Breaking News

ರಾಜ್ಯ

ಟಿಕೆಟ್ ಕೊಟ್ಟರೆ 100% ಕಾಂಗ್ರೆಸ್ ನಿಂದ ನಿಲ್ತೀನಿ -ಸಾಧು ಕೋಕಿಲಾ

ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟರೆ ಚುನಾವಣೆ ಎದುರಿಸುತ್ತೇನೆ ಎಂದು ನಟ ಸಾಧು ಕೋಕಿಲಾ ಹೇಳಿದ್ದಾರೆ. ನಾನು ಒಂದು ಧರ್ಮಕ್ಕೆ ಸೀಮಿತಿ ಆಗಿಲ್ಲ. ಬೆಂಗಳೂರಿನಲ್ಲಿ ನಾನು ಜನರಲ್ ಕಂಪಾರ್ಟಮೆಂಟ್. ನನ್ನನ್ನ ಎಲ್ಲಾ ಜಾತಿ ಧರ್ಮದವರು ಗುರುತಿಸುತ್ತಾರೆ. ನನ್ನ ಹಿನ್ನಲೆ ಜನರಿಗೆ ಗೊತ್ತಿದೆ.ನನನ್ನು ಯಾವ ಜಾತಿಗೂ ಸೇರಿಸಬೇಡಿ. ನಾನು ಎಲ್ಲರಿಗೂ ಸೇರಿದವನು. ಬೆಂಗಳೂರು 15 ಲಕ್ಷ ಜನ ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಹೆಚ್ಚು ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಕ್ರಿಶ್ಚಿಯನ್ …

Read More »

ಪಕ್ಷವು ಗುಡಿಸು ಅಂದ್ರೆ ಗುಡಿಸುತ್ತೇವೆ, ಒರೆಸು ಅಂದ್ರೆ ಒರೆಸುತ್ತೇವೆ: ಕಟೀಲು

ಮಂಗಳೂರು, ಮಾ.12: ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಅಂದರೆ ಗುಡಿಸುತ್ತೇವೆ. ಒರೆಸು ಅಂದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ ಎಂದು ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ನಳಿನ್ ರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ …

Read More »

ಕರ್ನಾಟಕದಲ್ಲಿ ಮುಂದಿನ ಸಲ ನಾನೂ ಸಿಎಂ ಆಗ್ತೀನಿ – ಯತ್ನಾಳ್ ಕಿಡಿ

ಯಾದಗಿರಿ:-ಕರ್ನಾಟಕದಲ್ಲಿ ಮುಂದಿನ ಸಲ ನಾನೂ ಬರ್ತೀನಿ, ನಾನೇ ಸಿಎಂ ಆಗ್ತಿನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಬಾಂಬ್‌ ಸಿಡಿಸಿದ್ದಾರೆ. ಕರ್ನಾಟಕದಲ್ಲಿ ವಿಜಯೇಂದ್ರನನ್ನು ನೋಡಿ ವೋಟ್‌ ಹಾಕೋದಿಲ್ಲ. ಏಕೆಂದರೆ ಇದು ಮೋದಿ ಚುನಾವಣೆ, ವಿಜಯೇಂದ್ರನನ್ನ ತೆಗೆದುಕೊಂಡು ಏನು ಮಾಡೋದು. ವಿಜಯೇಂದ್ರ ಪಾರ್ಟಿ ಅಧ್ಯಕ್ಷ ಆಗಿರಲಿ, ಸುಡುಗಾಡಾದ್ರೂ ಆಗಿರಲಿ. ರಾಜ್ಯದಲ್ಲಿ ಈ ಸಲ ಬಿಜೆಪಿ 28 ಸ್ಥಾನ ಗೆದ್ದೇ ಗೆಲ್ಲುತ್ತೆ. ಇದಕ್ಕೆ ವಿಜಯೇಂದ್ರ ಸಂಬಂಧಪಡಲ್ಲ ಎಂದು ಕಿಡಿ ಕಾರಿದ್ದಾರೆ   …

Read More »

21 ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ ನೋಡಿ

ಈ ಹಿನ್ನೆಲೆ ಕೆಪಿಸಿಸಿ ‌ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರ ಜೊತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ 21 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದೆ. ಈ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ ಮುಂದೆ ಇಟ್ಟಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ. ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ …

Read More »

ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು : ಅಪಾಯಕಾರಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿಯನ್ನು ಮಾರಾಟ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವ‌ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧ ದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು,ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಕೆ ಹೆಚ್ಚಾಗಿರುವುದು ಆಹಾರ ತಪಾಸಣೆಯಲ್ಲಿ ಕಂಡು ಬಂದಿದೆ ಎಂದು ಹೇಳಿದರು. ಒಂದು ವೇಳೆ ಯಾರಾದರೂ ಇವುಗಳನ್ನು ಮಾರಾಟ ಮಾಡಿದರೆ ಅಥವಾ ಅಪಾಯಕಾರಿ ಕೃತಕ ಬಣ್ಣ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ …

