Breaking News

ರಾಜ್ಯ

ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ

ಬೆಂಗಳೂರು, ಏಪ್ರಿಲ್ 19: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠರನ್ನು ಮುಸ್ಲಿಂ ಸಮುದಾಯದ ವ್ಯಕ್ತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ಕುರಿತು ಸ್ವತಃ ಮೃತಳ ತಂದೆ ಪ್ರತಿಕ್ರಿಯಿಸಿದ್ದಾರೆ. ಮಗಳು ಕಳೆದುಕೊಂಡ ತಂದೆಯ ಆಕ್ರಂದನ ಮುಗಿಲು ಮುಟ್ಟಿದೆ. ಈ ನೋವಿನಲ್ಲೇ ಮಗಳ ಕುರಿತು ಮಾತನಾಡಿರುವ ಅವರು, ನನ್ನ ಮಗಳ ಕೊಲೆ ಹಿಂದೆ ಲಬ್ ಜಿಹಾದ್ ಇದೆ. ಕೊಲೆಗಾರನ ಜೊತೆಗೆ ನಾಲ್ಲೈದು ಅದೇ …

Read More »

ಬಾಗಲಕೋಟೆ ಲೋಕಸಭಾ ಕ್ಷೇತ್ರ: ಮೊದಲ ಬಾರಿಗೆ ಅರಳಿದ್ದ ಕಮಲ

ಬಾಗಲಕೋಟೆ: ಕೆಲವೊಮ್ಮೆ ಸ್ವತಂತ್ರವಾಗಿ, ಕೆಲವೊಮ್ಮೆ ಜನಸಂಘಕ್ಕೆ ಬೆಂಬಲ ಕೊಟ್ಟು ಬಂದಿದ್ದ ಬಿಜೆಪಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗಳ ಆರಂಭದ 54 ವರ್ಷಗಳ ನಂತರ ಮೊದಲ ಬಾರಿಗೆ ಖಾತೆ ತೆರೆಯುವಲ್ಲಿ ಯಶಸ್ವಿಯಾಯಿತು. ರಾಜ್ಯದಲ್ಲಿ ಸಂಘಟನೆ ಆರಂಭವಾಗಿ ಹಲವು ದಶಕಗಳೇ ಕಳೆದಿದ್ದವು. ವಿಧಾನಸಭೆಗೆ ಹಲವರು ಆಯ್ಕೆ ಕೂಡ ಆಗಿದ್ದರು. ಲೋಕಸಭೆಗೆ ಆಯ್ಕೆಯಾಗಿರಲಿಲ್ಲ. ಕಾಂಗ್ರೆಸ್‌ ಹಾಗೂ ಜನತಾ ಪರಿವಾರದ ನಡುವಿನ ಪೈಪೋಟಿ ಎಂದೇ ಪರಿಗಣಿಸಲಾಗುತ್ತಿತ್ತು. ಮೊದಲ ಬಾರಿಗೆ ಗೆದ್ದ ಬಿಜೆಪಿ ಅಭ್ಯರ್ಥಿ ಹಿಂದಿನ ಚುನಾವಣೆಗಳಲ್ಲಿಗಿಂತ ಹೆಚ್ಚಿನ …

Read More »

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್‍ಗೆ ಭೇಟಿ ನೀಡಿ, …

Read More »

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ H.D.K.

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಶಿವಕುಮಾರ್‌ ಅವರು ಹೇಳಿದ್ದ ಹೇಳಿಕೆಗೆ ಸಂಬಂಧಪಟ್ಟತೆ ಹೇಳಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ತಾಯಿಯ ಮೇಲೆ ಕಣ್ಣಿಡಬೇಕು ಅಂಥ ಹೇಳಿರುವ ಪರಮನೀಚನ ಬಗ್ಗೆ ನಾನು ಯಾಕೆ ಚರ್ಚೆ ಮಾಡಬೇಕು ಅಂತ ಹೇಳಿದರು. ಖಾಸಗಿ ವಾಹಿನಿಯೊಂದರಲ್ಲಿ ಭಾಗವಹಿಸಿದ್ದ ಮಾತನಾಡಿದ್ದ ಡಿಸಿಎಂ …

