ಶಿವಮೊಗ್ಗ: ಯಡಿಯೂರಪ್ಪ (BS Yediyurappa) ನಮಗೆ ಮೋಸ ಮಾಡಿದ್ದಾರೆಂದು ಬೇಸರವಿದೆ, ಮಾರ್ಚ್ 15ರ ನಂತರ ನನ್ನ ಅಭಿಪ್ರಾಯ ತಿಳಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಕಿಡಿಕಾರಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಇ.ಕಾಂತೇಶ್ಗೆ ಹಾವೇರಿ (Haveri) ಬಿಜೆಪಿ (BJP) ಟಿಕೆಟ್ ಕೊಡಿಸುತ್ತೇನೆಂದು ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು.ಈ ಹಿನ್ನೆಲೆಯಲ್ಲಿ ಹಾವೇರಿ ಭಾಗದಲ್ಲಿ ಕಾಂತೇಶ್ ಓಡಾಡಿ ಜನರ ವಿಶ್ವಾಸ ಗಳಿಸಿದ್ದ. ವಿವಿಧ ಮಠಾಧೀಶರು ನನ್ನ ಮಗ ಕಾಂತೇಶ್ …
Read More »ಪಕ್ಷಾಂತರ, ಹೊಂದಾಣಿಕೆ ರಾಜಕಾರಣ ಮಾಡಲ್ಲ: ಎ.ನಾರಾಯಣಸ್ವಾಮಿ
ಚಿತ್ರದುರ್ಗ: ‘ರಾಜ್ಯದಲ್ಲಿ ಬಿಜೆಪಿ ಕಟ್ಟುವ ಪ್ರಯತ್ನದಲ್ಲಿ ನನ್ನ ಬೆವರ ಹನಿಯೂ ಇದೆ. ಪಕ್ಷಾಂತರ, ಓಲೈಕೆ ಹಾಗೂ ಹೊಂದಾಣಿಕೆ ರಾಜಕಾರಣವನ್ನು ಎಂದಿಗೂ ಮಾಡುವುದಿಲ್ಲ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು. ಟಿಕೆಟ್ ಕೈತಪ್ಪಿದ ಬಿಜೆಪಿ ಸಂಸದರನ್ನು ಕಾಂಗ್ರೆಸ್ ಆಹ್ವಾನಿಸುತ್ತಿದೆ’ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಅಸಮಾಧಾನಗೊಂಡು ಹೀಗೆ ಪ್ರತಿಕ್ರಿಯಿಸಿದರು. ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ ಸಂಸದೀಯ ಮಂಡಳಿ ಸಮಿತಿಯು ಯಾರಿಗೆ ಟಿಕೆಟ್ …
Read More »ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ
ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಕಾಂಗ್ರೆಸ್ ಪಕ್ಷವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ನೀವು ನಮ್ಮ ಪಕ್ಷದ ಹಣವನ್ನು ದೇಣಿಗೆಯಾಗಿ ನೀಡಿದ್ದೀರಿ, ಅವರು ಅದನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ… ಆದರೆ, ಅವರು (ಬಿಜೆಪಿ) ತಮಗೆ ದೊರೆತ ಚುನಾವಣಾ ಬಾಂಡ್ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ, ಏಕೆಂದರೆ ಅವರ ಕಳ್ಳತನ ಹೊರಬರುತ್ತದೆ, ಅವರ …
Read More »ʻಲೋಕಸಭಾ ಚುನಾವಣೆ 2024ʼರ ಸಂಪೂರ್ಣ ವೇಳಾಪಟ್ಟಿ ಈ ವಾರ ಪ್ರಕಟ
ನವದೆಹಲಿ: ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಈ ವಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರ ಭೇಟಿಯ ನಂತರ ಚುನಾವಣಾ ಆಯೋಗವು ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ವರದಿ ಸೂಚಿಸಿದೆ. ಬುಧವಾರ, ಚುನಾವಣಾ ಆಯೋಗದ ತಂಡವು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿತು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಯಾವಾಗ ಚುನಾವಣೆ ನಡೆಸಬಹುದು ಎಂಬುದನ್ನು ಪರಿಶೀಲಿಸಿತು. …
Read More »ತುಕಾಲಿ ಸಂತೋಷ್ ಕಾ ರಿಗೆ ಆಕ್ಸಿ ಡೆಂಟ್