Read More »

ಮೈಸೂರಿನಿಂದ ಯದುವೀರ್ ಒಡೆಯರ್ ಕಣಕ್ಕೆ

ಮೈಸೂರು: ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿದೆ. ಗೆಲ್ಲೋ ಕುದುರೆಗಳಿಗೆ ಮಾತ್ರ ಟಿಕೆಟ್​ ಎಂದು ರಾಜ್ಯ ಬಿಜೆಪಿ ನಾಯಕರು ಈಗಾಗಲೇ ಘೋಷಣೆ ಮಾಡಿದ್ದಾರೆ. ಇಂದು ಕೂಡ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ಹೈವೋಲ್ಟೇಜ್​​ ಮೀಟಿಂಗ್​ ನಡೆಸಿದೆ. ಸದ್ಯದ ಮೂಲಗಳ ಪ್ರಕಾರ ಎರಡು ಹಂತಗಳಲ್ಲಿ ಬಿಜೆಪಿ ಟಿಕೆಟ್​ ಘೋಷಣೆ ಆಗಲಿದೆ ಎಂದು ತಿಳಿದು ಬಂದಿದೆ. ಇನ್ನೂ, ರಾಜ್ಯದಲ್ಲಿ ಭಾರೀ …

Read More »

ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ

ಬೆಳಗಾವಿ : ಲೋಕಸಭಾ ಚುನಾವಣೆ ಬಿಸಿ ಏರತೊಡಗಿದ್ದು ದಿನ ಕಳೆದಂತೆ ವಿಭಿನ್ನ ಲೆಕ್ಕಾಚಾರ ಹೊರಬರುತ್ತಿವೆ. ಈ ನಡುವೆ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಚರ್ಚೆ ಜೋರಾಗಿದೆ. ಸಧ್ಯ ಮೂಲಗಳ ಪ್ರಕಾರ ಬೆಳಗಾವಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅದವರನ್ನೇ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಸೇರಿ ಬಿಜೆಪಿಗೆ ಹೊಡೆತ ನೀಡಿದ್ದ ಶೆಟ್ಟರ್ ಅವರಿಗೆ …

Read More »

ಲಂಚಕ್ಕೆ ಬೇಡಿಕೆ: ಎಫ್‌ಡಿಸಿಗೆ ಮೂರು ವರ್ಷ ಜೈಲು

ಕಾರವಾರ: ಹಕ್ಕುಪತ್ರ ವಿತರಣೆಗೆ ರೈತರೊಬ್ಬರಿಂದ ಲಂಚ ಪಡೆದಿದ್ದ ಅಂಕೋಲಾ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕರೊಬ್ಬರಿಗೆ (ಎಫ್‌ಡಿಸಿ) ಮೂರು ವರ್ಷ ಜೈಲು ಶಿಕ್ಷೆ ಮತ್ತು ₹15 ಸಾವಿರ ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಶಬ್ಬೀರ್ ಖಾಸಿಮ್ ಶೇಖ್ ಶಿಕ್ಷೆಗೆ ಗುರಿಯಾದವರಾಗಿದ್ದಾರೆ.ಅಂಕೋಲಾ ತಾಲ್ಲೂಕಿನ ಬೊಬ್ರುವಾಡಾದ ಗಣೇಶ ನಾಯ್ಕ ಅವರ ಜಮೀನಿನ ಪಹಣಿ ಪತ್ರದ 9ನೇ ಕಾಲಂನಲ್ಲಿ ಕರ್ನಾಟಕ ಸರ್ಕಾರದ ಹಕ್ಕು ಕಡಿಮೆ ಮಾಡಿ ಅವರ ತಾಯಿ ಶಾರದಾ ನಾಯ್ಕ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ   ಇನ್ನು ಅಥಣಿ, ಬೈಲಹೊಂಗಲ, ರಾಮದುರ್ಗ ತಾಲೂಕುಗಳ 3 ಸ್ಥಾನಗಳಿಗೆ ಬರುವ ಭಾನುವಾರದಂದು ಚುನಾವಣೆ ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ   ಬೆಳಗಾವಿ: ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ …

Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಾಂಬರ್ ಯಾರೆಂಬುದು ಗೊತ್ತಾಗಿದೆ: ಗೃಹಸಚಿವ ಪರಮೇಶ್ವರ್

ಬೆಂಗಳೂರು, ಮಾರ್ಚ್​ 11: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameswaram cafe) ಸಂಭವಿಸಿದ್ದ ಸ್ಪೋಟ (Bomb Blast) ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿ ಎಂದು ಗೃಹಸಚಿವ ಜಿ ಪರಮೇಶ್ವರ್​ (G Parameshwara) ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್​ಐಎ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಮಾರ್ಚ್ 1ರಂದು ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಏತನ್ಮಧ್ಯೆ, …

Read More »