ್ಲಿ ಕುಮಾರಸ್ವಾಮಿ ನಿಂತಿದ್ದಾರೆ. ಜೆಡಿಎಸ್‌ ಕಾರ್ಯಕರ್ತರು …

Read More »

ಕಾಂಗ್ರೆಸ್ ಸಭೆಯಲ್ಲಿ ಮಹಿಳೆಯರ ಡ್ಯಾನ್ಸ್!

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭಾಗಿಯಾಗಿದ್ದ ಕಾಂಗ್ರೆಸ್‌ ಸಭೆಯಲ್ಲಿ ಮಹಿಳೆಯರು ಭರ್ಜರಿ ಡ್ಯಾನ್ಸ್‌ ಮಾಡಿದ ವಿಡಿಯೊ (Video) ವೈರಲ್‌ ಆಗಿದೆ. ಮಂಡ್ಯದ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಜಾಧ್ವನಿ-2 ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಈ ವೇಳೆ ವಿಷ್ಣುವರ್ಧನ್‌ ಅವರ ಸಿಂಹ, ಸಿಂಹ ಎನ್ನುವ ಹಾಡಿನ ರೀತಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನೊಂದಿಗೆ ಹಾಡನ್ನು ಹಾಕಿದ್ದಾರೆ. ಮಂಡ್ಯದ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ವೇದಿಕೆ ಮೇಲೆ …

Read More »

ಮೋದಿ ಕಾರ್ಯಕ್ರಮದಲ್ಲಿ ಭದ್ರತಾ ಲೋಪ : ಚೊಂಬು ತೋರಿಸಿದ ನಲಪಾಡ್ ವಶಕ್ಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Nerendra Modi) ಅವರಿಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್‌ ನಲಪಾಡ್ (Mohammed Nalapad) ಅವರನ್ನು ಪೊಲೀಸರು (Bengaluru Police) ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಲೋಕಸಭಾ ಚುನಾವಣೆ(Lok sabha election) ಹಿನ್ನೆಲೆಯಲ್ಲಿ ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸಿದ್ದಾರೆ. ಸಮಾವೇಶದ ಬಳಿಕ ಮೋದಿ ಹಿಂದಿರುಗುತ್ತಿದ್ದರು, ಈ ವೇಳೆ ಮೇಖ್ರಿ ಸರ್ಕಲ್ ಬಳಿ ಮೋದಿಗೆ ಭದ್ರತಾ ಲೋಪ …

Read More »

ಸ್ವತಃ ಮಗನಿಗೆ ಫಸ್ಟ್‌ ಟೈಮ್‌ ಸೆಕ್ಸ್‌ ಯಾವಾಗ ಮಾಡಿದೆ ಅಂತ ಕೇಳಿದ ಮಲೈಕಾ..! ಉತ್ತರ ಏನಿತ್ತು ಗೊತ್ತೆ..?

ಬಿಟೌನ್‌ ನಟಿ ಮಲೈಕಾ ಅರೋರಾ ಆಗಾಗ ತಮ್ಮ ವಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇನ್ನು ಮಲೈಕಾ ಪುತ್ರ ಅರ್ಹಾನ್ ನಡೆಸಿಕೊಡುವ ಡಂಬ್‌ ಬಿರಿಯಾನಿ ಕಾರ್ಯಕ್ರಮದಲ್ಲಿ ನಟಿ ತನ್ನ ಮಗನ ವರ್ಜಿನಿಟಿ ಬಗ್ಗೆ ಪ್ರಶ್ನೆ ಮಾಡಿ ಸಖತ್‌ ವೈರಲ್‌ ಅಗಿದ್ದಾರೆ. ಅಮ್ಮನ ಮಾತಿಗೆ ಅರ್ಹಾನ್‌ ಏನು ಹೇಳಿದ್ರು ಬನ್ನಿ ನೋಡೋಣ.. ಹೌದು.. ಮಗನ ಡಂಬ ಬಿರಿಯಾನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಲೈಕಾ, ತಮ್ಮ ಮಗನ ವರ್ಜಿನಿಟಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅರ್ಹಾನ್ ಕೂಡ ಈ …

Read More »

ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ:ಸಿಎಂ

ಮೈಸೂರು: ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೃತ್ಯದ ಬಳಿಕ ಕೊಲೆಗಾರರನ್ನು ತಕ್ಷಣ ಬಂಧಿಸಲಾಗಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನಿಸಲಾಗುವುದು ಎಂದರು. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸುತ್ತೇವೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು …

Read More »

ಲವ್ ಜಿಹಾದ್ ಅನ್ನೋದು ನಿರಂತರವಾಗಿ ನಡೆಯುತ್ತಿದೆ ಎಂದು ಶೆಟ್ಟರ್ ವಾಗ್ದಾಳಿ

ಬೆಳಗಾವಿ: ಲವ್ ಜಿಹಾದ್ ಹೆಸರಲ್ಲಿ ಒಂದು ಗುಂಪಿಗೆ ತರಬೇತಿ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ನಡೆದ ಪ್ರತಿಭಟನೆ ಯಲ್ಲಿ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಘಟನೆ ರಾಕ್ಷಸಿ ಪ್ರವೃತ್ತಿಯದ್ದು, ಹಾಡಹಗಲೇ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿಯನ್ನು ಕೊಂದು ಹಾಕಿದ್ದನ್ನು ಎಲ್ಲರೂ ಖಂಡಿಸಬೇಕು.ಎನ್‌ಐಎ ಮೂಲಕ ತನಿಖೆ ಮಾಡಿ ಮತಾಂತರ ಗುಂಪನ್ನು ಬಯಲಿಗೆಳೆಯುವ ಕೆಲಸ …

Read More »

ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಚುನಾವಣೆ ಸಮೀಪದಲ್ಲೇ ಬಿಜೆಪಿಗೆ (BJP) ಚುನಾವಣಾ ಆಯೋಗ ಶಾಕ್‌ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (by vijayendra) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಏ. 17ರಂದು ಹೇಳಿಕೆ ನೀಡಿದ್ದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ದೂರಿನನ್ವಯ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ , ಸೌಹಾರ್ದ್ಯತೆ ವಿಚಾರದಲ್ಲಿ …

Read More »

47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ

ಮಣಿಪುರ: ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಈ ಮತಗಟ್ಟೆಗಳಲ್ಲಿ ಮತಗಳನ್ನು ರಿಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಗುಂಡು ಹಾರಿಸುವುದು, ಬೆದರಿಸುವಿಕೆ, ಕೆಲವು ಮತಗಟ್ಟೆಗಳಲ್ಲಿ ಇವಿಎಂ ಗಳನ್ನು ಹಾಳುಗೆಡವಿರುವುದು ಮಣಿಪುರದಲ್ಲಿ ವರದಿಯಾಗಿದೆ. ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು ಶೇ.68 ರಷ್ಟು ಮತದಾನ ನಡೆದಿದೆ. ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಮಾತನಾಡಿ, ಮಣಿಪುರದ …

Read More »