ಹಾಸ್ಯನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್ ಅವರ ಕಾರು ಅಪಘಾತ ಆಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಫೋಟೋಗಳು ಲಭ್ಯವಾಗಿವೆ. ತುಕಾಲಿ ಸಂತೋಷ್ ಅವರ ಕಾರಿಗೆ ಆಟೋ ಡಿಕ್ಕಿ ಹೊಡಿದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
Read More »ಕರ್ನಾಟಕ ಬಿಜೆಪಿ 20 ಅಭ್ಯರ್ಥಿ ಗಳ ಪಟ್ಟಿ ರೆಡಿ
ವಾರಕ್ಕೊಮ್ಮೆ ಸ್ನಾನ, ಹೋಟೆಲ್ ಊಟ : ಹನಿ ಹನಿ ನೀರಿಗೂ ಬೆಂಗಳೂರಿಗರ ಪರದಾಟ
ರಮೇಶ್ ಪಾಳ್ಯಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನ ನೀರಿನ ಅಭಾವ ಇಲ್ಲಿನ ಜನರನ್ನು ಕಂಗೆಡಿಸಿದೆ. ದುಡ್ಡು ಕೊಟ್ಟರೂ ನೀರು ಸಿಗುತ್ತಿಲ್ಲ ಹೀಗಾಗಿ ವಾರಕ್ಕೊಮ್ಮೆ ಸ್ನಾನ, ಅಡುಗೆ ಮಾಡುವ ಬದಲು ಹೋಟೆಲ್ನಲ್ಲಿ ಆರ್ಡರ್ ಮಾಡಿ ತಿನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಲ್ಲದೆ ಸಂಸ್ಕರಿಸಿದ ನೀರನ್ನು ಬಳಸುವ ಮೂಲಕ ಒಂದು ಹನಿ ನೀರಿಗೂ ಒದ್ದಾಡುವಂತಹ ಸ್ಥಿತಿ ಬಂದೋದಗಿದೆ. ನಗರದ ಬಾಬುಸಾಪಾಳ್ಯದ ನಿವಾಸಿಗಳು ಕಳೆದ ಎರಡು ತಿಂಗಳುಗಳಿಂದ ತಮ್ಮ ದೈನಂದಿನ ಪೂರೈಕೆಗಾಗಿ ನೀರಿನ ಟ್ಯಾಂಕರ್ಗಳ …
Read More »ಇಂದಿನಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭ
ಬೆಂಗಳೂರು, ಮಾ.13- ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಸ್ತಿ ಯೋಜನೆಯಡಿ ನನ್ನ ಆಸ್ತಿ, ನನ್ನ ಗುರುತು ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ …
Read More »ಹತ್ತಾರು ಮರಗಳ ಮಾರಣ ಹೋಮ ಮಾಡಿದ ಚಿಕ್ಕೋಡಿ ಪುರಸಭೆ
ಚಿಕ್ಕೋಡಿ: ಹತ್ತಾರು ಮರಗಳ ಮಾರಣ ಹೋಮ ಮಾಡಿದ ಪುರಸಭೆ : ಪರಿಸರ ಪ್ರೇಮಿ ಸಂತೋಷ್ ಅರಬಾವಿಗೆ ಮಣಿದ ಸ್ಥಳೀಯ ಆಡಳಿತ ಹೌದು ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಮುಗಳಖೋಡ ಪುರಸಭೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ ನಿನ್ನೆ ಮದ್ಯಾನ ಸುಮಾರು 3 ಗಂಟೆಗೆ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ಆಡ್ಡಿಯಾಗುತ್ತವೆ ಎಂಬ ನೇಪಯೋಡ್ಡಿ ಹತ್ತಾರು ಮರಗಳನ್ನು ಜೆಸಿಬಿ ಮೂಲಕ ನೆಲಕ್ಕುರಲಿಸಿದ ಘಟನೆ ನಡೆದಿದೆ ಯಾವದೇ ಪರವಾನಿಗೆ ಇಲ್ಲದೆ ಹತ್ತಾರು ವರ್ಷದ ನೆರಳು ಹಾಗೂ ಹಣ್ಣು …
Read More »ಕೊನೆ ಭಾಗಕ್ಕೆ ನೀರು ಹರಿಸಿ; ತೋಟ ಉಳಿಸಿ-ಅಧಿಕಾರಿಗಳಿಗೆ ಶಾಸಕ ಹರೀಶ್ ತಾಕೀತು
ಹರಿಹರ: ‘ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ಹರಿಸಲಿರುವ ನೀರು ಕೊನೆ ಭಾಗದವರೆಗೆ ತಲುಪದಿದ್ದರೆ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೋಟಗಾರಿಕೆ ಬೆಳೆಗಳು ನಾಶವಾಗುವ ಅಪಾಯವಿದೆ’ ಎಂದು ಶಾಸಕ ಬಿ.ಪಿ.ಹರೀಶ್ ಆತಂಕ ವ್ಯಕ್ತಪಡಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಮಳೆಗಾಲದ ಮುನ್ನ ಇನ್ನೆರಡು ಬಾರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ.ಮಾರ್ಚ್ 19ರ ವೇಳೆಗೆ ತಾಲ್ಲೂಕಿನ ಕಾಲುವೆಗಳಿಗೆ ನೀರು ತಲುಪುವ ನಿರೀಕ್ಷೆ ಇದೆ. …
Read More »
Laxmi News 24×7