Read More »

ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ; ಸ್ಥಳದಲ್ಲಿದ್ದರು ಸಹಾಯಕ್ಕೆ ಬಾರದ ಪೊಲೀಸರು

ಬೆಂಗಳೂರು: ಸ್ಯಾಂಡಲ್​ವುಡ್​ನ ಸ್ಟಾರ್​ ಕಪಲ್​ ಎಂದೇ ಖ್ಯಾತಿ ಪಡೆದಿರುವ ನಟಿ ಹರ್ಷಿಕಾ ಪೂಣಚ್ಚ ಹಾಗೂ ಆಕೆಯ ಪತಿ ಭುವನ್ ಪೊನ್ನಣ್ಣ ಮೇಲೆ ಅನ್ಯಕೋಮಿನ ಪುಂಡರ ಗುಂಪೊಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಈ ಕುರಿತು ನಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂದು ಪ್ರಶ್ನಿಸಿದ್ದಾರೆ ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ಒಂದಷ್ಟು …

Read More »

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

ದಾವಣಗೆರೆ: ಯಡಿಯೂರಪ್ಪ ಬಳಿಕ ರಾಜ್ಯದ ಮುಖ್ಯ ಮಂತ್ರಿ ಆಗುವ ಎಲ್ಲ ಅರ್ಹತೆ ಗಳಿದ್ದರೂ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಅವಕಾಶ ವಂಚಿಸಲಾಯಿತು. ಪಂಚಮಸಾಲಿ ಸಮು ದಾಯದವರೆಂಬ ಕಾರಣಕ್ಕಾ ಗಿಯೇ ಅವರಿಗೆ ಅವಕಾಶ ನೀಡದೆ ಮಲತಾಯಿ ಧೋರಣೆ ತೋರಲಾ ಯಿತು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಲಿಖಿತ ಹೇಳಿಕೆ ನೀಡಿರುವ ಅವರು, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎನ್ನುವ ತಮ್ಮ ಧ್ವನಿಯ ಹಿಂದೆ ಯತ್ನಾಳ್‌ ಅವರೂ …

Read More »

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ. ಒಕ್ಕಲಿಗರು ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಲಕ್ಷ್ಮಣ್ ಅವರು ಒಕ್ಕಲಿಗರಲ್ಲ ಎಂದು …

Read More »

ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದ ಹಾಲಿಸ್ಟರ್ ಭವನದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ತೊಂದರೆಯಾಗುವುದರಿಂದ ಅವರ ಕೈ ಬಲಪಡಿಸಬೇಕು.ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು …

Read More »

ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ ಗುತ್ತೇದಾರ್ ಅವರು ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜೀತ ಅಭ್ಯರ್ಥಿಯಾದ ಮಾಲಿಕಯ್ಯ ಗುತ್ತೇದಾರ್ ಅವರು ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಮಾಲಿಕಯ್ಯ …

Read More »

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ ಮಕ್ಕಳನ್ನು ಕೊಂದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಅನುಮಾನಾಸ್ಪದವಾಗಿ ಅವಳಿ-ಜವಳಿ ಮಕ್ಕಳು ಮೃತಪಟ್ಟಿದ್ದರು. ಐಸ್ ಕ್ರೀಂ ತಿಂದು ಅಸ್ವಸ್ಥಗೊಂಡು ಮಕ್ಕಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಪೊಲೀಸರ ವಿಚಾರಣೆ ವೇಳೆ ಮಹಿಳೆ ಪೂಜಾ ತಾನೇ ಊಟದಲ್ಲಿ ವಿಷ ಬೆರಸಿ ಹೆತ್ತ ಮಕ್ಕಳನ್ನು ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ. …

Read More »