Breaking News

ರಾಜ್ಯ

ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ ಬಳಲಿದರು. ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯ ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇಸಿಜಿ, ಎಕೋ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ. ಜಮೀರ್ ಅಹಮದ್ ಖಾನ್ ಅವರು …

Read More »

ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ಎರಡು ಲಕ್ಷ ರೂ ವಶಕ್ಕೆ

ಬೆಳಗಾವಿ: ಬೆಳಗಾವಿ ಹೊರವಲಯದ ಕಣಬರ್ಗಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎರಡು ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಮಾರೋಳೆ ತಾಲೂಕಿನ ಮಚ್ಚೇಂದ್ರ ವಿಠ್ಠಲ ಶಿಂಧೆ ಅವರು ಮುಚ್ಚಂಡಿಯಿಂದ ಬೆಳಗಾವಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದಾಗ ಯಾವುದೇ ದಾಖಲೆ ಇಲ್ಲದೆ ಎರಡು ಲಕ್ಷ ರೂಪಾಯಿಗಳನ್ನು ತೆಗೆದುಕೊಂಡು ಹೋಗುತ್ತಿರುವದು ಕಂಡುಬಂದಿದೆ.   ಚುನಾವಣಾಧಿಕಾರಿಗಳು ಈ ನಗದು ಹಣವನ್ನು ವಶ ಪಡಿಸಿಕೊಡಿದ್ದಾರೆ.

Read More »

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೇಲೆ ಭಾರತಕ್ಕೆ ಕಪ್ಪುಚುಕ್ಕೆಯಾಗಿರುವ ಪಾಕ್‌ ಆಕ್ರಮಿತ ಕಾಶ್ಮೀರ ಎಂಬ ಪ್ರದೇಶವನ್ನು ಕಿತ್ತುಹಾಕಿ ಭಾರತದ ಭೂಪಟದಲ್ಲಿ ಸೇರಿಸಲಿದ್ದಾರೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರವಿವಾರ ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಅವರ ಆಡಳಿತ ಬಂದ ನಂತರ ಜಮ್ಮು ಮತ್ತು ಕಾಶ್ಮೀರದ ಚಿತ್ರ ಬದಲಾಗಿದೆ. …

Read More »

ಇನ್ಮುಂದೆ ಮಹಿಳೆಯರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ರೆ ಹುಷಾರ್! ಕೂಡಲೇ ಬೀಳುತ್ತೆ ಸುಮೋಟೋ ಕೇಸ್!

ಬೆಂಗಳೂರು: ಇನ್​ಸ್ಟಾಗ್ರಾಮ್​, ಫೇಸ್ ಬುಕ್, ಟ್ವೀಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ಮಹಿಳೆಯರ ಬಗ್ಗೆ ಲಘುವಾಗಿ ಕಮೆಂಟ್​ ಮಾಡಿದ್ರೆ, ಮಹಿಳೆಯರ ಗೌರವಕ್ಕೆ ಧಕ್ಕೆ ಬರುವಂತೆ ಮಾಡಿದರೆ ಭಾರೀ ಬೆಲೆ ತೆರಬೇಕಗುತ್ತೆ. ಬೇಕಾಬಿಟ್ಟಿ ಕಮೆಂಟ್ ಮಾಡಿದ್ರೆ, ನೊಂದ ಮಹಿಳೆಯರು ಸುಮ್ಮನಿದ್ರೂ ಮಹಿಳಾ ಆಯೋಗ ಮಾತ್ರ ಸುಮ್ಮನೆ ಬಿಡಲ್ಲ. ಇತ್ತಿಚ್ಚಿನ ದಿನಗಳಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಮಹಿಳೆಯರ ಪೋಟೋ ಡೀಪ್ ಪೇಕ್ ನಿಂದ ಹಿಡಿದು ಅಸಭ್ಯ ಕಮೆಂಟ್ ಹಾಕಿ …

Read More »

11 ಕೆಜಿ ಚಿನ್ನ, ₹54 ಕೋಟಿ ಮನೆ, ₹1 ಕೋಟಿಯ ಕಾರು. ಇದು ಕಾಂಗ್ರೆಸ್‌ ಗೀತಾ ಶಿವರಾಜ್‌ ಕುಮಾರ್‌ ಆಸ್ತಿ!

ಶಿವಮೊಗ್ಗ: 11 ಕೆಜಿ ಚಿನ್ನ, ₹54 ಕೋಟಿ ಮನೆ, ₹1 ಕೋಟಿಯ ಕಾರು… ಇದು ಶಿವಮೊಗ್ಗದಿಂದ ಎರಡನೇ ಬಾರಿ ಲೋಕಸಭಾ ಚುನಾವಣೆಗೆ ಕಣದಲ್ಲಿರುವ ಮಾಜಿ ಸಿಎಂ ಬಂಗಾರಪ್ಪರವರ ಮಗಳು ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡಮನೆ ಕರೆಸಿಕೊಳ್ಳುವ ಡಾ.ರಾಜ್‌ಕುಮಾರ್ ಸೊಸೆ, ಹ್ಯಾಟ್ರಿಕ್‌ ಹಿರೋ ಶಿವರಾಜ್‌ಕುಮಾರ್‌ ಅವರ ಹೆಂಡ್ತಿಯ ಆಸ್ತಿಯಾಗಿದೆ. ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿರುವ ಆಸ್ತಿ ಅಫಿಡವಿಟ್‌ ವಿವರವಾಗಿದೆ. 40.04 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿರುವ ಗೀತಾ, …

Read More »

