ಗುಡಿಬಂಡೆ: ಪಟ್ಟಣ ಪಂಚಾಯಿತಿ ಕಸ ವಿಲೇವಾರಿ ವಾಹನಕ್ಕೆ ಡೀಸೆಲ್ ಇಲ್ಲದ ಕಾರಣ ಪೌರ ಕಾರ್ಮಿಕರು ಹೆಗಲ ಮೇಲೆ ಹೊತ್ತು ಕಸ ವನ್ನು ವಿಲೇವಾರಿ ಮಾಡಿದ ಘಟನೆ ನಡೆದಿದೆ. ಪ್ರತಿ ದಿನ ಬೆಳ್ಳಂಬೆಳಗ್ಗೆ ಪೌರ ಕಾರ್ಮಿಕರು ಪಟ್ಟಣ ಎಲ್ಲಾ ವಾರ್ಡ್ ಗಳಲ್ಲಿನ ಘನ ತ್ಯಾಜ್ಯ ಕಸವನ್ನು ವಿಲೇ ವಾರಿ ಮಾಡಿ, ಕಸವನ್ನು ಟ್ರಾಕ್ಟರ್ ಮತ್ತು ವಾಹನಗಳ ಮೂಲಕ ವಿಲೇವಾರಿ ಮಾಡಬೇಕಾಗಿದ್ದು, ಆದರೆ ಕಳೆದ ಎರಡು ದಿನಗಳಿಂದ ವಾಹನಗಳಿಗೆ ಡೀಸೆಲ್ ಇಲ್ಲದೆ ವಾಹನಗಳು ನಿಂತಲ್ಲೇ …
Read More »ನಾನು ಅಸಮರ್ಥಳಾ.? ಕಾಂಗ್ರೆಸ್ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಪ್ರಶ್ನೆ
ಬೆಂಗಳೂರು: ಪಂಚಮಸಾಲಿ ಸಮುದಾಯದ ಹೆಸರು ಹೇಳಿಕೊಂಡು ಹೊರಗಿನಿಂದ ಬಂದು ಟಿಕೆಟ್ ಪಡೆದಿದ್ದಾರೆ. ಹಾಗಿದ್ದರೆ ಅದೇ ಜಿಲ್ಲೆಯ ಮತ್ತು ಅದೇ ಸಮುದಾಯದವಳಾದ ನಾನು ಅಸಮರ್ಥಳಾ ಎಂದು ಕಾಂಗ್ರೆಸ್ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಪ್ರಶ್ನಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಬದಲಾವಣೆ ಮಾಡಿ ಎಂದಿದ್ದೆ. ಅದು ಸಾಧ್ಯವಿಲ್ಲ ಎಂದು ನಮ್ಮ ನಾಯಕರು ಹೇಳಿದ್ದಾರೆ. ನನ್ನ ಪರವಾಗಿ ನ್ಯಾಯ ಕೇಳಿ ಬೇರೆ ಸಮುದಾಯದ ಮುಖಂಡರೆಲ್ಲ ಬಂದಿದ್ದರು. ಸಾಕಷ್ಟು ನಿರೀಕ್ಷೆಯೊಂದಿಗೆ ಮುಖ್ಯಮಂತ್ರಿ ಭೇಟಿ …
Read More »ಮಧ್ಯರಾತ್ರಿ ಪಂಪ್ ಸೆಟ್ ಕಳ್ಳತನಕ್ಕೆ ಬಂದಿದ್ದ ತಂಡ, ಓರ್ವ ಸೆರೆ, ಇಬ್ಬರು ಪರಾರಿ
ಮುದ್ದೇಬಿಹಾಳ : ರೈತರ ಪಂಪಸೆಟ್ ಕಳ್ಳತನ ಮಾಡುತ್ತಿದ್ದ ತಂಡದ ಓರ್ವ ಸದಸ್ಯನನ್ನು ಮಧ್ಯರಾತ್ರಿ ರೈತರೆ ಹಿಡಿದು, ಕಟ್ಟಿಹಾಕಿ ಬೆಳಿಗ್ಗೆ ಪೊಲೀಸರಿಗೊಪ್ಪಿಸಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಹುಲಗಬಾಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಅಡವಿ ಹುಲಗಬಾಳ ಕೆರೆ, ಜಮೀನುಗಳಲ್ಲಿನ ಕೊಳವೆ ಭಾವಿ, ತೆರೆದ ಭಾವಿ ಮುಂತಾದವುಗಳಿಗೆ ರೈತರು ತಮ್ಮ ಹೊಲಕ್ಕೆ ನೀರು ಪಡೆದುಕೊಳ್ಳಲು ಪಂಪಸೆಟ್ ಅಳವಡಿಸಿದ್ದಾರೆ. ಮೇಲಿಂದ ಮೇಲೆ ಪಂಪಸೆಟ್ ಕಳ್ಳತನವಾಗುತ್ತಿದ್ದವು. ಆದರೆ ಕಳ್ಳರು ಸಿಕ್ಕಿಬಿದ್ದಿರಲಿಲ್ಲ. ಶುಕ್ರವಾರ ಮಧ್ಯರಾತ್ರಿ ರೈತನೊಬ್ಬ …
Read More »ರೀಲ್ ಜೋಡಿ ರಿಯಲ್ ಮದುವೆ; “96” ಚಿತ್ರದ ನಟ,ನಟಿ ರಿಯಲ್ ಲೈಫ್ನಲ್ಲೂ ಗಂಡ-ಹೆಂಡ್ತಿ
ಬೆಂಗಳೂರು: ವಿಜಯ್ ಸೇತುಪತಿ ಮತ್ತು ತ್ರಿಶಾ ಅಭಿನಯದ 96 ಸಿನಿಮಾ 2018ರಲ್ಲಿ ಕಾಲಿವುಡ್ನಲ್ಲಿ ಸೂಪರ್ ಹಿಟ್ ಆಗಿತ್ತು. ಅದಾದ ಮೇಲೆ ಇದೇ ಸಿನಿಮಾ ಕನ್ನಡದಲ್ಲೂ 99 ಹೆಸರಿನಲ್ಲಿ ರಿಮೇಕ್ ಆಗಿತ್ತು. ಇದೇ 96 ಚಿತ್ರದ ಜೋಡಿ ರಿಯಲ್ ಆಗಿಯೇ ಮದುವೆಯಾಗಿದ್ದಾರಂತೆ. ತಮಿಳಿನ 96 ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು ಗೊತ್ತೇ ಇದೆ. ವಿಜಯ್ ಸೇತುಪತಿ ಮತ್ತು ತ್ರಿಶಾ ಅಭಿನಯದ ಈ ಚಿತ್ರಕ್ಕೆ ಸೌತ್ ಇಂಡಸ್ಟ್ರಿಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸಂಗೀತದ …
Read More »ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ : ಈ ರೀತಿ ಚೆಕ್ ಮಾಡಿಕೊಳ್ಳಿ
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ ನಡೆಸಿದ ಪ್ರಥಮ ಪಿಯುಸಿ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶ ನೋಡಲು www.karresults.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮೇ. 20 ರಿಂದ ಮೇ.31 ರವರೆಗೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ.
