ಬೆಂಗಳೂರು, ಮಾರ್ಚ್ 28: ಕರ್ನಾಟದಕ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಕೆ ಆರಂಭಕ್ಕೂ ಮುನ್ನ ಎಲ್ಲ ಕ್ಷೇತ್ರಗಳಿಗೂ ಉಮೇದುವಾರರನ್ನು ಘೋಷಿಸಿವೆ. ಆಡಳಿತರೂಢ ಕಾಂಗ್ರೆಸ್ ಇನ್ನೂ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸುವುದು ಬಾಕಿ ಉಳಿದಿದೆ. ಆದರೆ, ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದೆ. ಇತ್ತ ಬಿಜಪಿ ಮೊದಲ ಪಟ್ಟಿಯಲ್ಲೇ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಣೆ …
Read More »ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಕೊಡ ಹಿಡಿದು ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಿರಿಯ ನಾಗರಿಕರು, ತಮ್ಮ ಜೀವ ಹೋದರ್ ಚಿಂತೆ ಇಲ್ಲ, ನೀರು ಸಿಗುವವರೆಗೂ ಸತ್ಯಾಗ್ರಹ ನಿಲ್ಲಿಸಲ್ಲ ಎಂದು ಪಟ್ತು ಹಿಡಿದಿದ್ದಾರೆ. ಬೀಸರಹಳ್ಳಿ ಗ್ರಾಮದಲ್ಲಿ …
Read More »ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಮಹಿಳಾ ಸಂಸದೆ ಆಯ್ಕೆಯಾಗ್ತಾರಾ? ಇತಿಹಾಸ ಏನ್ ಹೇಳುತ್ತೆ?
ಬೆಂಗಳೂರು, ಮಾರ್ಚ್ 28: ಕಳೆದ 73 ವರ್ಷಗಳಲ್ಲಿ 17 ಲೋಕಸಭಾ ಚುನಾವಣೆಗಳು ನಡೆದಿದ್ದರೂ ಬೆಂಗಳೂರಿನಲ್ಲಿ ಒಬ್ಬ ಮಹಿಳಾ ಸಂಸದರೂ ಆಯ್ಕೆಯಾಗಿಲ್ಲ. ಈ ಬಾರಿ ಬೆಂಗಳೂರು ವ್ಯಾಪ್ತಿಯ ಎರಡು ಕ್ಷೇತ್ರದಲ್ಲಿ ಪ್ರಬಲ ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಹೌದು, 18ನೇ ಚುನಾವಣೆ ನಡೆಯುತ್ತಿದ್ದು, ಬೆಂಗಳೂರಿನಿಂದ ಈವರೆಗೆ ಒಬ್ಬ ಸಂಸದೆಯೂ ಆಯ್ಕೆಯಾಗಿಲ್ಲ. ಈ ಬಾರಿಯಾದರೂ ಬೆಂಗಳೂರಿನಿಂದ ಸಂಸತ್ಗೆ ಕಳಿಸುವ ಮೂಲಕ ಬೆಂಗಳೂರು ಹೊಸ ಇತಿಹಾಸ ಬರೆಯುವುದೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಬೆಂಗಳೂರು …
Read More »ಎನ್ ಕೌಂಟರ್ ನಲ್ಲಿ ಕೊಲ್ಲುವುದಾಗಿ ಸಚಿವ `ಪ್ರಿಯಾಂಕ್ ಖರ್ಗೆ’ ಗೆ `ಜೀವ ಬೆದರಿಕೆ
ಕಲಬುರಗಿ : ಎಲ್ ಕೌಂಟರ್ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯ ಮನುವಾದಿಗಳು ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ನನ್ನ ಕಚೇರಿಗೆ ಕಳುಹಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನನ್ನ ಕುಟುಂಬವನ್ನು ನಿಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕಲಬುರಗಿಯಿಂದ …
Read More »ಸದ್ಯದಲ್ಲೇ ಬಿಜೆಪಿ ಸ್ಟಾರ್ ಪ್ರಚಾರಕರು ರಾಜ್ಯಕ್ಕೆ ಎಂಟ್ರಿ
ಬೆಂಗಳೂರು,ಮಾ.28- ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಯ ಪ್ರಮುಖ ರಾಷ್ಟ್ರೀಯ ನಾಯಕರು, ಪಕ್ಷದ ಅಭ್ಯರ್ಥಿಗಳ ಪರ ಕರ್ನಾಟಕದಲ್ಲಿ ಪ್ರಚಾರಕ್ಕೆ ಧುಮುಕಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಬಿಜೆಪಿ ನಾಯಕರು ಮುಂದಿನ ಕೆಲವು ವಾರಗಳಲ್ಲಿ ಕನಿಷ್ಠ ಪಕ್ಷ 2-3 ಬಾರಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
Read More »ಏಪ್ರಿಲ್ 1 ರಿಂದ Debit Cardಗಳ ವಾರ್ಷಿಕ ನಿರ್ವಹಣಾ ಶುಲ್ಕವನ್ನು ಹೆಚ್ಚಿಸಲಿದೆ SBI
ನವದೆಹಲಿ: ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಎಸ್ಬಿಐ ಡೆಬಿಟ್ ಕಾರ್ಡ್ಗಳ ವಾರ್ಷಿಕ ನಿರ್ವಹಣಾ ಶುಲ್ಕ ಹೆಚ್ಚಳದಿಂದ ಗ್ರಾಹಕರಿಗೆ ದೊಡ್ಡ ಹೊಡೆತ ನೀಡಿದೆ. ನೀವು ಎಸ್ಬಿಐ ಡೆಬಿಟ್ ಕಾರ್ಡ್ ಹೊಂದಿದ್ದರೆ, ಈ ಬದಲಾವಣೆಗಳ ಬಗ್ಗೆ ಖಂಡಿತವಾಗಿಯೂ ತಿಳಿದುಕೊಳ್ಳಿ. ವಾಸ್ತವವಾಗಿ, ಕೆಲವು ಡೆಬಿಟ್ ಕಾರ್ಡ್ಗಳಿಗೆ ಸಂಬಂಧಿಸಿದ ವಾರ್ಷಿಕ ನಿರ್ವಹಣಾ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರಿಷ್ಕರಿಸಿದೆ.ಏಪ್ರಿಲ್ 1, 2024 ರಿಂದ, ಹೊಸ ಪ್ರಸ್ತಾವಿತ ದರಗಳು ಎಸ್ಬಿಐ ವೆಬ್ಸೈಟ್ನಲ್ಲಿ ಜಾರಿಗೆ ಬರಲಿವೆ. ಯಾವ …