ಲೋಕಸಭಾ ಚುನಾವಣೆಗೂ ಮುನ್ನವೇ 4650 ಕೋಟಿ ರೂ. ಸೀಜ್​! 75 ವರ್ಷದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತ

ನವದೆಹಲಿ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮಗಳ ಮೇಲೆ ಕೇಂದ್ರ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ದೇಶದಲ್ಲಿ ಮತದಾನ ಇನ್ನೂ ಆರಂಭವಾಗಿಲ್ಲ, ಅಷ್ಟರಲ್ಲೇ ಭರ್ಜರಿ ಬೇಟೆಯಾಡಿರುವ ಚುನಾವಣಾಧಿಕಾರಿಗಳು ಈವರೆಗೆ ದೇಶಾದ್ಯಂತ ನಗದು, ಮದ್ಯ, ಡ್ರಗ್ಸ್​ ಹಾಗೂ ಉಚಿತ ಉಡುಗೊರೆ ಸೇರಿದಂತೆ 4,650 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿರುವುದಾಗಿ ಕೇಂದ್ರ ಚುನಾವಣಾ ಆಯೋಗ ಸೋಮವಾರ (ಏಪ್ರಿಲ್​ 15) ತಿಳಿಸಿದೆ.   ವಶಕ್ಕೆ ಪಡೆಯಲಾದ ಹಣವು …

Read More »

SSLC ಪರೀಕ್ಷೆ ನಿರ್ವಹಣೆಯಲ್ಲಿ ವಿಫಲ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಮಾನತು

ವಿಜಯಪುರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಿರ್ವಹಿಸುವಲ್ಲಿ ವಿಫಲರಾದ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ಎಚ್‌.ನಾಗೂರ ಅವರನ್ನು ಅಮಾನತುಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ವೆಬ್‌ ಕಾಸ್ಟಿಂಗ್‌ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ಪರೀಕ್ಷೆ ನಕಲಿಗೆ ಅವಕಾಶ ನೀಡಿದ ಆರೋಪವೂ ಅವರ ಮೇಲಿದೆ. ಹೊರ್ತಿಯ ರೇವಣ ಸಿದ್ದೇಶ್ವರ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರ ಹಾಗೂ ಕಾರಜೋಳದ ರಾಣಿ ಚನ್ನಮ್ಮ ವಸತಿ ಶಾಲೆಯ ಪರೀಕ್ಷಾ ಕೇಂದ್ರದ ಒಳಗೆ …

Read More »

₹10.77 ಲಕ್ಷ ನಗದು, ₹16 ಲಕ್ಷ ಮೌಲ್ಯದ ಮದ್ಯ ವಶ

ಬಾಗಲಕೋಟೆ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆ ಇಲ್ಲದ ಸಾಗಿಸುತ್ತಿದ್ದ ₹10.77 ಲಕ್ಷ ನಗದನ್ನು ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ಜಪ್ತಿ ಮಾಡಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್‌ಎಸ್‌ಟಿ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ವೇಳೆಯಲ್ಲಿ ಪ್ರತ್ಯೇಕ ಐದು ಪ್ರಕರಣಗಳಲ್ಲಿ ಐದು ಗೂಡ್ಸ್‌ ವಾಹನಗಳ ತಪಾಸಣೆ ಮಾಡಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ. ಮದ್ಯ ವಶ: ಜಿಪಿಎಸ್‌ ಅಳವಡಿಸದೆ ಮದ್ಯ …

Read More »

ಚುನಾವಣೆ ನಂತರ ಸರ್ಕಾರಗಳ ಚಳಿ ಬಿಡಿಸುತ್ತೇವೆ

ಚನ್ನಮ್ಮನ ಕಿತ್ತೂರು: ‘ರೈತ ವಿರೋಧಿ ಧೋರಣೆ ತಳೆದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಿಡಿದಿರುವ ಚಳಿಯನ್ನು ಬಿಡಿಸಲಾಗುವುದು. ವಿಧಾನಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ರೈತ ಮುಖಂಡ ಇಂಗಳಗುಪ್ಪೆ ಕೃಷ್ಣೇಗೌಡ ಘೋಷಿಸಿದರು. ಇಲ್ಲಿಯ ಗುರುವಾರ ಪೇಟೆಯಲ್ಲಿ ಸೋಮವಾರ ರೈತಸಂಘಗಳ ಒಕ್ಕೂಟದ ಕೇಂದ್ರ ಕಚೇರಿಗೆ ಚಾಲನೆ ನೀಡಿ ಮಾತನಾಡಿದ ಅವರು ‘ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವ ನಾಯಕರಿಗೂ ಪಾಠ ಕಲಿಸಲಾಗುವುದು’ ಎಂದು ಹೇಳಿದರು.   ’18 ರೈತಸಂಘಟನೆಗಳ ಸದಸ್ಯರು …

Read More »

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ರಾಹುಲ ಜಾರಕಿಹೊಳಿ

ರಾಯಬಾಗ: ‘ಕಾಂಗ್ರೆಸ್‌ ಸರ್ಕಾರ ಕೊಟ್ಟ ಭರವಸೆಯನ್ನು ಈಡೇರಿಸಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರೊಂದಿಗೆ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿದೆ. ಬಿಜೆಪಿ ಮಾತ್ರ ಸುಳ್ಳು ಹೇಳಿಕೊಂಡೇ ಬಂದಿದೆ’ ಎಂದು ರಾಹುಲ ಜಾರಕಿಹೊಳಿ ಹೇಳಿದರು. ಪಟ್ಟಣದ ಅರ್ಫಾ ಪ್ಯಾಲೇಸ್‌ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ನಿರ್ಮಲಾ ಪಾಟೀಲ, …

Read More »