Read More »ಕಾಂಗ್ರೆಸ್ ಹೊಣೆಗಾರಿಕೆಗಳಿಗೆ ವೀಣಾ ಕಾಶಪ್ಪನವರ್ ರಾಜೀನಾಮೆ
ಬೆಂಗಳೂರು,-ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಆದರೆ ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಕ್ರೀನಿಂಗ್ ಕಮಿಟಿವರೆಗೂ ನನ್ನ ಹೆಸರಿತ್ತು. ಅಜಯ್ಕುಮಾರ್ ಸರ್ನಾಯಕ್ ಮತ್ತು ನನ್ನ ಹೆಸರಿಗೆ ಮಾತ್ರ ಬೆಂಬಲ ನೀಡಿದ್ದಾಗಿ ಜಿಲ್ಲೆಯ ಶಾಸಕರು ತಿಳಿಸಿದ್ದರು. ಆದರೆ ಹೈಕಮಾಂಡ್ನ ಸಭೆಗೆ ನನ್ನ ಹೆಸರು ಹೋಗಿಲ್ಲ. ಇದರ ಹಿಂದೆ …
Read More »ಕಿರಾತಕ ಖ್ಯಾತಿಯ ಖಳನಟ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ
ಚೆನ್ನೈ: ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡ್ಯಾನಿಯಲ್ ಹೃದಯಾಘಾತದಿಂದ ಶನಿವಾರ (ಮಾರ್ಚ್ 30) ನಿಧನರಾಗಿದ್ದಾರೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಮಾರ್ಚ್ 29ರಂದು ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದ ಕಾರಣ ಶನಿವಾರ (ಮಾರ್ಚ್ 30) ಅವರು ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Read More »118 ಮದ್ಯಂಗಡಿಗಳ ಲೈಸೆನ್ಸ್ ರದ್ದು
10.66 ಕೋಟಿ ರೂ. ದಂಡ ವಸೂಲಿ | ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಕಾರಣಕ್ಕಾಗಿ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 118 ಮದ್ಯದಂಗಡಿಗಳ ಪರವಾನಗಿ (ಲೈಸೆನ್ಸ್) ಅಮಾನತುಗೊಳಿಸಲಾಗಿದೆ. ಜತೆಗೆ, 6,207 ಕೇಸ್ ದಾಖಲಿಸಿ 10.66 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಬೆಂಗಳೂರು, ಬೆಳಗಾವಿ, ಕೋಲಾರ, ಕಲಬುರಗಿ, ವಿಜಯಪುರ, ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಅತಿಹೆಚ್ಚು ಕೇಸ್ಗಳು ದಾಖಲಾಗಿವೆ. ಎಂಆರ್ಪಿ ಉಲ್ಲಂಘನೆ …
Read More »ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಬಂದವು 79,000 ದೂರುಗಳು!
ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪತ್ತೆಹಚ್ಚಿ ವರದಿ ಮಾಡುವುದಕ್ಕೆ ದೇಶದ ಪ್ರಜೆಗಳೇ ಮುಂದಾಗಿದ್ದಾರೆ. ಚುನಾವಣೆ ಆಯೋಗದ (ಇ.ಸಿ) ಸಿ-ವಿಜಿಲ್ ಆಯಪ್ ಈ ಅಪರಾಧ ಪತ್ತೆಗೆ ಜನರ ಕೈಯಲ್ಲಿರುವ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ. ಇದರ ಮೂಲಕ ಈಗಾಗಲೇ ಬರೋಬ್ಬರಿ 79,000 ದೂರುಗಳು ದಾಖಲಾಗಿವೆ. ಹೌದು, ಚುನಾವಣೆ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳನ್ನು ನಾಗರಿಕರೇ ದಾಖಲಿಸಲು ಅನುವಾಗುವಂತೆ ಸಿ-ವಿಜಿಲ್ ಎನ್ನುವ ಮೊಬೈಲ್ ಆಯಪ್ ಅನ್ನು …
Read More »ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ! ಆದರೆ ರಾಜ್ಯದಲ್ಲಿ ಬಿಜೆಪಿ
ಮೈಸೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಭಾರೀ ಹಣಾಹಣಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್.ಎಲ್.
Read More »
Laxmi News 24×7