Read More »ಕಾಂಗ್ರೆಸ್ ಪಟ್ಟಿ ಬಿಡುಗಡೆ; ಇನ್ನೂ ಅಂತಿಮವಾಗದ ಅಭ್ಯರ್ಥಿಗಳು
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷ ಬುಧವಾರ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ತೆಲಂಗಾಣ ರಾಜ್ಯಗಳ 14 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ ಉತ್ತರ ಪ್ರದೇಶದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಪಡಿಸಿದರೂ, ಇದರ ಘೋಷಣೆಗೆ ಕಾಯಲಾಗುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ.ಆದ್ದರಿಂದ ರಾಜ್ಯದಲ್ಲಿ ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರದ ಅಭ್ಯರ್ಥಿಗಳ ಹೆಸರಷ್ಟೇ ಅಂತಿಮವಾಗಲು ಬಾಕಿ ಉಳಿದಿವೆ. ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ …
Read More »ಲೋಕಸಮರ: ಇಂದು ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ಬೆಂಗಳೂರು ಗ್ರಾಮಾಂತರ (bengaluru rural) ಕ್ಷೇತ್ರದ ಕಾಂಗ್ರೆಸ್ (congress) ಅಭ್ಯರ್ಥಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಹಾಲಿ ಸಂಸದ ಡಿ.ಕೆ. ಸುರೇಶ್ (d.k. suresh) ಕನಕಪುರ ಕೆಂಕೇರಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿ ಉಮೇದುವಾರಿಕೆ ಸಲ್ಲಿಸಲಿದ್ದು, ಈ ಬಾರಿ ಬಿಜೆಪಿ (bjp) ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ (dr.c.n. manjunath) ಅವರನ್ನು ಕಣದಲ್ಲಿ ಎದುರಿಸಲಿದ್ದಾರೆ. ಸಹೋದರನ ಸ್ಪರ್ಧೆ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಗೆ ಮೊದಲ ಬಿ. ಫಾರ್ಮ್ ಸಿಕ್ಕಿದ್ದು, …
Read More »ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ’ : ನಿರ್ಮಲಾ ಸೀತಾರಾಮನ್ ಘೋಷಣೆ
ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಖರ್ಚು ಮಾಡಲು ಹಣವಿಲ್ಲದ ಕಾರಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಬಿಜೆಪಿ ಅವರು, ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ಸ್ಥಳಗಳಿಂದ ಸ್ಪರ್ಧಿಸಲು ಆಫರ್ ನೀಡಿದ್ದರು.ಆದರೆ ಚುನಾವಣೆಯಲ್ಲಿ ಗೆಲ್ಲಲು ಅಗತ್ಯವಾದ ಹಣವಿಲ್ಲದ ಕಾರಣ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಹೇಳಿದರು. 10 ದಿನಗಳ ಚರ್ಚೆಯ ನಂತರ, ನಾನು ಅಂತಿಮವಾಗಿ ನಡ್ಡಾಜಿಗೆ ಕ್ಷಮೆಯಾಚಿಸಿದೆ. ಏಕೆಂದರೆ ಚುನಾವಣೆಯಲ್ಲಿ …
Read More »ಸಿದ್ದರಾಮಯ್ಯ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು
ಮೈಸೂರು, ಮಾರ್ಚ್ 27: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಹೆಚ್ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್ನಲ್ಲೇ ಕುಳಿತುಕೊಂಡು ಗಾಳ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟಕ್ಕರ್ ನೀಡಿದ್ದಾರೆ. ಸಿಎಂ ತವರು ಜಿಲ್ಲೆಗೆ ತಲುಪಿರುವ ವಿಜಯೇಂದ್ರ ಕಾರ್ಯಾಚರಣೆ ಶುರು ಮಾಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಿದ್ದಾರೆ. ಸಿದ್ದರಾಮಯ್ಯ ಮನವೊಲಿಸಿದ್ದರಿಂದ …
Read More »
Laxmi News 24×7